ರಾಜ್ಯದಲ್ಲಿ ಹಿಜಾಬ್ ವಿವಾದ ಹೊಸ ಹೊಸ ಸ್ವರೂಪಗಳನ್ನು ಪಡೆದುಕೊಳ್ಳುತ್ತಿದೆ. ದೇಶಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸೋಮವಾರ ಮತ್ತೊಂದು ಬೆಳವಣಿಗೆ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿಗೆ ಇಂದು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಪ್ರಸಂಗ ನಡೆದಿದೆ.
ಹಾಗೆಯೇ ಸ್ಥಳೀಯ ಬಸ್ರೂರು ಶಾರದಾ ಕಾಲೇಜಿನಲ್ಲೂ ಇದೇ ಬೆಳವಣಿಗೆ ನಡೆದಿದ್ದು, ಅಲ್ಲೂ ಕೂಡ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ.

ಕುಂದಾಪುರದ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲುಧರಿಸಿ ಹಳೆ ಬಸ್ ನಿಲ್ದಾಣದಿಂದ ಕಾಲೇಜಿನವರೆಗೂ ಜಾಥಾ ನಡೆಸಿದರು. ನಂತರದಲ್ಲಿ ಪ್ರಾಂಶುಪಾಲರ ಸೂಚನೆ ಮೇರೆಗೆ ಕೇಸರಿಶಾಲು ತೆಗೆದಿಟ್ಟು ವಿದ್ಯಾರ್ಥಿಗಳು ಕಾಲೇಜು ಪ್ರವೇಶಿಸಿದ್ದಾರೆ.
ಹಾಗೆಯೇ ಸ್ಥಳೀಯ ಆರ್ಎನ್ ಶೆಟ್ಟಿ ಕಾಲೇಜು ಆಡಳಿತ ಮಂಡಳಿ ಕಾಲೇಜಿಗೆ ಇಂದು ರಜೆ ಘೋಷಿಸಿದೆ.