• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತೀವ್ರ ಗದ್ದಲದ ನಡುವೆಯೇ ಚುನಾವಣಾ ಸುಧಾರಣಾ ಕಾಯ್ದೆ ಅಂಗೀಕಾರ : ವಿಪಕ್ಷಗಳಿಂದ ತೀವ್ರ ಟೀಕೆ

Any Mind by Any Mind
December 20, 2021
in ದೇಶ, ರಾಜಕೀಯ
0
ತೀವ್ರ ಗದ್ದಲದ ನಡುವೆಯೇ ಚುನಾವಣಾ ಸುಧಾರಣಾ ಕಾಯ್ದೆ ಅಂಗೀಕಾರ : ವಿಪಕ್ಷಗಳಿಂದ ತೀವ್ರ ಟೀಕೆ
Share on WhatsAppShare on FacebookShare on Telegram

ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಹಾಗೂ ಪ್ರತಿಭಟನೆ ನಡುವೆಯೇ ಇಂದು ಚುನಾವಣಾ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈ ಕುರಿತು ಪರ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ADVERTISEMENT

ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಹಾಗೂ ಪ್ರತಿಭಟನೆ ನಡುವೆಯೇ ಇಂದು ಚುನಾವಣಾ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಿಸು ಕಾನೂನುನಿಗೆ ಲೋಕಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಸರ್ಕಾರದ ಈ ಕ್ರಮವನ್ನ ತೀವ್ರವಾಗಿ ಖಂಡಿಸಿರುವ ವಿರೋಧ ಪಕ್ಷಗಳು ಆಧಾರ್ ಕಾರ್ಡ್ ನೊಂದಿಗೆ ವೋಟರ್ ಐಡಿ ಲಿಂಕ್ ಮಾಡುವುದರಿಂದ ನಾಗರೀಕರಲ್ಲದವರಿಗೆ ಮತದಾನದ ಹಕ್ಕನ್ನು ನೀಡಲಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್, ಡಿಎಂಕೆ, ಎನ್ ಸಿ ಪಿ,  ತೃಣಮೂಲ ಕಾಂಗ್ರೆಸ್, ಶಿವಸೇನೆ ಮತ್ತು ಬಿ ಎಸ್‌ ಪಿ ಇಂದು ಲೋಕಸಭೆಯಲ್ಲಿ ಚುನಾವಣಾ ಕಾನೂನು ತಿದ್ದುಪಡಿ ಮಸೂದೆಯನ್ನು ವಿರೋಧಿಸಿವೆ.  ವೈ ಎಸ್ ಆರ್ ಕಾಂಗ್ರೆಸ್ ಕೂಡ ಮಸೂದೆಯ ಪರಿಶೀಲನೆ ಮತ್ತು  ಅದರ ಮೇಲೆ ಚರ್ಚೆ ನಡೆಯಬೇಕು. ಸಮಗ್ರ ಆವೃತ್ತಿಯೊಂದಿಗೆ ಮರಳಿ ಮಂಡಿಸಲು ಸರ್ಕಾರವನ್ನು ಒತ್ತಾಯಿಸಿತು. ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ ಕೂಡ ಮಸೂದೆ ಬಗ್ಗೆ ವಿರೋಧ ವ್ಯಕ್ತಪಡಿಸಿತು.

ತಿರುವನಂತಪುರ ಕಾಂಗ್ರೆಸ್ ಸಂಸದ ಶಶಿ ತರೂರ್ ಈ ಕುರಿತು ಪ್ರತಿಕ್ರಿಯಿಸಿದ್ದು, “ಆಧಾರ್ ಕಾರ್ಡ್ಅನ್ನು ಈ ಹಿಂದೆ ವಾಸಸ್ಥಳದ ಪುರಾವೆಯಾಗಿ ಉಪಯೋಗಿಸಿಕೊಳ್ಳಲಾಗುತ್ತಿತ್ತು. ಆಧಾರ್ ಕಾರ್ಡ್ನಲ್ಲಿ ನಮಗೆ ಮನೆಯ ವಿಳಾಸದ ದಾಖಲೆ ಸಿಗುತ್ತದೆ. ಹಾಗಂದ ಮಾತ್ರಕ್ಕೆ ಆಧಾರ್ ಕಾರ್ಡ್ ಪೌರತ್ವದ ಸೂಚಕ ಅಲ್ಲ. ಈ ಕ್ರಮದ ಮೂಲಕ ನೀವು ಈ ದೇಶದ ನಾಗರೀಕರಲ್ಲದವರಿಗೆ ಮತದಾನದ ಹಕ್ಕನ್ನು ನೀಡುತ್ತಿದ್ದೀರಿ ಎಂದು ಆರೋಪಿಸಿದ್ದಾರೆ.

ಮತದಾನ ಕಾನೂನುಬದ್ಧ ಹಕ್ಕು. ಆದರೆ, ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣೆ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನ ಮನೀಷ್ ತಿವಾರಿ ಹೇಳಿದ್ದಾರೆ.

ಹಾಗೇ  ತೃಣಮೂಲ ಕಾಂಗ್ರೆಸಿನ ಸೌಗತೋ ರಾಯ್ ಈ ಬಗ್ಗೆ ಮಾತನಾಡಿದ್ದು, “ಸರ್ಕಾರವು ದೇಶದ ಎಲ್ಲಾ ನಾಗರೀಕರಿಗೆ ಆಧಾರ್ ಕಾರ್ಡ್ ನೀಡುತ್ತದೆ. ಆದರೆ, ಕೇಂದ್ರ ಸರ್ಕಾರ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ನಾನೂ ಈ ಮಸೂದೆಯನ್ನು ಸಂಪೂರ್ಣವಾಗಿ ವಿರೋಧಿಸುತ್ತೇನೆ,” ಎಂದಿದ್ದಾರೆ.

ಸದನದಲ್ಲಿ ಒಂದೆಡೆ ಪ್ರತಿಪಕ್ಷದ ಸಂಸದರು ಈ ಮಸೂದೆಯನ್ನು ಅಂಗೀಕರಿಸದಂತೆ ಘೋಷಣೆಗಳನ್ನು ಕೂಗಿದರು ಮತ್ತು ಲಖೀಂಪುರ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತಂದೆ ಅಜಯ್ ಮಿಶ್ರಾನನ್ನು ಸಚಿವ ಸಂಪುಟದಿಂದ ತಕ್ಷಣವೇ ವಜಾಗೊಳಿಸಬೇಕು ಎಂಬ ಆಗ್ರಹ ಉಭಯ ಸದನಗಳಲ್ಲಿ ವ್ಯಾಪಕವಾಗಿ ಕೇಳಿ ಬಂದಿತು. 

ಪ್ರತಿಪಕ್ಷದವರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅವೆಲ್ಲವೂ ಆಧಾರ ರಹಿತ. ಸರ್ಕಾರವು ನಕಲಿ ಮತದಾನವನ್ನು ತಡೆಯುವ ನಿಟ್ಟಿನಲ್ಲಿ ಈ ಮಸೂದೆಯನ್ನು ಜಾರಿಗೆ ತರುತ್ತಿದೆ. ಇಂತಹ ಸಂದರ್ಭದಲ್ಲಿ ಆಡಳಿತ ಪಕ್ಷದ ಕ್ರಮವನ್ನ ವಿರೋಧ ಪಕ್ಷಗಳು ಬೆಂಬಲಿಸಬೇಕೆ ಹೊರತು ವಿರೋಧಿಸಬಾರದು ಎಂದು ಕೇಂದ್ರ ಸಚಿವ ಕಿರಣ್ ರಿಜುಜು ಹೇಳಿದ್ದಾರೆ.

ಎಐಎಂಐಎಂ ಪಕ್ಷದ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಈ ಕುರಿತು ಮಾತನಾಡಿದ್ದು, ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್ ಕಾರ್ಡ್ಅನ್ನು ಲಿಂಕ್ ಮಾಡುವುದು ಸರ್ಕಾರದ ತಪ್ಪು ನಿರ್ಧಾರ. ಇದು ಪ್ರಜಾಪ್ರಭುತ್ವ ಮತ್ತು ನಾಗರೀಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ. ಆಧಾರ್ ಕಾರ್ಡ್ನಲ್ಲಿ ಶೇ.8 ರಷ್ಟು ವ್ಯತ್ಯಾಸಗಳು ಕಂಡು ಬಂದಿವೆ. ಮತದಾರರ ಪಟ್ಟಿಯಲ್ಲಿ ಶೇ.3-4 ರಷ್ಟು ದೋಷಗಳು ಕಂಡು ಬಂದಿವೆ. ಈ ಕಾಯ್ದೆಯನ್ನು ಅಂಗೀಕರಿಸಿದರೆ ಹೆಚ್ಚಿನ ಜನರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ,” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಗೌಪ್ಯತೆ ತೀರ್ಪಿನ ಅಡಿಯಲ್ಲಿ ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್‌ ಲಿಂಕ್ ಹೇರಲಾಗದು. ಅದು ಅವರವರ ಆಯ್ಕೆ.  ಚುನಾವಣಾ ದತ್ತಾಂಶದೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವ ಯೋಜನೆಯನ್ನು ಚುನಾವಣಾ ಆಯೋಗವು ʼಚುನಾವಣಾ ಪ್ರಕ್ರಿಯೆಯ ಸುಧಾರಣೆಗಳʼ ಭಾಗವಾಗಿ ಪ್ರಾರಂಭಿಸಿತು. ಮತದಾರರ ಪಟ್ಟಿಯಲ್ಲಿ ಬಹು ನಮೂದುಗಳನ್ನು ನಿಲ್ಲಿಸುವುದು ಮತ್ತು ಪಟ್ಟಿಗಳನ್ನು ದೋಷಮುಕ್ತಗೊಳಿಸುವುದು ಇದರ ಉದ್ದೇಶವಾಗಿತ್ತು.

ಚುನಾವಣಾ ಸಮಿತಿಯು ತನ್ನ ʼರಾಷ್ಟ್ರೀಯ ಮತದಾರರ ಪಟ್ಟಿ ಶುದ್ದೀಕರಣ ಮತ್ತು ದೃಢೀಕರಣ ಕಾರ್ಯಕ್ರಮದ ಭಾಗವಾಗಿ ಆಧಾರ್ ಸಂಖ್ಯೆಗಳನ್ನು ಸಂಗ್ರಹಿಸಲು ಪ್ರಾರಂಭಿಸಿತ್ತು.  ಆದರೆ ಆಗಸ್ಟ್ 2015 ರಲ್ಲಿ ಆಧಾರ್ ಕುರಿತು ಸುಪ್ರೀಂ ಕೋರ್ಟ್  ನೀಡಿದ ಆದೇಶವು ಇದಕ್ಕೆ ತಡೆ ಹಾಕಿತು. ಆಧಾರ್ ಸಂಖ್ಯೆಗಳನ್ನು ಸಂಗ್ರಹಿಸಲು ಕಾನೂನು ಅನುಮತಿ ಅಗತ್ಯವಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ನಂತರ ಚುನಾವಣಾ ಆಯೋಗವು ಚುನಾವಣಾ ಕಾನೂನಿನಲ್ಲಿ ಬದಲಾವಣೆಯನ್ನು ಪ್ರಸ್ತಾಪಿಸಿತು. ಅಂದಿನಿಂದ ಸರ್ಕಾರದ ಬಳಿ ಪ್ರಸ್ತಾವನೆ ಬಾಕಿ ಇತ್ತು. ಈಗ ಅದು ಮಸೂದೆ ಈ ರೂಪದಲ್ಲಿ ಅಂಗೀಕಾರವಾಗಿದೆ.

Tags: BJPCongress PartyCovid 19ಕೋವಿಡ್-19ಚುನಾವಣಾ ಸುಧಾರಣಾ ಕಾಯ್ದೆನರೇಂದ್ರ ಮೋದಿಬಿಜೆಪಿವಿಪಕ್ಷ
Previous Post

ತೈಲ ಬೆಲೆ ಇಳಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕ ಸಂಘದಿಂದ ಪ್ರತಿಭಟನೆ – HUBLI

Next Post

ಕುಟುಂಬ ರಾಜಕಾರಣಕ್ಕೆ ಬೇಸತ್ತು ಒಂದೊಂದಾಗಿಯೇ ಉದುರುತ್ತಿರುವ ತೆನೆಗಳು! : ದಳದ ಮುಂದಿನ ಭವಿಷ್ಯವೇನು?

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಕುಟುಂಬ ರಾಜಕಾರಣಕ್ಕೆ ಬೇಸತ್ತು ಒಂದೊಂದಾಗಿಯೇ ಉದುರುತ್ತಿರುವ ತೆನೆಗಳು! : ದಳದ ಮುಂದಿನ ಭವಿಷ್ಯವೇನು?

ಕುಟುಂಬ ರಾಜಕಾರಣಕ್ಕೆ ಬೇಸತ್ತು ಒಂದೊಂದಾಗಿಯೇ ಉದುರುತ್ತಿರುವ ತೆನೆಗಳು! : ದಳದ ಮುಂದಿನ ಭವಿಷ್ಯವೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada