• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಶಿವಾಜಿ ಪಾರ್ಕ್‌ನಲ್ಲಿ ದಸರಾ ಆಯೋಜನೆಗೆ ಠಾಕ್ರೆ ಬಣಕ್ಕೆ ಹೈಕೋರ್ಟ್‌ ಅಸ್ತು: ಶಿಂಧೆ ಬಣಕ್ಕೆ ಹಿನ್ನೆಡೆ

Any Mind by Any Mind
October 1, 2022
in ದೇಶ
0
ಶಿವಾಜಿ ಪಾರ್ಕ್‌ನಲ್ಲಿ ದಸರಾ ಆಯೋಜನೆಗೆ ಠಾಕ್ರೆ ಬಣಕ್ಕೆ ಹೈಕೋರ್ಟ್‌ ಅಸ್ತು: ಶಿಂಧೆ ಬಣಕ್ಕೆ ಹಿನ್ನೆಡೆ
Share on WhatsAppShare on FacebookShare on Telegram

  ಮುಂಬೈನ ಐಕಾನಿಕ್ ಶಿವಾಜಿ ಪಾರ್ಕ್‌ನಲ್ಲಿ ದಸರಾ ರ್ಯಾಲಿ ಆಯೋಜಿಸಲು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡುವುದರೊಂದಿಗೆ ಶಿವಸೇನೆಯ ಏಕನಾಥ್ ಶಿಂಧೆ ಬಣಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಕಕ್ಷಿದಾರರ (ಶಿವಸೇನೆಯ ಮೇಲಿನ) ಹಕ್ಕು ವಿವಾದ ಇತ್ಯರ್ಥವಾಗುವವರೆಗೆ ಅರ್ಜಿಯ ಕುರಿತು ತೀರ್ಮಾನಿಸದಂತೆ ಶಿಂಧೆ ಬಣದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು.

ADVERTISEMENT

ಮುಂಬೈ ಪೊಲೀಸರು ಎತ್ತಿರುವ ಕಾನೂನು ಮತ್ತು ಸುವ್ಯವಸ್ಥೆ ಕಾಳಜಿಯ ಆಧಾರದ ಮೇಲೆ ಐಕಾನಿಕ್ ಶಿವಾಜಿ ಪಾರ್ಕ್‌ನಲ್ಲಿ ದಸರಾ ರ್ಯಾಲಿ ನಡೆಸಲು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹಾಗೂ ಏಕನಾಥ್ ಶಿಂಧೆ ಬಣಕ್ಕೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಈ ಹಿಂದೆ ಅನುಮತಿ ನಿರಾಕರಿಸಿತ್ತು. ಠಾಕ್ರೆ ಬಣವು BMC ನಿರ್ಧಾರವನ್ನು ಹೈಕೋರ್ಟ್‌ ನಲ್ಲಿ ಪ್ರಶ್ನಿಸಿತ್ತು, ಶಿಂಧೆ ಬಣವು ಮಧ್ಯಪ್ರವೇಶಿಸುವಂತೆ ಮನವಿ ಮಾಡಿತು.

BMC ಆದೇಶವು “ಕಾನೂನಿನ ಪ್ರಕ್ರಿಯೆಯ ಸ್ಪಷ್ಟ ದುರುಪಯೋಗ” ಎಂದು ನ್ಯಾಯಾಲಯ ಹೇಳಿದೆ.

ಶಿಂಧೆ ಬಣದ ಭಾಗವಾಗಿರುವ ದಾದರ್ ಶಾಸಕ ಸದಾ ಸರ್ವಾಂಕರ್, ಪ್ರಸ್ತುತ ಅರ್ಜಿಯ ಅಡಿಯಲ್ಲಿ ಅರ್ಜಿದಾರರು (ಠಾಕ್ರೆ ನೇತೃತ್ವದ ಶಿವಸೇನೆ) ಪಕ್ಷದ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತಿಪಾದಿಸಿದ್ದರು.

ಠಾಕ್ರೆ ನೇತೃತ್ವದ ಶಿವಸೇನೆ ಈ ನಿರ್ಧಾರವನ್ನು ಸ್ವಾಗತಿಸಿದ್ದು, ನ್ಯಾಯಾಂಗದ ಮೇಲಿನ ನಂಬಿಕೆಯು ಸಾಬೀತಾಗಿದೆ ಎಂದು ಹೇಳಿದೆ. ಪಕ್ಷದ ವಕ್ತಾರ ಮನಿಶಾ ಕಾಯಂದೆ ಮಾತನಾಡಿ, ಈ ಬಾರಿಯ ರ್ಯಾಲಿ ಅದ್ಧೂರಿಯಾಗಿ ನಡೆಯಲಿದೆ ಎಂದರು.

ಅನುಮತಿ ನಿರಾಕರಿಸಿದ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮೇಲೆ (ಸರ್ಕಾರದ) ಸ್ವಲ್ಪ ಒತ್ತಡವಿರಬೇಕು ಎಂದು ಅವರು ಹೇಳಿದ್ದಾರೆ.

“ನ್ಯಾಯಾಂಗದ ಮೇಲಿನ ನಮ್ಮ ನಂಬಿಕೆಯು ಸಾಬೀತಾಗಿದೆ. ಕಳೆದ ಹಲವು ವರ್ಷಗಳಿಂದ, ದಸರಾ ರ್ಯಾಲಿಯು ‘ಶಿವ-ತೀರ್ಥ’ದಲ್ಲಿ ನಡೆಯುತ್ತಿದೆ (ಸೇನೆಯು ಶಿವಾಜಿ ಪಾರ್ಕ್ ಅನ್ನು ‘ಶಿವ-ತೀರ್ಥʼ ಎಂದು ಉಲ್ಲೇಖಿಸುತ್ತದೆ), ಆದರೆ ಈ ಬಾರಿ ಶಿಂಧೆ ಬಣ ಮತ್ತು ಬಿಜೆಪಿಯ ಮೂಲಕ ಅಡೆತಡೆಗಳನ್ನು ಸೃಷ್ಟಿಸಿತು, ಅದೃಷ್ಟವಶಾತ್, ನ್ಯಾಯಾಲಯ ಅದನ್ನು ತಿರಸ್ಕರಿಸಿತು,” ಎಂದು ಶಿವಸೇನಾ ಕಾರ್ಯದರ್ಶಿ ವಿನಾಯಕ್ ರಾವುತ್ ಹೇಳಿದ್ದಾರೆ.

ಶಿವಸೇನೆಯು 1966 ರಿಂದ ಪ್ರತಿ ವರ್ಷ ದಸರಾದಂದು ರ್ಯಾಲಿಯನ್ನು ನಡೆಸುತ್ತಿದೆ. ಶಿವಸೇನೆಯು ಎರಡು ಬಣಗಳಾಗಿ ವಿಭಜನೆಯಾದ ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ 2020 ಮತ್ತು 2021 ರಲ್ಲಿ ರ್ಯಾಲಿಯನ್ನು ನಡೆಸಲಾಗಿಲ್ಲದ್ದರಿಂದ ಈ ವರ್ಷ ಈ ಕಾರ್ಯಕ್ರಮವು ಮಹತ್ವದ್ದಾಗಿದೆ.

ಉದ್ಧವ್ ಠಾಕ್ರೆ ಅವರು ಆಗಸ್ಟ್‌ನಲ್ಲಿ ಶಿಂಧೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು,  ಏನೇ ಆಗಲಿ ಶಿವಾಜಿ ಪಾರ್ಕ್‌ನಲ್ಲಿ ದಸರಾ ರ್ಯಾಲಿ ನಡೆಸುವುದಾಗಿ ಠಾಕ್ರೆ ಹೇಳಿದ್ದರು.

“ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಶಿವಸೇನೆಯ ದಸರಾ ರ‍್ಯಾಲಿ ನಡೆಯಲಿದೆ. ಈ ರ್ಯಾಲಿಗೆ ರಾಜ್ಯದೆಲ್ಲೆಡೆಯಿಂದ ಶಿವಸೈನಿಕರು ಆಗಮಿಸುತ್ತಾರೆ.ಸರಕಾರ ಅನುಮತಿ ನೀಡುತ್ತದೋ ಇಲ್ಲವೋ ಈ ತಾಂತ್ರಿಕ ವಿಷಯಗಳು ನಮಗೆ ತಿಳಿದಿಲ್ಲ. ರ್ಯಾಲಿ ನಡೆಸುತ್ತೇವೆ. ಇತರರು ರ್ಯಾಲಿಗಳನ್ನು ನಡೆಸುತ್ತಾರೋ ಇಲ್ಲವೋ ಎಂಬುದು ನಮಗೆ ಮುಖ್ಯವಲ್ಲ. ಶಿವಸೇನೆ ಬೆಳೆದಿರುವುದು ದೇಶದ್ರೋಹಿಗಳಿಂದಲ್ಲ, ಶಿವಸೈನಿಕರ ರಕ್ತದಿಂದ” ಎಂದು ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದ್ದರು. ಅಕ್ಟೋಬರ್ 5 ರಂದು ನಡೆಯಲಿರುವ ರ್ಯಾಲಿಯಲ್ಲಿ ಅವರು ಮಹಾರಾಷ್ಟ್ರದ ಬೆಳವಣಿಗೆಗಳ ಕುರಿತು ದೊಡ್ಡ ಭಾಷಣ ಮಾಡುವ ನಿರೀಕ್ಷೆಯಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ನೇತೃತ್ವದ ಬಂಡಾಯ ಶಿಬಿರವು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಮೈದಾನದಲ್ಲಿ ರ್ಯಾಲಿಗೆ ಈಗಾಗಲೇ ಅನುಮತಿ ಪಡೆದಿದೆ.

Previous Post

ಟಿಆರ್‌ ಪಿ ಅಕ್ರಮ ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿಗೆ ಕ್ಲೀನ್‌ ಚಿಟ್‌!

Next Post

ಪೇಸಿಎಂ ಪೋಸ್ಟರ್‌ ಅಂಟಿಸಿದ ಕೈ ನಾಯಕರು: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರ ಬಂಧನ-ಬಿಡುಗಡೆ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಪೇಸಿಎಂ ಪೋಸ್ಟರ್‌ ಅಂಟಿಸಿದ ಕೈ ನಾಯಕರು: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರ ಬಂಧನ-ಬಿಡುಗಡೆ

ಪೇಸಿಎಂ ಪೋಸ್ಟರ್‌ ಅಂಟಿಸಿದ ಕೈ ನಾಯಕರು: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರ ಬಂಧನ-ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada