• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ:ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

ಪ್ರತಿಧ್ವನಿ by ಪ್ರತಿಧ್ವನಿ
October 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಅಲ್ಲಿಸಿದ್ದಾರೆ.

ADVERTISEMENT

ಕೋಟ್ಯಾಂತರ ಕನ್ನಡಿಗರ ಸಾಕ್ಷಿಯಾಗಿ ತಾಯಿ ಚಾಮುಂಡಿಗೆ ಪುಷ್ಪಾರ್ಚನೆ ಅರ್ಪಿಸಿದ ಬಳಿಕ ಮುಖ್ಯಮಂತ್ರಿಗಳು ವಿಜ್ರಂಭಣೆಯ ದಸರಾ ವೈಭವವನ್ನು ಮೆಚ್ಚಿಕೊಂಡು ಜಿಲ್ಲಾಡಳಿತಕ್ಕೆ ಅಭಿನಂದಿಸಿದರು.ಅಂಬಾರಿ ಏರಿದ ತಾಯಿ ಚಾಮುಂಡಿಗೆ ಅತಿ ಹೆಚ್ಚು ಬಾರಿ ಮುಖ್ಯಮಂತ್ರಿಯಾಗಿ ಪುಷ್ಪಾರ್ಚನೆ ಅರ್ಪಿಸಿದ ಭಾಗ್ಯ ತಮ್ಮ ಪಾಲಿಗೆ ಒದಗಿ ಬಂದಿದ್ದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಕಳೆದ ವರ್ಷ ಭೀಕರ ಬರಗಾಲದ ಕಾರಣದಿಂದ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದ ಸರಳ ದಸರಾವನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿ, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮ ಬೆಳೆ ಆಗುವ ಲಕ್ಷಣಗಳೂ ಸ್ಪಷ್ಟವಾಗಿವೆ. ಸಾಲದ್ದಕ್ಕೆ ಈ ಬಾರಿ ಜಿಎಸ್ ಟಿ ಮತ್ತು ತೆರಿಗೆ ಸಂಗ್ರಹವೂ ನಿರಾಸೆ ಮೂಡಿಸಿಲ್ಲ. ಇದು ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿ ಏರುಗತಿಯಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ. ಎಲ್ಲವೂ ಒಟ್ಟಾಗಿ ದಸರಾ ಸಂಭ್ರಮವನ್ನು ಹೆಚ್ಚಿಸಿದೆ ಎನ್ನುವ ಸಂತೋಷವನ್ನೂ ವ್ಯಕ್ತಪಡಿಸಿದ್ದಾರೆ.

ದಸರಾ ಪೂರ್ವಭಾವಿ ಸಭೆಗಳಲ್ಲಿ ಕೊಟ್ಟ ಸೂಚನೆ ಮತ್ತು ತೆಗೆದುಕೊಂಡ ನಿರ್ಣಯಗಳನ್ನು ಜಿಲ್ಲಾಡಳಿತ ಶಿಸ್ತುಬದ್ದವಾಗಿ ಜಾರಿಗೊಳಿಸಿದೆ. ಇದೇ ಮೊದಲ ಬಾರಿಗೆ ಯುವ ದಸರಾವನ್ನು ಚಾಮುಂಡಿ ತಪ್ಪಲಿನ ಉತ್ತನಹಳ್ಳಿಯಲ್ಲಿ ಸಂಘಟಿಸಿ ಲಕ್ಷ ಲಕ್ಷ ಮಂದಿ ಸಂಭ್ರಮಿಸಿದರು. ಶಾಸ್ತ್ರೀಯ ಸಂಗೀತ ಪ್ರಕಾರಗಳಿಂದ, ಸಮಕಾಲೀನ ಸಂಗೀತವನ್ನೂ, ಶಾಸ್ತ್ರೀಯ ನೃತ್ಯದಿಂದ ಸಮಕಾಲೀನ ನೃತ್ಯ ಪ್ರಕಾರಗಳು, 20 ಕ್ಕೂ ಹೆಚ್ಚು ತಂಡಗಳು, ನೂರಾರು ಕಲಾವಿದರು ಯುವ ದಸರಾ ಸಡಗರವನ್ನು ಹೆಚ್ಚಿಸಿದ್ದಾರೆ.

ಹಾಗೆಯೇ ದಸರಾದ ಮುಖ್ಯ ಸಾಂಸ್ಕೃತಿಕ ವೇದಿಕೆಯಲ್ಲೂ ಸಾಹಿತ್ಯ, ಸಂಗೀತ, ಕಲೆ, ನೃತ್ಯಗಳು ಮೇಳೈಸಿ ಖುಷಿ ಕೊಟ್ಟಿದೆ.ಒಟ್ಟಾರೆಯಾಗಿ ದಸರಾ ಉದ್ಘಾಟನೆಯಿಂದ ಅಂಬಾರಿಯ ತಾಯಿ ಚಾಮುಂಡಿಗೆ ಪುಷ್ಪಾರ್ಚನೆವರೆಗೂ ಯಾವುದೇ ಅಡಚಣೆಗಳು ಇಲ್ಲದಂತೆ ಒಂಬತ್ತು ದಿನಗಳ ಕಲಾ ಸಾಂಪ್ರದಾಯಿಕ ದಸರಾ ಸಂಭ್ರಮದಿಂದ ಮುಗಿದಿದೆ.

ಪಂಜಿನ ಮೆರವಣಿಗೆ ಕೂಡ ಹಳತು ಮತ್ತು ಆಧುನಿಕತೆಯ ಮಿಶ್ರಣವಾಗಿದ್ದು ಈ ಬಾರಿಯ ವಿಶೇಷ.‌ಅತ್ಯಂತ ಪುರಾತನವಾದ ಪಂಜಿನ ಬೆಳಕಿನ ಜೊತೆಗೆ ಆಕಾಶದಲ್ಲಿ ರಚಿಸಿದ ಅತ್ಯಂತ ಆಧುನಿಕವಾದ 1500 ಡ್ರೋನ್ ಗಳ ಬೆಳಕಿನ ರಂಗೋಲಿ ನೆರೆದಿದ್ದವರನ್ನು ವಿಸ್ಮಯದ ಜೊತೆಗೆ ರಂಜಿಸಿದ್ದಕ್ಕೂ ಸಿಎಂ ಜಿಲ್ಲಾಡಳಿತಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ದಸರಾ ಹೊತ್ತಲ್ಲಿ ಕಾನೂನು ಸುವ್ಯವಸ್ಥೆಗೆ ಎಲ್ಲೂ ಧಕ್ಕೆ ಆಗದಂತೆ, ಸಂಚಾರ ನಿರ್ವಹಣೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ತೋರಿಸಿದ ಸಂಯಮ, ಶ್ರಮ ಫಲ ನೀಡಿದೆ. ಅನಿವಾರ್ಯ ಕಾರಣಗಳಿಂದ, ಏಕಾ ಏಕಿ ಮೈಸೂರಿಗೆ ರಾಜ್ಯದ ಮೂಲೆ ಮೂಲೆಗಳಿಂದ, ಅಕ್ಕ‌ಪಕ್ಕದ ರಾಜ್ಯಗಳಿಂದ ಬಂದಿಳಿದ ವಾಹನಗಳ ಪ್ರವಾಹ ನಿಭಾಯಿಸಲು ಏಕಮುಖ ಸಂಚಾರ ವ್ಯವಸ್ಥೆ ಮಾಡಬೇಕಾಯಿತು. ಇದರಿಂದ ಸ್ವಲ್ಪ ಮಟ್ಟದ ಕಿರಿ ಕಿರಿ ಮೈಸೂರಿಗರಿಗೆ ಆಗಿದ್ದರೂ ಒಟ್ಟಾರೆಯಾಗಿ ಜಿಲ್ಲಾ ಪೊಲೀಸ್ ಮತ್ತು ನಗರ ಪೊಲೀಸ್ ಕಮಿಷನರೇಟ್ ನ ಶ್ರಮ ಮತ್ತು ವೃತ್ತಿಪರತೆಗೆ ನಾವು ಮೆಚ್ಚುಗೆ ಸೂಚಿಸೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಹಾಗೆಯೇ ಶುಕ್ರವಾರ ಸಂಜೆ ಅಂಬಾರಿ ಬಸ್ ನಲ್ಲಿ ನಗರ ಪ್ರದಕ್ಷಿಣೆ ಹೊರಟು ದೀಪಾಲಂಕಾರ ವೀಕ್ಷಿಸಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಭಿನ್ನ ಅನ್ನಿಸಿತು.‌ ಮತ್ತೊಬ್ಬರ ಸಂತೋಷಕ್ಕೆ ಘಾಸಿ ಮಾಡುವ ಹುಡುಗಾಟದ ತುತ್ತೂರಿಯನ್ನು, ಪೀಪಿಯನ್ನು ಈ ಬಾರಿ ಪೊಲೀಸರು ನಿಷೇಧಿಸಿದ್ದು ಒಳ್ಳೆಯದಾಯಿತು ಎನ್ನುವ ಅಭಿಪ್ರಾಯಗಳನ್ನೂ ನಗರ ಪ್ರದಕ್ಷಿಣೆ ವೇಳೆ ಹಲವರು ವ್ಯಕ್ತಪಡಿಸಿದರು. ರಾಜ್ಯದ, ಹೊರ ರಾಜ್ಯದ, ವಿದೇಶಿಯರಿಗೆ ಅಚ್ಚುಕಟ್ಟಾದ ವಸತಿ, ಆತಿಥ್ಯ ನೀಡಿ ಮೈಸೂರಿನ, ರಾಜ್ಯದ ಘನತೆ ಹೆಚ್ಚಿಸಿದ ಹೋಟೆಲ್ ಉದ್ಯಮ ಮತ್ತು ಊಟೋಪಚಾರ, ಸಂಜೆಯ ಕುರುಕ್ ತಿಂಡಿಯವರಿಗೆಲ್ಲಾ ದಸರಾದ ಸಂಭ್ರಮ ಹೆಚ್ಚಿಸಿದ್ದಾರೆ.

ದಸರಾದ ಅಂತಾರಾಷ್ಟ್ರೀಯ ಖ್ಯಾತಿಯನ್ನು ಹೆಚ್ಚಿಸುವ, ಸಾಂಪ್ರದಾಯಿಕ ಹಿರಿಮೆಯನ್ನು ವಿಸ್ತರಿಸಿದ ಜಿಲ್ಲಾಡಳಿತದ ಶ್ರಮಕ್ಕೆ ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದ್ದಾರೆ.‌

ಈ ಎಲ್ಲಾ ಸಾರ್ಥಕತೆಗೆ ಕಾರಣವಾದ ಪೌರ ಕಾರ್ಮಿಕರಿಂದ ಜಿಲ್ಲಾಧಿಕಾರಿಗಳವರೆಗೆ, ಮಾವುತರಿಂದ ಜಿಲ್ಲಾ ಮಂತ್ರಿಗಳವರೆಗೆ ಪ್ರತಿಯೊಬ್ಬರ ಶ್ರಮ, ಕರ್ತವ್ಯ ಪ್ರಜ್ಞೆ, ವೃತ್ತಿಪರತೆಗೆ ಸಾರ್ಥಕತೆ ಸಿಕ್ಕಿದೆ ಎಂದು ಭಾವಿಸುತ್ತೇನೆ.

Tags: Chief Minister appreciatedCM Siddaramaiah‌Congress PartyDCM DK ShivakumarGovernor Thawar Chand GehlotKuruk breakfastMysore Dussehra Mahotsavrangoli of 1500 drones created in the sky alongಬಿಜೆಪಿ
Previous Post

ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

Next Post

ಮಾಜಿ ಸಚಿವ ಬಾಬಾ ಸಿದ್ದಿಕ್ಕಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
Next Post

ಮಾಜಿ ಸಚಿವ ಬಾಬಾ ಸಿದ್ದಿಕ್ಕಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada