• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ವಾಯುಮಾಲಿನ್ಯ ತಡೆಗೆ ಕ್ರಮ : ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್ ಗಳು

Any Mind by Any Mind
December 27, 2021
in ಕರ್ನಾಟಕ
0
ಸಿಲಿಕಾನ್ ಸಿಟಿಯಲ್ಲಿ ವಾಯುಮಾಲಿನ್ಯ ತಡೆಗೆ ಕ್ರಮ : ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್ ಗಳು
Share on WhatsAppShare on FacebookShare on Telegram


ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ವಾಹನದಟ್ಟಣೆಯಿಂದ ರಾಜಧಾನಿಯ ವಾತಾವರಣ ಹಾಳಾಗುತ್ತಿದೆ. ಇಂಥ ಸಮಸ್ಯೆಗಳ ಬಗ್ಗೆ ಸರ್ಕಾರ ಕೊಂಚ ಗಮನಹರಿಸಿದ್ದು, ವಾಯುಮಾಲಿನ್ಯ ತಡೆಯಲು ಇದೀಗ ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಸರ್ಕಾರ ಮುಕ್ತ ಅವಕಾಶ ಕಲ್ಪಿಸಿದೆ.

ADVERTISEMENT

ಸಿಲಿಕಾನ್ ಸಿಟಿಯಲ್ಲಿ ವಾಯುಮಾಲಿನ್ಯದ ಬಗ್ಗೆ ಕೇಳುವುದೇ ಬೇಡ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ವಾಹನದಟ್ಟಣೆಯಿಂದ ವಾತಾವರಣ ಹಾಳಾಗುತ್ತಿದೆ. ಇಂಥ ಸಮಸ್ಯೆಗಳ ಬಗ್ಗೆ ಸರ್ಕಾರ ಕೊಂಚ ಗಮನಹರಿಸಿದ್ದು, ವಾಯುಮಾಲಿನ್ಯ ತಡೆಯಲು ಇದೀಗ ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಸರ್ಕಾರ ಮುಕ್ತ ಅವಕಾಶ ಕಲ್ಪಿಸುತ್ತಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜಧಾನಿಯಲ್ಲಿ ಎಲೆಕ್ಟ್ರಿಕಲ್ ತರುವ ಯೋಜನೆಗೆ ಚಾಲನೆ ನೀಡಲಾಗಿತ್ತು. ಇಂದು ಬೆಳಗ್ಗೆ ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 90 ಎಲೆಕ್ಟ್ರಿಕ್ ಬಸ್ ಹಾಗೂ 265 ಬಿಎಸ್-6 ಡೀಸೆಲ್ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಈ ಮಾತನಾಡಿ, ನಮ್ಮ ಸಾರಿಗೆ ಸಂಸ್ಥೆ ಮುಂದುವರೆಯಬೇಕು. ಇದರ ಪುನಶ್ಚೇತನ ಮಾಡಲು ಸಮಿತಿ ರಚಿಸಿದ್ದೇವೆ. ಆರ್ಥಿಕ ಸ್ವಾವಲಂಬನೆ ಆಗಬೇಕು. ಶ್ರೀ ನಿವಾಸಮೂರ್ತಿ ಅವರ ನೇತೃತ್ವದಲ್ಲಿ ಹೊಸ ಸ್ವರೂಪದಲ್ಲಿ ಕೆಲಸವಾಗುತ್ತಿದೆ. ಇವತ್ತು 90 ಬಸ್ ಗಳನ್ನು ಉದ್ಘಾಟಿಸಿದ್ದೇವೆ. ಪರಿಸರ ಮಾಲಿನ್ಯವೂ ಇದರಿಂದ ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ಇವತ್ತು ರಾಜ್ಯಕ್ಕೆ ಮಹತ್ತರ ದಿನ. ದೇಶ ಬದಲಾವಣೆ ಆಗುತ್ತಿದೆ. ಸಾರಿಗೆ ವ್ಯವಸ್ಥೆಯಲ್ಲಿ ಮುಖ್ಯ ಮಂತ್ರಿ ಬದಲಾವಣೆ ತರುತ್ತಿದ್ದಾರೆ. ಪರಿಸರ ಉಳಿಸಲು ಸಂಘ ಸಂಸ್ಥೆಗಳು ಕೆಲಸ ಮಾಡುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಎಲೆಕ್ಟ್ರಿಕ್ ಬಸ್ ಗಳ ಲೋಕಾರ್ಪಣೆ ಆಗುತ್ತಿರುವುದು ಖುಷಿಯ ವಿಚಾರ ಎಂದು ಸಾರಿಗೆ ಸಚಿವ ಶ್ರೀ ರಾಮುಲು ಹೇಳಿದರು.

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನ
ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಪರಿಸರ ಮಾಲಿನ್ಯ ತಡೆಗಟ್ಟಲು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಪರಿಚಯವಾಗಿದೆ. 90 ಎಲೆಕ್ಟ್ರಿಕ್ ಬಸ್ ಗಳನ್ನು ಅತ್ಯಾಧುನಿಕ ಶೈಲಿಯಲ್ಲಿ ತಯಾರಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮಟ್ರೋ ಪ್ರಯಾಣಿಕರಿಗೆ ಮೊದಲ ಹಾಗೂ ಕೊನೆಯ ಸ್ಥಳ ತಲುಪಲು ಅನುಕೂಲವಾಗುವಂತೆ ಮೆಟ್ರೋ ಫೀಡರ್ ಸಾರಿಗೆಗಳಾಗಿ ಇವು ಕಾರ್ಯಾ ನಿರ್ವಹಿಸಲಿವೆ.

ಸದರಿ ಬಸ್ ಗಳು ಹವಾನಿಯಂತ್ರಣ ರಹಿತವಾಗಿದ್ದು, 33 ಆಸನಗಳನ್ನು ಹೊಂದಿದೆ. ಪ್ರಯಾಣಿಕರ ಸುರಕ್ಷತೆಗಾಗಿ ವೆಹಿಕಲ್ ಟ್ರೇಕಿಂಗ್ ಯುನಿಟ್, ಸಿಸಿಟಿವಿ, ತುರ್ತು ಪ್ಯಾನಿಕ್ ಬಟನ್ ಮತ್ತು ಎಲ್ ಇಡಿ ಮಾರ್ಗ ಫಲಕಗಳನ್ನು ಬಸ್ ಗಳಲ್ಲಿ ಅಳವಡಿಸಲಾಗಿದೆ. ಈ ಬಸ್ ಗಳನ್ನು ಒಂದೂವರೆ ಗಂಟೆ ಚಾರ್ಜ್ ಮಾಡಿದರೆ ಸಾಕು 180 ಕಿ.ಮೀ ಸಂಚರಿಸಲಿವೆ.

ಎಲೆಕ್ಟ್ರಿಕ್ ಬಸ್ ಗಳ ನಿಯೋಜನೆಗೆ ಬೆಂಗಳೂರು ಸ್ಮಾರ್ಟ್ ಸಿಟಿಯಿಂದ 50 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಭಾರತ ಸರಕಾರದ ಅಂಗಸಂಸ್ಥೆ, ವಿದ್ಯುತ್ವ ವ್ಯಾಪಾರ ನಿಗಮ ನಿಯಮಿತದವರು ಬಸ್ ಗಳನ್ನು ಹತ್ತು ವರ್ಷದ ಅವಧಿಗೆ ಕಾಂಟ್ರ್ಯಾಕ್ಟ್ ಆಧಾರದಲ್ಲಿ ಸೇವೆಗೆ ನೀಡಲಿದ್ದಾರೆ.

ತಲಾ 30 ಬಸ್ ಗಳು ಕೆಂಗೇರಿ ಘಟಕ, ಯಶವಂತಪುರ ಘಟಕ ಹಾಗೂ ಕೆ. ಆರ್ ಪುರಂ ಘಟಕಗಳಮ್ಮಿ ಈ ಬಸ್ ಗಳು ಚಲಿಸಲಿವೆ. ಉಳಿದ 40 ಬಸ್ಸ್ ಗಳು ಜನವರಿ ತಿಂಗಳ ಒಳಗೆ ಕಾರ್ಯಾಚರಣೆಗೆ ಲಭ್ಯವಾಗಲಿದೆ.

ಹೊಸ ವರ್ಷನ್ ಬಿಎಸ್ 6 ಗೂ ಸಿಕ್ತು ಚಾಲನೆ
ದೇಶದಲ್ಲೇ ಮೊದಲ BS6 ಇಂಜಿನ್ ಡೀಸೆಲ್ ಬಸ್ಗಳಿಗೂ ಇಂದು ಚಾಲನೆ ಸಿಕ್ಕಿದೆ. ಬಿಎಸ್ 6 ಡೀಸೆಲ್ ಬಸ್ ಗಳನ್ನು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪರಿಚಯ ಮಾಡಲಾಗಿದ್ದು, ಪರಿಸರ ಮಾಲಿನ್ಯ ಕಡಿಮೆ ಇರುವ, ಅತಿ ಕಡಿಮೆ ಹೊಗೆ ಹೊರಸೂಸುವ ಬಸ್ ಆಗಿದೆ. ಈ ಬಸ್ನಲ್ಲಿ ಕೂಡ 33 ಆಸನಗಳ ವ್ಯವಸ್ಥೆ ಇದೆ. ಇದು ಈ ಹಿಂದೆ ತಯಾರಿಸಿದ ಎಲೆಕ್ಟ್ರಿಕ್ ವಾಹನಗಳ ನಂತರದ ವರ್ಷನ್ ಆಗಿದ್ದು, ಹೊಸ ತಂತ್ರಜ್ಞಾನಗಳ ಶೈಲಿಯಿಂದ ಈ ವಿನೂತನ ಬಿಎಸ್ 6 ಬಸ್ ಗೆ ಚಾಲನೆ ನೀಡಲಾಗಿದೆ. ಇದನ್ನು ಕೇವಲ ಡೀಸೆಲ್ ಮೂಲಕವೇ ಓಡಿಸಬಹುದಾಗಿದ್ದು, ಇದರಲ್ಲಿಯೂ ಸಿಸಿ ಕ್ಯಾಮೆರಾ, ಸ್ಟಾಪ್ ಬಟಮ್ , ಸೆನ್ಸಾರ್ ಗಳಿದ್ದು, ಪ್ರಯಾಣಿಕರಿಗೆ ಸುಲಭವಾಗಿ ತೆರಳಬಹುದು.

ಇದುವರೆಗೂ 150 ಬಸ್ಸ್ ಗಳು ಸರಬರಾಜಾಗಿದ್ದು, ಉಳಿದ ಬಸ್ಸ್ ಗಳು ಮುಂದಿನ ಫೆಬ್ರವರಿ ತಿಂಗಳ ಒಳಗೆ ಕಾರ್ಯಾಚರಣೆಗೆ ಲಭ್ಯವಾಗಿದೆ. ಸದರಿ ಬಸ್ಸ್ ಗಳು 41 ಆಸನಗಳು, ತುರ್ತು ಪ್ಯಾನಿಕ್ ಬಟನ್, ಹಿಂಬದಿ ಏರ್ ಸಸ್ಪೆನ್ಶನ್ ಮತ್ತು ಎಲ್ ಇ ಡಿ ಮಾರ್ಗ ಫಲಕಗಳನ್ನು ಹೊಂದಿದೆ.

ಮೆಟ್ರೋ ಸಂಚಾರದ ಅನುಭವ!
ಎಲೆಕ್ಟ್ರಿಕ್ ಬಸ್ ಗಳಲ್ಲಿ ಪ್ರಯಾಣಿಸುವುದೇ ಒಂದು ಸಂತಸದ ಅನುಭವ. ನಾವು ಸಾಮಾನ್ಯವಾಗಿ ಮೆಟ್ರೋ ಮೂಲಕ ಪ್ರಯಾಣಿಸುತ್ತೇವೆ. ಅತೀ ಕಡಿಮೆ ಸಮಯದಲ್ಲಿ ಬೇಗ ತಲುಪಬಹುದು ಎನ್ನುವ ಖುಷಿಯಿಂದ ಮೆಟ್ರೋ ಆಯ್ಕೆ ಮಾಡುತ್ತೇವೆ, ಆದರೆ ಇನ್ನು ಮುಂದೆ ಎಲೆಕ್ಟ್ರಿಕ್ ಬಸ್ ಗಳು ಮಟ್ರೋ ಸಂಚಾರದ ಅನುಭವ ನೀಡುತ್ತವೆ.

ಸ್ಮಾರ್ಟ್ ಸಿಟಿ ಅಡಿಯಲ್ಲಿ ರಾಜ್ಯ ಸರಕಾರ ಈ ಹಿಂದೆಯೂ ಅನೇಕ ಯೋಜನೆಗಳನ್ನು ತಂದಿದೆ. ಎಲೆಕ್ಟ್ರಿಕ್ ಸ್ಕೂಟಿ, ಬಸ್ ಗಳನ್ನು ಬಿಡುಗಡೆಗೊಳಿಸಲಾಗಿದೆ. ಪರಿಸರ ಮಾಲಿನ್ಯ ತಡೆಯುವ ದಷ್ಟಿಯಿಂದ ಜಾರಿಗೆ ತಂದ ಈ ಯೋಜನೆಗಳು ಮುಂದಿನ ದಿನಗಳಲ್ಲಿ ಜನ ಸಾಮಾನ್ಯರಿಗೆ ಹೊರೆಯಾಗದೇ ಇರಲಿ.

Tags: Basavraj BommaiBJPBMTCBS6 ENGINEELECTRIC BUSVIDHANA SOUDHAನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ರಂಗಭೂಮಿ-ಸಮಾಜದ ಸೂಕ್ಷ್ಮ ಸಂಬಂಧಗಳನ್ನು ಅರಿತವರೇ ರಂಗಕರ್ಮಿಯಾಗಲು ಸಾಧ್ಯ! ಭಾಗ-೨

Next Post

ಸಿಲಿಕಾನ್ ಸಿಟಿಯಲ್ಲಿ ವಾಯುಮಾಲಿನ್ಯ ತಡೆಗೆ ಕ್ರಮ : ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್ ಗಳು

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಸಿಲಿಕಾನ್ ಸಿಟಿಯಲ್ಲಿ ವಾಯುಮಾಲಿನ್ಯ ತಡೆಗೆ ಕ್ರಮ : ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್ ಗಳು

ಸಿಲಿಕಾನ್ ಸಿಟಿಯಲ್ಲಿ ವಾಯುಮಾಲಿನ್ಯ ತಡೆಗೆ ಕ್ರಮ : ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್ ಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada