• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮದರಸಾ ಶಿಕ್ಷಣಕ್ಕೆ ಕೈ ಹಾಕಿದ ಶಿಕ್ಷಣ ಇಲಾಖೆ : ರಾಜ್ಯದ ಮದರಸಾಗಳ ನಿಯಂತ್ರಣಕ್ಕೆ ಶೀಘ್ರವೇ ಮಂಡಳಿ ಸ್ಥಾಪನೆ

ಪ್ರತಿಧ್ವನಿ by ಪ್ರತಿಧ್ವನಿ
August 27, 2022
in ಕರ್ನಾಟಕ
0
ಮದರಸಾ ಶಿಕ್ಷಣಕ್ಕೆ ಕೈ ಹಾಕಿದ ಶಿಕ್ಷಣ ಇಲಾಖೆ : ರಾಜ್ಯದ ಮದರಸಾಗಳ ನಿಯಂತ್ರಣಕ್ಕೆ ಶೀಘ್ರವೇ ಮಂಡಳಿ ಸ್ಥಾಪನೆ
Share on WhatsAppShare on FacebookShare on Telegram

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಆಯಿತು. ಇದೀಗ ಮದರಸಾಗಳಿಗೆ ಮೂಗುದಾರ ಹಾಕಲು ಶಿಕ್ಷಣ ಇಲಾಖೆ ಮುಂದಾಗಿದೆ. ಆಶ್ಚರ್ಯ ಎಂದ್ರೆ ಮದರಸಾ ವ್ಯಾಪ್ತಿ ಬರುವ ವಕ್ಫ್ ಬೋರ್ಡ್ ಗೆ ಈ ಬಗ್ಗೆ ಒಂದಿಂಚೂ ಮಾಹಿತಿಯೇ ಇಲ್ಲ. ಇದು ಶಿಕ್ಷಣ ಇಲಾಖೆ ವರ್ಸಸ್ ವಕ್ಫ್ ಬೋರ್ಡ್ ಮಧ್ಯೆ ಜಟಾಪಟಿ ಅವಕಾಶ ಮಾಡಿಕೊಟ್ಟಿದೆ.

ADVERTISEMENT

ಮದರಸ ಶಿಕ್ಷಣ ಮಂಡಳಿ ಮಾಡಲು ಮುಂದಾದ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಮದರಸಗಳ ನಿಯಂತ್ರಣಕ್ಕೆ ಮಂಡಳಿ ರಚಿಸಲು ಸರ್ಕಾರ ಮುಂದಾಗಿದೆ. ಉತ್ತರ ಪ್ರದೇಶದ ಈ ಮಾದರಿಯನ್ನು ರಾಜ್ಯದಲ್ಲಿ ಪಾಲಿಸುತ್ತಿದ್ಯಾ ಎಂಬ ಅನುಮಾನ ಕಾಡುತ್ತಿದೆ. ಯಾಕಂದ್ರೆ ಈಗಾಗಲೇ ಉತ್ತರ ಪ್ರದೇಶ ಹಾಗೂ ಉತ್ತಾರಖಂಡದಲ್ಲಿ ಮದರಸಾಗಳಿಗೆ ಮಂಡಳಿ ಸ್ಥಾಪನೆ ಮಾಡಲಾಗಿದೆ. ಇವುಗಳಿಂದಲೇ ಮುಸ್ಲಿಂ ಧಾರ್ಮಿಕ ಶಿಕ್ಷಣ ಕೇಂದ್ರಗಳನ್ನು ನಿಯಂತ್ರಿಸಲಾಗ್ತಿದೆ. ಶೈಕ್ಷಣಿಕ ಚಟುವಟಿಕೆ ಬದಲಾವಣೆ, ಪಠ್ಯಕ್ರಮ ಪರಿಷ್ಕರಣೆ ಇತ್ಯಾದಿ ಬದಲಾವಣೆಗಳ ಕುರಿತು ಮಂಡಳಿಯೇ ನಿರ್ಧರಿಸುತ್ತಿದೆ. ಮದರಾಸಗಳಲ್ಲಿ ಯಾವೆಲ್ಲ ನಿಮಯಗಳನ್ನು ಪಾಲಿಸಬೇಕು..? ಮಕ್ಕಳಿಗೆ ಯಾವ ಮಾದರಿಯಲ್ಲಿ ಪಾಠ ಮಾಡಬೇಕು..? ಮುಸ್ಲಿಂ ಧಾರ್ಮಿಕ ಪಾಠಗಳ ಜೊತೆಯಲ್ಲೇ ಬೇರೆ ಯಾವೆಲ್ಲಾ ಪಾಠಗಳನ್ನು ಹೇಳಿಕೊಡಬೇಕು..? ಪ್ರಸ್ತುತ ಜಗತ್ತಿನ ಕಾಂಪಿಟೇಶನ್‌ಗೆ ಒಗ್ಗುವಂತೆ ಹೇಗೆ ಸಿದ್ದಪಡಿಸಬೇಕು..? ಈ ರೀತಿಯ ಹಲವಾರು ಅಂಶಗಳ ಕುರಿತ ನಿರ್ಧರಿಸಲು ಸಮಿತಿ ರಚನೆಗೆ ಸರ್ಕಾರ ಮುಂದಾಗಿದೆ. 

ಮದರಸಾಗೆ ಮೂಗುದಾರ ಹಾಕಲು ಮುಂದಾದ ಶಿಕ್ಷಣ ಇಲಾಖೆಯ ಕ್ರಮಕ್ಕೆ ವಕ್ಫ್ ಬೋರ್ಡ್ ಆಕ್ರೋಶ

ರಾಜ್ಯದಲ್ಲಿ ವಕ್ಫ್ ಬೋರ್ಡ್ ವ್ಯಾಪ್ತಿಗೆ ಸಾವಿರಕ್ಕೂ ಹೆಚ್ಚು ಅನುದಾನಿತ ಮದರಸಾಗಳಿವೆ.‌ ಇವುಗಳಿಗೆ ಸರಕಾರವೇ ಅನುದಾನ ನೀಡುತ್ತೆ. ಇನ್ನೂ ಮೂರು ಸಾವಿರಕ್ಕೂ ಹೆಚ್ಚು ಅನುದಾನ ರಹಿತ ಮದರಸಾಗಳಿವೆ. ಇವುಗಳಿಗೆ ಮುಸ್ಲಿಂ ಸಮುದಾಯ ಅನುದಾನ ನೀಡುತ್ತೆ‌. ಇದೀಗ ವಕ್ಫ್ ಅಧೀನದಲ್ಲಿರುವ ಮದರಸಾದ ಮೇಲೆ ಸರ್ಕಾರದ ಕಣ್ಣು ಬಿದ್ದಿದೆ. ಮದರಸಾಗೆ ಮಂಡಳಿ ರಚನೆ ಬಗ್ಗೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. 15 ದಿನದಲ್ಲಿ ವರದಿ ತರಿಸಿಕೊಳ್ಳುವಂತೆ ಸೂಚನೆ ನೀಡಿದೆ. ಆದರೆ ಮದರಸಾ ವ್ಯಾಪ್ತಿ ಒಳಪಡುವ ವಕ್ಫ್ ಬೋರ್ಡ್ ಗೆ ಈ ಬಗ್ಗೆ ಮಾಹಿತಿಯೇ ಇಲ್ಲ.‌ ಸರ್ಕಾರದ ನಿರ್ಧಾರಕ್ಕೆ ವಕ್ಫ್ ಬೋರ್ಡ್ ಅಸಮಾಧಾನ ವ್ಯಕ್ತಪಡಿಸುತ್ತಿದೆ‌. ಮದರಸಾ ಇರೋದು ವಕ್ಫ್ ಬೋರ್ಡ್ ಅಧೀನದಲ್ಲಿ. ಸರ್ಕಾರದ ಸಭೆ, ನಿರ್ಧಾರ ಯಾವುದು ನಮ್ಮ ಗಮನಕ್ಕೆ ಬಂದಿಲ್ಲ. ಗುಣಮಟ್ಟದ ಶಿಕ್ಷಣ, ಅನುದಾನ ಕೊಡುವುದಾದರೆ ಅಭ್ಯಂತರವಿಲ್ಲ.‌ ಆದರೆ ನಮಗೊಂದು ಮಾಹಿತಿ ನೀಡಿಲ್ಲ ಎಂದು  ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸ‌ಅದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಸಚಿವ ಬಿಸಿ ನಾಗೇಶ್ ವಾದವೇನು.!?

ಮದರಸಾದ ಶಿಕ್ಷಣ ಬಗ್ಗೆ ಸರ್ಕಾರ ಗಮನ ಕೊಡ್ತಿಲ್ಲ. ಆ ಸಮುದಾಯದ ಪೊಷಕರು ಮಾಹಿತಿ ನೀಡಿದ್ದಾರೆ. ಎಲ್ಲರಂತೆ‌ ನಮ್ಮ ಮಕ್ಕಳು ಉತ್ತಮ ಶಿಕ್ದಣ ಸಿಗಬೇಕು. ಮದರಸಾದಲ್ಲಿ ಉತ್ತಮ‌ ಗುಣಮಟ್ಟದ ಶಿಕ್ಷಣ ಸಿಗ್ತಿಲ್ಲ. ಸ್ಪರ್ಧಾತ್ಮಕ ಯುಗದಲ್ಲಿ ಆ ಮಕ್ಕಳು ಕಾಂಪಿಟೇಷನ್ ಮಾಡಬೇಕಿದೆ.‌ಮದರಸಾದಲ್ಲಿ ಮಕ್ಕಳು ಓದುವ ಪಠ್ಯದ ಬದಲಾವಣೆ ಬಗ್ಗೆ ಚರ್ಚೆಯಾಗಲಿದೆ. ಸಭೆಯಲ್ಲಿ ಮಂಡಳಿ ರಚನೆ ಕುರಿತು ನಿರ್ಧಾರ ಆಗಲಿದೆ. ಬೇರೆ ರಾಜ್ಯಗಳ ನೋಡಿ ನಾವು ಮಂಡಳಿ ನಿರ್ಧಾರ ತೆಗೆದುಕೊಂಡಿಲ್ಲ. 

ವಕ್ಫ್ ಬೋರ್ಡ್ ವಾದವೇನು.!?

ಮದರಸಾದಲ್ಲಿ ದೇಶದ್ರೋಹದ ಪಾಠ ಮಾಡಲ್ಲ. ನಾವು ಕೂಡ ಮದರಸಾದ ವಿದ್ಯಾರ್ಥಿಯೇ. ಹೀಗೆ ವಕ್ಫ್ ಬೋರ್ಡ್ ಅಧ್ಯಕ್ಷ ತಿರುಗೇಟು ನೀಡಿದ್ದಾರೆ. ಮುಂದುವರೆದು, ಮದರಸಾದಲ್ಲಿ ದೇಶಪ್ರೇಮದ ಭಾವೈಕ್ಯತೆಯ ಸಹಬಾಳ್ವೆಯ ಪಾಠ ಮಾಡಲಾಗುತ್ತೆ. ಯಾವುದೇ ಭಯೋತ್ಪಾದನಾ ಪ್ರೇರಿತ ಘಟನೆ ನಡೆಯೋದಿಲ್ಲ.‌ ಒಟ್ಟಾರೆ ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಮದರಸಾ ಶಿಕ್ಷಣ ಮಂಡಳಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಆದರೆ ಇದಕ್ಕೆ ವಕ್ಫ್ ಬೋರ್ಡ್ ಅಸಮಾಧಾನವಿದ್ದು, ಶಿಕ್ಷಣ ಇಲಾಖೆ ವರ್ಸಸ್ ವಕ್ಫ್ ಬೋರ್ಡ್ ಜಟಾಪಟಿ ಎಲ್ಲಿಗೆ ಬಂದು ನಿಲ್ಲುತ್ತೋ ಎಂದು ಕಾದು ನೋಡಬೇಕಿದೆ. 

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಶಿಕ್ಷಕರಿಗೆ ಗುಡ್‌ ನ್ಯೂಸ್‌ : ಶೀಘ್ರದಲ್ಲೇ ಆನ್‌ಲೈನ್‌ ಅರ್ಜಿ ಆರಂಭ!

Next Post

ಸೋನಾಲಿ ಫೋಗಟ್ ಹತ್ಯೆ; ಡ್ರಗ್ ಪೆಡ್ಲರ್, ರೆಸ್ಟೋರೆಂಟ್‌ ಮಾಲೀಕನ ಬಂಧನ

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post
ಸೋನಾಲಿ ಫೋಗಟ್ ಹತ್ಯೆ; ಡ್ರಗ್ ಪೆಡ್ಲರ್, ರೆಸ್ಟೋರೆಂಟ್‌ ಮಾಲೀಕನ ಬಂಧನ

ಸೋನಾಲಿ ಫೋಗಟ್ ಹತ್ಯೆ; ಡ್ರಗ್ ಪೆಡ್ಲರ್, ರೆಸ್ಟೋರೆಂಟ್‌ ಮಾಲೀಕನ ಬಂಧನ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada