ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗುರುವಾರ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕಿತ್ತು ಆದರೆ ದಿಢೀರ್ ರಾಜಕೀಯ ಬೆಳವಣಿಗೆ ತಳಕೆಳಗೆಗಾಗಿಸಿದ್ದು, ಬಿಜೆಪಿ ವರಿಷ್ಠರು ಇವತ್ತು ಬರೋದು ಬೇಡ ಸೋಮವಾರ ಬನ್ನಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹಾಗಾಗಿ ಸಿಎಂ ಬೊಮ್ಮಾಯಿ ಅವರ ದೆಹಲಿಗೆ ಬೇಟಿ ಸೋಮವಾರಕ್ಕೆ ಶಿಪ್ಟ್ ಆಗಿದೆ.
ಈ ಕುರಿತು ಮಾತಾನಾಡಿರುವ ಸಿಎಂ ಬೊನ್ಮಾಯಿ, ವರಿಷ್ಠರ ಭೇಟಿಗಾಗಿ ದೆಹಲಿಗೆ ಹೋಗುತ್ತಿದ್ದೇನೆ. ಹೀಗಾಗಿ ಸಮಯ ಕೇಳಿದ್ದೇನೆ. ಸಮಯ ನೀಡಿದರೆ ಸೋಮವಾರ ಬೆಳಗ್ಗೆಯೇ ದೆಹಲಿಗೆ ಹೋಗುತ್ತೇನೆ. ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದಿಲ್ಲ.
ಬಜೆಟ್ ಪೂರ್ವ ಸಭೆ ನಡೆಸಲಾಗುವುದು. ವಿವಿಧ ಇಲಾಖೆಗಳ ಜೊತೆಗೆ ಸಭೆ ನಡೆಸುತ್ತೇನೆ.ಬಜೆಟ್ ಗೂ ಮುನ್ನ ಸಂಸದರ ಜೊತೆಗೂ ಸಭೆ ನಡೆಸುತ್ತೇನೆ ಎಂದಿದ್ದಾರೆ. ಮೂಲಗಳ ಪ್ರಕಾರ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ತಗೆದುಕೊಂಡು ಬರುತ್ತಾರೆ ಎಂಬ ರಾಜಕೀಯ ಚರ್ಚೆ ರಾಜ್ಯದೆಲ್ಲೆಡೆ ನಡೆಯುತ್ತಿದೆ.