• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹೊಸ ವರ್ಷಾರಂಭದಿಂದ ಸಿದ್ದಉಡುಪು, ಪಾದರಕ್ಷೆಗಳ ದರ ಏರಿಕೆ

Any Mind by Any Mind
November 21, 2021
in ದೇಶ
0
ಹೊಸ ವರ್ಷಾರಂಭದಿಂದ ಸಿದ್ದಉಡುಪು, ಪಾದರಕ್ಷೆಗಳ ದರ ಏರಿಕೆ
Share on WhatsAppShare on FacebookShare on Telegram

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ತಗ್ಗಿಸಿ ಜನರಿಗೆ ಉಪಕಾರ ಮಾಡಿದ್ದಾಗಿ ಹೇಳಿಕೊಳ್ಳುತ್ತಿರುವ ಮೋದಿ ಸರ್ಕಾರವು ಈಗ ಬಟ್ಟೆಗಳು, ಸಿದ್ದ ಉಡುಪುಗಳು, ಪಾದರಕ್ಷೆಗಳು ಸೇರಿದಂತೆ ಜನಸಾಮಾನ್ಯರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು(ಜಿಎಸ್ಟಿ) ಶೇ.5 ರಿಂದ 12ಕ್ಕೆ  ಏರಿಕೆ ಮಾಡಿದೆ. ಪರಿಷ್ಕೃತ ದರಗಳು ಜನವರಿ 2022 ರಿಂದ ಜಾರಿಗೆ ಬರಲಿವೆ. ಪರೋಕ್ಷ ತೆರಿಗೆ ಮತ್ತು ಸುಂಕಗಳ ಕೇಂದ್ರೀಯ ಮಂಡಳಿಯು ತೆರಿಗೆ ದರ ಏರಿಕೆ ಅಧಿಸೂಚನೆಯನ್ನು ನವೆಂಬರ್ 18ರಂದು ಹೊರಡಿಸಿದೆ. 

ADVERTISEMENT

ಭಾರತೀಯ ಜವಳಿ ಉತ್ಪಾದಕರ ಸಂಘದ(ಸಿಎಂಎಐ) ಅಂದಾಜಿನಂತೆ ತೆರಿಗೆ ದರ ಹೆಚ್ಚಳದ ಹಿನ್ನೆಲೆಯಲ್ಲಿ ಶೇ.15 ರಿಂದ 20ರಷ್ಟು ದರ ಏರಿಕೆ ಆಗುವ ನಿರೀಕ್ಷೆ ಇದೆ. ಬಟ್ಟೆಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು ಶೇ.5ರಂದು 12ಕ್ಕೆ ಏರಿಕೆ ಮಾಡಲಾಗಿದೆ. ಸಿದ್ದ ಉಡುಪುಗಳ ಮೇಲಿನ ತೆರಿಗೆ ದರವನ್ನು ಎಲ್ಲಾ ಮೌಲ್ಯದ ಸರಕುಗಳಿಗೂ ಶೇ.5 ರಿಂದ 12ಕ್ಕೆ ಏರಿಸಲಾಗಿದೆ. ಇದುವರೆಗೆ 1000 ರುಪಾಯಿ ಮಾರಾಟ ದರ ಮೇಲ್ಪಟ್ಟ ವಸ್ತುಗಳಿಗೆ ಮಾತ್ರ ಶೇ.12ರಷ್ಟು ತೆರಿಗೆ ಇತ್ತು. 1000 ರುಪಾಯಿ ಮಾರಾಟ ದರಕ್ಕಿಂತ ಕಡಮೆ ಇದ್ದ ವಸ್ತುಗಳ ಮೇಲಿನ ತೆರಿಗೆಯು ಶೇ.5ರಷ್ಟು ಮಾತ್ರ ಇತ್ತು.

ಸಿಎಂಎಐ ಅಂದಾಜಿನ ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ವಹಿವಾಟಾಗುವ ಸಿದ್ದ ಉಡುಪುಗಳ ಪೈಕಿ ಶೇ.80ರಷ್ಟು 1000 ರುಪಾಯಿಗಿಂತ ಕಡಮೆ ಮಾರುಕಟ್ಟೆ ದರ ಇರುವಂತಹವು. ಅಂದರೆ, ಕೇಂದ್ರ ಸರ್ಕಾರ ತೆರಿಗೆ ಪರಿಷ್ಕರಿಸಿರುವುದರಿಂದ ಅದರ ಪರಿಣಾಮ ನೇರವಾಗಿ ಜನಸಾಮಾನ್ಯರ ಮೇಲಾಗಲಿದೆ. 

ನೇಯ್ದ ಬಟ್ಟೆಗಳು, ಸಿಂಥೆಟಿಕ್ ನೂಲು, ಪೈಲ್ ಬಟ್ಟೆಗಳು, ಹೊದಿಕೆಗಳು, ಡೇರೆಗಳು, ಮೇಜುಅಲಂಕರಣ ಬಟ್ಟೆ ಪರಿಕರಗಳು, ರಗ್ಗುಗಳು ಮತ್ತಿತರ ವಸ್ತ್ರಗಳು ಸೇರಿದಂತೆ ಎಲ್ಲಾ ಬಟ್ಟೆಗಳ ಮೇಲಿನ ತೆರಿಗೆಯನ್ನು ಶೇ.5ರಿಂದ 12ಕ್ಕೆ ಏರಿಸಲಾಗಿದೆ. ಹಾಗೆಯೇ ಪಾದರಕ್ಷೆಗಳ ಮೇಲಿನ ತೆರಿಗೆಯನ್ನು ಶೇ.5ರಿಂದ 12ಕ್ಕೆ ಏರಿಸಲಾಗಿದೆ. 1000 ರುಪಾಯಿಗಿಂತ ಕಡಮೆ ಮಾರಾಟದರ ಇದ್ದ ಪಾದರಕ್ಷೆಗಳಿಗೆ ಇದುವರೆಗೆ ಶೇ.5ರಷ್ಟು ಮಾತ್ರ ತೆರಿಗೆ ಇದೆ.

ತೆರಿಗೆದರವನ್ನು ಏರಿಸುವ ಕೇಂದ್ರ ಸರ್ಕಾರದ ಕ್ರಮದಿಂದ ನಮಗೆ ಅತೀವ ನಿರಾಶೆಯಾಗಿದೆ ಎಂದು ಭಾರತೀಯ ಜವಳಿ ಉತ್ಪಾದಕರ ಸಂಘವು ಅಸಮಾಧಾನ ವ್ಯಕ್ತಪಡಿಸಿದೆ. ಸಿಎಂಎಐ ಅಲ್ಲದೇ ಉದ್ಯಮದ ಇತರ ಸಂಘಟನೆಗಳೊಂದಿಗೆ ಸೇರಿ ಸರ್ಕಾರ ಮತ್ತು ಜಿಎಸ್ಟಿ ಮಂಡಳಿಗೆ ತೆರಿಗೆ ದರ ಪರಿಷ್ಕರಿಸದಂತೆ ಮನವಿ ಮಾಡಲಾಗಿತ್ತು. ಆದರೆ, ಸರ್ಕಾರವಾಗಲೀ, ಜಿಎಸ್ಟಿ ಮಂಡಳಿಯಾಗಲೀ ನಮ್ಮ ಮನವಿಯನ್ನು ಆಲಿಸಿಲ್ಲ ಎಂದು ಸಿಎಂಎಐ ಅಧ್ಯಕ್ಷ ರಾಜೇಶ್ ಮಸಂದ್ ಹೇಳಿದ್ದಾರೆ. 

ಕಚ್ಚಾವಸ್ತುಗಳ ದರ, ಸಾಗಣೆ ಮತ್ತು ವಿತರಣೆ ದರ ಸೇರಿದಂತೆ ಎಲ್ಲಾ ವಿಧದ ಉತ್ಪಾದನಾ ವೆಚ್ಚಗಳು ಹೆಚ್ಚಿವೆ. ಈ ಕಾರಣದಿಂದಾಗಿ ತೆರಿಗೆ ಪರಿಷ್ಕರಿಸುವ ಮುಂಚಿತವಾಗಿಯೇ ಸಿದ್ದ ಉಡುಪುಗಳು ಸೇರಿದಂತೆ ವಿವಿಧ ಬಟ್ಟೆಗಳ ಮೇಲಿನ ದರಗಳು ಶೇ.15-20ರಷ್ಟು ದರ ಏರಿಕೆ ನಿರೀಕ್ಷಿಸಲಾಗಿದೆ. 1000 ರುಪಾಯಿಗಿಂತ ಕೆಳಪಟ್ಟ ದರದ ಸರಕುಗಳ ಮೇಲೂ ತೆರಿಗೆ ಹೇರುವ ನಿರ್ಧಾರದಿಂದ ಜನಸಾಮಾನ್ಯರಿಗೆ ಹೊರೆಯಾಗವುದಷ್ಟೇ ಅಲ್ಲ ಒಟ್ಟಾರೆ ಉದ್ಯಮಕ್ಕೆ ಹಿನ್ನಡೆಯಾಗಲಿದೆ ಎಂದು ಸಿಎಂಎಐ ತಿಳಿಸಿದೆ.

ಜವಳಿ ಉದ್ಯಮದಲ್ಲಿರುವ ತಿರುಗುಮುರುಗಾದ ಸುಂಕ ರಚನೆಯನ್ನು ಸರಿಪಡಿಸುವ ಉತ್ಸಾಹದಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ವಾಸ್ತವವಾಗಿ ತಿರುಗುಮುರುಗು ಸುಂಕ ರಚನೆಯು ಉದ್ಯಮದ ಶೇ.15ರಷ್ಟು ಮಾತ್ರ ಇದೆ. ಇದನ್ನು ಸೂಕ್ತ ರೀತಿಯಲ್ಲಿ ಸರಿಪಡಿಸದೇ ನೇರವಾಗಿ ಶೇ.85ರಷ್ಟು ಉದ್ಯಮಕ್ಕೆ ಮಾರಕವಾಗುವ ರೀತಿಯಲ್ಲಿ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದು ಸರಿಯಾದ ಕ್ರಮವಲ್ಲ ಎಂದು ಸಿಎಂಎಐ ಹೇಳಿದೆ. ಪ್ರಾಥಮಿಕ ಹಂತದ ತೆರಿಗೆಗಳಿಗಿಂತ ಅಂತಿಮ ಸಿದ್ದ ಉತ್ಪನ್ನದ ಮೇಲಿನ ತೆರಿಗೆಗಳು ಕಡಮೆಯಾದ ತಿರುವುಮುರುವಾದ ಸುಂಕ ರಚನೆ ಉದ್ಭವಿಸುತ್ತದೆ.

Tags: BJPCovid 19PriceHikeಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮುನ್ನೆಲೆಗೆ ಬಂತು 1993ರ ಮುಂಬೈ ಸ್ಪೋಟ ಪ್ರಕರಣ; ಭೂಗತ ಲೋಕದೊಂದಿಗೆ ಸಂಪರ್ಕ ಹೊಂದಿದ್ರಾ ಸಚಿವ ಮಲ್ಲಿಕ್?

Next Post

ಉಪಚುನಾವಣೆಯಲ್ಲಿ ಜೆಡಿಎಸ್ ಸೋಲು : ದಿಢೀರ್ ಮೌನವಾದ ಎಚ್‌ಡಿಕೆ ; ಕಾರಣಗಳೇನು?

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025
Next Post
ಸಿದ್ದರಾಮಯ್ಯ ಕುಲಗೆಟ್ಟ ರಾಜಕೀಯ ಮಾಡುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ಉಪಚುನಾವಣೆಯಲ್ಲಿ ಜೆಡಿಎಸ್ ಸೋಲು : ದಿಢೀರ್ ಮೌನವಾದ ಎಚ್‌ಡಿಕೆ ; ಕಾರಣಗಳೇನು?

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada