ಉತ್ತರಪ್ರದೇಶ;ಉತ್ತರಾಖಂಡ್ ನ ಜೋಶಿಮಠ ಪ್ರದೇಶದಲ್ಲಿ ಭೂಮಿ ಕುಸಿಯುವ ಭೀತಿ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿಯೂ ಇಂತಹದ್ದೇ ಬೆಳವಣಿಗೆ ಕಂಡು ಬಂದಿದೆ. ಅಲಿಘಡ್ ನ ಕನ್ವರಿಗಂಜ್ ಪ್ರದೇಶದಲ್ಲಿ ಕೆಲವು ಮನೆಗಳಲ್ಲಿ ಹಠಾತ್ ಬಿರುಕುಗಳು ಉಂಟಾಗಿದ್ದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಕಳೆದ ಹಲವು ದಿನಗಳಿಂದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು,ಇದರಿಂದ ಭಯಭೀತರಾಗಿದ್ದೇವೆ. ಹೀಗಾಗಿ ನಾವು ನಗರಸಭೆ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದೇವೆ.ಆದರೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ರಾಕೇಶ್ ಕುಮಾರ್ ಯಾದವ್ ಪ್ರತಿಕ್ರಿಯಿಸಿ ಸಮಸ್ಯೆಯನ್ನು ಅವಲೋಕಿಸಿ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಅಸೂಯೆಯಿಂದ ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್. ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ. ಕೇಂದ್ರ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಪಡೆಯಲಿ, ನಮ್ಮ ಅಭ್ಯಂತರವಿಲ್ಲ. ಯಾವ...
Read moreDetails







