• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಕ್ಕ ಮಹಾದೇವಿ ವಿವಿಯನ್ನು ಕೋ ಎಜುಕೇಷನ್ ಮಾಡಲು ಹೊರಟಿದೆಯೇ ಸರ್ಕಾರ?

ರಾಕೇಶ್ ಬಿಜಾಪುರ್ by ರಾಕೇಶ್ ಬಿಜಾಪುರ್
January 24, 2022
in ಕರ್ನಾಟಕ
0
ಅಕ್ಕ ಮಹಾದೇವಿ ವಿವಿಯನ್ನು ಕೋ ಎಜುಕೇಷನ್ ಮಾಡಲು ಹೊರಟಿದೆಯೇ ಸರ್ಕಾರ?
Share on WhatsAppShare on FacebookShare on Telegram

ವಿಜಯಪುರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯವು ಬಡವರು, ದಿನ ದಲಿತರು, ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ಪಾಲಿನ ಆಶಾಕಿರಣ. ಪ್ರತಿವರ್ಷ ಇಲ್ಲಿ ನೂರಾರು ವಿದ್ಯಾರ್ಥಿನಿಯರು ಶಿಕ್ಷಣ ಪಡೆದು ಬದುಕು ರೂಪಿಸಿಕೊಳ್ಳುತ್ತಿದ್ದಾರೆ. ಆದರೆ ಇದೀಗ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಮುಖ್ಯ ಕಾರಣ ಮಹಿಳಾ ವಿಶ್ವವಿದ್ಯಾಲಯಕ್ಕೆ ಆದಾಯ ಬರುತ್ತಿಲ್ಲವಂತೆ!

ADVERTISEMENT

ಮಹಿಳೆರಲ್ಲಿ ಶಿಕ್ಷಣದ ಜೊತೆಗೆ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ವಿಶ್ವವಿದ್ಯಾಲಯ ಒಟ್ಟು 821 ಎಕರೆ ವಿಸ್ತೀರ್ಣದಲ್ಲಿದೆ. ವಿವಿಯಲ್ಲಿ ಈಗಾಗಲೆ ವಿವಿಧ 32 ವಿಷಯಗಳ ಅಧ್ಯಯನ ನಡೆಸಲಾಗುತ್ತಿದೆ. ಲಕ್ಷಾಂತರ ಯುವತಿಯರ ವಿದ್ಯಾರ್ಥಿಗಳ ಪಾಲಿಗೆ ದಾರಿದೀಪವಾದ ಈ ವಿಶ್ವವಿದ್ಯಾನಿಲಯದಲ್ಲಿ ಲಕ್ಷಾಂತರ ವಿದ್ಯಾರ್ಥಿನಿಯರು ಭವಿಷ್ಯ ರೂಪಿಸಿಕೊಂಡಿದ್ದಾರೆ. ಮಹಿಳಾ ವಿವಿಯಲ್ಲಿನ ವಿದ್ಯಾರ್ಥಿನಿಯರ ಸಂಖ್ಯೆ ನೋಡಿದ್ರೆ ರಾಜ್ಯದ ಎಲ್ಲ ವಿಶ್ವ ವಿದ್ಯಾನಿಯಲಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿದೆ. ಕಳೆದ 19 ವರ್ಷಗಳಿಂದ ಮಹಿಳಾ ವಿಶ್ವವಿದ್ಯಾಲಯ ವಿದ್ಯಾರ್ಥಿನಿಯರು ಸಂಶೋಧನೆ ಜೊತೆಗೆ ಉನ್ನತ ಶಿಕ್ಷಣ ಪಡೆಯಲು ಇದು ಸಹಕಾರಿಯಾಗಿದೆ.

ಆದರೆ ಇದೀಗ ಮಹಿಳಾ ವಿಶ್ವವಿದ್ಯಾಲಯ ಮುಚ್ಚುವ ಮಾತುಗಳು ಚರ್ಚೆಯಾಗುತಿವೆ. ಇದಕ್ಕೆ ಪ್ರಮುಖ ಕಾರಣ ಮಹಿಳಾ ವಿಶ್ವವಿದ್ಯಾಲಯಕ್ಕೆ ಆದಾಯವೇ ಬರುತ್ತಿಲ್ಲವಂತೆ!. ಹೀಗಾಗಿ ಮಹಿಳಾ ಪದ ತೆಗೆದು ಕೋ ಎಜ್ಯುಕೇಶನ್ ನೀಡುವ ನಿಟ್ಟಿನಲ್ಲಿ ಸಾಮಾನ್ಯ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.. ಸರ್ಕಾರದ ಈ ಚಿಂತನೆ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಈಗ ಆಕ್ರೋಶ ವ್ಯಕ್ತಪಡಿಸಿವೆ. ಇದನ್ನು ಜಾರಿ ಮಾಡಲು ಮುಂದಾದರೆ ಪ್ರತಿಭಟನೆ ನಡೆಸೋದಾಗಿ ಎಚ್ಚರಿಕೆ ನೀಡಿವೆ.

ಕಳೆದ 19 ವರ್ಷಗಳಿಂದ ಲಕ್ಷಾಂತರ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿದ್ದಾರೆ. ಮಹಿಳಾ ವಿಶ್ವವಿದ್ಯಾಲಯಕ್ಕೆ ಆದಾಯ ಬರುತ್ತಿಲ್ಲ ಅನ್ನೋ ಒಂದೆ ಕಾರಣಕ್ಕೆ ಮಹಿಳಾ ಪದ ತೆಗೆದರೆ ಹೇಗೆ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಇನ್ನೊಂದೆಡೆ ಸರ್ಕಾರ ಮಹಿಳಾ ವಿಶ್ವವಿದ್ಯಾಲಯಕ್ಕೆ ಸೂಕ್ತ ಅನುದಾನ ಕೊಡ್ತಿಲ್ಲ. ಆದ್ರೆ ಮಹಿಳಾ ಶಿಕ್ಷಣ ವಿಚಾರದಲ್ಲಿ ಆದಾಯ ನಿರೀಕ್ಷಿಸುವುದು ಸರಿಯಲ್ಲ ಅನ್ನೋ ಮಾತು ವಿದ್ಯಾರ್ಥಿ ಸಂಘಟನೆಗಳ ವಾದವಾಗಿದೆ.

ರಾಜ್ಯದಲ್ಲಿ ಹಲವು ವಿಶ್ವವಿದ್ಯಾಲಯಗಳು ಕೋ ಎಜ್ಯುಕೇಶನ್ ನೀಡುತ್ತಿವೆ. ಆದ್ರೆ ವಿಜಯಪುರದಲ್ಲಿರೋ ಮಹಿಳಾ ವಿಶ್ವವಿದ್ಯಾಲಯ ಮಹಿಳೆಯರಿಗಾಗಿ ಇದೆ. ನಂಜುಂಡಪ್ಪ ವರದಿಯಂತೆ ಹಲವು ಹೋರಾಟಗಳ ಮೂಲಕ ಹಿಂದುಳಿದ ಪ್ರದೇಶದಲ್ಲಿ ಮಹಿಳಾ ವಿಶ್ವವಿದ್ಯಾಲಯ ಸ್ಥಾಪನೆ ಆಗಿದೆ. ಆದ್ರೆ ಸರ್ಕಾರ ಇದೀಗ ಮಹಿಳಾ ಪದ ತೆಗೆದು ಕೋ ಎಜುಕೇಷನ್ ನೀಡೋಕೆ ಮುಂದಾಗಿರೋದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವಿಶ್ವ ವಿದ್ಯಾಲಯದ ಅಧಿಕಾರಿಗಳನ್ನು ಕೇಳಿದರೆ, ಸರ್ಕಾರದ ಮಟ್ಟದಲ್ಲಿ ಆ ಚಿಂತನೆ ನಡೆದಿದೆ. ಆದರೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದಿದ್ದಾರೆ.

2003 ರಲ್ಲಿ ಆರಂಭವಾದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಒಟ್ಟು 148 ಮಹಾವಿದ್ಯಾಲಯಗಳಿವೆ.
ಮಂಡ್ಯ ಮತ್ತು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳನ್ನು ಆರಂಭಿಸಲಾಗಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ 148 ಮಹಾವಿದ್ಯಾಲಯಗಳಲ್ಲಿ 45,000 ವಿದ್ಯಾರ್ಥಿನಿಯರು ಪದವಿ ನೊಂದಣಿ ಮಾಡಿಕೊಂಡಿದ್ದಾರೆ. ಸ್ನಾತಕೋತ್ತರ ವಿಭಾಗದಲ್ಲಿ 2700 ವಿದ್ಯಾರ್ಥಿನಿಯರು ಅಭ್ಯಾಸ ಮಾಡುತ್ತಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಒಟ್ಟು 32 ವಿವಿಧ ವಿಭಾಗಗಳಿವೆ. ಮಹಿಳೆಯರಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ವಿಶ್ವ ವಿದ್ಯಾಲಯ ಪ್ರಮುಖ ಪಾತ್ರ ವಹಿಸಿದೆ.

ಸರ್ಕಾರದ ವಾದ ಏನು? ಜನರ ವಿರೋಧ ಯಾಕೆ?

ಮಹಿಳಾ ವಿಶ್ವ ವಿದ್ಯಾಲಯ ಆರಂಭವಾದಾಗಿನಿಂದಲೂ ಇಲ್ಲಿ ಹಲವು ವಿವಾದಗಳು ನಡೆಯುತ್ತಲೇ ಬಂದಿವೆ. ಇದೀಗ ಮಹಿಳಾ ವಿವಿ ಬದಲಾಗಿ ಕೋ ಎಜುಕೇಷನ್ ಮಾಡಬೇಕು ಎಂಬುದು ಸರ್ಕಾರದ ಚಿಂತನೆ. ಈ ಮೂಲಕ ಈ ಭಾಗದ ಮಹಿಳೆ ಹಾಗೂ ಪುರುಷ ಇಬ್ಬರಿಗೂ ಶಿಕ್ಷಣ ದೊರೆಯಬೇಕು ಎಂಬುದು ಸರ್ಕಾರದ ವಾದ. ಜೊತೆಗೆ ವಿವಿ ಯಿಂದ ನಿರೀಕ್ಷಿತ ಮಟ್ಟದಲ್ಲಿ ಆದಾಯ ಬಾರದ ಕಾರಣ ಕೋ ಎಜುಕೇಷನ್ ಮಾಡಬೇಕು ಎಂಬ ಚಿಂತನೆ ನಡೆಸಿದೆ.

ಆದರೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿವೆ. ಹಿಂದುಳಿದ ಜಿಲ್ಲೆಯಾದ ಕಾರಣ ಮಹಿಳೆಯರಿಗೆ ಅಷ್ಟಾಗಿ ಶಿಕ್ಷಣ ಸಿಕ್ಕಿರಲಿಲ್ಲ. ಆದರೆ ಇದೀಗ ಅಕ್ಕ ಮಹಾದೇವಿ ವಿವಿ ಆರಂಭವಾದಾಗಿನಿಂದ ಈ ಭಾಗದಲ್ಲಿ ಶಿಕ್ಷಣದಲ್ಲಿ ಮಹಿಳೆಯರು ಪ್ರಗತಿ ಸಾಧಿಸಿದ್ದಾರೆ. ಹೀಗಾಗಿ ಮಹಿಳಾ ವಿವಿ ಅಗತ್ಯವಾಗಿದೆ ಎಂದಿದ್ದಾರೆ. ಸದ್ಯ ಪರ ವಿರೋಧದ ನಡುವೆ ಚರ್ಚೆ ನಡೆಯುತ್ತಿದ್ದು, ಮುಂದೆ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಕಾದು ನೋಡಬೇಕಾಗಿದೆ.

Tags: akkamahadeviashwath narayanBasavaraj BommaiBJPcoheadCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಪ್ಪು ಅಭಿನಯದ ಕೊನೆ ಚಿತ್ರ `ಜೇಮ್ಸ್’ ಪುನೀತ್‌ ಜನ್ಮದಿನದಂದೇ ತೆರೆಗೆ!

Next Post

370 ನೇ ವಿಧಿ ರದ್ದಿಗೆ ಆಗ್ರಹಿಸಿ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಕಾಶ್ಮೀರದ ಧ್ವಜ ಹಾರಿಸುವುದಾಗಿ ಕರೆ ಬೆದರಿಕೆ

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
370 ನೇ ವಿಧಿ ರದ್ದಿಗೆ ಆಗ್ರಹಿಸಿ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಕಾಶ್ಮೀರದ ಧ್ವಜ ಹಾರಿಸುವುದಾಗಿ ಕರೆ ಬೆದರಿಕೆ

370 ನೇ ವಿಧಿ ರದ್ದಿಗೆ ಆಗ್ರಹಿಸಿ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಕಾಶ್ಮೀರದ ಧ್ವಜ ಹಾರಿಸುವುದಾಗಿ ಕರೆ ಬೆದರಿಕೆ

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada