• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊಲ್ಹಾಪುರದಿಂದ 225 ಕಿಲೋಮೀಟರ್‌ ನಡೆದು ತನ್ನ ಮನೆಯನ್ನು ತಲುಪಿದ ನಾಯಿ

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Top Story, ಇದೀಗ, ವಿಶೇಷ
0
ಕೊಲ್ಹಾಪುರದಿಂದ 225 ಕಿಲೋಮೀಟರ್‌ ನಡೆದು ತನ್ನ ಮನೆಯನ್ನು ತಲುಪಿದ ನಾಯಿ
Share on WhatsAppShare on FacebookShare on Telegram

ಕೊಲ್ಹಾಪುರ (ಮಹಾರಾಷ್ಟ್ರ): ವಿಠ್ಠಲನ ದರ್ಶನಕ್ಕಾಗಿ ಪಂಢರಪುರಕ್ಕೆ ಕುಟುಂಬ ಸಮೇತ ಬಂದಿದ್ದ ‘ಮಹಾರಾಜ್’ ಎಂಬ ಸಾಕು ನಾಯಿ ದಾರಿ ತಪ್ಪಿ ಒಂಟಿಯಾಗಿ 225 ಕಿಲೋಮೀಟರ್ ನಡೆದು ಕೊಲ್ಹಾಪುರದ ಮನೆಗೆ ತಲುಪಿದೆ.

ADVERTISEMENT

ಈ ನಾಯಿಗೆ ಹಾರ ಹಾಕಿ ಪೂಜಿಸುತ್ತಿರುವ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮಹಾರಾಜ ನಾಯಿ ತನ್ನ ಮಾಲೀಕನ ಕುಟುಂಬದ ಜತೆ ಕೊಲ್ಲಾಪುರದ ನಾನಿಬಾಯಿ ಚಿಖ್ಲಿಯಿಂದ ಪಂಢರಪುರಕ್ಕೆ ಹೋಗಿತ್ತು. ಆದರೆ ಆಕಸ್ಮಿಕವಾಗಿ ಕುಟುಂಬ ಸದಸ್ಯರಿಂದ ಬೇರ್ಪಟ್ಟಿತ್ತು. ಅಚ್ಚರಿ ಎಂದರೆ ಎರಡು ದಿನಗಳ ಹಿಂದೆ ನಾಯಿ ಒಂಟಿಯಾಗಿ ಮನೆಗೆ ಮರಳಿದೆ.

ಮಹಾರಾಜ ಮಾಲೀಕ ಜ್ಞಾನೇಶ್ವರ್ ಕುಂಬಾರ್ ಅವರು ಕುಟುಂಬದೊಂದಿಗೆ ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವ ನಿಪಾನಿ ಬಳಿಯ ಯಮಗರ್ನಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಕಳೆದ 30 ವರ್ಷಗಳಿಂದ ಈ ಕುಟುಂಬ ಪ್ರತಿ ವರ್ಷ ಪಂಢರಪುರಕ್ಕೆ ನಡೆದುಕೊಂಡು ಬರುತ್ತಿದೆ. ಅವರ ಪ್ರಯಾಣದಲ್ಲಿ ನಾಯಿ ಕೂಡ ಕುಟುಂಬದೊಂದಿಗೆ ಬಂದಿದೆ.
ಈ ವರ್ಷವೂ ಜುಲೈ 6 ರಿಂದ 14 ರ ನಡುವೆ ಗ್ರಾಮದಿಂದ ಕಾಲ್ನಡಿಗೆಯಲ್ಲಿ ಯಾತ್ರೆ ಮಾಡಲಾಯಿತು. ಕುಟುಂಬ ಸದಸ್ಯರೊಂದಿಗೆ ಮಹಾರಾಜ ಪಂಢರಪುರಕ್ಕೆ 225 ಕಿ.ಮೀ. ನಡೆದು ಹೋಗಿತ್ತು. ಆದರೆ, ಈ ಸಂದರ್ಭದಲ್ಲಿ ನೆರೆದಿದ್ದ ಅಪಾರ ಜನಸ್ತೋಮದಲ್ಲಿ ನಾಯಿ ದಾರಿ ತಪ್ಪಿತು.


ಕುಂಬಾರ್ ಕುಟುಂಬವು ತಮ್ಮ ಪ್ರೀತಿಯ ನಾಯಿಯನ್ನು ಹುಡುಕಲು ಪ್ರಯತ್ನಿಸಿತು ಆದರೆ ಎರಡು ದಿನಗಳ ನಂತರ ಬರಿಗೈಯಲ್ಲಿ ಮನೆಗೆ ಮರಳಬೇಕಾಯಿತು. ಈ ಘಟನೆ ಗ್ರಾಮಸ್ಥರೊಂದಿಗೆ ಕುಟುಂಬವನ್ನು ತೀವ್ರ ದುಃಖಕ್ಕೆ ತಳ್ಳಿತ್ತು. ಗ್ರಾಮಸ್ಥರು ಸಾಮಾಜಿಕ ಮಾಧ್ಯಮದಲ್ಲಿ ನಾಯಿಯ ಬಗ್ಗೆ ಮಾಹಿತಿಯನ್ನು ಪೋಸ್ಟ್ ಮಾಡಿದ್ದಾರೆ ಮತ್ತು ಎಲ್ಲಿಯಾದರೂ ಮಹಾರಾಜನನ್ನು ಕಂಡರೆ ಮಾಹಿತಿ ನೀಡುವಂತೆ ಜನರಿಗೆ ಮನವಿ ಮಾಡಿದ್ದಾರೆ.

ಒಂದು ವಾರ ಪೂರ್ತಿ ನಾಯಿಗಾಗಿ ಹುಡುಕಾಟ ಮುಂದುವರೆಯಿತು. ಕುಟುಂಬವು ನಾಯಿಯನ್ನು ಹುಡುಕುವ ಭರವಸೆಯನ್ನು ಕಳೆದುಕೊಳ್ಳುತ್ತಿರುವಾಗ, ಮಹಾರಾಜ ಏಕಾಂಗಿಯಾಗಿ ಹಳ್ಳಿಗೆ ಮರಳಿದೆ.. ತಮ್ಮ ಪ್ರೀತಿಯ ನಾಯಿ ಒಂಟಿಯಾಗಿ ಮನೆಗೆ ಬಂದಿರುವುದು ಕಂಡು ಕುಂಬಾರ ಕುಟುಂಬದ ಸಂತಸಕ್ಕೆ ಮಿತಿಯೇ ಇರಲಿಲ್ಲ. ನಂತರ ಗ್ರಾಮಸ್ಥರು ಅವರ ಕೊರಳಿಗೆ ಹಾರ ಹಾಕಿ ಮೆರವಣಿಗೆ ನಡೆಸಿದರು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾರೆ.

ಪಶುವೈದ್ಯಾಧಿಕಾರಿ ಡಾ.ಸ್ಯಾಮ್ ಲುಡ್ರಿಕ್ ಮಾತನಾಡಿ, “ಸಾಕುಪ್ರಾಣಿಗಳು ತಾವು ಸಂಚರಿಸುವ ಮಾರ್ಗಗಳಲ್ಲಿ ಮಲಮೂತ್ರವನ್ನು ಬಿಟ್ಟು ಮರಳಲು ವಾಸನೆ ಬಳಸುತ್ತವೆ. ಈ ನಾಯಿಯು ನಾಲ್ಕಾರು ವಾಹನದಲ್ಲಿ ಪಂಢರಪುರಕ್ಕೆ ಹೋಗಿದ್ದರೆ ಹಿಂತಿರುಗಲು ಸಾಧ್ಯವಾಗುತ್ತಿರಲಿಲ್ಲ. ಅದು ಬಿಟ್ಟುಹೋದ ಮಲವಿಸರ್ಜನೆಯು ಅದಕ್ಕೆ ಅದೇ ಸ್ಥಳಕ್ಕೆ ಮರಳಲು ಸಹಾಯ ಮಾಡಿತು.” ಎಂದರು.

Tags: KolhapurKolhapur Mahalakshmi TempleLord Vittal TempleMaharastraMissing DogPandarapur
Previous Post

ನಾಯಿ ಮಾಂಸ ಪ್ರಕರಣದಲ್ಲಿ ಅಬ್ದುಲ್ ರಜಾಕ್ ಗೆ ನೋಟಿಸ್ ! ವಿಚಾರಣೆಗೆ ಹಾಜರಾಗುವಂತೆ ಬುಲಾವ್ ! 

Next Post

ಒಡಿಶಾ ಸರ್ಕಾರದ ಅಗ್ನಿವೀರರಿಗೆ ಉದ್ಯೋಗ ಮೀಸಲಾತಿಗೆ ಕಾಂಗ್ರೆಸ್‌ ತೀವ್ರ ವಿರೋಧ

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post

ಒಡಿಶಾ ಸರ್ಕಾರದ ಅಗ್ನಿವೀರರಿಗೆ ಉದ್ಯೋಗ ಮೀಸಲಾತಿಗೆ ಕಾಂಗ್ರೆಸ್‌ ತೀವ್ರ ವಿರೋಧ

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada