• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ರೆಡಿ ಇದೆ “ವೆಡ್ಡಿಂಗ್ ಗಿಫ್ಟ್” : ಶೂಟಿಂಗ್ ಮುಗಿಸಿದ ವಿಕ್ರಂ ಪ್ರಭು ಚಿತ್ರ

Any Mind by Any Mind
August 23, 2022
in ಸಿನಿಮಾ
0
ರೆಡಿ ಇದೆ “ವೆಡ್ಡಿಂಗ್ ಗಿಫ್ಟ್” : ಶೂಟಿಂಗ್ ಮುಗಿಸಿದ ವಿಕ್ರಂ ಪ್ರಭು ಚಿತ್ರ
Share on WhatsAppShare on FacebookShare on Telegram

ಒಂದು ಚಿತ್ರದ ಚಿತ್ರೀಕರಣ ಅಂದುಕೊಂಡ ಹಾಗೆ ಮುಗಿದರೆ, ಅರ್ಧ ಸಿನಿಮಾ ಮುಗಿದ ಹಾಗೆ ಎನ್ನುತ್ತಾರೆ. ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ “ವೆಡ್ಡಿಂಗ್ ಗಿಫ್ಟ್” ಚಿತ್ರದ ಚಿತ್ರೀಕರಣ ನಿಗದಿಗಿಂತ ಒಂದು ದಿನ‌ ಮುಂಚಿತವಾಗಿಯೇ ಮುಗಿದಿದೆ. ಈ ಸಂತಸವನ್ನು ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

ADVERTISEMENT

ನಾನು ಮೂಲತಃ ಮಂಗಳೂರಿನವನು. ಈಗ ಪುಣೆ ವಾಸಿ. ಹದಿನೆಂಟು ವರ್ಷಗಳ ಹಿಂದೆ ರಾಜೇಂದ್ರ ಸಿಂಗ್ ಬಾಬು ಅವರ “ಲವ್” ಚಿತ್ರಕ್ಕೆ ಕೆಲಸ ಮಾಡಿದ್ದೆ. ಆನಂತರ ಚಿತ್ರರಂಗದಿಂದ ದೂರವಾಗಿದ್ದೆ. ಈಗ ಮತ್ತೆ ಬಂದಿದ್ದೀನಿ. ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ. ನಮ್ಮ ಪ್ರಕಾರ ಡಿಸೆಂಬರ್ 31ರಂದು ಚಿತ್ರೀಕರಣ ಪೂರ್ಣವಾಗಬೇಕಿತ್ತು. ಒಂದು ದಿನ ಮೊದಲೇ 30 ರಂದೇ ಚಿತ್ರೀಕರಣ ಮುಗಿದಿದೆ. ಬೆಂಗಳೂರು, ತುಮಕೂರು, ಉಡುಪಿ, ಮಂಗಳೂರು ಮುಂತಾದಕಡೆ ಮೂವತ್ತೇಳು ದಿನಗಳ ಚಿತ್ರೀಕರಣ ನಡೆದಿದೆ. ಗಂಡ-ಹೆಂಡತಿ ನಡುವೆ ನಡೆಯುವ ಕಥಾಹಂದರ, ಸೆಕ್ಷನ್ 498 ಗೆ ಸಂಬಂಧಿಸಿದ ಕೆಲವು ಸನ್ನಿವೇಶಗಳು ನಮ್ಮ ಚಿತ್ರದಲ್ಲಿದೆ. ಗಂಡ – ಹೆಂಡತಿ ಕೊನೆಗೆ ಒಂದಾಗುತ್ತಾರಾ? ಇಲ್ಲವಾ? ಎಂಬುದನ್ನು ಚಿತ್ರದಲ್ಲಿ ನೋಡಬೇಕು. ನಿಶಾನ್ ನಾಣಯ್ಯ – ಸೋನುಗೌಡ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಲಾಯರ್ ಪಾತ್ರದಲ್ಲಿ ಓಂ ಖ್ಯಾತಿ ಪ್ರೇಮ ನಟಿಸಿದ್ದಾರೆ. ಅಚ್ಯುತ್ ಕುಮಾರ್, ಪವಿತ್ರಲೋಕೇಶ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆಯಾಗಲಿದೆ ಎಂದರು ನಿರ್ಮಾಪಕ – ನಿರ್ದೇಶಕ ವಿಕ್ರಂಪ್ರಭು.

ಕಥೆ ಕೇಳಿ ವಿಭಿನ್ನ ಅನಿಸಿತು. ಮೊದಲ ಸಲ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಾನು ಎಲ್ಲಾ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ. ಪಾತ್ರ ಚೆನ್ನಾಗಿದ್ದರಷ್ಟೆ ಒಪ್ಪಿಕೊಳ್ಳುವುದು. ಈ ಚಿತ್ರದ ಕಥೆ ಬಗ್ಗೆ ಒಂದೆಳೆ ಹೇಳಿದರೂ, ಪೂರ್ತಿ ಹೇಳಿದಂತೆ. ಉತ್ತಮ ಸಂದೇಶವಿರುವ ಚಿತ್ರದಲ್ಲಿ ನಟಿಸಿರುವ ಖುಷಿಯಿದೆ ಎಂದರು ನಟಿ ಪ್ರೇಮ.

ಪತ್ರಕರ್ತ ಶೆಣೈ ಅವರಿಂದ ನನಗೆ ಈ ಚಿತ್ರತಂಡ ಪರಿಚಯವಾಯಿತು. ನಾನು ಚಿತ್ರೀಕರಣ ಮುಗಿಸಿ ಬಂದ ಮೇಲೆ ರಾತ್ರಿ ಕೊರಗುತ್ತಿದ್ದೆ. ನಾನು ಮಾಡಿದ್ದು, ಸರಿನಾ? ತಪ್ಪಾ? ಅಂತ ಯೋಚಿಸುತ್ತಿದ್ದೆ. ನನ್ನ ತಂಗಿ ಇದನ್ನು ಸರಿ ಮಾಡಿದ್ದಳು. ನೀನು ಚಿತ್ರದ ಪಾತ್ರಗಳನ್ನು ಚಿತ್ರೀಕರಣ ಮುಗಿಯುತ್ತಿದ್ದ ಹಾಗೆ ಅಲ್ಲೇ ಬಿಟ್ಟುಬಿಡಬೇಕು.‌ ಮನೆಗೆ ಬಂದ ಮೇಲೆ ನೀನು ಸೋನು ಗೌಡ ಆಗಿಯೇ ಇರಬೇಕು ಎಂದಳು. ಈಗ ಹಾಗೆ ಮಾಡುತ್ತಿದ್ದೇನೆ. ನಾನು ಈವರೆಗೂ ಇಂತಹ ಪಾತ್ರ ಮಾಡಿಲ್ಲ ಅನ್ನಬಹುದು. ಆಕಾಂಕ್ಷ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನೊಂದ ಮನಸ್ಸುಗಳಿಗೆ ಹತ್ತಿರವಾಗುವ ಪಾತ್ರ ನನ್ನದು. ಉತ್ತಮ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ವಿಕ್ರಂಪ್ರಭು ಅವರಿಗೆ ಧನ್ಯವಾದ ಎಂದರು ಸೋನು ಗೌಡ.

ನಾಯಕ ನಿಶಾನ್ ನಾಣಯ್ಯ ತಮ್ಮ ಪಾತ್ರದ ಬಗ್ಗೆ‌ ವಿವರಣೆ ನೀಡಿದರು. ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಛಾಯಾಗ್ರಹಕ ಉದಯಲೀಲ ಹಾಗೂ ಸಂಕಲನಕಾರ ವಿಜೇತ್ ಚಂದ್ರ ತಮ್ಮ ಕಾರ್ಯಗಳ ಬಗ್ಗೆ ಮಾತನಾಡಿದರು.

Tags: ಕನ್ನಡ ಮೂವಿಕನ್ನಡ ಸಿನಿಮಾವಿಕ್ರಂವೆಡ್ಡಿಂಗ್ ಗಿಫ್ಟ್ಶೂಟಿಂಗ್ಸಿನಿಮಾ
Previous Post

ರಾಮೇಶ್ವರಕ್ಕೆ ಹೋದರೂ ತಪ್ಪಿಲ್ಲ ಶನೇಶ್ವರನ ಕಾಟ : ಲಾಕ್‌ ಡೌನ್‌ ಎಂಬ ʻರಾಜಕೀಯʼ ನಾಟಕ!

Next Post

ಪ್ರಧಾನಮಂತ್ರಿಗಳ ಭದ್ರತಾ ವೈಫಲ್ಯ ನಿಜವೇ? ಹಾಗಿದ್ದರೆ ಅದಕ್ಕೆ ಹೊಣೆ ಯಾರು?

Related Posts

Top Story

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

by ಪ್ರತಿಧ್ವನಿ
October 12, 2025
0

ವಿಜಯ್ ದೇವರಕೊಂಡ ಹೊಸ ಸಿನಿಮಾದ ಮುಹೂರ್ತ ಸಂಭ್ರಮ.. ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ.‌ ಹೈದರಾಬಾದ್ ನಲ್ಲಿ ನಿನ್ನೆ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ...

Read moreDetails
ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

October 10, 2025

Maruta Kannada Cinema: ಸೆನ್ಸಾರ್ ಮೆಚ್ಚಿದ “ಮಾರುತ”.

October 8, 2025

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ “ಎಸ್ ವಿ ಆರ್ 50” ಸಮಾರಂಭ

October 7, 2025
ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

October 7, 2025
Next Post
ಪ್ರಧಾನಮಂತ್ರಿಗಳ ಭದ್ರತಾ ವೈಫಲ್ಯ ನಿಜವೇ? ಹಾಗಿದ್ದರೆ ಅದಕ್ಕೆ ಹೊಣೆ ಯಾರು?

ಪ್ರಧಾನಮಂತ್ರಿಗಳ ಭದ್ರತಾ ವೈಫಲ್ಯ ನಿಜವೇ? ಹಾಗಿದ್ದರೆ ಅದಕ್ಕೆ ಹೊಣೆ ಯಾರು?

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada