ತುಮಕೂರು: ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಮುಗಿಸಿ ಆಟವಾಡುತ್ತಿದ್ದಾಗ ಕಂಬದಿಂದ ವಿದ್ಯುತ್ ಪ್ರವಹಿಸಿ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಚ್.ಕಾವಲ್ ಗ್ರಾಮದಲ್ಲಿ ನಡೆದಿದೆ.ಹೇಮಂತ್(8) ಮೃತ ವಿದ್ಯಾರ್ಥಿ. ಆಟವಾಡುವಾಗ ವಿದ್ಯುತ್ ಕಂಬದಿಂದ ಗಯಾ ವೈರ್ಗೆ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.
ಕೆಇಬಿ ಇಲಾಖೆ ನಿರ್ಲಕ್ಷ್ಯ, ಬೇಜಾವ್ದಾರಿಗೆ ಹೇಮಂತ್ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.ಈ ಘಟನೆ ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮನೆಗೆ ಬಂದ ಮಗನ ಮೃತ ಶರೀರ ಕಂಡು ಪೋಷಕರ ಅಕ್ರಂದನ ಮುಗಿಲು ಮುಟ್ಟಿತು.