• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಧಮ್ಮು, ತಾಕತ್ತು ಎಂದಿದ್ದ ಬಿಜೆಪಿ ನಾಯಕರಿಗೆ ಖಾರದ ಉತ್ತರ..

ಕೃಷ್ಣ ಮಣಿ by ಕೃಷ್ಣ ಮಣಿ
May 27, 2023
in ಅಂಕಣ
0
ಧಮ್ಮು, ತಾಕತ್ತು ಎಂದಿದ್ದ ಬಿಜೆಪಿ ನಾಯಕರಿಗೆ ಖಾರದ ಉತ್ತರ..
Share on WhatsAppShare on FacebookShare on Telegram

ರಾಜ್ಯ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ನಲ್ಲಿ ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ತಿರುಗೇಟು ನೀಡುವುದರಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಎತ್ತಿದ ಕೈ ಎನ್ನುವಂತೆ ನಡೆದುಕೊಳ್ತಿದ್ದಾರೆ. ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ವಿಶೇಷ ಅಧಿವೇಶ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ ವಿವಾದಿತ ಕಾಯ್ದೆಗಳನ್ನು ತೆಗೆದು ಹಾಕುತ್ತೇವೆ ಎಂದು ಮಾತನಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಅವರ ಮಾತಿನಿಂದ ಸಿಡಿದು ಸಿಟ್ಟಾಗಿದ್ದ ಬಿಜೆಪಿ ನಾಯಕರು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಹರಿಹಾಯ್ದಿದ್ದರು. ಧಮ್ಮು, ತಾಕತ್ತು ಎಂದು ವೀರಾವೇಶ ಪ್ರದರ್ಶನ ಮಾಡಿದ್ದರು. ಆದರೆ ಬಿಜೆಪಿ ಹೇಳಿಕೆಗೆ ತಣ್ಣನೆ ಟ್ವೀಟ್‌ ಮಾಡಿರುವ ಪ್ರಿಯಾಂಕ್‌ ಖರ್ಗೆ ಖಡಕ್‌ ಉತ್ತರ ಕೊಟ್ಟಿದ್ದಾರೆ.

ADVERTISEMENT

ಕಾಂಗ್ರೆಸ್‌ ಮೇಲೆ ಹರಿಹಾಯ್ದಿದ್ದ ಬಿಜೆಪಿ ಲೀಡರ್ಸ್‌..!

Former DCM and BJP’s election campaign in-charge R Ashoka speaks during meet the press programme at Press Club of Bengaluru on Monday, 08 April 2019. -KPN ### R Ashoka at Meet the press programme

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಹಾಗು ಇಬ್ಬರು ಬಿಜೆಪಿ ನಾಯಕರ ಮೇಲೆ ಹಾಕಿರುವ ಕೇಸ್‌ಗಳ ಬಗ್ಗೆ ವಾಗ್ದಾಳಿ ಮಾಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಕಂದಾಯ ಸಚಿವ ಆರ್‌ ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದರು. ನಿಮ್ಮ ಅಪ್ಪ, ಅಜ್ಜಿ, ಮುತ್ತಾತ್ತನ ಕೈಯಲ್ಲೇ ಆರ್‌ಎಸ್‌ಎಸ್‌ ಬ್ಯಾನ್‌ ಮಾಡಲು ಆಗಿಲ್ಲ. ಇವಾಗ ದೇಶದಲ್ಲಿ ನಿಮ್ಮ ಸರ್ಕಾರ ನೆಗೆದು ಬಿದ್ದಿದೆ. ಇವಾಗ ತಾಕತ್, ಧಮ್ ಇದ್ರೆ ಭಜರಂಗ ದಳ ಆಗಲಿ, ಆರ್‌ಎಸ್‌ಎಸ್‌ನ ಒಂದು ಶಾಖೆಯನ್ನು ಬ್ಯಾನ್ ಮಾಡಿ ನೋಡಿ, ಬ್ಯಾನ್ ಮಾಡಿದ 3 ತಿಂಗಳಿಗೆ ನಿಮ್ಮ ಸರ್ಕಾರ ಇರಲ್ಲ. ನಿಮ್ಮ ಗೂಟದ ಕಾರುಗಳು ಎಲ್ಲವೂ ವಾಪಸ್ಸು ಹೋಗಬೇಕು. ಈ ದೇಶದ ಪ್ರಧಾನಿಗಳು RSS ನವರು. RSS ಹಿಂದೂಗಳ ಧ್ವನಿ. ಭಜರಂಗದಳ ಆಗಲಿ, RSS ಬ್ಯಾನ್‌ ಮಾಡಿ ತಾಕತ್ ಇದ್ರೆ ಎನ್ನುವ ಮೂಲಕ ಬ್ಯಾನ್ ಬಗ್ಗೆ ಮಾತನಾಡಿದ್ದ ಸಚಿವ ಪ್ರಿಯಾಂಕ್‌ ಖರ್ಗೆಗೆ ಸವಾಲು ಎಸೆದಿದ್ದರು.

ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ಕೊಟ್ಟ ಠಕ್ಕರ್‌ ಏನು..?

ಬಿಜೆಪಿ ನಾಯಕರು ಮಾಡಿದ್ದ ವಾಕ್ಸಮರಕ್ಕೆ ತಣ್ಣನೆ ಉತ್ತರ ಕೊಟ್ಟಿರುವ ಪ್ರಿಯಾಂಕ್‌ ಖರ್ಗೆ, ಬಿಜೆಪಿಗರು, ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ರಾಜ್ಯದಲ್ಲಿ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗೆ ಅಲ್ಲ. ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ. ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ಏನು ಎನ್ನುವುದನ್ನು ನಾವು ತೋರಿಸುತ್ತೇವೆ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಮಕ್ಕಳ ಹೆಣವನ್ನು ಬೀಳಿಸಿ ರಾಜಕೀಯ ಮಾಡಿತ್ತು. ಇನ್ಮುಂದೆ ಬಿಜೆಪಿಯ ಹೆಣ ಬೀಳಿಸುವ ರಾಜಕೀಯ ನಡೆಯಲ್ಲ ಎಂದು ಕಟ್ಟುನಿಟ್ಟಾಗಿ ಹೇಳಿದ್ದಾರೆ.

ಹೋಂ ಮಿನಿಸ್ಟರ್‌ ಆಗ್ತಾರಾ ಪ್ರಿಯಾಂಕ್‌ ಖರ್ಗೆ..?

ಪ್ರಿಯಾಂಕ್‌ ಖರ್ಗೆ 2013ರಲ್ಲಿ ಕಲಬುರಗಿಯ ಚಿತ್ತಾಪುರ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಆದರೂ ಐಟಿ ಬಿಟಿ ಸಚಿವರಾಗಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು. 2018ರಲ್ಲಿ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದಾಗ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕೆಲಸ ಮಾಡಿದ್ದರು. ಇದೀಗ 3ನೇ ಬಾರಿಗೆ ಶಾಸಕರಾಗಿರುವ ಪ್ರಿಯಾಂಕ್‌ ಖರ್ಗೆ ಗೃಹ ಸಚಿವರಾಗಲಿ ಎನ್ನುವುದು ಬಹುತೇಕ ಜನರ ಅಭಿಪ್ರಾಯ. ಬಿಜೆಪಿ ನಾಯಕರಿಗೆ ಖಡಕ್‌ ಉತ್ತರ ನೀಡುವ ಪ್ರಿಯಾಂಕ್‌ ಖರ್ಗೆ, ಅಮೆರಿಕದಲ್ಲಿ ಉತ್ತಮ ವಿದ್ಯಭ್ಯಾಸ ಪಡೆದಿದ್ದು ಕಾನೂನು ಜ್ಞಾನ ಹೊಂದಿದ್ದಾರೆ. ಹೀಗಾಗಿ ಗೃಹ ಖಾತೆ ಪಡೆದರೆ ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಇರಲಿದೆ ಎನ್ನುವ ಅಭಿಪ್ರಾಯ ಕೇಳಿ ಬರ್ತಿದೆ.

ಕೃಷ್ಣಮಣಿ

Tags: BangaloreBJPMallikarjuna KhargePriyank Khargeಕಾಂಗ್ರೆಸ್​ಪ್ರಿಯಾಂಕ್​ ಖರ್ಗೆಬಿಜೆಪಿಬೆಂಗಳೂರುಮಲ್ಲಿಕಾರ್ಜುನ ಖರ್ಗೆ
Previous Post

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ ಪ್ರವೀಣ್​ ನೆಟ್ಟಾರು ಪತ್ನಿ ಕೆಲಸಕ್ಕೆ ಕೊಕ್​​

Next Post

ಅದೃಷ್ಟಕ್ಕೆ ಖಾದರ್‌‌ಗೆ ಸ್ಪೀಕರ್‌.. ಸ್ಪೀಕರ್‌ ಬಿಟ್ಟು ಕೆಟ್ಟಿದ್ದು ಯಾರು..?

Related Posts

Top Story

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

by ಪ್ರತಿಧ್ವನಿ
July 1, 2025
0

ನಾಯಕತ್ವ ಬದಲಾವಣೆಯ ನಿರ್ಧಾರವು ಪಕ್ಷದ ಹೈಕಮಾಂಡ್‌ ಕೈಯಲ್ಲಿ ಇರುತ್ತದೆ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಭೇಟಿ ನೀಡಿದ ನಂತರ ಈ ಊಹಾಪೋಹ ಬಲಗೊಂಡಿದೆ. ಡಿ.ಕೆ.ಶಿವಕುಮಾರ್...

Read moreDetails

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025

DK Shivakumar: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್

June 30, 2025

Golder Star Ganesh: ವಿಶೇಷ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದ ಗೋಲ್ಡನ್ ಸ್ಟಾರ್ .

June 30, 2025
Next Post
ಅದೃಷ್ಟಕ್ಕೆ ಖಾದರ್‌‌ಗೆ ಸ್ಪೀಕರ್‌.. ಸ್ಪೀಕರ್‌ ಬಿಟ್ಟು ಕೆಟ್ಟಿದ್ದು ಯಾರು..?

ಅದೃಷ್ಟಕ್ಕೆ ಖಾದರ್‌‌ಗೆ ಸ್ಪೀಕರ್‌.. ಸ್ಪೀಕರ್‌ ಬಿಟ್ಟು ಕೆಟ್ಟಿದ್ದು ಯಾರು..?

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada