ಕಳೆದ ಐದು ದಿನಗಳಿಂದ ಮೇಕೆದಾಟು ಅನುಷ್ಠಾನಕ್ಕಾಗಿ ನಡೆಯುತ್ತಿರುವ ಪಾದಯಾತ್ರೆಯನ್ನು ಕೈಬಿಡುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಪತ್ರ ಬರೆದಿದ್ದು, ಮೇಕೆದಾಟು ಯೋಜನೆಗೆ ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಿದ್ದೇವೆ ಎಂದು ಎಂದು ಭರವಸೆಯನ್ನು ನೀಡಿ ಮನವಿ ಮಾಡಿದ್ದಾರೆ.
ಪಾದಯಾತ್ರೆಯನ್ನ ಕೈಬಿಟ್ಟು ನಾವೆಲ್ಲ ಈಗ ಕರೋನಾವನ್ನು ಎದುರಿಸಿ ಮುಂಬರುವ ದಿನಗಳಲ್ಲಿ ಒಂದಾಗಿ ಮೇಕೆದಾಟು ಯೋಜನೆ ಅನುಷ್ಠಾನದ ಕುರಿತು ಕ್ರಮ ಕೈಗೊಳ್ಳೋಣ ಎಂದು ಮನವಿ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.







