• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡಿ ನೋವಿಗೆ ‘ಪದತ್ಯಾಗ’ ಮದ್ದು; ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರ ಬೊಮ್ಮಾಯಿ?

ನಚಿಕೇತು by ನಚಿಕೇತು
December 19, 2021
in ಕರ್ನಾಟಕ, ರಾಜಕೀಯ
0
ಮಂಡಿ ನೋವಿಗೆ ‘ಪದತ್ಯಾಗ’ ಮದ್ದು; ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರ ಬೊಮ್ಮಾಯಿ?
Share on WhatsAppShare on FacebookShare on Telegram

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹಾ ಬದಲಾವಣೆಗೆ ಮುಹೂರ್ತ ನಿಗದಿಯಾಗಿದೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಇಳಿದ ಬಳಿಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಪಟ್ಟಕ್ಕೇರಿದ್ದಾರೆ. ಜುಲೈ 28ರಂದು ಸಿಎಂ ಆಗಿ ಅಧಿಕಾರ ಸ್ವೀಕರಿಸಿರೋ ಬೊಮ್ಮಾಯಿ ಕಳೆದ ನಾಲ್ಕೂವರೆ ತಿಂಗಳಿಂದ ಕಾರ್ಯನಿರ್ವಹಿಸ್ತಿದ್ದಾರೆ. ಆದರೆ ಸಿಎಂ ಸ್ಥಾನದಿಂದ ಬೊಮ್ಮಾಯಿಯವರನ್ನು ಕೆಳಗಿಳಿಯುತ್ತಾರೆ ಅನ್ನೋ ಚರ್ಚೆ ಬಿಜೆಪಿ ವಲಯದಲ್ಲಿ ನಡೆಯುತ್ತಿದೆ.

ADVERTISEMENT

ಅಂತ್ಯವಾಗುತ್ತಾ ನಾಲ್ಕೂವರೆ ತಿಂಗಳ ಬೊಮ್ಮಾಯಿ ಅಧಿಕಾರ?

ಹೌದು, ಇಂಥದ್ದೊಂದು ಚರ್ಚೆ ರಾಜ್ಯ ಬಿಜೆಪಿ ಪಾಳಯದಲ್ಲಿ ಜೋರಾಗೇ ನಡೆಯುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ತಮ್ಮ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬ ಬಿಸಿಬಿಸಿ ಚರ್ಚೆಯಾಗುತ್ತಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಭಾರಿ ಬದಲಾವಣೆ ಆಗುತ್ತದೆ ಎನ್ನಲಾಗಿದೆ. ಒಂದು ವೇಳೆ ಸಿಎಂ ಬೊಮ್ಮಾಯಿ ರಾಜೀನಾಮೆ ನೀಡೋದು ಪಕ್ಕಾ ಆದ್ರೆ, ಯಾವ ಕಾರಣಕ್ಕೆ ರಾಜೀನಾಮೆ ನೀಡ್ತಾರೆ ಅನ್ನೋ ಬಗ್ಗೆ ಈ ಮುಖ್ಯ ಚರ್ಚೆಯಲ್ಲಿದೆ.

ರಾಜೀನಾಮೆ ನೀಡ್ತಾರಾ ಸಿಎಂ?

ಜನವರಿಯಲ್ಲಿ ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ಸಾಧ್ಯತೆ ಇದೆ. ಈ ಮೂಲಕ ಇನ್ನೊಂದು ತಿಂಗಳಲ್ಲಿ ರಾಜ್ಯದ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆಯುವ ಸಾಧ್ಯತೆ ಇದೆ. ಯಾಕೆಂದರೆ ಮಂಡಿ ನೋವಿನಿಂದ ಸಿಎಂ ಹುದ್ದೆಗೆ ಬೊಮ್ಮಾಯಿ ರಾಜೀನಾಮೆ ಕೊಡಲಿದ್ದಾರೆ ಎನ್ನಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಮಂಡಿ ನೋವು ಕಾಡುತ್ತಿದೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಅಮೆರಿಕಾಕ್ಕೆ ತೆರಳಲಿದ್ದಾರೆ. ಈಗಾಗಲೇ ಅಲ್ಲಿನ ವೈದ್ಯರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿರೋ ಸಿಎಂ, ಅಮೆರಿಕಾಕ್ಕೆ ತೆರಳಿ, ಮಂಡಿ ನೋವಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರಂತೆ. ಇನ್ನು ಈಗಾಗಲೇ ಅಮೆರಿಕಾಗೆ ತೆರಳಲು ವೀಸಾಗೆ ಅರ್ಜಿ ಹಾಕಿರುವ ಸಿಎಂ ಬೆಳಗಾವಿಯ ಅಧಿವೇಶನ ಮುಗಿಯುವುದರೊಳಗೆ ವೀಸಾಗೆ ಅನುಮತಿ ಪಡೆಯಲಿದ್ದಾರೆನ್ನಲಾಗಿದೆ.

ರಾಜೀನಾಮೆಗೆ ಕಾರಣವೇನು?

ಜನವರಿ ಅಂತ್ಯದೊಳಗೆ ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಿ ಅಮೆರಿಕಾಗೆ ಪಯಣ ಬೆಳೆಸುತ್ತಾರೆ. ಶಸ್ತ್ರ ಚಿಕಿತ್ಸೆಯ ನಂತರ 3 ತಿಂಗಳು ಬೆಡ್ ರೆಸ್ಟ್ ಕಡ್ಡಾಯ ಎಂದು ಈಗಾಗಲೇ ಸಿಎಂ ಬೊಮ್ಮಾಯಿ ಅವರಿಗೆ ವೈದ್ಯರು ಸೂಚನೆ ನೀಡಿದ್ದು, ಈ 3 ತಿಂಗಳು ಸಿಎಂ ಇಲ್ಲದೆಯೇ ಎಲ್ಲ ನಿಭಾಯಿಸುವುದು ಕಷ್ಟ ಎಂದು ಬೊಮ್ಮಾಯಿ ರಾಜೀನಾಮೆ ನೀಡುವ ಸಾಧ್ಯತೆಗಳು ಹೆಚ್ಚಿದೆ ಎಂದು ಹೇಳಲಾಗಿದೆ.

ಮಂಡಿನೋವಿಗೆ ‘ಪದತ್ಯಾಗ’ ಮದ್ದು!

2023ಕ್ಕೆ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಅಖಾಡ ಸಜ್ಜಾಗಿದೆ. ಹೀಗಾಗಿ ಸರ್ಕಾರದ ವರ್ಚಸ್ಸು, ಅಧಿಕಾರದ ಸದ್ಭಳಕೆ ಸಮಾನಾಂತರವಾಗಿರಬೇಕು. ಜೊತೆಗೆ ಸಂಘಟನೆಯೂ ಬಲವರ್ಧನೆ ಆಗಬೇಕು ಅಂತಾ ಕಮಲ ‘ಹೈ’ ಪ್ಲಾನ್ ಮಾಡಿಕೊಂಡಿದೆ. ಮುಂದಿನ ವರ್ಷ ಪೂರ್ತಿ ಚುನಾವಣೆಗಾಗಿ ಓಡಾಟ ಮಾಡಬೇಕಾಗುತ್ತೆ. ಇದು ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗೋ ಸಿಎಂ ಬೊಮ್ಮಾಯಿಗೆ ಕಷ್ಟವಾಗಬಹುದು.

ಈಗಾಗಲೇ ಸಿಎಂ ಶಸ್ತ್ರಚಿಕಿತ್ಸೆ ವಿಚಾರ ನಾಯಕರ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಸಿಎಂ ಸ್ಥಾನವನ್ನೂ ತ್ಯಜಿಸಲು ಸಿದ್ಧ ಎಂದಿದ್ದಾರಂತೆ ಬೊಮ್ಮಾಯಿ. ಈ ಮಾತನ್ನು ಖುದ್ದು ಸಿಎಂ ಬಸವರಾಜ ಬೊಮ್ಮಾಯಿಯೇ ಹೇಳಿದ್ದಾರೆ ಅನ್ನೋ ಮಾತು ಕಮಲ ಪಾಳಯದಲ್ಲಿ ಕೇಳಿಬರ್ತಿದೆ. ಹೀಗಾಗಿ ಹೈಕಮಾಂಡ್ ನಾಯಕರು ದೃಢ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.

ಬೊಮ್ಮಾಯಿ ರಾಜೀನಾಮ ಆನಿವಾರ್ಯವಾದ್ರೆ ಹೈಕಮಾಂಡ್ ನಾಯಕರು ನೂತನ ಮುಖ್ಯಮಂತ್ರಿ ಆಯ್ಕೆ ಮಾಡಲಿದ್ದಾರೆ. ಇದರ ಬೆನ್ನಲ್ಲೇ ಈ ಬಗ್ಗೆ ರಾಜ್ಯ ಬಿಜೆಪಿ ಪಾಳಯದಲ್ಲಿ ಬಿಸಿ ಬಿಸಿ ಚರ್ಚೆ ಕೂಡಾ ಆರಂಭವಾಗಿದೆ.

ಒಟ್ನಲ್ಲಿ ನಾಲ್ಕೂವರೆ ತಿಂಗಳ ಹಿಂದಷ್ಟೇ ಯಡಿಯೂರಪ್ಪರ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರೋ ಬೊಮ್ಮಾಯಿ ಸಿಎಂ ಪಟ್ಟದಿಂದ ಕೆಳಗಿಳಿಯುತ್ತಾರೆ ಅನ್ನೋ ಚರ್ಚೆ ನಡೀತಿದೆ. ತಮ್ಮ ವೈಯಕ್ತಿಕ ಕಾರಣದಿಂದ ಬೊಮ್ಮಾಯಿ ಪದತ್ಯಾಗಕ್ಕೆ ಮುಂದಾಗಿದ್ದು, ಜನವರಿ ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಆಗೋದ್ರಲ್ಲಿ ಯಾವುದೇ ಡೌಟಿಲ್ಲ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿಎಂ ಬಸವರಾಜ ಬೊಮ್ಮಾಯಿಸಿಎಂ ಬೊಮ್ಮಾಯಿ
Previous Post

ಸಂಸದೀಯ ವ್ಯವಸ್ಥೆ ನಾಶಪಡಿಸುವುದನ್ನು ನೋಡಲು ನಾನು ಅಲ್ಲಿರಬೇಕಿತ್ತೇ: ಸದನಕ್ಕೆ ಗೈರು ಹಾಜರಿ ಬಗ್ಗೆ ಸಮರ್ಥಿಸಿಕೊಂಡ HDK

Next Post

ರಾಯಣ್ಣನ ಮೂರ್ತಿ ಭಗ್ನಗೊಂಡ ಜಾಗದಲ್ಲೆ ಪುನಃ ಮೂರ್ತಿ ಪ್ರತಿಷ್ಠಾನೆ ಮಾಡಿದ ಅನಗೋಳದ ಅಭಿಮಾನಿಗಳು

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ರಾಯಣ್ಣನ ಮೂರ್ತಿ ಭಗ್ನಗೊಂಡ ಜಾಗದಲ್ಲೆ ಪುನಃ ಮೂರ್ತಿ ಪ್ರತಿಷ್ಠಾನೆ ಮಾಡಿದ ಅನಗೋಳದ ಅಭಿಮಾನಿಗಳು

ರಾಯಣ್ಣನ ಮೂರ್ತಿ ಭಗ್ನಗೊಂಡ ಜಾಗದಲ್ಲೆ ಪುನಃ ಮೂರ್ತಿ ಪ್ರತಿಷ್ಠಾನೆ ಮಾಡಿದ ಅನಗೋಳದ ಅಭಿಮಾನಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada