• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

KPL ಮ್ಯಾಚ್ ಫಿಕ್ಸಿಂಗ್ ಪ್ರಕರಣ ; ಸಿಸಿಬಿಗೆ ಭಾರೀ ಮುಖಭಂಗ

ಪ್ರತಿಧ್ವನಿ by ಪ್ರತಿಧ್ವನಿ
January 20, 2022
in ಕರ್ನಾಟಕ
0
ಕೊಡವ ಸಮಾಜಕ್ಕೆ ಹಿಂದುಳಿದ ಸ್ಥಾನಮಾನ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
Share on WhatsAppShare on FacebookShare on Telegram

ಮಹತ್ತರ ಬೆಳವಣಿಗೆಯೊಂದರಲ್ಲಿ ನಗರ ಪೊಲೀಸರಿಗೆ ಭಾರೀ ಹಿನ್ನಡೆಯಾಗಿದೆ. 2019ರಲ್ಲಿ ನಡೆದಿದ್ದ ಕೆಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಸಮಯದಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಭಾರತೀಯ ದಂಡ ಸಂಹಿತೆಯ section 420 ಪ್ರಕಾರ ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣದ ಸಂಬಂಧ ನಾಲ್ವರ ವಿರುದ್ದದ chargesheet ಹೈಕೋರ್ಟ್ ರದ್ದುಗೊಳಿಸಿದೆ.

ADVERTISEMENT

ಕ್ರಿಕೆಟಿಗರಾದ ಅರ್ಬಾಜ್ ಖಾಜಿ, ಸಿ.ಎಂ.ಗೌತಮ್, ಬೆಳಗಾವಿ ಪ್ಯಾಂಥರ್ಸ್ ಮಾಲೀಕನಾದ ಅಲಿ ಅಶ್ವಾಕ್ ಘಾಜಿಯಾಭಾದ್ ಮೂಲದ ಬುಕ್ಕಿ ಎನ್ನಲಾದ ಅಮಿತ್ ಮಾವಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಅವರಿದ್ದ ಏಕಸದಸ್ಯ ಪೀಠ ಒಬ್ಬ ಆಟಗಾರ ಮ್ಯಾಚ್ ಫಿಕ್ಸಿಂಗ್ನಲ್ಲಿ ತೊಡಗಿದರೆ ಆತ ಆ ಕ್ರೀಡೆಯನ್ನು ಪ್ರೋತ್ಸಾಹಿಸುವವರಿಗೆ ಮೋಸ ಮಾಡಿದ್ದಾನೆಂಬ ಭಾವನೆ ಮೂಡುವುದು ಸಹಜ. ಆದರೆ ಈ ಸಾಮಾನ್ಯ ಭಾವನೆಯು ದಂಡ ಸಂಹಿತೆಯ ಅಡಿಯ ( 420) ಅಪರಾಧಕ್ಕೆ ಕಾರಣವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಮುಂದುವರೆದು, ಮ್ಯಾಚ್ ಫಿಕ್ಸಿಂಗ್ ಒಬ್ಬ ಆಟಗಾರನ ಅಪ್ರಾಮಾಣಿಕತೆ, ಅಶಿಸ್ತು ಹಾಗೂ ಆತನ ಮಾನಸಿಕ ದುರ್ಬಲತೆಯನ್ನು ಸೂಚಿಸುತ್ತದೆ. ಇದರ ವಿರುದ್ದ ಕ್ರಮ ಜರುಗಿಸಲು ಬಿಸಿಸಿಐಗೆ ಸಂಪೂರ್ಣ ಅಧಿಕಾರವಿರುತ್ತದೆ ಎಂದು ನ್ಯಾಯಾಲಯ ಹೇಳಿದೆ. ಆದರೆ, ಐಪಿಸಿ ಸೆಕ್ಷನ್ 420ರ ಅಡಿಯಲ್ಲಿ ಶಿಕ್ಷರ್ಹಾ ಅಪರಾಧ ಎಂಬ ಆಧಾರದ ಮೇಲೆ ಏಫ್ಐಆರ್ಅನ್ನು ದಾಖಲಿಸಿರುವುದನ್ನು ಕೋರ್ಟ್ ಅನುಮತಿಸುವುದಿಲ್ಲ ಎಂದು ನ್ಯಾಯಾಲಯ ಸಿಸಿಬಿಗೆ ಚಾಟಿ ಬೀಸಿದೆ.

ಈ ಕುರಿತು ವಾದ ಮಂಡಿಸಿದ ಸಿಸಿಬಿ ಪರ ವಕೀಲರು ಮ್ಯಾಚ್ ಫಕ್ಸಿಂಗ್ ಮೋಸಕ್ಕೆ ಸಮಾನಾವಾಗಿದೆ ಆದ್ದರಿಂದ ಐಪಿಸಿ ಸೆಕ್ಷನ್ 420ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಮ್ಮ ವಾದವನ್ನು ಮಂಡಿಸಿದರು. ಐಪಿಸಿ ಸೆಕ್ಷನ್ 420ರ ಅಡಿಯಲ್ಲಿ ಪ್ರಕರಣ ದಾಖಲಿಸುವ ಮೊದಲು ಅಗತ್ಯ ಇರಬೇಕಾದ ಅಂಶಗಳೆಂದರೆ ವಂಚನೆ, ಯಾವುದೆ ವಸ್ತುವನ್ನು ತಲುಪಿಸುವ ಸಮಯದಲ್ಲಿ ವ್ಯಕ್ತಿ ತೋರುವ ಅಪ್ರಾಮಾಣಿಕತೆ ಅಥವಾ ಮೌಲ್ಯಯುತವಾದ ವಸ್ತುವಿಗೆ ಭದ್ರತೆ ಒದಗಿಸುವಲ್ಲಿ ವಿಫಲ ಅಥವಾ ಅದನ್ನು ಸಂಪೂರ್ಣವಾಗಿ ನಾಶ ಮಾಡುವುದು ಐಪಿಸಿ ಸೆಕ್ಷನ್ 420ರ ಅಡಿಯಲ್ಲಿ ಬರುತ್ತದೆ ಎಂದು ನ್ಯಾಯಮೂರ್ತಿಗಳು ಸಿಸಿಬಿ ಪರ ವಕೀಲರಿಗೆ ಮನವರಿಕೆ ಮಾಡಿದ್ದಾರೆ.

ಯಾವುದೇ ಪ್ರಚೋದನೆ ಇಲ್ಲ

ಮುಂದುವರೆದು ವಾದ ಮಂಡಿಸಿದ ಸಿಸಿಬಿ ಪರ ವಕೀಲರು ಕ್ರಿಕೆಟ್ ಪ್ರೇಮಿಗಳು ತಮ್ಮ ಬಳಿ ಇರುವ ದುಡ್ಡನ್ನು ಕೊಟ್ಟು ಟಿಕೆಟ್ ಖರೀದಿಸಿ ಪಂದ್ಯವನ್ನ ವೀಕ್ಷಿಸುತ್ತಾರೆ ಈ ಮೂಲಕ ಜನರಿಗೆ ಟಿಕೆಟ್ ಖರೀದಿಸಲು ಸ್ಪೂರ್ತಿ ನೀಡಿದಂತಾಗುತ್ತದೆ ಎಂಬ ವಾದವನ್ನು ಒಪ್ಪದ ಪೀಠ, ಪ್ರೇಕ್ಷಕರು ನೀಡುವ ಹಣವು ಒಂದು ಮೌಲ್ಯಯುತವಾದ ವಸ್ತು ಆದರೂ, ಜನ ಟಿಕೆಟ್ ಖರೀದಿಸಲು ಪ್ರೇರೆಪಿಸಲ್ಪಟ್ಟಿರುತ್ತಾರೆ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ.

ಜನರು ಅಲ್ಲಿ ನ್ಯಾಯಯೋಜಿತ ಆಟಕ್ಕೆ ಸಾಕ್ಷಿಯಾಗಲಿದ್ದೇವೆ ಎಂಬ ಭಾವನೆಯಿಂದ ಟಿಕೆಟ್ ಖರೀದಿಸಿ ಪಂದ್ಯವನ್ನ ವೀಕ್ಷಿಸುತ್ತಾರೆ. ಆದ್ದರಿಂದ ಇಲ್ಲಿ ಪ್ರಚೋದನೆಯ ಪ್ರಶ್ನೆ ಉದ್ಬವಿಸುವುದಿಲ್ಲ ಎಂದು ಹೇಳಿದೆ.

ಕೆಪಿಎಲ್ ಪಂದ್ಯಾವಳಿಗಳು ನಡೆದ ಸಂದರ್ಭದಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಪ್ರಕಾರ ಗೇಮಿಂಗ್ ಮೇಲೆ ಬೆಟ್ಟಿಂಗ್ ಅಪರಾಧವೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ನಿರಾಕರಿಸಿದೆ. ಕರ್ನಾಟಕ ಪೊಲೀಸ್ ಕಾಯ್ದೆ 27 ಹೇಳುವ ಪ್ರಕಾರ ಅವಕಾಶದ ಆಟವು ಯಾವುದೇ ಅಥ್ಲೆಟಿಕ್ ಹಾಗು ಕ್ರೀಡೆಯನ್ನು ಒಳಗೊಂಡಿಲ್ಲ. ಒಂದು ವೇಳೆ ಅದು ಕಂಡು ಬಂದರೂ ಪೊಲೀಸ್ ಕಾಯ್ದೆ 27ರ ಅಡಿಯಲ್ಲಿ ತರಲು ಸಾಧ್ಯವಿಲ್ಲ ಎಂದು ಹೇಳಿದೆ.

ಒಂದು ವೇಳೆ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ನಿಜವೆಂದೂ ಪರಿಗಣಿಸದರೂ ಸಹ ಅದು ಅಪರಾಧವಾಗುವುದಿಲ್ಲ ಎಂದು ಹೇಳುತ್ತಾ ಅರ್ಜಿದಾರರ ವಿರುದ್ದ ಸಲ್ಲಿಸಿದ್ದ ಮೊಕದ್ದಮೆಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಅವರಿದ್ದ ಏಕಸದಸ್ಯ ಪೀಠ ಪ್ರಕರಣವನ್ನು ರದ್ದುಗೊಳಿಸುತ್ತಿರುವುದಾಗಿ ಬೆಂಗಳೂರು ನಗರ ಪೊಲೀಸರಿಗೆ ಸ್ಪಷ್ಟಪಡಿಸಿದೆ.

Tags: BJPCCBCongress PartyCovid 19Karnataka PoliceKPLMatch Fixingಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಹಾರದ ನೆರೆ ಅಲ್ಲಿನ ಹೆಣ್ಣುಮಕ್ಕಳ ಬದುಕಿನ ಮೇಲೆ ಬೀರಿರುವ ಪರಿಣಾಮದ ಭೀಕರತೆ ಎಂಥದ್ದು ಗೊತ್ತಾ? (ಭಾಗ-1)

Next Post

ವಿಜಯಪುರ ಜಿಲ್ಲೆಯ ನಿಂಬೆಗೆ ಜಿಐ ಟ್ಯಾಗ್ ಸಿಗೋದು ಬಹುತೇಕ ಖಚಿತ : ಬೆಳಗಾರರ ಮುಖದಲ್ಲಿ ಮಂದಹಾಸ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ವಿಜಯಪುರ ಜಿಲ್ಲೆಯ ನಿಂಬೆಗೆ ಜಿಐ ಟ್ಯಾಗ್ ಸಿಗೋದು ಬಹುತೇಕ ಖಚಿತ : ಬೆಳಗಾರರ ಮುಖದಲ್ಲಿ ಮಂದಹಾಸ

ವಿಜಯಪುರ ಜಿಲ್ಲೆಯ ನಿಂಬೆಗೆ ಜಿಐ ಟ್ಯಾಗ್ ಸಿಗೋದು ಬಹುತೇಕ ಖಚಿತ : ಬೆಳಗಾರರ ಮುಖದಲ್ಲಿ ಮಂದಹಾಸ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada