• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

216 ಬೋಗಿಗಳಿಗಾಗಿ ಚೀನಾ ಕಂಪನಿಯೊಂದಿಗೆ ಒಪ್ಪಂದ : ಅಪಾಯದಲ್ಲಿ ನಮ್ಮ ಮೆಟ್ರೋ!

ಪ್ರತಿಧ್ವನಿ by ಪ್ರತಿಧ್ವನಿ
January 30, 2022
in ಕರ್ನಾಟಕ
0
216 ಬೋಗಿಗಳಿಗಾಗಿ ಚೀನಾ ಕಂಪನಿಯೊಂದಿಗೆ ಒಪ್ಪಂದ : ಅಪಾಯದಲ್ಲಿ ನಮ್ಮ ಮೆಟ್ರೋ!
Share on WhatsAppShare on FacebookShare on Telegram

ಎರಡು ವರ್ಷಗಳ ಹಿಂದೆ BMRCL ಚೀನಾ ಮೂಲದ ಸಂಸ್ಥೆಯೊಂದಕ್ಕೆ 216 ಬೋಗಿಗಳನ್ನು ಪೂರೈಸುವಂತೆ ಕೇಳಿತ್ತು. ಆದರೆ, ಗುತ್ತಿಗೆ ಪಡೆದ ಸಂಸ್ಥೆಯಿಂದ ಕೋಚ್ಗಳ ಪೂರೈಕೆಯಲ್ಲಿ ವಿಳಂಬವಾಗುತ್ತಿದೆ. ಯಾಕೆಂದು ನೋಡಿದರೆ ಗುತ್ತಿಗೆ ಪಡೆದ ಕಂಪನಿಯೂ ಸ್ಥಳೀಯ ಪಾಲುದಾರರ ಹುಡುಕಾಟದಲ್ಲಿದೆ ಆದ್ದರಿಂದ ಪೂರೈಕೆಯಲ್ಲಿ ವಿಳಂಬವಾಗುತ್ತಿದೆ ಎಂದು ತಿಳಿದು ಬಂದಿದೆ.

ADVERTISEMENT

ಚೀನಾ ಮೂಲದ CRRCಯ ಅಂಗಸಂಸ್ಥೆಯಾದ CRCC ನಾನ್ಜಿಂಗ್ ಪುಜೆನ್ ಕೋ ಕಂಪನಿಯು ಡಿಸೆಂಬರ್ 2019ರಲ್ಲಿ 1,578 ಕೋಟಿ ಮೌಲ್ಯದಲ್ಲಿ 216 ಕೋಚ್ಗಳನ್ನು ನಿಗದಿತ ಸಮಯದಲ್ಲಿ ನಿರ್ಮಿಸಿಕೊಡುವುದಾಗಿ ಹೇಳಿತ್ತು. ಆದರೆ, ಅವಧಿಯೊಳಗೆ ಕೋಚ್ಗಳನ್ನು ಪೂರೈಸದ ಕಾರಣ BMRCL ಹಲವಾರು ಭಾರೀ ನೋಟಿಸ್ಗಳನ್ನು ಜಾರಿ ಮಾಡಿದೆ ಮತ್ತು ಬ್ಯಾಂಕ್ನಲ್ಲಿ ಇಟ್ಟಿರುವ ಶ್ಯೂರಿಟಿ ಹಣ 372 ಕೋಟಿ ರೂಪಾಯಿಯನ್ನು ಹಿಂಪಡೆಯುವುದಾಗಿ ತನ್ನ ನೋಟಿಸ್ನಲ್ಲಿ ಎಚ್ಚರಿಸಿದೆ.

ಆದರೆ, ಬ್ಯಾಂಕ್ನಲ್ಲಿ ಇಟ್ಟಿರುವ ಗ್ಯಾರಂಟಿ ಮೊತ್ತವನ್ನು ಹಿಂಪಡೆಯುವ ಕ್ರಮವನ್ನ ತೀವ್ರವಾಗಿ ಖಂಡಿಸಿರುವ CRRC ಸಂಸ್ಥೆ ರಾಜ್ಯ ಹೈಕೋರ್ಟ್ಗೆ ಮೊಕದ್ದಮೆ ಹೂಡಿದೆ. ವಿಚಾರಣೆಯನ್ನು ಫೆಬ್ರವರಿಯಲ್ಲಿ ಕೈಗೆತ್ತಿಕೊಳ್ಳುವುದಾಗಿ ನ್ಯಾಯಾಲಯ ತಿಳಿಸಿದೆ. ಚೀನಾ ಮೂಲದ ಕಂಪನಿಯೂ ಮೊದಲು ಬಿಡ್ ಮಾಡಿದವರಿಗಿಂತ 200 ಕೋಟಿ ಕಮ್ಮಿ ಬಿಡ್ ಮಾಡಿದ ಕಾರಣ BMRCL ಚೀನಾ ಮೂಲದ ಕಂಪನಿಗೆ ಗುತ್ತಿಗೆಯನ್ನ ನೀಡಿತ್ತು.

ಟೆಂಡರಿನಲ್ಲಿ ವಿಧಿಸಿರುವ ಷರತ್ತಿನ ಪ್ರಕಾರ ಚೀನಾ ಮೂಲದ ಸಂಸ್ಥೆಯು ಭಾರತ ಸರ್ಕಾರದ ಪ್ರಮುಖ ಯೋಜನೆಯಾದ ಮೇಕ್-ಇನ್-ಇಂಡಿಯಾ ಕಾರ್ಯಕ್ರಮದಡಿಯಲ್ಲಿ ಭಾರತದಲ್ಲಿ 94% ಕೋಚ್ಗಳನ್ನು ತಯಾರಿಸಬೇಕಿತ್ತು. ಆದರೆ, ಕಂಪನಿಯೂ ಸ್ಥಳೀಯ ತಯಾರಕರೊಂದಿಗೆ ಯಾವುದೇ ತರಹದ ಒಪ್ಪಂದ ಮಾಡಿಕೊಳ್ಳಲು ಮುಂದಾಗಲಿಲ್ಲ ಎಂದು ತಿಳಿದು ಬಂದಿದೆ.

FDI ಪಾಲಿಸಿಯಲ್ಲಿ ಬದಲಾವಣೆ

ಈ ವರ್ಷದ ಜೂನ್ನಿಂದ ಕೋಚ್ಗಳ ಹಸ್ತಾಂತರವಾಗಬೇಕು. ಆದರೆ, ವಿದೇಶಿ ನೇರ ಹೂಡಿಕೆಯಲ್ಲಿನ ಬದಲಾವಣೆಯಿಂದಾಗಿ ಕಂಪನಿಯೂ ಎಲ್ಲಾ 216 ಕೋಚ್ಗಳನ್ನು ಚೀನಾದಲ್ಲೇ ತಯಾರಿಸಲು ಅನುಮತಿ ನೀಡುವಂತೆ BMRCL ಗೆ ಅರ್ಜಿ ಸಲ್ಲಿಸಿದೆ. ಆದರೆ, ಈ ಅರ್ಜಿಯನ್ನು ಸಂಸ್ಥೆ ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ BMRCL ನಿರ್ದೇಶಕ ಅಂಜುಮ್ ಪರ್ವೇಜ್ ʻʻಟೆಂಡರ್ನಲ್ಲಿ ವಿಧಿಸಿರುವ ಷರತ್ತಿನ ಪ್ರಕಾರ ದೇಶೀಯ ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕಂಪನಿಗೆ ಅವಕಾಶವಿದೆ ಈ ಕುರಿತಾಗಿ ಕಂಪನಿಯೂ ಹೆಚ್ಚುವರಿ ಸಮಯವನ್ನ ಕೇಳಿದೆ, ನಾವು ಸಮಯವನ್ನು ನೀಡಲು ಒಪ್ಪಿದ್ದೇವೆ. ಆದರೆ, ಕೊಟ್ಟ ಸಮಯದಲ್ಲಿ ಕಂಪನಿ ಒಪ್ಪಂದ ಮಾಡಿಕೊಳ್ಳುವಲ್ಲಿ ವಿಫಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದುʼʼ ಆದರೆ, ಒಪ್ಪಂದವನ್ನು ರದ್ದುಗೊಳಿಸುವ ಯಾವುದೇ ನಿರ್ಧಾರವನ್ನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಸದ್ಯ ಗುತ್ತಿಗೆ ನೀಡಿರುವ ಕೋಚ್ಗಳು CBTC ಸಿಗ್ನಲಿಂಗ್ ವ್ಯವಸ್ಥೆಯನ್ನು ಒಳಗೊಂಡಿರುತ್ತವೆ ಮತ್ತು ಚಾಲಕರಹಿತವಾಗಿ ಕಾರ್ಯನಿರ್ವಹಿಸುತ್ತವೆ. ಸದ್ಯ 216 ನೂತನ ಬೋಗಿಗಳಲ್ಲಿ 121 ಬೋಗಿಗಳನ್ನು ನೇರಳೆ ಮಾರ್ಗಕ್ಕಾಗಿ ಮತ್ತು 95 ಬೋಗಿಗಳನ್ನು ಹಸಿರು ಮಾರ್ಗಕ್ಕಾಗಿ ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ರೀಚ್-5ರ ಆರ್ವಿ ರಸ್ತೆ ಹಾಗೂ ಬೊಮ್ಮನಹಳ್ಳಿ ನಡುವೆ ಉಪಯೋಗಿಸಲು ನಿರ್ಧರಿಸಲಾಗಿದೆ.

Tags: BJPCongress PartyNamma Metros 216 coach contract with Chinese company in jeopardyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾಳೆಯಿಂದ ಬಜೆಟ್ ಅಧಿವೇಶನ ಪ್ರಾರಂಭ : ಇಲ್ಲಿದೆ ಪ್ರಮುಖ 10 ಅಂಶಗಳು

Next Post

ಪುನೀತ್ ರಾಜ್‍ಕುಮಾರ್ ಆದರ್ಶದ ಜೀವನವನ್ನು ಮುಂದಿನ ಪೀಳಿಗೆಗೆ ತಿಳಿಯಬೇಕು : ಸಚಿವ ವಿ.ಸೋಮಣ್ಣ

Related Posts

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್
ಇದೀಗ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 13, 2025
0

ಮೈಸೂರು :  ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಶ್ಮಾಮಿತ್ರ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿನೇಶ್ ಗುಂಡೂರಾವ್ ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
Next Post
ಪುನೀತ್ ರಾಜ್‍ಕುಮಾರ್ ಆದರ್ಶದ ಜೀವನವನ್ನು ಮುಂದಿನ ಪೀಳಿಗೆಗೆ ತಿಳಿಯಬೇಕು : ಸಚಿವ ವಿ.ಸೋಮಣ್ಣ

ಪುನೀತ್ ರಾಜ್‍ಕುಮಾರ್ ಆದರ್ಶದ ಜೀವನವನ್ನು ಮುಂದಿನ ಪೀಳಿಗೆಗೆ ತಿಳಿಯಬೇಕು : ಸಚಿವ ವಿ.ಸೋಮಣ್ಣ

Please login to join discussion

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada