• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಶಾಲೆಗಳಲ್ಲಿ ಇಸ್ಕಾನ್‌ ಪ್ರತಿಷ್ಠಾಪನೆಗೆ ಹೊರಟ ಸರ್ಕಾರ : ಅಕ್ಷಯ ‘ಪಾತ್ರೆ’ಯೊಳಕ್ಕೆ ಬಿದ್ದ 8 ಶಾಲೆ!

ಪಿಕೆ ಮಲ್ಲನಗೌಡರ್ by ಪಿಕೆ ಮಲ್ಲನಗೌಡರ್
November 28, 2021
in ಅಭಿಮತ, ಕರ್ನಾಟಕ
0
ಶಾಲೆಗಳಲ್ಲಿ ಇಸ್ಕಾನ್‌ ಪ್ರತಿಷ್ಠಾಪನೆಗೆ ಹೊರಟ ಸರ್ಕಾರ : ಅಕ್ಷಯ ‘ಪಾತ್ರೆ’ಯೊಳಕ್ಕೆ ಬಿದ್ದ 8 ಶಾಲೆ!
Share on WhatsAppShare on FacebookShare on Telegram

ಕರ್ನಾಟಕ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಇಸ್ಕಾನ್ ಅನ್ನು ಪ್ರತಿಷ್ಠಾಪನೆ ಮಾಡುವ ದೂರಗಾಮಿ ಉದ್ದೇಶ ಹೊಂದಿದೆಯೇ? ಆ ಮೂಲಕ ಕಡಿಮೆ ಸಂಬಳದಲ್ಲಿ ಹೇಗೋ ಬದುಕು ಸಾಗಿಸುತ್ತಿರುವ ಬಿಸಿಯೂಟ ಕಾರ್ಯಕರ್ತರನ್ನು ಬೀದಿಪಾಲು ಮಾಡಲು ಹೊರಟಿದೆಯೇ? ಎಂಬ ಸಂಶಯ ಕಾಡತೊಡಗಿದೆ.

ADVERTISEMENT

ಇದಕ್ಕೆ ಕಾರಣ ನವೆಂಬರ್ 17 ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ 8 ಸರ್ಕಾರಿ ಶಾಲೆಗಳ ಬಿಸಿಯೂಟ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಚಂಚಲಪತಿ ಎಂಬ ಕಮರ್ಷಿಯಲ್ ಸನ್ಯಾಸಿ ಮುಖ್ಯಸ್ಥರಾಗಿರುವ ಇಸ್ಕಾನ್ ನಡೆಸುವ ಅಕ್ಷಯ ಪಾತ್ರ ಸಂಸ್ಥೆಗೆ ವಹಿಸಲಾಗಿದೆ. ಸರ್ಕಾರ ಬಿಸಿಯೂಟಕ್ಕೆ ಖರ್ಚು ಮಾಡುವ ಅನುದಾನವನ್ನು ಅಕ್ಷಯಪಾತ್ರದ ಮಡಿಲಿಗೆ ಹಾಕಲಿದೆ.

ಇಷ್ಟು ದಿನ ರಾಜ್ಯದ ನೂರಾರು ಶಾಲೆಗಳಿಗೆ ಊಟ ಪೂರೈಕೆಯ ಕೆಲಸವನ್ನು ಮಾಡುತ್ತಿದ್ದ ಇಸ್ಕಾನ್ ಈಗ ಶಾಲೆಗಳನ್ನೇ ಹೊಕ್ಕು ಝೇಂಢಾ ಊರಲಿದೆ.

ಸರ್ಕಾರದ ಪ್ರಕಾರ ಇದು ಒಂದು ವರ್ಷದ ಪ್ರಾಯೋಗಿಕ ಯೋಜನೆ. ಅಂದರೆ ಮುಂದೆ ಹಂತ ಹಂತವಾಗಿ ಶಾಲೆಗಳಲ್ಲಿ ಅಕ್ಷಯಪಾತ್ರದ ಪಾಕಶಾಲೆಗಳನ್ನು ಪ್ರತಿಷ್ಠಾಪನೆ ಮಾಡುವುದು! ಈಗಿರುವ ಅಡುಗೆ ಸಿಬ್ಬಂದಿಯನ್ನು ಅಕ್ಷಯಪಾತ್ರ ಉಳಿಸಿಕೊಳ್ಳದು. ಏಕೆಂದರೆ ಮೊದಲೇ ಅದು ಜಾತಿ ವ್ಯಸನದ ಸಂಸ್ಥೆ.. ಬ್ರಾಹ್ಮಣರು ಮಾಡುವ ಅಡುಗೆಯೇ ಅದಕ್ಕೆ ಶ್ರೇಷ್ಠ.

ಹೀಗಾಗಿ ಈಗ ಬಿಸಿಯೂಟ ಯೋಜನೆಯಲ್ಲಿ ಅಡುಗೆ ಕೆಲಸ ಮಾಡುತ್ತಿರುವ ದಲಿತ-ಶೂದ್ರ-ಅಲ್ಪಸಂಖ್ಯಾತ ಸಿಬ್ಬಂದಿಯ ಕೆಲಸ ಕೈಬಿಟ್ಟಂತೆಯೇ.

2012ರ ಆದೇಶ ಉಲ್ಲಂಘನೆ

ಈ ಕುರಿತು ’ಪ್ರತಿಧ್ವನಿ’ ’ ಜೊತೆ ಮಾತನಾಡಿದ ಅಕ್ಷರ ದಾಸೋಹ ಕಾರ್ಯಕರ್ತರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮಾಲಿನಿ ಮೆಸ್ತಾ, ‘ಸರ್ಕಾರದ ಈ ನಡೆಯನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ. 2012ರಲ್ಲಿ ಸರ್ಕಾರವೇ ಹೊರಡಿಸಿದ ಆದೇಶದ ಪ್ರಕಾರ, ಮತ್ತೆ ಹೊಸದಾಗಿ ಬಿಸಿಯೂಟ ಯೋಜನೆಯಲ್ಲಿ ಅಕ್ಷಯಪಾತ್ರ ಸೇರಿದಂತೆ ಯಾವ ಖಾಸಗಿ ಸಂಸ್ಥೇಗೂ ಅವಕಾಶ ನೀಡಲಾಗದು. ಆದರೆ, ಈಗ ಮತ್ತೆ ಸರ್ಕಾರ 8 ಶಾಲೆಗಳನ್ನು ಇಸ್ಕಾನ್ ಸುಪರ್ದಿಗೆ ನೀಡುತ್ತಿರುವುದು 2012 ರ ಆದೇಶದ ಸ್ಪಷ್ಟ ಉಲ್ಲಂಘನೆ’. ಇದರ ವಿರುದ್ಧ ನಾವು ಹೋರಾಟ ರೂಪಿಸುತ್ತೇವೆ’ ಎಂದರು.

ಅಕ್ಷರ ದಾಸೋಹ ಕಾರ್ಯಕರ್ತರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮಾಲಿನಿ ಮೆಸ್ತಾ

ಖಾಸಗೀಕರಣದ ಹುನ್ನಾರ

ಇದು ಬಿಸಿಯೂಟ ಯೋಜನೆಯಿಂದ ಸರ್ಕಾರ ಸಂಪೂರ್ಣವಾಗಿ ಕೈ ತೊಳೆದುಕೊಳ್ಳುವ ಹುನ್ನಾರ. ಪ್ರಭುತ್ವ.ಸರ್ಕಾರ ‘ಪ್ರಾಯೋಗಿಕ’ ಹೆಸರಿನಲ್ಲಿ ಖಾಸಗಿಯರಿಗೆ ಮಣೆ ಹಾಕಿತು ಎಂದರೆ, ಮುಂದೆ ಸಂಪೂರ್ಣ ಖಾಸಗೀಕರಣ ಕಾದಿದೆ ಎಂದೇ ಅರ್ಥ.

ಈ ಕುರಿತು ‘ಪ್ರತಿಧ್ವನಿ’ಗೆ ಪ್ರತಿಕ್ರಿಯಿಸಿದ ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ, ‘ 8 ಶಾಲೆಗಳಿಂದ ಸಣ್ಣಗೆ ಆರಂಭಿಸಿ ಅದನ್ನು ವಿಸ್ತರಿಸುತ್ತ ಹೋಗುತ್ತಾರೆ. ಖ್ಯಾತ ರಾಜಕೀಯ-ಆರ್ಥಿಕ ತಜ್ಞ ನೋಮ್ ಚೊಮಸ್ಕಿ ಇದನ್ನು ಹೀಗೆ ವಿವರಿಸುತ್ತಾರೆ: ‘ ಖಾಸಗಿಕರಣ ಎಂಬುದು ನವ ವಸಾಹತುಶಾಹಿಯ ಯೋಜಿತ ಮತ್ತು ವ್ಯವಸ್ಥಿತ ಕುತಂತ್ರ. ಅದು ಸರ್ಕಾರಿ ಶಿಕ್ಷಣ , ಆರೋಗ್ಯ ವ್ಯವಸ್ಥೆ ಮತ್ತು ಉದ್ಯಗಳಿಗೆ ನೀಡಬೇಕಾದ ಪ್ರಾಧಾನ್ಯತೆ ಮತ್ತು ಸಂಪನ್ಮೂಲವನ್ನು ತಗ್ಗಿಸುತ್ತ ಹೋಗುತ್ತದೆ. ಅವು ದುರ್ಬಲಗೊಂಡಾಗ ಅದನ್ನೇ ನೆಪ ಮಾಡಿ ಅವನ್ನು ಖಾಸಗಿಯವರಿಗೆ ವಹಿಸುತ್ತದೆ……’ ಚೋಮಸ್ಕಿಯವರ ಈ ಚಿಂತನೆ ಯನ್ನು ಬಿಸಿಯೂಟಕ್ಕೂ ಅನ್ವಯಿಸಬಹುದು…..’ ಎಂದರು.

‘ಬಿಸಿಯೂಟವನ್ನು ಅದೇ ಊರಿನ ಕೆಲಸಗಾರರು ತಯಾರಿಸಬೇಕು. ಕೇಂದ್ರೀಕೃತ ಅಡುಗೆ ವ್ಯವಸ್ಥೆಯೇ ತಪ್ಪು. ಬೆಳ್ಳುಳ್ಳಿ, ಈರುಳ್ಳಿ ಇಲ್ಲದ ಅಡುಗೆ ಒದಗಿಸುವವರಿಗೆ ಸರ್ಕಾರ ಮಣೆ ಹಾಕಬಾರದು. ಖಾಸಗೀಕರಣದ ಬದಲು ಖಾಸಗಿ ಸಂಸ್ಥೆಗಳಿಗೆ ಭಾಗವಹಿಸುವಿಕೆಯ ಅವಕಾಶ ನೀಡಬಹುದು. ಇದಕ್ಕಾಗಿ ಸರ್ಕಾರ ಒಂದು ನಿಧಿ ಸ್ಥಾಪಿಸಬೇಕು. ಬೇಕಾದವರು ಆ ನಿಧಿಗೆ ಹಣ ಕೊಡಲಿ…ಅದು ಬಿಟ್ಟು ಖಾಸಗಿಯವರಿಗೇ ಯೋಜನೆ ಒಪ್ಪಿಸುವುದು ಸಂವಿಧಾನ ದ್ರೋಹ. ಇದು ಖಂಡನೀಯ’ ಎಂದು ನಿರಂಜನಾರಾಧ್ಯ ಅಭಿಪ್ರಾಯ ಪಟ್ಟರು.

ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ

ಪ್ರತಿಧ್ವನಿ ಜೊತೆ ಮಾತನಾಡಿದ ಖ್ಯಾತ ಆಹಾರ ತಜ್ಞ ಡಾ. ಕೆಸಿ. ರಘು ಅವರು ‘ಮುಠ್ಠಾಳರು ಕಣ್ರೀ. ಈರುಳ್ಳಿ, ಬೆಳ್ಳುಳ್ಳಿ ದೇಹ ಸೇರಿದ ನಂತರ ಅಲ್ಲಿ ಮೆಟಾಬಾಲಿಕಲ್ ಪ್ರಕ್ರಿಯೆ ಜರುಗಿ ಆಲಿಸಿನ್ ಎಂಬ ರಾಸಾಯನಿಕ ಉತ್ಪಾದನೆಯಾಗುತ್ತದೆ. ಇದು ದೇಹದ ಕೊಲೆಸ್ಟೊರಾಲ್ ಅನ್ನು ನಿಯಂತ್ರಣ ಮಾಡುತ್ತದೆ. ನಾವು ಅದನ್ನು ತಿನ್ನಲ್ಲ, ಇದನ್ನು ತಿನ್ನಲ್ಲ, ನಾವು ಪ್ಯೂರ್ ಎಂಬ ಪರಿಕಲ್ಪನೆಯೇ ಮೂರ್ಖತನದ್ದು. ಇಸ್ಕಾನ್ ತನ್ನ ಅಡುಗೆಯಲ್ಲಿ ಬಳಸುವ ಡಾಲ್ಡಾದಿಂದ ದೇಹಕ್ಕೆ ನಷ್ಟವೇ ಹೊರತು ಲಾಭವಂತೂ ಇಲ್ಲ. ಇಂತಹ ಸಂಸ್ಥೆಯ ಹೆಸರಲ್ಲಿ ನಾಣ್ಯ ಬಿಡುಗಡೆ ಮಾಡಿರುವುದು ಮೂರ್ಖತನವಷ್ಟೇ ಅಲ್ಲ, ವ್ಯಾಪಾರಿ ಸಂಸ್ಥೆಯೊಂದಕ್ಕೆ ಸರ್ಕಾರವೇ ಮನ್ನಣೆ ನೀಡಿದ ಅಸಹ್ಯದ ಪರಮಾವಧಿ’ ಎಂದರು.

‘ಎಲ್ಲ ಜಾತಿ-ಧರ್ಮಹಳ ಮಕ್ಕಳು ಓದುವ ಸರ್ಕಾರಿ ಶಾಲೆಯಲ್ಲಿ ಇಸ್ಕಾನ್ ಹೊಕ್ಕರೆ ಅಲ್ಲಿ ಒಂದು ಜಾತಿಯ ಆಚರಭಡಗಳೆ ವಿಜೃಂಭಿಸಲಿವೆ. ಅಲ್ಲಿ ಭಜನೆಯೂ ಶುರುವಾಗಬಹದು. ಹೊಟೆಲ್, ಅಪಾರ್ಟ್ಮೆಂಟ್ ಕಟ್ಟಿ ಲಾಭ ಮಾಡಿಕೊಳ್ಳುವ ಇಸ್ಕಾನ್ ಎಂಬ ವ್ಯಾಪಾರಿ ಸಂಸ್ಥೆಯನ್ನು ನಮ್ಮ ಶಿಕ್ಷಣ ಇಲಾಖೆಯೊಳಕ್ಕೆ ಬಿಟ್ಟುಕೊಳ್ಳುವುದೇ ಅಪಾಯಕಾರಿ’ ಎನ್ನುತ್ತಾರೆ ಕಮ್ಯುನಿಸ್ಟ್ ಹಿನ್ನೆಲೆಯ ಸಾಮಾಜಿಕ ಕಾರ್ಯಕರ್ತ ಭೀಮನಗೌಡ ಕಾಶಿರೆಡ್ಡಿ.

ಖ್ಯಾತ ಆಹಾರ ತಜ್ಞ ಡಾ. ಕೆಸಿ. ರಘು

ಇಸ್ಕಾನ್ ಹೆಸಾರಲ್ಲಿ ನಾಣ್ಯ!

ಪ್ರಧಾನಿ ಮೋದಿಯವರು 3 ತಿಂಗಳ ಹಿಂದೆ ಇಸ್ಕಾನ್ಗೆ ನೂರು ವರ್ಷ ತುಂಬಿತು ಎಂದು 125 ರೂ. ನಾಣ್ಯ ಬಿಡುಗಡೆ ಮಾಡಿದ್ದರು! ಒಂದೂ ಶಾಲೆ, ಆಸ್ಪತ್ರೆ, ಹಾಸ್ಟೇಲ್ ನಿರ್ಮಿಸದ ಇಸ್ಕಾನ್ ಬಿಸಿಯೂಟದ ಫೋಟೊ ತೋರಿಸಿಯೇ ವಿದೇಶಗಳಿಂದ ಫಂಡ್ ಎತ್ತುತ್ತ ಬಂದಿದೆ. ಶರಣ ಪರಂಪರೆಯ ಈ ನೆಲದಲ್ಲಿ ದಾಸೋಹ ಎಂಬುದು ಕೇವಲ ಪದವಲ್ಲ. ಅದು ಕಾಯಕದ ಪರಿಕಲ್ಪನೆಯಲ್ಲಿ ಒಡಮೂಡಿ ಬಂದ ಒಂದು ಶ್ರೇಷ್ಠ ಕಾರ್ಯ., ಆ ಕಾರಣಕ್ಕೇ ಸರ್ಕಾರ ಮಧ್ಯಾಹ್ನದ ಬಿಸಿಯೂಟಕ್ಕೆ ‘’ಅಕ್ಷರ ದಾಸೋಹ’ ಎಂಬ ಅರ್ಥಪೂರ್ಣ ಹೆಸರನ್ನು ಇಟ್ಟಿತು. ಆದರೆ ಮುಂದೆ ಈ ಯೋಜನೆಯೊಳಕ್ಕೆ ತೂರಿಕೊಂಡ ಇಸ್ಕಾನ್ ಸರ್ಕಾರದ ಅನುದಾನ ಪಡೆಯುತ್ತಲೇ ಅದಕ್ಕೆ ಅಕ್ಷಯ ಪಾತ್ರೆ ಎಂದು ಹೆಸರು ಇಟ್ಟುಕೊಂಡಿತು.

ದಾಸೋಹ ಎಂಬುದು ವಾಸ್ತವವಾದರೆ, ಅಕ್ಷಯ ಪಾತ್ರೆ ಎಂಬುದು ಊಹಾತ್ಮಕವಾದುದು. ಇದಕ್ಕೆ ಯಾವುದೇ ವೈಜ್ಞಾನಿಕ ತಳಹದಿ ಇಲ್ಲ. ಬಹುಷಃ ಇದು ಇಸ್ಕಾನ್ ಪಾಲಿಗೆ ವಿದೇಶಿ ದೇಣಿಗೆ ತಂದು ಕೊಡುವ ಅಕ್ಷಯ ಪಾತ್ರೆ ಅಷ್ಟೇ.

ಅದರ ಟ್ರಸ್ಟಿನಲ್ಲಿ ಕೋಟ್ಯಂತರ ರೂ ಅವ್ಯವಹಾರ ನಡೆದ ಅಪಾದನೆಗಳಿವೆ. ಆದರೆ ಪ್ರಧಾನಿ ಮೋದಿಯ ನೆಚ್ಚಿನ ಇಸ್ಕಾನ್ ಅನ್ನು ರಾಜ್ಯ ಸರ್ಕಾರ ಮರೆತೀತೆ?

ಅಕ್ಷರ ದಾಸೋಹ ಸಂಘಟನೆ ಸರ್ಕಾರದ ಈ ನಡೆ ವಿರೋಧಿಸಿ ಪ್ರತಿಭಟನೆ ನಡೆಸಲು ಉದ್ದೇಶಿಸಿರುವುದು ಸ್ವಾಗತಾರ್ಹ.

Tags: BJPCongress Partyಅಕ್ಷಯಪಾತ್ರಾ ಪೌಂಡೇಷನ್ಇಸ್ಕಾನ್‌ ಪ್ರತಿಷ್ಠಾಪನೆಕರ್ನಾಟಕ ಸರ್ಕಾರನರೇಂದ್ರ ಮೋದಿಬಿಜೆಪಿಸರ್ಕಾರಿ ಶಾಲೆಗಳು
Previous Post

SBI ಬ್ಯಾಂಕ್‌ನಲ್ಲಿ ಬೆಂಕಿ, ಕ್ಯಾಷ್‌ ಕೌಂಟರ್‌ ಕೂಡ ಧಗಧಗ…! | SBI BANK |

Next Post

ಜೆಡಿಎಸ್‌ ಬೆಂಬಲ ಕೇಳಿದ ಬಿಎಸ್‌ವೈ : ಒಂದೆರಡು ದಿನದಲ್ಲಿ ನಿರ್ಧರಿಸುವುದಾಗಿ ಹೆಚ್‌.ಡಿ.ಕೆ ಭರವಸೆ!

Related Posts

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
0

ರಾಜ್ಯ ಕಾಂಗ್ರೆಸ್ ಶಾಸಕರಿಂದ ರಣದೀಪ್ ಸಿಂಗ್ ಸುರ್ಜೇವಾಲ (Randeep sing surjewala) ಅಭಿಪ್ರಾಯ ಸಂಗ್ರಹ ಮಾಡುತ್ತಿರುವ  ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar) ಪ್ರತಿಕ್ರಿಯಿಸಿದ್ದು,...

Read moreDetails
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
Next Post
ಸಿದ್ಧರಾಮಯ್ಯನ ಬಳಿಕ RSS ಬೆನ್ನು ಬಿದ್ದ ಹೆಚ್‌ ಡಿ ಕುಮಾರಸ್ವಾಮಿ: ಸಂಘಕ್ಕೆ ಮಗ್ಗುಲ ಮುಳ್ಳಾಯಿತೇ HDKಯ ಈ ಬದಲಾವಣೆ ?

ಜೆಡಿಎಸ್‌ ಬೆಂಬಲ ಕೇಳಿದ ಬಿಎಸ್‌ವೈ : ಒಂದೆರಡು ದಿನದಲ್ಲಿ ನಿರ್ಧರಿಸುವುದಾಗಿ ಹೆಚ್‌.ಡಿ.ಕೆ ಭರವಸೆ!

Please login to join discussion

Recent News

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada