• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಕ್ಕಳಿಗೆ COVID ಲಸಿಕೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಎನ್ನುತ್ತಿದ್ದಾರೆ ತಜ್ಞರು!

ಫಾತಿಮಾ by ಫಾತಿಮಾ
December 28, 2021
in ಕರ್ನಾಟಕ, ದೇಶ
0
ಮಕ್ಕಳಿಗೆ COVID ಲಸಿಕೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಎನ್ನುತ್ತಿದ್ದಾರೆ ತಜ್ಞರು!
Share on WhatsAppShare on FacebookShare on Telegram

AIIMS ನ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಮತ್ತು ‌ವಯಸ್ಕರು ಮತ್ತು ಮಕ್ಕಳಿಗೆ Covaxin ಪ್ರಯೋಗಗಳ ಪ್ರಧಾನ ತನಿಖಾಧಿಕಾರಿಯಾಗಿರುವ ಡಾ.ಸಂಜಯ್ ರೈ ಅವರು ಮಕ್ಕಳಿಗೆ COVID-19 ವಿರುದ್ಧ ಲಸಿಕೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ‘ಅವೈಜ್ಞಾನಿಕ’. ಇದು ಯಾವುದೇ ಹೆಚ್ಚುವರಿ ಪ್ರಯೋಜನವನ್ನು ನೀಡುವುದಿಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ.

ADVERTISEMENT

ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಡಾ.ಸಂಜಯ್ ಅವರು ಈ ನಿರ್ಧಾರವನ್ನು ಜಾರಿಗೊಳಿಸುವ ಮುನ್ನ ಈಗಾಗಲೇ ಮಕ್ಕಳಿಗೆ ಲಸಿಕೆ ಹಾಕಲು ಆರಂಭಿಸಿರುವ ದೇಶಗಳ ಡೇಟಾಗಳನ್ನು ವಿಶ್ಲೇಷಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಇತ್ತೀಚೆಗೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 15 ರಿಂದ 18 ವಯಸ್ಸಿನ ಮಕ್ಕಳಿಗೆ ಜನವರಿ 3 ರಿಂದ COVID-19 ವಿರುದ್ಧ ಲಸಿಕೆಯನ್ನು ನೀಡಲು ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದರು. ಇದು ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳು ಮತ್ತು ಅವರ ಪೋಷಕರ ಆತಂಕವನ್ನು ಕಡಿಮೆ ಮಾಡುತ್ತದೆ ಮತ್ತು ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುತ್ತದೆ ಎಂದು ಅವರು ಹೇಳಿದರು. ಈ ಕ್ರಮವು ಶಾಲೆಗಳಲ್ಲಿ ಬೋಧನೆಯನ್ನು ಸಾಮಾನ್ಯಗೊಳಿಸಲು ಸಹಾಯ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದರು.

ಆದರೆ ಈ ನಿರ್ಧಾರವನ್ನು ಪ್ರಶ್ನಿಸಿರುವ ಡಾ. ರೈ “ಅವರ ನಿಸ್ವಾರ್ಥ ಸೇವೆ ಮತ್ತು ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕಾಗಿ ನಾನು ಪ್ರಧಾನಿ ಮೋದಿಯವರ ದೊಡ್ಡ ಅಭಿಮಾನಿ.  ಆದರೆ ಮಕ್ಕಳ ಲಸಿಕೆ ಕುರಿತು ಅವರ ಅವೈಜ್ಞಾನಿಕ ನಿರ್ಧಾರದಿಂದ ನಾನು ಸಂಪೂರ್ಣವಾಗಿ ನಿರಾಶೆಗೊಂಡಿದ್ದೇನೆ’  ಎಂದು ಪ್ರಧಾನಿ ಕಚೇರಿಯನ್ನು ಟ್ಯಾಗ್ ಮಾಡಿ ಟ್ವೀಟ್‌ ಮಾಡಿದ್ದಾರೆ.

“ಲಸಿಕೆಗಳ ಬಗ್ಗೆ ನಾವು ಹೊಂದಿರುವ ಮಾಹಿತಿಗಳ ಪ್ರಕಾರ ಅವು ಸೋಂಕು ಹರಡದಂತೆ ತಡೆಗಟ್ಟುವಲ್ಲಿ ಸಹಾಕಾರಿಯಲ್ಲ. ಕೆಲವು ದೇಶಗಳಲ್ಲಿ, ಬೂಸ್ಟರ್ ಶಾಟ್‌ಗಳನ್ನು ತೆಗೆದುಕೊಂಡ ನಂತರವೂ ಜನರು ಸೋಂಕಿಗೆ ಒಳಗಾಗುತ್ತಿದ್ದಾರೆ” ಎಂದು ವಿವರಿಸಿದ್ದಾರೆ. ಅಲ್ಲದೆ, ಯುಕೆಯಲ್ಲಿ ದಿನವೊಂದಕ್ಕೆ 50,000 ಪ್ರಕರಣಗಳು ವರದಿಯಾಗುತ್ತಿವೆ.  ಲಸಿಕೆಯು ಕರೋನವೈರಸ್ ಸೋಂಕನ್ನು ತಡೆಯುವುದಿಲ್ಲ ಎಂದು ಇದು ಸಾಬೀತುಪಡಿಸುತ್ತದೆ ಆದರೆ ಲಸಿಕೆಗಳು ತೀವ್ರತೆ ಮತ್ತು ಮರಣವನ್ನು ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿದೆ ಎಂದು ಡಾ. ರೈ PTI ಗೆ ತಿಳಿಸಿದ್ದಾರೆ.

COVID-19 ನಿಂದಾಗುವ ಮರಣದ ಪ್ರಮಾಣ ಸುಮಾರು 1.5% ಆಗಿದೆ, ಅಂದರೆ ಪ್ರತಿ ಮಿಲಿಯನ್ ಜನಸಂಖ್ಯೆಗೆ 15,000 ಸಾವುಗಳು ಸಂಭವಿಸುತ್ತವೆ ಎಂಬ ಮಾಹಿತಿ ನೀಡಿರುವ ಅವರು “ವ್ಯಾಕ್ಸಿನೇಷನ್ ಮೂಲಕ, ನಾವು ಈ ಸಾವುಗಳಲ್ಲಿ 80-90% ಅನ್ನು ತಡೆಯಬಹುದು, ಅಂದರೆ ಮಿಲಿಯನ್‌ಗೆ 13,000 ರಿಂದ 14,000 ಸಾವುಗಳನ್ನು ತಡೆಯಬಹುದು” ಎಂದು ಹೇಳಿದ್ದಾರೆ.

ವಯಸ್ಕರಲ್ಲಿ ಸೋಂಕಿನ ಅಪಾಯ ಮತ್ತು ಲಸಿಕೆಯ  ಲಾಭದ ವಿಶ್ಲೇಷಣೆಯನ್ನು ಮಾಡಿದರೆ ಲಸಿಕೆ ನಿಜಕ್ಕೂ ವರ. ಆದರೆ ಮಕ್ಕಳ ವಿಷಯಕ್ಕೆ ಇದನ್ನೇ ಅನ್ವಯ ಮಾಡಲಾಗುವುದಿಲ್ಲ. ಯಾಕೆಂದರೆ ಮಕ್ಕಳಲ್ಲಿ ಸೋಂಕಿನ ತೀವ್ರತೆಯು ತುಂಬಾ ಕಡಿಮೆಯಾಗಿದೆ ಮತ್ತು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಪ್ರತಿ ಮಿಲಿಯನ್ ಜನಸಂಖ್ಯೆಗೆ ಕೇವಲ ಎರಡು ಸಾವುಗಳು ಮಾತ್ರ ವರದಿಯಾಗಿವೆ ಎಂದು ಅವರು ಹೇಳಿದ್ದಾರೆ.

“ಮಕ್ಕಳ ವಿಭಾಗದಲ್ಲಿ ಪ್ರತಿಕೂಲ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು  ಅಪಾಯ ಮತ್ತು ಲಾಭದ ವಿಶ್ಲೇಷಣೆಯನ್ನು ಮಾಡಿದರೆ, ಲಭ್ಯವಿರುವ ಡೇಟಾದ ಆಧಾರದ ಮೇಲೆ ಪ್ರಯೋಜನಗಳಿಗಿಂತ ಅಪಾಯವು ಹೆಚ್ಚು” ಎಂಬುವುದು ಡಾ. ರೈ ಅವರ ಅಭಿಪ್ರಾಯ.

ಯುಎಸ್ ಸೇರಿದಂತೆ ಕೆಲವು ದೇಶಗಳು ನಾಲ್ಕೈದು ತಿಂಗಳ ಹಿಂದೆ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸಿದ್ದು ಭಾರತದಲ್ಲೂ ಮಕ್ಕಳಿಗೆ COVID-19 ಲಸಿಕೆಯನ್ನು ಪ್ರಾರಂಭಿಸುವ ಮೊದಲು ಈ ದೇಶಗಳ ಡೇಟಾವನ್ನು ವಿಶ್ಲೇಷಿಸಬೇಕು ಎಂದು ಅವರು ಹೇಳುತ್ತಾರೆ.

Tags: BJPCovid 19ಅವೈಜ್ಞಾನಿಕಕರೋನಾಕೇಂದ್ರ ಸರ್ಕಾರತಜ್ಞರುಬಿಜೆಪಿ
Previous Post

ಏಳು ವಲಸೆ ಕಾರ್ಮಿಕರು, ಏಳು ದಿನ : ಮನೆ ಸೇರಲು ಸಾಗಿದ ದೂರ 1232 ಕಿ.ಮೀ. ಭಾಗ-೧

Next Post

ತೀರ್ಥಹಳ್ಳಿ : ದುಷ್ಕರ್ಮಿಗಳಿಂದ ಹಾರೋಗೂಳಿಗೆ ಪ್ರಾರ್ಥಮಿಕ ಶಾಲಾ ಆವರಣದ ವಿಗ್ರಹಗಳು ನಾಶ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ತೀರ್ಥಹಳ್ಳಿ :  ದುಷ್ಕರ್ಮಿಗಳಿಂದ ಹಾರೋಗೂಳಿಗೆ ಪ್ರಾರ್ಥಮಿಕ ಶಾಲಾ ಆವರಣದ ವಿಗ್ರಹಗಳು ನಾಶ

ತೀರ್ಥಹಳ್ಳಿ : ದುಷ್ಕರ್ಮಿಗಳಿಂದ ಹಾರೋಗೂಳಿಗೆ ಪ್ರಾರ್ಥಮಿಕ ಶಾಲಾ ಆವರಣದ ವಿಗ್ರಹಗಳು ನಾಶ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada