ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣ ಸಂಬಂಧ ಪಟ್ಟಂತೆ ಸಾಕಷ್ಟು ಮಂದಿ ಬಿಜೆಪಿ ನಾಯಕರು ಈಗ ಹೇಳಿಕೆಯನ್ನ ಕೊಡುತ್ತಿದ್ದು ಸರ್ಕಾರದ ವಿರುದ್ಧ ಆಕ್ರೋಶವನ್ನ ವ್ಯಕ್ತ ಪಡಿಸುತ್ತಿದ್ದಾರೆ. ಆ ಮೂಲಕ ಕಾಂಗ್ರೆಸ್ ಸರ್ಕಾರವೇ ಈ ಪ್ರಕರಣವನ್ನ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳನ್ನ ಮಾಡಲು ಪ್ರಾರಂಭ ಮಾಡುತ್ತಿದೆ.

ಈ ಕುರಿತು ತಿ.ನರಸೀಪುರದಲ್ಲಿ ಮಾತನಾಡಿದ ಸಿ.ಟಿ ರವಿ, ಇದೊಂದು ಪೂರ್ವಯೋಜಿತ ಕೃತ್ಯ, ಮರಣೋತ್ತರ ಪರೀಕ್ಷೆ ವರದಿ ಪ್ರಕಾರ ಆಯುಧಗಳಿಂದ 30ಕ್ಕೂ ಹೆಚ್ಚು ಕಡೆ ಚುಚ್ಚಿದ್ದಾರೆ, ಆತ ಹನುಮ ಜಯಂತಿ ನೇತೃತ್ವ ವಹಿಸಿದ್ದ ಎಂಬ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಷಡ್ಯಂತ್ರ ಕಂಡು ಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ 16-17 ಜನರ ಮೇಲೆ ಹಲ್ಲೆ ಹಾಗು ಹತ್ಯೆ ಘಟನೆಗಳು ನಡೆದಿವೆ ಎಂಬ ಗಂಭೀರವಾದ ಆರೋಪವನ್ನ ಮಾಡಿದ್ದಾರೆ. ಇನ್ನು ಸಿ.ವಿ ರವಿ ಅವರು ಮಾಡಿದ್ದಾರೆ. ಈ ಕೊಲೆ ಪ್ರಕರಣದ ಉರುಳನ್ನ ಕಾಂಗ್ರೆಸ್ಗೆ ಹಾಕಲು ಸಿ,ಟಿ ರವಿ ಹೊರಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಇನ್ನಷ್ಟು ಮಾಹಿತಿ ನೀಡಿರುವ ಮಾಜಿ ಶಾಸಕ ಸಿ.ಟಿ ರವಿ, ಒಂದು ವಲಯ ಮದೋನ್ಮತ್ತವಾಗಿ, ಯುದ್ದೋನ್ಮತ್ತವಾಗಿ ವರ್ತಿಸುತ್ತಿದೆ. ಕಾಂಗ್ರೆಸ್ ಈ ರಾಜ್ಯವನ್ನು ಹರಾಜಕತೆಗೆ ಕೊಂಡೊಯ್ಯುತ್ತಿದೆ. ಹಿಂದೂ ಚಟುವಟಿಕೆಗಳನ್ಮು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರನ್ನು ಮುಗಿಸುವ, ಭಯ ಹುಟ್ಟಿಸುವ ಮಾನಸಿಕತೆ ಸೃಷ್ಟಿಯಾಗಿದೆ ಎಂದು ತಿ ನರಸೀಪುರದಲ್ಲಿ ಸಿ.ಟಿ ರವಿ ಗಂಭೀರ ಆರೋಪವನ್ನ ಮಾಡಿದ್ದಾರೆ.