• Home
  • About Us
  • ಕರ್ನಾಟಕ
Thursday, July 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಬಿಹಾರದ ನೆರೆ ಅಲ್ಲಿನ ಹೆಣ್ಣುಮಕ್ಕಳ ಬದುಕಿನ ಮೇಲೆ ಬೀರಿರುವ ಪರಿಣಾಮದ ಭೀಕರತೆ ಎಂಥದ್ದು ಗೊತ್ತಾ? (ಭಾಗ-೨)

ಫಾತಿಮಾ by ಫಾತಿಮಾ
January 21, 2022
in ಅಭಿಮತ
0
ಬಿಹಾರದ ನೆರೆ ಅಲ್ಲಿನ ಹೆಣ್ಣುಮಕ್ಕಳ ಬದುಕಿನ ಮೇಲೆ ಬೀರಿರುವ ಪರಿಣಾಮದ ಭೀಕರತೆ ಎಂಥದ್ದು ಗೊತ್ತಾ? (ಭಾಗ-೨)
Share on WhatsAppShare on FacebookShare on Telegram

ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶಗಳನ್ನು ಸಂಗ್ರಹಿಸಿರುವ ‘ದಿ ಥರ್ಡ್ ಪೋಲ್’ ಪತ್ರಿಕೆ 2010 ರಿಂದ 2019 ರ ನಡುವೆ ಬಿಹಾರದಲ್ಲಿ ಪ್ರವಾಹದಿಂದಾಗಿ ಅರ್ಧ ಮಿಲಿಯನ್ಗಿಂತಲೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಇದು ಹಲವಾರ ಮಂದಿಯನ್ನು ಪರಿಹಾರ ಶಿಬಿರಗಳಲ್ಲಿ ಇರುವಂತೆ ಮಾಡಿದೆ. ಆದರೆ ಅಲ್ಲಿ ಡೇರೆಗಳು ಪರಸ್ಪರ ಹತ್ತಿರವಿರುವುದರಿಂದ ಯುವತಿಯರು ಮತ್ತು ಹುಡುಗಿಯರು ಆಗಾಗ್ಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯಕ್ಕೆ ಒಳಗಾಗುತ್ತಾರೆ ಎಂದಿದೆ.

ADVERTISEMENT

“ಶಿಬಿರಗಳಲ್ಲಿ ವಾಸಿಸುವ ಕೆಲವೇ ದಿನಗಳಲ್ಲಿ, ಜನರು ತಮ್ಮ ಪಕ್ಕದಲ್ಲಿ ಯಾರು ಮತ್ತು ಎಲ್ಲಿ ವಾಸಿಸುತ್ತಾರೆ ಎಂಬುದನ್ನು ಬಹಳ ಬೇಗ ತಿಳಿದುಕೊಳ್ಳುತ್ತಾರೆ” ಎನ್ನುತ್ತಾರೆ ಬಿಹಾರದಲ್ಲಿ ದಲಿತರು ಮತ್ತು ಮಹಾದಲಿತರೊಂದಿಗೆ ಕೆಲಸ ಮಾಡುವ ಹೋರಾಟಗಾರ್ತಿ ಸುಧಾ ವರ್ಗೀಸ್. ಶಿಬಿರಗಳಲ್ಲಿ ಲೈಂಗಿಕ ಕಿರುಕುಳ ಮತ್ತು ಹಿಂಸಾಚಾರಗಳು ನಡೆಯುತ್ತವೆ ಮತ್ತು ಯುವತಿಯರು ಮತ್ತು ಮಹಿಳೆಯರೇ ಈ ದೌರ್ಜನ್ಯದ ಬಲಿಪಶುಗಳು ಎಂದು ಅವರು ವಿಷಾದ ವ್ಯಕ್ತಪಡಿಸುತ್ತಾರೆ.

ಬಿಹಾರದಲ್ಲಿ ಆಗಾಗ ಅಪ್ಪಳಿಸುವ ಪ್ರವಾಹವು ಮಹಿಳೆಯರ ಬದುಕಿನ ಮೇಲೆ ಬೀರುವ ಪ್ರಭಾವದ ಕುರಿತು 2016ರಲ್ಲಿ ಕೈಗೊಂಡ ಅಧ್ಯಯನವು ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸುತ್ತದೆ. “ನಾವು ಪರಿಹಾರ ಶಿಬಿರಗಳಲ್ಲೂ ಪುರುಷರಿಂದ ಚುಡಾವಣೆಗೆ ಒಳಗಾಗಬೇಕಾಗುತ್ತದೆ” ಎಂದು ಹದಿನಾರು ವರ್ಷದ ರೇಖಾ ಯಾದವ್ ಹೇಳಿರುವುದಾಗಿಯೂ ಈ ಅಧ್ಯಯನ ವರದಿ ಮಾಡಿದೆ.

ಅಷ್ಟು ಮಾತ್ರವಲ್ಲದೆ ಜಾಗತಿಕವಾಗಿ, ಮಹಿಳೆಯರು ಮತ್ತು ಹುಡುಗಿಯರ ಮೇಲಿನ ದೌರ್ಜನ್ಯವನ್ನು ಹವಾಮಾನ ವೈಪರೀತ್ಯಗಳು ಹೆಚ್ಚಿಸಿವೆ ಎಂದು ವಿವಿಧ ಅಂತರರಾಷ್ಟ್ರೀಯ ಅಧ್ಯಯನಗಳೂ ಒತ್ತಿ ಹೇಳಿವೆ. ‘ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್’ನ 2020 ರ ವರದಿಯು ಪರಿಸರ ವಿನಾಶವು ಲೈಂಗಿಕ ದೌರ್ಜನ್ಯ, ಕೌಟುಂಬಿಕ ಹಿಂಸಾಚಾರ ಮತ್ತು ಬಲವಂತದ ವೇಶ್ಯಾವಾಟಿಕೆಯಂತಹ ವಿವಿಧ ರೀತಿಯ ಲಿಂಗಾಧಾರಿತ ಹಿಂಸೆಗೆ ಹೇಗೆ ಪ್ರಚೋದನೆ ನೀಡುತ್ತದೆ ಎಂಬುದನ್ನು ಎತ್ತಿ ತೋರಿಸಿದೆ.

2004ರಲ್ಲಿ ಶ್ರೀಲಂಕಾವನ್ನು ಅಪ್ಪಳಿಸಿದ ಹಿಂದೂ ಮಹಾಸಾಗರದ ತ್ಸುನಾಮಿ ಮತ್ತು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಉಂಟಾದ ಪ್ರವಾಹದ ನಂತರದ ಘಟಿಸಿದ ಲಿಂಗಾಧಾರಿತ ಹಿಂಸಾಚಾರದಲ್ಲಿ ಸಾಮ್ಯತೆ ಇದೆ, ಪ್ರಕೃತಿಯ ವಿಕೋಪದ ನಂತರ ಮಹಿಳೆಯರು ದೈಹಿಕ, ಭಾವನಾತ್ಮಕ ಮತ್ತು ಲೈಂಗಿಕ ಹಿಂಸೆಯನ್ನು ಅನುಭವಿಸಿದ್ದಾರೆ ಎಂದು ಅಧ್ಯಯನವೊಂದು ಕಂಡುಕೊಂಡಿದೆ. 2020ರಲ್ಲಿ ಭಾರತದಲ್ಲಿ ಕೈಗೊಂಡ ಅಧ್ಯಯನವೂ 2004ರ ತ್ಸುನಾಮಿಯಲ್ಲಿ ಮಹಿಳೆಯರು ಅನುಭವಿಸಿದ ದೌರ್ಜನ್ಯದ ಬಗ್ಗೆ ಬೊಟ್ಟು ಮಾಡಿದೆ.
ಆದರೆ ಈ ರೀತಿಯ ಸಣ್ಣ ಸಣ್ಣ ಅಧ್ಯಯನಗಳು ಪರೋಕ್ಷ ಲಿಂಕ್ಗಳನ್ನು ಎತ್ತಿ ತೋರಿಸುತ್ತವೆಯಾದರೂ, ಹಿಂಸಾಚಾರದ ಘಟನೆಗಳ ಮೇಲೆ ಅನೇಕ ಅಂಶಗಳು ಪ್ರಭಾವ ಬೀರುವುದರಿಂದ ನೇರವಾದ ಕಾರಣವನ್ನು ಕಮಡುಹಿಡಿಯುವುದು ಅಸಾಧ್ಯವೆಂದು ಸಂಶೋಧಕರು ಹೇಳುತ್ತಾರೆ. ಸಂಶೋಧನೆ ಮತ್ತು ಡೇಟಾದ ಕೊರತೆಯು ಹವಾಮಾನ ಬದಲಾವಣೆಗೆ ಸಂಬಂಧಿಸಿದ ಲಿಂಗಾಧಾರಿತ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಂಗತಿಗಳನ್ನು ತಿಳಿದುಕೊಳ್ಳುವುದನ್ನು ತಡೆಯುತ್ತಿದೆ.

ಈ ಬಗ್ಗೆ ಮಾತನಾಡಿರುವ ‘ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್’ನ ‘ಭಾರ್ತಿ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಪಾಲಿಸಿ’ಯ ಸಂಶೋಧನಾ ನಿರ್ದೇಶಕ ಮತ್ತು ಸಹಾಯಕ ಪ್ರಾಧ್ಯಾಪಕರಾದ ಅಂಜಲ್ ಪ್ರಕಾಶ್ ಅವರು “ಯಾವುದೇ ಸಂಶೋಧಕರು ಈ ಸಮಸ್ಯೆಗಳನ್ನು ಅನ್ವೇಷಿಸಲು , ಡೇಟಾವು ಲಿಂಗಾಧಾರಿತವಾಗಿ ವಿಂಗಡಣೆಯಾಗಿರಬೇಕು ಮತ್ತು ಸಾಮಾಜಿಕ ಅಸಮಾನತೆಯನ್ನು ಎತ್ತಿ ತೋರಿಸುವ ಸೂಚಕಗಳನ್ನು ಒಳಗೊಂಡಿರಬೇಕು” ಎನ್ನುತ್ತಾರೆ. ಆದರೆ ನಮ್ಮ ಹೆಚ್ಚಿನ ಸರ್ವೇಗಳು ಸಮಸ್ಯೆಗಳನ್ನು ಲಿಂಗಾಧಾರಿತವಾಗಿ ದಾಖಲಿಸುವುದಿಲ್ಲ.

ಹವಾಮಾನ ಬದಲಾವಣೆ ಮತ್ತು ವಿಪತ್ತುಗಳ ಮೇಲಿನ ಸರ್ಕಾರದ ನೀತಿಗಳು ಲಿಂಗ ದೃಷ್ಟಿಕೋನವನ್ನು ಹೊಂದಿಲ್ಲ. ಪ್ರವಾಹದ ಕುರಿತು ಇತ್ತೀಚೆಗೆ ಬಿಡುಗಡೆಯಾದ ಸಂಸದೀಯ ವರದಿಯೂ ಸಹ ಮಹಿಳೆಯರ ಸಮಸ್ಯೆಗಳನ್ನು ಉಲ್ಲೇಖಿಸಿಲ್ಲ. ಆದರೆ ಹವಾಮಾನ ಬದಲಾವಣೆಯ ಮೇಲಿನ 28 ರಾಜ್ಯಗಳ ಕ್ರಿಯಾ ಯೋಜನೆಗಳಲ್ಲಿ 43% ಲಿಂಗದ ಬಗ್ಗೆ ಯಾವುದೇ ಗಮನಾರ್ಹ ಉಲ್ಲೇಖವನ್ನು ಹೊಂದಿಲ್ಲ. ಲಿಂಗಾಧಾರಿತ ನೀತಿ ನಿಯಮಗಳು ಸರ್ಕಾರೀ ಮಟ್ಟದಲ್ಲಿ ಇದ್ದರೂ ಅದು ಸಮಾಜದ ಕಟ್ಟ ಕಡೆಯ ಮಹಿಳೆಗೆ ತಲುಪುವುದಿಲ್ಲ. ಹಾಗೆ ತಲುಪದಿರುವಲ್ಲಿ ಆರ್ಥಿಕ ಅಸಮಾನತೆ ಮತ್ತು ಜಾತಿ ಪ್ರಮುಖ ಪಾತ್ರ ವಹಿಸುತ್ತದೆ.

Tags: frequent floods are making women more worsening in Bihar
Previous Post

ಸಾವಿರಾರು ಭಾರತೀಯರ ಕೋವಿಡ್‌-19 ಸಂಬಂಧಿತ ಡೇಟಾ ಆನ್‌ಲೈನ್‌ನಲ್ಲಿ ಸೋರಿಕೆ

Next Post

ಪಂಥದಿಂದ ಸಂಸ್ಕೃತಿಯೆಡೆಗೆ – ಹಿಂದುತ್ವದ ಜಾತಿ ಕರಾಮತ್ತು (ಭಾಗ-೨)

Related Posts

Top Story

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

by ಪ್ರತಿಧ್ವನಿ
January 12, 2025
0

ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15,...

Read moreDetails

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

December 3, 2024
Next Post
ಪಂಥದಿಂದ ಸಂಸ್ಕೃತಿಯೆಡೆಗೆ – ಹಿಂದುತ್ವದ ಜಾತಿ ಕರಾಮತ್ತು (ಭಾಗ-೧)

ಪಂಥದಿಂದ ಸಂಸ್ಕೃತಿಯೆಡೆಗೆ - ಹಿಂದುತ್ವದ ಜಾತಿ ಕರಾಮತ್ತು (ಭಾಗ-೨)

Please login to join discussion

Recent News

Top Story

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 23, 2025
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

by ಪ್ರತಿಧ್ವನಿ
July 23, 2025
Top Story

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

by ಪ್ರತಿಧ್ವನಿ
July 23, 2025
Top Story

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

by ಪ್ರತಿಧ್ವನಿ
July 23, 2025
CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ
Top Story

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
July 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 23, 2025

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

July 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada