• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಂಚರಾಜ್ಯ ಚುನಾವಣೆ : ದಲಿತ ಮತಗಳ ಮೇಲೆ ಕಣ್ಣು, ಸಂತ ರವಿದಾಸ ಜಯಂತಿ ಆಚರಿಸಲು ಮುಂದಾದ ಬಿಜೆಪಿ SC ಮೋರ್ಚಾ

ಫಾತಿಮಾ by ಫಾತಿಮಾ
January 29, 2022
in ದೇಶ
0
ಪಂಚರಾಜ್ಯ ಚುನಾವಣೆ : ದಲಿತ ಮತಗಳ ಮೇಲೆ ಕಣ್ಣು, ಸಂತ ರವಿದಾಸ ಜಯಂತಿ ಆಚರಿಸಲು ಮುಂದಾದ ಬಿಜೆಪಿ SC ಮೋರ್ಚಾ
Share on WhatsAppShare on FacebookShare on Telegram

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿನ ದಲಿತ ಮತಗಳನ್ನು ಗಮನದಲ್ಲಿಟ್ಟುಕೊಂಡು ಫೆಬ್ರವರಿ 16 ರಂದು ಗುರು ರವಿದಾಸ್ ಜಯಂತಿಯನ್ನು ಒಂದು ವಾರದ ಆಚರಣೆಯನ್ನಾಗಿ ಆಯೋಜಿಸಲು ಭಾರತೀಯ ಜನತಾ ಪಕ್ಷದ ಪರಿಶಿಷ್ಟ ಜಾತಿ (ಎಸ್ಸಿ) ಮೋರ್ಚಾ ನಿರ್ಧರಿಸಿದೆ.

ADVERTISEMENT

ಬಿಜೆಪಿಯ ಹಿರಿಯ ನಾಯಕರೊಬ್ಬರ ಪ್ರಕಾರ, ಪಕ್ಷದ ಎಸ್ಸಿ ಘಟಕವು ಫೆಬ್ರವರಿ 13 ರಿಂದ 20 ರವರೆಗೆ ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಿದೆ. ಇದಲ್ಲದೆ, ಜಯಂತಿಯ ಮುನ್ನ ವಾರಣಾಸಿಯ ಸಂತ ರವಿದಾಸ್ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದು ಶ್ರದ್ಧಾಂಜಲಿ ಸಲ್ಲಿಸಲು ಬಿಜೆಪಿಯು ಸಹಾಯ ಮಾಡಲು ಯೋಜಿಸುತ್ತಿದೆ ಎನ್ನಲಾಗಿದೆ. ಆಧ್ಯಾತ್ಮಿಕ ನಾಯಕ ಮತ್ತು ಭಕ್ತಿ ಸಂತ ಗುರು ರವಿದಾಸ್ ವಾರಣಾಸಿ ಬಳಿ ಜನಿಸಿದ 15 ನೇ ಶತಮಾನದ ಕವಿ. ಅವರನ್ನು ದಲಿತರ ಒಂದು ದೊಡ್ಡ ವಿಭಾಗ ಗುರು ಎಂದು ಪರಿಗಣಿಸುತ್ತದೆ, ಅವರನ್ನು ಅನುಸರಿಸುವವರನ್ನು ‘ರವಿದಾಸಿಯಾಸ್’ ಎಂದೂ ಕರೆಯಲಾಗುತ್ತದೆ.

ಪಂಜಾಬ್ನ ಜನಸಂಖ್ಯೆಯಲ್ಲಿ ದಲಿತರು ಶೇಕಡಾ 32ರಷ್ಟಿದ್ದು ಇದು ಯಾವುದೇ ರಾಜ್ಯದಲ್ಲಿ ಅತ್ಯಧಿಕ ಪ್ರಮಾಣವಾಗಿದೆ. ಯುಪಿಯಲ್ಲಿ, ಜನಸಂಖ್ಯೆಯ ಸರಿಸುಮಾರು 20 ಪ್ರತಿಶತವನ್ನು ದಲಿತ ಸಮುದಾಯ ಒಳಗೊಂಡಿದೆ ಮತ್ತು ಚುನಾವಣೆಯ ಫಲಿತಾಂಶದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ಗುರು ರವಿದಾಸ್ ಅವರ ಭಕ್ತರು ಪಂಜಾಬ್ನಿಂದ ವಾರಣಾಸಿಗೆ ದೊಡ್ಡ ಪ್ರಮಾಣದಲ್ಲಿ ಪ್ರಯಾಣ ಹೊರಡುವ ಕಾರಣ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವುದನ್ನು ತಪ್ಪಿಸಬಾರದು ಎಂಬ ಉದ್ದೇಶದಿಂದ ಭಾರತದ ಚುನಾವಣಾ ಆಯೋಗವು ಪಂಜಾಬ್ನಲ್ಲಿ ಮತದಾನದ ದಿನವನ್ನು ಫೆಬ್ರವರಿ 14 ರಿಂದ 20 ಕ್ಕೆ ಮುಂದೂಡಿತ್ತು.

ಬಿಜೆಪಿಯು ದೇಶಾದ್ಯಂತ ರವಿದಾಸ್ ದೇವಾಲಯಗಳ ‘ಸಂತರನ್ನು’ ಸನ್ಮಾನಿಸಲೂ ಯೋಜಿಸಿದೆ. “ನಾವು ರವಿದಾಸ್ ಜಯಂತಿಯಂದು ದೇಶಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸುತ್ತೇವೆ. ರಾಜ್ಯ ಘಟಕದ ಮಟ್ಟದಲ್ಲಿ ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು” ಎಂದು ಬಿಜೆಪಿಯ ಎಸ್ಸಿ ಮೋರ್ಚಾ ಅಧ್ಯಕ್ಷ ಲಾಲ್ಸಿಂಗ್ ಆರ್ಯ ಹೇಳಿದ್ದಾರೆ.

“ಚುನಾವಣೆಗಳಿರುವ ರಾಜ್ಯಗಳಲ್ಲಿ, ಅಭ್ಯರ್ಥಿಗಳು, ಶಾಸಕರು ಮತ್ತು ಇತರ ಪಕ್ಷದ ಪದಾಧಿಕಾರಿಗಳು ಭಾಗವಹಿಸಲು ಕೇಳಿಕೊಳ್ಳಲಾಗಿದೆ” ಎಂದೂ ಅವರು ಹೇಳಿದ್ದಾರೆ.

“ವಾರಣಾಸಿಯ ಸಂತ ರವಿದಾಸ ದೇವಾಲಯಕ್ಕೆ ವಿಸ್ತಾರವಾದ ಯೋಜನೆಗಳನ್ನು ಮಾಡಲು ಮತ್ತು ಗೌರವ ಸಲ್ಲಿಸುವಾಗ ಯಾರಿಗೂ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಕೇಳಲಾಗಿದೆ” ಎಂದೂ ವರದಿಗಳಿವೆ.

ಉತ್ತರ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ಸಾಕಷ್ಟು ದಲಿತ ಜನಸಂಖ್ಯೆಯನ್ನು ಹೊಂದಿರುವ ಕ್ಷೇತ್ರಗಳಲ್ಲಿ ಎಸ್ಸಿ ಮೋರ್ಚಾ ಇತರ ಸಮಾವೇಶಗಳು ಮತ್ತು ಕಾರ್ಯಕ್ರಮಗಳನ್ನು ಸಹ ನಡೆಸಲಿವೆ ಎಂದು ಆರ್ಯ ಪತ್ರಕರ್ತರನ್ನುದ್ದೇಶಿಸಿ ಹೇಳಿದ್ದಾರೆ. “ಉತ್ತರ ಪ್ರದೇಶದ ಎಸ್ಪಿ, ಬಿಎಸ್ಪಿ ಮತ್ತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಮೀಸಲಾತಿ ಪ್ರಯೋಜನಗಳನ್ನು ನಿಲ್ಲಿಸುವುದಾಗಿ ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ. ಕಳೆದ ಹಲವು ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಮೋದಿ ಮತ್ತು ಯೋಗಿ ಸರಕಾರಗಳು ಮಾತ್ರ ದಲಿತರ ಕಲ್ಯಾಣಕ್ಕಾಗಿ ಕ್ರಮಗಳನ್ನು ಕೈಗೊಂಡಿದ್ದು ಇದು ಮೀಸಲಾತಿ ನಿಲ್ಲಿಸಲಾಗುವುದು ಎಂಬುವುದು ಸಂಪೂರ್ಣ ಸುಳ್ಳು ಮತ್ತು ದಲಿತ ಸಮುದಾಯವು ಬಿಜೆಪಿಯೊಂದಿಗೆ ಇದೆ” ಎಂದು ಆರ್ಯ ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ಕರ್ನಾಟಕದ ಎಸ್ಸಿ ಮೋರ್ಚಾವೂ ರಾಜ್ಯದಲ್ಲಿ ರವಿದಾಸ ಜಯಂತಿಯಂದು ಕಾರ್ಯಕ್ರಮ ಆಯೋಜಿಸಿ ರಾಜ್ಯದ ದಲಿತ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಯೋಜಿಸಿದೆ ಎನ್ನಲಾಗಿದೆ.

Tags: BJPದಲಿತ ಮತನರೇಂದ್ರ ಮೋದಿಪಂಚರಾಜ್ಯ ಚುನಾವಣೆಬಿಜೆಪಿಬಿಜೆಪಿ SC ಮೋರ್ಚಾಸಂತ ರವಿದಾಸ ಜಯಂತಿ
Previous Post

2017ರ ಭಾರತ-ಇಸ್ರೇಲ್ ಒಪ್ಪಂದದ ಭಾಗವಾಗಿ ಪೆಗಾಸಸ್ ಖರೀದಿ : ನ್ಯೂಯಾರ್ಕ್ ಟೈಮ್ಸ್ ವರದಿ ಉಲ್ಲೇಖಿಸಿ ಹಲವು ನಾಯಕರು ಕಿಡಿ

Next Post

ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ವರ್ಗಾವಣೆ ತಡೆಹಿಡಿದ ರಾಜ್ಯ ಸರ್ಕಾರ

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

October 26, 2025
ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

October 26, 2025
ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

October 25, 2025
Next Post
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ!

ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ವರ್ಗಾವಣೆ ತಡೆಹಿಡಿದ ರಾಜ್ಯ ಸರ್ಕಾರ

Please login to join discussion

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada