• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪಂಚಮಸಾಲಿ ಸಮುದಾಯದ ಮನವೊಲಿಕೆಗೆ ಮುಂದಾಯಿತೇ ಸಿಎಂ ಬೊಮ್ಮಾಯಿ ಸರ್ಕಾರ?

ನಚಿಕೇತು by ನಚಿಕೇತು
December 15, 2021
in ಕರ್ನಾಟಕ, ರಾಜಕೀಯ
0
ಪಂಚಮಸಾಲಿ ಸಮುದಾಯದ ಮನವೊಲಿಕೆಗೆ ಮುಂದಾಯಿತೇ ಸಿಎಂ ಬೊಮ್ಮಾಯಿ ಸರ್ಕಾರ?
Share on WhatsAppShare on FacebookShare on Telegram

2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸಿದ ಹೋರಾಟಗಳು ಒಂದೆರಡಲ್ಲ. ರಾಜ್ಯ ರಾಜಧಾನಿಯಲ್ಲೂ ಬೃಹತ್ ಹೋರಾಟ ಮಾಡಿದ್ದ ಪಂಚಮಸಾಲಿ ಸಮುದಾಯ ಒಂದು ಅವಧಿಯಲ್ಲಿ ಸರ್ಕಾರದ ನಿದ್ದೆಯನ್ನೇ ಕೆಡಿಸಿತ್ತು. ಆದರೂ ಪ್ರಯತ್ನ ಬಿಡದ ಪಂಚಮಸಾಲಿ ಸಮುದಾಯ ತನ್ನ ಹೋರಾಟವನ್ನು ಇನ್ನೂ ಮುಂದುವರೆಸಿದೆ. ಈ ಬೆಳವಣಿಗೆಯನ್ನು ಹೀಗೆ ನಿರ್ಲಕ್ಷಿಸಿದರೆ ಬರುವ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಪಕ್ಷಕ್ಕೆ ಮುಳುವಾಗುವ ಸಾಧ್ಯತೆ ಹೆಚ್ಚು ಎಂಬುದನ್ನು ಅರಿತ ಸರ್ಕಾರ ಪಂಚಮಸಾಲಿ ಸಮಾಜದ ಮನವೊಲಿಕೆಗೆ ಮುಂದಾದಂತೆ ಕಾಣುತ್ತಿದೆ.ಲಿಂಗಾಯತ ಸಮುದಾಯದಲ್ಲೇ ಪಂಚಮಸಾಲಿ ದೊಡ್ಡ ಸಮುದಾಯವಾಗಿದ್ದು, 2ಎ ಮೀಸಲಾತಿ ಕೊಡಿ ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೃಹಮಂತ್ರಿಯಾಗಿದ್ದಾಗ 2ಎ ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿಯೂ ಭರವಸೆ ನೀಡಿದ್ದರು. ಆ ಭರವಸೆ ಇನ್ನೂ ಈಡೇರಿಲ್ಲ. ಸದ್ಯ ಬೊಮ್ಮಾಯಿ ಅವರೇ ಸಿಎಂ ಆಗಿರುವುದರಿಂದ ಈ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಹಾಡಲು ಹಲವು ಸೂತ್ರ ಹೆಣೆದಿದ್ದಾರೆ. ಈ ಮೂಲಕ ಬಲಿಷ್ಠ ಲಿಂಗಾಯತ ನಾಯಕರಾಗಿ ಹೊರಹೊಮ್ಮುವ ಯೋಜಿತ ಚಿಂತನೆ ಇದರ ಹಿಂದೆ ಇದ್ದಂತೆ ತೋರುತ್ತಿದೆ.

ADVERTISEMENT

ಸರ್ಕಾರದ ಚಿಂತನೆಗಳೇನು?

ಪಂಚಮಸಾಲಿ ಸಮುದಾಯಕ್ಕೆ 2ಎ ಸವಲತ್ತನ್ನು 3ಬಿಯಲ್ಲೇ ನೀಡುವ ಯೋಚನೆ ಸಿಎಂ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಪಂಚಮಸಾಲಿಗೆ 2ಎ ಮೀಸಲಾತಿ ಕಲ್ಪಿಸಿದರೆ ಇದರಿಂದ ಇತರೆ ಹಿಂದುಳಿದ ವರ್ಗಗಳ ಸಿಟ್ಟಿಗೆ ಇದು ಗುರಿಯಾಗಬಹುದು. ಇದನ್ನು ಮನಗಂಡು 2ಎ ಸೌಲಭ್ಯವನ್ನು 3ಬಿಯಲ್ಲಿ ಒದಗಿಸಲು ಚಿಂತನೆ ನಡೆದಿದೆ. 3ಬಿಯಲ್ಲಿ ಶಿಕ್ಷಣ, ಉದ್ಯೋಗದಲ್ಲಿ ಯಾವ ಅನುಪಾತದಲ್ಲಿ ಮೀಸಲಾತಿ ನೀಡುತ್ತಾರೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

2013 ರಲ್ಲಿ ಜಗದೀಶ್ ಶೆಟ್ಟರ್ ಸರ್ಕಾರವಿದ್ದಾಗ ಬಣಜಿಗ ಲಿಂಗಾಯತರಿಗೆ ಶಿಕ್ಷಣಕ್ಕೆ ಮಾತ್ರ ಮೀಸಲಾತಿ ಒದಗಿಸಲಾಗಿದೆ. ಉದ್ಯೋಗದಲ್ಲಿ ಈವರೆಗೂ ಮೀಸಲಾತಿ ಸಿಕ್ಕಿಲ್ಲ.

2ಎ ಮೀಸಲಾತಿ ಲಾಭ – ನಷ್ಟ

ಪಂಚಮಸಾಲಿಗೆ 2ಎ ಮೀಸಲಾತಿ ಕೊಟ್ಟರೆ ಬೊಮ್ಮಾಯಿ ಅವರು ಲಿಂಗಾಯತ ಸಮಾಜದ ದೊಡ್ಡ ನಾಯಕ ಎಂಬ ಖ್ಯಾತಿಗೆ ಪಾತ್ರರಾಗಬಹುದು. ಯಡಿಯೂರಪ್ಪ ಅವರು ಮಾಡದ ಕೆಲಸ ನಾನು ಮಾಡಿದೆ ಎಂಬ ಹೆಗ್ಗಳಿಕೆ ಬೊಮ್ಮಾಯಿ ಪಾಲಾಗಿ, ಇದರಿಂದ ಲಿಂಗಾಯತ ಮತ ಬ್ಯಾಂಕ್ ಬಿಜೆಪಿಗೆ ಹೊರಳಬಹುದೆಂಬ ಲೆಕ್ಕಚಾರವೂ ಇದೆ. ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಕ್ಷೇತ್ರಗಳ ಗೆಲವು ವಿಸ್ತರಣೆಯಾಗಬಹುದು. ಇದರ ಜೊತೆಜೊತೆಗೆ 2ಎ ನಲ್ಲಿರುವ ಇತರೆ ಸಮಾಜದ ಸವಲತ್ತು ಬೇರೆಯವರಿಗೆ ಕೊಟ್ಟ ಅಪಕೀರ್ತಿಗೂ ಬೊಮ್ಮಾಯಿ ಪಾತ್ರರಾಗಬಹುದು. ಸಹಜವಾಗಿ ಹಿಂದುಳಿದ ವರ್ಗಗಳು ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಸಿಡಿದೇಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಇತ್ತ ವಿಪಕ್ಷಗಳು ಇದೇ ವಿಚಾರವನ್ನು ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಳ್ಳುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ.

ಮೀಸಲಾತಿ ಕೊಡದಿದ್ದರೆ…?

2ಎ ಮೀಸಲಾತಿಯನ್ನು ಪಂಚಮಸಾಲಿಗೆ ಕೊಡದಿದ್ದರೆ ಆ ಸಮುದಾಯದ ಕೆಂಗಣ್ಣಿಗೆ ಸರ್ಕಾರ ಗುರಿಯಾಗಬಹುದು. ಸಿಎಂ ತವರು ಶಿಗ್ಗಾಂವಿಯಲ್ಲಿ ಪಂಚಮಸಾಲಿ ಸದೊಡ್ಡ ಸಮುದಾಯವಾಗಿದ್ದು, ಇದರಿಂದ ಶಿಗ್ಗಾಂವಿಯಲ್ಲೂ ಬೊಮ್ಮಾಯಿಗೆ ಹಿನ್ನಡೆಯಾಗಬಹುದು. ಈಗ ಹಾನಗಲ್ ಮಿನಿ ಸಮರದಲ್ಲಿ ಪಂಚಮಸಾಲಿಗೆ ಟಿಕೆಟ್ ಕೊಡದ ಬೇಸರ ಇನ್ನು ಹಾಗೇ ಇದೆ. ರಾಜ್ಯ ಬಿಜೆಪಿಯ ಕೋರ್ ಕಮಿಟಿಯಲ್ಲೂ ಸಮಾಜಕ್ಕೆ ಸ್ಥಾನಮಾನವಿಲ್ಲ. ಇತ್ತ ವಿಧಾನ ಪರಿಷತ್ ಚುನಾವಣೆಯಲ್ಲೂ ಸಮಾಜಕ್ಕೆ ಸ್ಥಾನಮಾನ ದೊರಕಿಲ್ಲ. ಇದರಿಂದಾಗಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಮತ ಬ್ಯಾಂಕ್ ಬಿಜೆಪಿಯಿಂದ ದೂರಗಬಹುದು.

ಒಟ್ಟಾರೆ ಮುಖ್ಯಮಂತ್ರಿ ಅವರು ಪಂಚಮಸಾಲಿಯನ್ನು 2ಎ ಗೆ ಸೇರಿಸದೆ ಸೌಲಭ್ಯ ನೀಡುವ ಈ ಪ್ಲಾನ್ ಎಷ್ಟರ ಮಟ್ಟಿಗೆ ಸಫಲವಾಗಲಿದೆ? ಆ ಸಮುದಾಯದ ನಾಯಕರು ಇದನ್ನು ಒಪ್ಪುತ್ತಾರಾ? ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜದವರ ಮನವೊಲಿಸುವಲ್ಲಿ ಸಕ್ಸಸ್ ಕಾಣುತ್ತಾರಾ ಎಂಬುದು ಇನ್ನಷ್ಟೇ ಕಾದು ನೋಡಬೇಕು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಪಂಚಮಸಾಲಿ ಸಮುದಾಯಬಿ ಎಸ್ ಯಡಿಯೂರಪ್ಪಬಿಜೆಪಿಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

ವಿಧಾನ ಪರಿಷತ್ತು ಸದಸ್ಯ ಸಂದೇಶ್ ನಾಗರಾಜ್ ವಿರುದ್ಧ ಶಾಸಕ ಸಾ‌.ರಾ.ಮಹೇಶ್ ವಾಗ್ದಾಳಿ

Next Post

ಕಾಂಗ್ರೆಸ್‌ ಮತಾಂತರ ನಿಷೇಧ ಕಾಯಿದೆಯನ್ನು ಖಂಡಿತಾ ನಿಷೇಧಿಸುತ್ತದೆ- ಡಿಕೆಶಿ

Related Posts

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
0

https://youtu.be/FH4phfSAt_4

Read moreDetails

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025
Next Post
ಕಾಂಗ್ರೆಸ್‌ ಮತಾಂತರ ನಿಷೇಧ ಕಾಯಿದೆಯನ್ನು ಖಂಡಿತಾ ನಿಷೇಧಿಸುತ್ತದೆ- ಡಿಕೆಶಿ

ಕಾಂಗ್ರೆಸ್‌ ಮತಾಂತರ ನಿಷೇಧ ಕಾಯಿದೆಯನ್ನು ಖಂಡಿತಾ ನಿಷೇಧಿಸುತ್ತದೆ- ಡಿಕೆಶಿ

Please login to join discussion

Recent News

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

July 31, 2025

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada