• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ ಮಾಡಿದ ಸಹಾಯಕ ಪ್ರಾಧ್ಯಪಕರ ಬಳಗ

ಪ್ರತಿಧ್ವನಿ by ಪ್ರತಿಧ್ವನಿ
September 7, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ ಮಾಡಿದ ಸಹಾಯಕ ಪ್ರಾಧ್ಯಪಕರ ಬಳಗ
Share on WhatsAppShare on FacebookShare on Telegram

ಬೆಂಗಳೂರು : ಖಾಯಂ ಸಹಾಯಕ ಪ್ರಧ್ಯಾಪಕರ ವಿಚಾರಕ್ಕೆ ಸಂಬಂಧ ಪಟ್ಟಂತೆ ಆಕಾಕ್ಷಿಂತ ಅಭ್ಯರ್ಥಿಗಳ ಬೇಡಿಕೆ ದಿನೇ ದಿನ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ಇದೀಗ ಉನ್ನತ ಶಿಕ್ಷಣ ಇಲಾಖೆಗೆ ಖಾಯಂ ಸಹಾಯಕ ಪ್ರಾಧ್ಯಾಪಕರ ಅವಶ್ಯಕತೆಯಿದೆ ಎಂಬುವುದನ್ನ ಸರ್ಕಾರಕ್ಕೆ ಮನದಟ್ಟು ಮಾಡಲು ಸಾಹಾಯಕ ಪ್ರಾಧ್ಯಕರು ಮುಂದಾಗಿದ್ದಾರೆ.  ಈ ಹಿಂದೆ ʼʼಆದಷ್ಟು ತ್ವರಿತವಾಗಿ 2021ರಲ್ಲಿ ಆರಂಭಗೊಂಡ 1242ರ ನೇಮಕಾತಿಯನ್ನುಪೂರ್ಣಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಈ ಹಿಂದೆ ಹೇಳಿದ್ದರು.

ADVERTISEMENT

ಇನ್ನು ಇಂದು ಕೂಡ ಸಚಿವರ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಬಳಗವು ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸುವಂತೆ ಮನವಿಯನ್ನ ನೀಡಿದ್ದಾರೆ.

ಈ ಅಭ್ಯರ್ಥಿಗಳ ಬಳಗವು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯೆಗೆ ಸಂಬಂಧಿಸಿದಂತೆ ಇಟ್ಟಿರುವ ಬೇಡಿಕೆಗಳ ಕುರಿತು ಮಾತನಾಡಿದ ಸಚಿವರು, ʼʼತಮಗೆಲ್ಲರಿಗೂ ಕೆಲವೇ ದಿನಗಳಲ್ಲಿ ನೇಮಕಾತಿ ಆದೇಶವನ್ನು ನೀಡುವಂತಹ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ, ನ್ಯಾಯಾಲಯ ತೀರ್ಪು ಬರುತ್ತಿದ್ದಂತೆ ಎಲ್ಲಾ ಪ್ರಕ್ರಿಯೆಯೆಗಳನ್ನು ಏಕಕಾಲದಲ್ಲಿ ಆರಂಭಿಸಲಾಗುವುದುʼʼ ಎಂಬ ಭರವಸೆಯನ್ನ ನೀಡಿದ್ದಾರೆ.

ಬಳಗವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ-2021ಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ಪೊಲೀಸ್ ಇಲಾಖೆಯ ತನಿಖಾ ವರದಿಯನ್ನು ಪರಿಶೀಲಿಸಲು ಪ್ರತ್ಯೇಕ ತ್ರಿಸದಸ್ಯ ಸಮಿತಿ ರಚಿಸಿ ಆದೇಶಿಸಿದ್ದಕ್ಕೆ ಅಭಿನಂದನೆಗಳನ್ನು ಸಲ್ಲಿಸಿತು.

ಈ ಸಂದರ್ಭದಲ್ಲಿ ಬಳದ ನಾಗಲಕ್ಷ್ಮೀ, ಜಯಶಂಕರ್,  ರಮೇಶ, ಅಶೋಕ, ಮತ್ತೀತರರು ಉಪಸ್ಥಿತರಿದ್ದರು.

ಬಳಗವು ಸಚಿವರಿಗೆ ಸಲ್ಲಿಸಿದ ಬೇಡಿಕೆಗಳು:

ದಿನಾಂಕ: 01-02-2023ರ ಕೆಕೆ/ಎಚ್.ಕೆ. ಮೀಸಲಾತಿ ಹಂಚಿಕೆಯ ಸುತ್ತೋಲೆ ಸಂಬಂಧ ಗೌರವಾನ್ವಿತ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗುತ್ತಲೇ, ಮುಂದೆ ಯಾವುದೇ ಕಾನೂನಾತ್ಮಕ ತೊಡಕುಗಳು ಉಂಟಾಗದಂತೆ ಸರ್ಕಾರದ ಕಡೆಯಿಂದಲೇ ಗೌರವಾನ್ವಿತ ಉಚ್ಛನ್ಯಾಯಾಲಯಕ್ಕೆ ಕೇವಿಯಟ್ ಸಲ್ಲಿಸಬೇಕೆಂದು ವಿನಂತಿಸಿದೆ.

ಗೌರವಾನ್ವಿತ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗುತ್ತಿದ್ದಂತೆ, (ತೀರ್ಪಿನ ಪ್ರತಿ ತಲುಪುವ ಮೊದಲು) ಅಂತಿಮ ಆಯ್ಕೆ ಪಟ್ಟಿಯ ಗೆಜೆಟ್ ಪ್ರಕ್ರಿಯೆ ಆರಂಭಿಸುವಂತೆ ಇಲಾಖೆಗೆ ಆದೇಶಿಸಬೇಕೆಂದು ಮನವಿ ಮಾಡಿದೆ.

ತ್ರಿಸದಸ್ಯ ಸಮಿತಿಯಿಂದ ವರದಿಯು ಸಲ್ಲಿಕೆಯಾಗುವಷ್ಟರಲ್ಲಿ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಂಬಂಧ ಬಾಕಿ ಉಳಿದಿರುವ ಗೆಜೆಟ್, ಪೊಲೀಸ್, ಮೆಡಿಕಲ್ ವೆರಿಫಿಕೇಶನ್, ನೈಜತಾ ಪ್ರಮಾಣ ಪತ್ರದಂತಹ ಪ್ರಕ್ರಿಯೆಗಳು ಪೂರ್ಣವಾಗುವಂತೆ ಮಾಡಬೇಕು. ವರದಿ ಸಲ್ಲಿಕೆಯಾದ ನಂತರವೇ ನೇಮಕಾತಿ ಆದೇಶವನ್ನು ಅಭ್ಯಂತರವಿಲ್ಲ ಎಂಬುವುದನ್ನ ಸ್ಪಷ್ಟ ಪಡಿಸಿದೆ.

ಇಲಾಖೆಯೇ ನೇಮಿಸಿದ ಪ್ರಾಧ್ಯಾಪಕರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಾಖಲಾತಿ ಪರಿಶೀಲನಾ ಕಾರ್ಯವನ್ನು ಪೂರ್ಣಗೊಳಿಸಿದೆ. ಮತ್ತೊಮ್ಮೆ ವೆರಿಫಿಕೇಶ್ ನಿಂದ ಮತ್ತಷ್ಟು ನೇಮಕಾತಿ ವಿಳಂಬವಾಗುತ್ತದೆ. ಈಗಾಗಲೇ ಸಾಕಷ್ಟು ವಿಳಂಬವಾಗಿರುವ ಕಾರಣ, ಈ ಹಿಂದೆ 2017ನೇ ಬ್ಯಾಚ್ ರೀತಿಯಲ್ಲಿ ಅಂಕಪಟ್ಟಿಗಳನ್ನು ನೇರವಾಗಿ ದಾಖಲಾತಿಗಳ ನೈಜತೆ ಪರಿಶೀಲನೆಗೆ ಕಳುಹಿಸಿದಂತೆ, ಈಗಲೂ ಕ್ರಮವಹಿಸಬೇಕೆಂದು ಈ ಬಳಗ ವಿನಂತಿ ಮಾಡಿಕೊಂಡಿದೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಂಬಂಧ ಬಾಕಿ ಉಳಿದಿರುವ ಪೊಲೀಸ್, ಮೆಡಿಕಲ್ ವೆರಿಫಿಕೇಶನ್, ಸಿಂಧುತ್ವದಂತಹ ಎಲ್ಲಾ ಪ್ರಕ್ರಿಯೆಗಳನ್ನು ಏಕಕಾಲಕ್ಕೆ ನಡೆಸುವುದು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿಯು ಎರಡು ವರ್ಷಗಳಿಗಿಂತಲೂ ಹೆಚ್ಚು ವಿಳಂಬವಾಗುತ್ತಿರುವುದರಿಂದಾಗಿ ಅನೇಕ ಅಭ್ಯರ್ಥಿಗಳು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಕೆಲವರು ಗೊಂದಲ, ಚಿಂತೆಯಲ್ಲೇ ಆಸ್ಪತ್ರೆ ಸೇರಿ, ಚಿಕಿತ್ಸೆ ಪಡೆದಿದ್ದಾರೆ. ಜಿಪಿಎಸ್‌ಟಿಆರ್ ಶಿಕ್ಷಕರ ನೇಮಕಾತಿಯ ವಿಳಂಬದಿಂದಾಗಿ ಕೆಲವು ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಂತೆ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು ಆ ಹಾದಿಯನ್ನು ಹಿಡಿಯದಂತೆ ನೇಮಕಾತಿಯನ್ನು ಇಂತಿಷ್ಟು ದಿನಗಳಲ್ಲಿ ಮುಗಿಸಿಕೊಡಲಾಗುವುದೆಂದು ಸರ್ಕಾರ ಸೂಚಿಸಬೇಕು ಎಂಬ ಬೇಡಿಕೆಯನ್ನ ಮುಂದಿಟ್ಟಿದ್ದಾರೆ.

ಒಟ್ಟಾರೆಯಾಗಿ ಇದೀಗ ಇದೀಗ ಸಹಾಯಕ ಪ್ರಾಧ್ಯಪಕರು ತಮ್ಮ ಬೇಡಿಕೆಯನ್ನ ಸರ್ಕಾರದ ಮುಂದಿಟ್ಟಿದ್ದು ಈ ಬೇಡಿಕೆಯ ಕುರಿತು ಸರ್ಕಾರ ಯಾವ ರೀತಿಯಾದ ಕ್ರಮವನ್ನ ತೆಗೆದುಕೊಳ್ಳಲಿದೆ ಅಂತ ಕಾದು ನೋಡಬೇಕಾಗಿದೆ.

Tags: Assistant ProfessorCMSiddaramaiahDKShivakumarIndian educationKarnataka GovernmentMC Sudhakar
Previous Post

ಯಾರನ್‌ ಕರೆಸುತ್ತಿರೋ ಕರೆಸಿ ನಾನು ಮಾತ್ರ ನಿಮ್ಮ ಜೊತೆ ಬರಲ್ಲ: ಆಂಧ್ರ ಪ್ರದೇಶ ಶಾಸಕ ರಘುನಂದನ್‌ ಮಾಧವನೇನಿ..!

Next Post

ಡಾ.ಅಮರನಾಥ ರೆಡ್ಡಿ ವಿ ನಿರ್ಮಿಸಿ, ನಟಿಸಿರುವ “ಆದರ್ಶ ರೈತ” ಚಿತ್ರದ ಟ್ರೇಲರ್ ರಿಲೀಸ್‌

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಡಾ.ಅಮರನಾಥ ರೆಡ್ಡಿ ವಿ ನಿರ್ಮಿಸಿ, ನಟಿಸಿರುವ “ಆದರ್ಶ ರೈತ” ಚಿತ್ರದ ಟ್ರೇಲರ್ ರಿಲೀಸ್‌

ಡಾ.ಅಮರನಾಥ ರೆಡ್ಡಿ ವಿ ನಿರ್ಮಿಸಿ, ನಟಿಸಿರುವ "ಆದರ್ಶ ರೈತ" ಚಿತ್ರದ ಟ್ರೇಲರ್ ರಿಲೀಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada