• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿರಾಡಿ ಘಾಟ್ ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಗ್ರೀನ್ ಸಿಗ್ನಲ್

Any Mind by Any Mind
January 21, 2022
in ಕರ್ನಾಟಕ, ದೇಶ
0
ಶಿರಾಡಿ ಘಾಟ್ ಚತುಷ್ಪಥ ರಸ್ತೆಯನ್ನಾಗಿ  ಮೇಲ್ದರ್ಜೆಗೇರಿಸಲು ಗ್ರೀನ್ ಸಿಗ್ನಲ್
Share on WhatsAppShare on FacebookShare on Telegram

ಶಿರಾಡಿಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು 1200 ಕೋಟಿ ರೂ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಿಲು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.

ADVERTISEMENT

ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ಪ್ರತೀ ಮಳೆಗಾಲದ ವೇಳೆಯೂ ಭೂಕುಸಿತ, ಕಳಪೆ ಕಾಮಗಾರಿಯಿಂದ ಹೆದ್ದಾರಿ ಕೆಲವು ದಿನಗಳ ಮಟ್ಟಿಗಾದರೂ ಬಂದ್ ಆಗದ ಉದಾಹರಣೆಗಳೇ ಕಮ್ಮಿ. ಅಭಿವೃದ್ಧಿಯೇ ಕಾಣದ ಇಲ್ಲಿನ ರಸ್ತೆಗಳು ಹೆಚ್ಚಿನ ವಾಹನದಟ್ಟಣೆಯಿಂದ ಕೂಡಿದ್ದು, ಪ್ರವಾಸಿಗರಿಗೂ ನೆಚ್ಚಿನ ತಾಣವಾಗಿದೆ.

ಶಿರಾಡಿಘಾಟ್ ಅಪಘಾತಗಳಿಗೆ ಹಾಟ್ ಸ್ಪಾಟ್

ಭೀಕರ ರಸ್ತೆ ಅಪಘಾತಗಳಿಗೂ ಶಿರಾಡಿ ಘಾಟ್ ಸೆಕ್ಷನ್ ಕಾರಣವಾಗುತ್ತಲೇ ಇರುವುದು ಇಲ್ಲಿನ ಗ್ರಾಮಸ್ಥರ ನಿತ್ಯದ ಕೂಗಾಗಿದೆ. ಅದೆಷ್ಟೋ ಸರಣಿ ಅಪಘಾತಗಳು ಸಂಭವಿಸಿ, ಆಂಬುಲೆನ್ಸ್ ಗಳೇ ಸಿಗದೇ ಪರದಾಡಿದ ನಿದರ್ಶನಗಳು ಸಾಕಷ್ಟಿವೆ.

ಕೇಸರಿಕೋಟೆಯಲ್ಲಿ ಓಡಾಡುವುದೇ ಕಷ್ಟ

ಬಿಜೆಪಿಯ ಭದ್ರ ಕೋಟೆಯಾದ ಈ ಶಿರಾಡಿ ಭಾಗದಲ್ಲಿ ಅಭಿವೃದ್ಧಿಯ ಕಾರ್ಯಗಳು ಹೆಸರಿಗೆ ಮಾತ್ರವೇ ಎಂಬಂತಾಗಿದ್ದು, ಜನರ ಆಶೋತ್ತರಗಳಿಗೆ ಬೆಲೆಯೇ ಇಲ್ಲದಂತಾಗಿರುವುದು ವಿಷಾದನೀಯ. ಶಾಸಕರು ಬಾಯಿ ಮಾತಿಗೆ ಮಾತ್ರವೇ ಆಶ್ವಾಸನೆ ನೀಡುತ್ತಿದ್ದು, ಅದೇ ದಾರಿಯಲ್ಲಿ ಹೈಫೈ ವಾಹನಗಳಲ್ಲಿ ಓಡಾಡಿಕೊಂಡು ಕಾಲಹರಣ ಮಾಡುತ್ತಿರುವುದು ಸಾಮಾನ್ಯವಾಗಿದೆ.

ದಶಕಗಳ ಸಮಸ್ಯೆಗೆ ಫುಲ್ ಸ್ಟಾಪ್ ಸಿಗುತ್ತಾ

ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸುವುದನ್ನು ಬಿಟ್ಟು, ಶಿರಾಡಿ ಘಾಟ್ ಗೆ ಹೊಸ ರೂಪ ನೀಡಲು ಜಪಾನ್ ತಂತ್ರಜ್ಞಾನದಂತೆ, ಸುರಂಗ ಮಾರ್ಗ ಸುದ್ದಿ ಹಬ್ಬಿಸಿ ಚುನಾವಣೆ ಗೆದ್ದು ಹೋದ ಮೇಲೆ ಆ ಕಡೆ ತಲೆಹಾಕದ ಬೇಜಾವಾಬ್ದಾರಿ ನಾಯಕರುಗಳಿಂದ ದಶಕಗಳಿಂದ ಸಮಸ್ಯೆಯಾಗಿದೆ. ಆದರೆ, ಈಗ ನಿತಿನ್ ಗಡ್ಕರಿ ಶಿರಾಡಿ ಘಾಟ್ ಅಭಿವೃದ್ಧಿಗೆ ಕೈಹಾಕಿರುವುದು ಆಶಾದಾಯಕ ಬೆಳವಣಿಗೆ.

ಆಶ್ವಾಸನೆಗಳು ಮಾತಾಗಿಯೇ ಉಳಿದವು

2009ರಲ್ಲಿ 24 ಕಿ.ಮೀಗಳ ಉದ್ದದ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆಸಲು ಕೇಂದ್ರ ಸರ್ಕಾರ 115 ಕೋಟಿ ರೂ. ತಾಂತ್ರಿಕ ಅನುಮೋದನೆ ನೀಡಿತ್ತು. ಜೊತೆಗೆ, ಓವರ್ ಲೋಡ್ ಕಮ್ಮಿ ಮಾಡಲು ತೂಗುಸೇತುವೆ ನಿರ್ಮಿಸುವುದಕ್ಕೂ ಆಗ ಕೇಂದ್ರದ ಸಚಿವರಾಗಿದ್ದ ಕಮಲ್ ನಾಥ್ ಅನುಮತಿ ನೀಡಿದ್ದರು. 2012ರಲ್ಲಿ ಉನ್ನತ ತಂತ್ರಜ್ಞಾನ ಬಳಸಿಕೊಂಡು ರಸ್ತೆ ಅಭಿವೃದ್ಧಿ ಮಾಡಲು ಜಪಾನ್ ದೇಶ ಮುಂದೆ ಬಂದಿದೆ ಎಂದು ಆಗ ಮುಖ್ಯಮಂತ್ರಿಯಾಗಿದ್ದ ಸದಾನಂದ ಗೌಡ ಹೇಳಿದ್ದರು. ಆದರೆ, ಅವರ ಮಾತು ಬರೀ ಮಾತಾಗಿಯೇ ಉಳಿಯಿತು.

ರಸ್ತೆ ಕಾಮಗಾರಿ ಶುರುವಾದರೂ ಮುಗಿಯೋದು ಸ್ಲೋ

ಎಚ್.ಸಿ.ಮಹದೇವಪ್ಪನವರು ಲೋಕೋಪಯೋಗಿ ಸಚಿವರಾಗಿದ್ದಾಗ ಎರಡು ಹಂತದಲ್ಲಿ ಶಿರಾಡಿ ಘಾಟಿಗೆ ಒಂದಷ್ಟು ಕಾಯಕಲ್ಪ ಸಿಕ್ಕಿತ್ತು. ಇದಾದ ಬಳಿಕ 2017-18ರಲ್ಲಿ ಮತ್ತೆ ಕಾಮಗಾರಿಗಾಗಿ ಸಂಚಾರ ಬಂದ್ ಮಾಡಲಾಯಿತು. ಇದೀಗ ಕೇಂದ್ರ ಸರಕಾರದಲ್ಲಿ ಆಕ್ಟೀವ್ ಸಚಿವರಾಗಿರುವ ನಿತಿನ್ ಗಡ್ಕರಿಯವರು ಶಿರಾಡಿ ಘಾಟ್ ಬಗ್ಗೆ ಒಲವು ತೋರಿಸಿದ್ದಾರೆ. ಇದು ಕೇವಲ ಭರವಸೆಯಾಗಿ ಉಳಿಯುತ್ತೋ ಅಥವಾ ಕಾರ್ಯರೂಪಕ್ಕೆ ಬರುತ್ತದೋ ಎನ್ನುವುದನ್ನು ಕಾದುನೋಡಬೇಕಾಗಿದೆ.

Tags: BJPCongress PartyGreen signal to upgrade Shiradi Ghat into a quadrangular roadಬಿಜೆಪಿ
Previous Post

Delhi | ಅಮರ ಜವಾನ್‌ ಜ್ಯೋತಿ ವಿಲೀನ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ

Next Post

ಕಾಲು ಶತಮಾನ ಕಳೆದರೂ ಕಾಯಕಲ್ಪ ಕಾಣದ ಮೇಘಾನೆಯ ರಸ್ತೆ; ಹೇಳತ್ತೀರದು ಜನರ ಭವನೆ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಕಾಲು ಶತಮಾನ ಕಳೆದರೂ ಕಾಯಕಲ್ಪ ಕಾಣದ ಮೇಘಾನೆಯ ರಸ್ತೆ; ಹೇಳತ್ತೀರದು ಜನರ ಭವನೆ

ಕಾಲು ಶತಮಾನ ಕಳೆದರೂ ಕಾಯಕಲ್ಪ ಕಾಣದ ಮೇಘಾನೆಯ ರಸ್ತೆ; ಹೇಳತ್ತೀರದು ಜನರ ಭವನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada