ಮೈಸೂರು: ಸಾಲ ವಾಪಸ್ಸು ಕೊಡಲಿಲ್ಲ ಎಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ವಿಶ್ವ(34), ಸುಷ್ಮಾ(28) ಆತ್ಮಹತ್ಯೆಗೆ ಶರಣಾದ ದಂಪತಿಯಾಗಿದ್ದು, ಸಾಯುವ ಮುನ್ನ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
![](https://pratidhvani.com/wp-content/uploads/2024/02/1.png)
ಶಿವು ಎಂಬಾತನಿಗೆ ಬೇರೊಬ್ಬರಿಂದ ಸುಮಾರು 5 ಲಕ್ಷ ರೂ. ಸಾಲ ಕೊಡಿಸಿದ್ದ ವಿಶ್ವ. ಆದರೆ ಪಡೆದ ಸಾಲವನ್ನು ಮರು ಪಾವತಿ ಮಾಡಿರಲಿಲ್ಲ. ಈ ನಡುವೆ ಸಾಲ ಕೊಟ್ಟವರು ಪಡೆದ
ಸಾಲ ಹಿಂದಿರುಗಿಸುವಂತೆ ಕೇಳುತ್ತಿದ್ದರು. ಆದರೆ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಿಶ್ವ ದಂಪತಿಗೆ ಈ ಹಣ ಹೊಂದಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಚೋರನಹಳ್ಳಿ ರಾಜಣ್ಣ ಎಂಬಾತನಿಗೆ ವಿಶ್ವ ದಂಪತಿ ತಮ್ಮ ಚಿನ್ನಾಭರಣ ಕೊಟ್ಟಿದ್ದು, ಇದನ್ನು ವಾಪಸ್ಸು ಕೊಡದೆ ರಾಜಣ್ಣ ಸಹ ಸತಾಯಿಸಿದ್ದರು ಎನ್ನಲಾಗಿದೆ. ಇವೆಲ್ಲದರಿಂದ ಮನನೊಂದ ವಿಶ್ವ ದಂಪತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಅಪ್ಲೋಡ್ ಮಾಡಿ ಆತ್ಮಹತ್ಯೆಗೆ ಶರಣರಾಗಿದ್ದಾರೆ. ಈ ಸಂಬಂಧ
ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#Crime #Mysore #Police #SucideCase