• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಚಂಢೀಗಡ ಸ್ಥಳೀಯ ಸಂಸ್ಥೆಗಳ ಚುನಾವಣೆ : ಬಿಜೆಪಿಗೆ ಮುಖಭಂಗ, ಕಾಂಗ್ರೆಸ್ ಕಳಪೆ, ಎಎಪಿ ಉತ್ತಮ!

Any Mind by Any Mind
December 27, 2021
in ದೇಶ, ರಾಜಕೀಯ
0
ಚಂಢೀಗಡ ಸ್ಥಳೀಯ ಸಂಸ್ಥೆಗಳ ಚುನಾವಣೆ : ಬಿಜೆಪಿಗೆ ಮುಖಭಂಗ, ಕಾಂಗ್ರೆಸ್ ಕಳಪೆ, ಎಎಪಿ ಉತ್ತಮ!
Share on WhatsAppShare on FacebookShare on Telegram

ಪಂಜಾಬ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಎಪಿಗೆ ಉತ್ತಮ ಆರಂಭ ದೊರತಿದೆ. ಚಂಢೀಗಡದ 35 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ 14ರಲ್ಲಿ ಎಎಪಿ ಜಯ ಸಾಧಿಸಿದೆ. ಕೇಂದ್ರಾಡಳಿತ ಪ್ರದೇಶವಾದ ಚಂಢೀಗಡದಲ್ಲಿ ಈ ಹಿಂದೆ ನಡೆದ ಚುನಾವಣೆಯಲ್ಲಿ 26 ವಾರ್ಡುಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಆದರೆ ಸೋಮವಾರ ಪ್ರಕಟವಾದ ಪಲಿತಾಂಶದಲ್ಲಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಭಾರೀ ಮುಖಭಂಗ ಅನುಭವಿಸಿದೆ. 8 ವಾರ್ಡುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದರೆ, ಶಿರೋಮಣಿ ಅಕಾಲಿದಳ 1ರಲ್ಲಿ ಗೆದ್ದಿದೆ.

ADVERTISEMENT

ಮೇಯರ್ ಆಯ್ಕೆ ವಿಚಾರಕ್ಕೆ ಬಂದರೆ ಎಎಪಿಗೆ 19 ಮತಗಳ ಅವಶ್ಯಕತೆಯಿದೆ. ಸ್ಥಳೀಯ ಸಂಸದರು ಬಿಜೆಪಿಯವರಾದ್ದರಿಂದ ಬಿಜೆಪಿಗೆ 18ಮತಗಳ ಅವಶ್ಯಕತೆಯಿದೆ. ಮೊದಲ ಬಾರಿಗೆ ಸ್ಪರ್ಧಿಸಿದ್ದ ಎಎಪಿ ಕಡಿಮೆ ಅವಧಿಯಲ್ಲಿ ಪ್ರಚಾರ ನಡೆಸಿ ಬಿಜೆಪಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದೆ. ಎಎಪಿ ಪರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ನ ಸಂಸದ ಭಗವಂತ್ ಮಾನ್ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದ್ದರು.

ಬಿಜೆಪಿ ಪರ ಕೇಂದ್ರ ಸಚಿವರು, ಸಂಸದರು, ರಾಜ್ಯಗಳ ಮುಖ್ಯಮಂತ್ರಿಗಳು ಮೋದಿ ಹೆಸರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು ಸಹ ಯಾವುದೇ ಪ್ರಯೋಜನ ಕಂಡಿಲ್ಲ. ಅನೇಕ ಬಿಜೆಪಿ ಸದಸ್ಯರ ವಾರ್ಡುಗಳಲ್ಲಿ ಜನ ಎಎಪಿಯಿಂದ ಸ್ಪರ್ಧಿಸಿದ್ದ ಹೊಸ ಮುಖಗಳಿಗೆ ಮಣೆ ಹಾಕಿದ್ದಾರೆ.

ಪಂಜಾಬ್ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಂತರ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ನೇತೃತ್ವದಲ್ಲಿ ಕಾಂಗ್ರೆಸ್ಗೆ ಯಾವುದೇ ಲಾಭವಾಗಿಲ್ಲ. ಈ ಹಿಂದೆ ಅಮರೀಂದರ್ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದಾಗ ಲಭಿಸಿದ ಸ್ಥಾನಗಳು ಈ ಭಾರೀ ಕಾಂಗ್ರೆಸ್ಗೆ ಲಭಿಸಿಲ್ಲದಿರುವುದು ರಾಜ್ಯ ಕಾಂಗ್ರೆಸ್ ನಾಯಕತ್ವವನ್ನು ಹೈಕಮಾಂಡ್ ಪ್ರಶ್ನಿಸುವ ಸಾಧ್ಯತೆ ಇದೆ.

चंडीगढ़ नगर निगम में आम आदमी पार्टी की ये जीत पंजाब में आने वाले बदलाव का संकेत है।चंडीगढ़ के लोगों ने आज भ्रष्ट राजनीति को नकारते हुए AAP की ईमानदार राजनीति को चुना है।

AAP के सभी विजयी उम्मीदवारों एवं सभी कार्यकर्ताओं को बहुत-बहुत बधाई।

इस बार पंजाब बदलाव के लिए तैयार है।

— Arvind Kejriwal (@ArvindKejriwal) December 27, 2021

ಚುನಾವಣೆ ಪಲಿತಾಂಶದ ನಂತರ ಹೊರ ಬಂದಿರುವ ಅಂಕಿಅಂಶಗಳ ಪ್ರಕಾರ ಜನರು ಬದಲಾವಣೆ ಬಯಸಿದ್ದನ್ನು ಸ್ಪಷ್ಟವಾಗಿ ಕಾಣಬಹುದು. ಬಿಜೆಪಿ ಎಂದಿನಂತೆ ತನ್ನ ಹಿಂದೂತ್ವ ಮತ್ತು ರಾಮಮಂದಿರ ಅಜೆಂಡಾ ಸುತ್ತ ಗಿರಕಿ ಹೊಡೆದದ್ದು ಯಾವುದೇ ಪ್ರಯೋಜನ ಕಂಡಿಲ್ಲ. ಮುಖ್ಯವಾಗಿ ಜನರ ಮನಸ್ಥಿತಿ ಅಳೆಯುವಲ್ಲಿ ಬಿಜೆಪಿ ವಿಫಲವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕಡೆಯ ಕ್ಷಣದವರೆಗೂ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಸಿಹಿಯನ್ನು ತಂದು ಬಿಜೆಪಿ ಕಚೇರಿಗಳಲ್ಲಿ ಶೇಕರಿಸಿದ್ದರು ಎನ್ನಲಾಗಿದೆ.

ಚುನಾವಣೆಯ ಫಲಿತಾಂಶದ ನಂತರ ಟ್ವೀಟ್ ಮಾಡಿರುವ ಎಎಪಿ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ʻʻಚಂಢೀಗಡದ ಜನರು ಭ್ರಷ್ಟ ರಾಜಕಾರಣವನ್ನು ತಿರಸ್ಕರಿಸಿ, ಪ್ರಾಮಾಣಿಕ ರಾಜಕಾರಣವನ್ನು ಆರಿಸಿಕೊಂಡಿದ್ದಾರೆ. ಇದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬದಲಾವಣೆಯ ಸಂಕೇತವಾಗಿದೆʼʼ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಂಸದ ಭಗವಂತ್ ಮಾನ್ ʻʻ ಲೆಫ್ಟಿನೆಂಟ್ ಗವರ್ನರ್, ಸಂಸದರು, ಮೇಯರ್ ವರೆಗೂ ಎಲ್ಲರೂ ಬಿಜೆಪಿಯವರೇ ಆಗಿದ್ದರು ಸಹ ಜನ ನಮ್ಮ ಪಕ್ಷದ ಹೊಸ ಮುಖಗಳಿಗೆ ಮಣೆ ಹಾಕಿದ್ದಾರೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಸಹ ಈ ಬದಲಾವಣೆ ಮುಂದುವರೆಯಲಿದೆʼʼ ಎಂದಿದ್ದಾರೆ.

Tags: BJPChandigarhcivic Body ElectionsCongress PartyShiromani Akalidalಬಿಜೆಪಿ
Previous Post

ಎಂಇಎಸ್‌ ಎಂಬುದು ಏನು? ಅದು ಹುಟ್ಟಿದ್ದೇಕೆ? ಈಗದು ಪುಂಡರ ಗುಂಪಾಗಿದ್ದೇಕೆ? ಬಿಜೆಪಿ ಜೊತೆ ಅದರ ಸಖ್ಯವೇನು?

Next Post

ಕನಕಪುರ ಬಂಡೆಗೆ ದೆಹಲಿಯಿಂದಲೇ ಮೂಗುದಾರ ಹಾಕಿಸಲಿದ್ದಾರೆಯೇ ಸಿದ್ದರಾಮಯ್ಯ?

Related Posts

Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
0

ಹೊಸ ಲುಕ್‌ನಲ್ಲಿ ಧನಂಜಯ್….666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಧನಂಜಯ್ ಫಸ್ಟ್‌ ಲುಕ್‌ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ತನ್ನ ಘೋಷಣೆಯಿಂದಲೇ ಡಾ. ಶಿವರಾಜ್‌ಕುಮಾರ್ (Dr...

Read moreDetails

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ಕನಕಪುರ ಬಂಡೆಗೆ ದೆಹಲಿಯಿಂದಲೇ ಮೂಗುದಾರ ಹಾಕಿಸಲಿದ್ದಾರೆಯೇ ಸಿದ್ದರಾಮಯ್ಯ?

ಕನಕಪುರ ಬಂಡೆಗೆ ದೆಹಲಿಯಿಂದಲೇ ಮೂಗುದಾರ ಹಾಕಿಸಲಿದ್ದಾರೆಯೇ ಸಿದ್ದರಾಮಯ್ಯ?

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada