ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಚಾಟಿ ಬೀಸಿದ ಹಿನ್ನೆಲೆಯಲ್ಲಿ ಪಾದಯಾತ್ರೆ ಸಂಬಂಧ ಕಾಂಗ್ರೆಸ್ನ ಹಿರಿಯ ನಾಯಕರ ಸಭೆ ಇಂದು ನಡೆಯಲಿದೆ.
ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ೧೦ ಗಂಟೆಗೆ ಸಭೆ ನಡೆಯಲಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರ ಸಮ್ಮುಕದಲ್ಲಿ ಸಭೆ ನಡೆಯಲಿದ್ದು, ಸಭೆ ಬಳಿಕ ಪಾದಯಾತ್ರೆ ಮುಂದುವರಿಸುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ.
ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆರೋಗ್ಯ ತಪಾಸಣೆ ಮಾಡಲಾಗಿದೆ. ನಿವಾಸಕ್ಕೆ ವೈದ್ಯರ ಅಗಮಿಸಿ ಶುಗರ್, ಬಿಪಿ ಪರೀಕ್ಷೆ ಮಾಡಿದ್ದಾರೆ. ಇತ್ತ ರಾಮನಗರ ಸುತ್ತಲು ಪೊಲೀಸ್ ಬೀಗಿ ಬಂದೋಬಸ್ತ್ ಆಯೋಜನೆ ಮಾಡಲಾಗಿದ್ದು, ಒಂದು ವೇಳೆ ಪಾದಯಾತ್ರೆ ಆರಂಭವಾದರೆ ಡಿಕೆಶಿ ಅವರನ್ನು ಬಂಧಿಸುವ ಸಾಧ್ಯತೆ ಹೆಚ್ಚಿದೆ.
![](https://pratidhvani.com/wp-content/uploads/2022/01/FI0l8pbUUAMwSnn-1024x682.jpg)
ಬುಧವಾರ ಬೆನ್ನು ನೋವಿನ ಕಾರಣದಿಂದ ಬೆಂಗಳೂರಿಗೆ ವಾಪಸ್ಸಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮನಗರದ ಬೆಳವಣಿಗೆ ನೋಡಿಕೊಂಡು ಸಭೆಗೆ ಹಾಜರಾಗುತ್ತಾರೆ ಎನ್ನಲಾಗಿದೆ.
ಹೈಕೋರ್ಟ್ ಸೂಚನೆ ಮೆರೆಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ತಕ್ಷಣಕ್ಕೆ ವಾಪಸ್ಸು ಪಡೆಯುತ್ತಾರಾ? ಅಥವಾ ನಿರ್ಬಂಧದ ನಡುವೆಯೂ ಪಾದಯಾತ್ರೆ ಮುಂದುವರಿಸಿ ಬಂಧನಕ್ಕೆ ಒಳಗಾಗಿ ಅದನ್ನೇ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಾರ ಎಂಬುದನ್ನು ಕಾದು ನೋಡಬೇಕು.
—