• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನ್ನಡದ ಮೊದಲ ವಾಕ್ಚಿತ್ರ “ಸತಿ ಸುಲೋಚನ” ಮರು ಸೃಷ್ಟಿ .

ಪ್ರತಿಧ್ವನಿ by ಪ್ರತಿಧ್ವನಿ
March 4, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಹಲವು ಪ್ರಥಮಗಳನ್ನೊಳಗೊಂಡಿರುವ ಈ ಚಿತ್ರಕ್ಕೆ ಪಿ.ಶೇಷಾದ್ರಿ ನಿರ್ದೇಶನ ಹಾಗೂ ಸೃಜನ್ ಲೋಕೇಶ್ ನಿರ್ಮಾಣ . 3.3.2026 ರಂದು ಮರು ಸೃಷ್ಟಿಯಾದ “ಸತಿ ಸುಲೋಚನ” ಚಿತ್ರ ಬಿಡುಗಡೆ

ADVERTISEMENT

3.3.1934 ಅಂದರೆ ಸರಿಯಾಗಿ 91 ವರ್ಷಗಳ ಹಿಂದೆ ಕನ್ನಡದ ಮೊದಲ ವಾಕ್ಚಿತ್ರ “ಸತಿ ಸುಲೋಚನ” (Sathi Sulochana) ಬಿಡುಗಡೆಯಾಗಿತ್ತು. ನಾಟಕದಲ್ಲಿ ಕಲಾವಿದರ ಅಭಿನಯವನ್ನು ನೋಡಿದ ಜನರು ತೆರೆಯ ಮೇಲೆ ಮೊದಲ ವಾಕ್ಚಿತ್ರವನ್ನು ನೋಡಿ ಮೂಕ ವಿಸ್ಮಿತರಾದರು.

Shivalinge Gowda: ಬಿಜೆಪಿ ನಾಯಕರಿಗೆ ಹಿಗ್ಗಾಮುಗ್ಗಾ ಜಾಡಿಸಿದ ಶಾಸಕ ಶಿವಲಿಂಗೇಗೌಡ..! #bjp #budgetsession

ಹಿರಿಯ ನಟ ಆರ್ ನಾಗೇಂದ್ರರಾಯರ (Senior Actor Nagendrarayara(ಸಲಹೆ ಮೇರೆಗೆ ರಾಜಸ್ಥಾನ ಮೂಲದವರಾದ ಚಮನ್ ಲಾಲ್ ಡೊಂಗಾಜಿ (Chaman Lal Dongaji)ಅವರು ನಿರ್ಮಾಣ ಮಾಡಿದ ಈ ಚಿತ್ರವನ್ನು ವೈ.ವಿ.ರಾವ್ (Y V Rao) ನಿರ್ದೇಶನ ಮಾಡಿದ್ದರು. ಖ್ಯಾತ ನಟ ಲೋಕೇಶ್ (Actor Lokesh) ಅವರ ತಂದೆ ಹಾಗೂ ಸೃಜನ್ ಲೋಕೇಶ್ (Srujan Lokesh) ತಾತಾ ಸುಬ್ಬಯ್ಯ‌ ನಾಯ್ಡು (Subbayya Naidu) ಈ ಚಿತ್ರದ ನಾಯಕನಾಗಿ, ತ್ರಿಪುರಾಂಬ (Tripuramba) ನಾಯಕಿಯಾಗಿ ಅಭಿನಯಿಸಿದ್ದರು. 91 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರದ ಯಾವುದೇ ವಿಡಿಯೋ ತುಣುಕುಗಳು ಲಭ್ಯವಿಲ್ಲ. ಕೇವಲ ಕೆಲವೆ ಕೆಲವು ಸ್ಥಿರಚಿತ್ರಗಳಷ್ಟೇ ಇದೆ.

KarnatakaAssembly: ಸ್ಫೀಕರ್‌ ಖಾದರ್‌ ಮಾತಿಗೆ ವಿಪಕ್ಷ ನಾಯಕ ಆರ್‌ ಅಶೋಕ್‌ ಏನಂದ್ರು..! #rashok #utkhadar

ತಮ್ಮ ತಾತಾ ನಾಯಕರಾಗಿ ನಟಿಸಿದ್ದ ಈ ಪ್ರಥಮ ಚಿತ್ರವನ್ನು ಮರು ಸೃಷ್ಟಿ ಮಾಡಲು ಸೃಜನ್ ಲೋಕೇಶ್ ಮುಂದಾಗಿದ್ದಾರೆ. ಹೆಸರಾಂತ ನಿರ್ದೇಶಕ ಪಿ.ಶೇಷಾದ್ರಿ ನಿರ್ದೇಶನ ಮಾಡಲಿದ್ದಾರೆ. ಈ ವಿಷಯದ ಕುರಿತು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸೃಜನ್ ಲೋಕೇಶ್ ಹಾಗೂ ಪಿ.ಶೇಷಾದ್ರಿ ಮಾತನಾಡಿದರು.

ಕನ್ನಡದ ಮೊದಲ ವಾಕ್ಚಿತ್ರ ಬಿಡುಗಡೆಯಾಗಿ 91 ವರ್ಷಗಳಾಗಿದೆ. 3.3.1934 ರಂದು ಸಂಜೆ 7.30ಕ್ಕೆ ಬೆಂಗಳೂರಿನ ಪ್ಯಾರಾಮೌಂಟ್ ಚಿತ್ರಮಂದಿರದಲ್ಲಿ ಈ ಚಿತ್ರ ಬಿಡುಗಡೆಯಾಗಿತ್ತು. ಆದರೆ ಈ ಚಿತ್ರವನ್ನು ನಾವು ನೋಡೋಣ ಎಂದರೆ ಲಭ್ಯವಿಲ್ಲ. ಕೇವಲ ಸ್ಥಿರಚಿತ್ರಗಳಷ್ಟೇ ಇದೆ.‌ “ಸತಿ ಸುಲೋಚನ” ರಾಮಾಯಣದ ಒಂದು ಉಪಕಥೆ. ಬೆಳ್ಳಾವೆ ನರಹರಿ ಶಾಸ್ತ್ರಿಗಳು ಬರೆದಿದ್ದ ಈ ನಾಟಕವನ್ನು ವೈ.ವಿ‌.ರಾವ್ ಅವರು ಸಿನಿಮಾ ರೂಪಕ್ಕೆ ತಂದರು. ಚಿಕ್ಕಪೇಟೆಯಲ್ಲಿ ಪಾತ್ರೆ ವ್ಯಾಪಾರಿಗಳಾಗಿದ್ದ ಚಮನ್ ಲಾಲ್ ಡೊಂಗಾಜಿ ಅವರು ಸಹೋದರ ಭೂರ್ ಮಲ್ ಡೊಂಗಾಜಿ ಅವರ ಜೊತೆಗೂಡಿ 40 ಸಾವಿರ ಖರ್ಚಿನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಸುಬ್ಬಯ್ಯ ನಾಯ್ಡು, ತ್ರಿಪುರಾಂಬ, ಆರ್ ನಾಗೇಂದ್ರರಾಯರು, ಲಕ್ಷ್ಮೀ ಬಾಯಿ, ಕಮಲ ಬಾಯಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದರು. ಮಹಾರಾಷ್ಟ್ರದ ಕೊಲ್ಲಾಪುರದ ಬಳಿ ನಿರ್ಮಿಸಲಾಗಿದ್ದ ಸೆಟ್ ನಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿತ್ತು. ಸುಮಾರು ಎರಡು ಸಾವಿರ ಜನರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರಂತೆ. ವಿದ್ಯುತ್ ದೀಪಗಳಿಲ್ಲದೆ ಕೇವಲ ಸೂರ್ಯನ ಬೆಳಕನೇ ನಂಬಿಕೊಂಡು ಮಾಡಿದ ಚಿತ್ರವಿದು. ಈಗ ಈ ಚಿತ್ರವನ್ನು ಮರು ಸೃಷ್ಟಿ ಮಾಡಲು ಸೃಜನ್ ಲೋಕೇಶ್ ಮುಂದಾಗಿದ್ದಾರೆ. ನಾನು ನಿರ್ದೇಶನ ಮಾಡುತ್ತಿದ್ದೇನೆ. ಸುಬ್ಬಯ್ಯ ನಾಯ್ಡು ಅವರು ಈ ಚಿತ್ರದಲ್ಲಿ ಇಂದ್ರಜಿತುವಿನ ಪಾತ್ರದಲ್ಲಿ ನಟಿಸಿದ್ದರು. ಈಗ ಆ ಪಾತ್ರವನ್ನು ಸೃಜನ್ ಲೋಕೇಶ್ ಅವರೆ ಮಾಡುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಈ ಚಿತ್ರವನ್ನು ಮರುಸೃಷ್ಟಿ ಮಾಡುವುದು ಅಷ್ಟು ಸುಲಭದ ಮಾತಲ್ಲ. ನಿಮ್ಮೆಲ್ಲರ ಸಹಕಾರ ನಮಗಿರಲಿ ಎಂದರು ಪಿ.ಶೇಷಾದ್ರಿ.

ನಮ್ಮ ತಾತಾ ನಾಯಕರಾಗಿ ನಟಿಸಿದ್ದ ಮೊದಲ ವಾಕ್ಚಿತ್ರ “ಸತಿ‌ ಸುಲೋಚನ” ಬಿಡುಗಡೆಯಾಗಿ 91 ವರ್ಷಗಳಾಗಿದೆ ಈ ಸಂದರ್ಭದಲ್ಲಿ ಈ ಚಿತ್ರವನ್ನು ಮರು ಸೃಷ್ಟಿ ಮಾಡಲು ಲೋಕೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮುಂದಾಗಿದೆ ಎಂದು ಮಾತನಾಡಿದ ನಟ ಸೃಜನ್ ಲೋಕೇಶ್, ಈಗ ಈ ಚಿತ್ರವನ್ನು ಪಿ.ಶೇಷಾದ್ರಿ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಅಂದುಕೊಂಡ ಹಾಗೆ ಆದರೆ ಇಂದಿನಿಂದ ಒಂದು ವರ್ಷಕ್ಕೆ‌ ಸರಿಯಾಗಿ ಅಂದರೆ 3.3.2026 ರಂದು ಮರು ಸೃಷ್ಟಿಯಾದ ಈ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ. ಆ ನಿಟ್ಟಿನಲ್ಲಿ ನಾವು ಈಗಾಗಲೇ ಕೆಲಸ ಆರಂಭಿಸಿದ್ದೇವೆ. ಈ ಚಿತ್ರವನ್ನು ಮರುಸೃಷ್ಟಿ ಮಾಡುವುದು ಸುಲಭದ ಮಾತಲ್ಲ. ಅದಕ್ಕೆ ಎಲ್ಲರ ಸಹಕಾರ ಅಗತ್ಯ. ಈ ಚಿತ್ರ ನನ್ನ ಕನಸು.‌ ಹಾಗಾಗಿ “ಸತಿ ಸುಲೋಚನ” ಮರು ಸೃಷ್ಟಿ ಆಗಿ ಬಿಡುಗಡೆಯಾಗವವರೆಗೂ ನಾನು ಬೇರೆ ಯಾವುದೇ ವಿಷಯದ ಬಗ್ಗೆ ಗಮನ ಕೊಡುವುದಿಲ್ಲ. ನನ್ನ ಗಮನ ಬರೀ ಈ ಸಿನಿಮಾ ಮೇಲೆ ಮಾತ್ರ ಇರುತ್ತದೆ ಎಂದರು.

ಇನ್ನೂ ನಮ್ಮ ಕುಟುಂಬದ ಮತ್ತೊಂದು ವಿಶೇಷವೆಂದರೆ ನಮ್ಮ ತಾತಾ ಸುಬ್ಬಯ್ಯ ನಾಯ್ಡು ಅವರು ನಿರ್ಮಾಣ ಹಾಗೂ ನಿರ್ದೇಶನ ಮಾಡಿದ “ಭಕ್ತ ಪ್ರಹ್ಲಾದ” ಚಿತ್ರದ ಮೂಲಕ ಬಾಲ ಕಲಾವಿದನಾಗಿ ನಮ್ಮ ತಂದೆ ಲೋಕೇಶ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ನನ್ನ ತಂದೆ ಲೋಕೇಶ್ ಅವರು ತಮ್ಮ ನಿರ್ಮಾಣದ ಹಾಗೂ ನಿರ್ದೇಶನದ “ಬುಜಂಗಯ್ಯನ ದಶಾವತಾರಗಳು” ಚಿತ್ರದ ಮೂಲಕ ನನ್ನನ್ನು ಬಾಲನಟನಾಗಿ ಚಿತ್ರರಂಗಕ್ಕೆ ಕರೆತಂದರು. ಈಗ ನಾನು ನಿರ್ಮಿಸಿ, ನಿರ್ದೇಶಿಸುತ್ತಿರುವ “ಜಿ.ಎಸ್.ಟಿ” ಚಿತ್ರದ ಮುಖಾಂತರ ನನ್ನ ಮಗ ಸುಕೃತನನ್ನು ಬೆಳ್ಳತೆರೆಗೆ ಪರಿಚಯಿಸುತ್ತಿದ್ದೇನೆ. ಇದು ಸಾಧ್ಯವಾಗುವುದು ನಮ್ಮ ಭಾರತೀಯ ಚಿತ್ರರಂಗದಲ್ಲಿ ಮಾತ್ರ ಎಂದು ಸೃಜನ್ ಲೋಕೇಶ್ ತಿಳಿಸಿದರು.

ಹಿರಿಯ ನಿರ್ದೇಶಕರಾದ ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಗಿರೀಶ್ ಕಾಸರವಳ್ಳಿ, ಯೋಗರಾಜ್ ಭಟ್, ಹಿರಿಯ ಪತ್ರಕರ್ತೆ ಡಾ|ವಿಜಯ, ನಟಿ ಜಯಮಾಲ, ರಂಗತಜ್ಞ ಶ್ರೀನಿವಾಸ್ ಜಿ ಕಪ್ಪಣ್ಣ, ಪತ್ರಕರ್ತ ಚ‌.ಹ.ರಘುನಾಥ್ ಮುಂತಾದವರು ಈ ಸಂದರ್ಭದಲ್ಲಿ ಮಾತನಾಡಿ ಸೃಜನ್ ಲೋಕೇಶ್ ಹಾಗೂ ಪಿ‌.ಶೇಷಾದ್ರಿ ಅವರ ಈ ಪ್ರಯತ್ನ ಯಶಸ್ವಿಯಾಗಲೆಂದು ಶುಭ ಕೋರಿದರು.

Tags: 1990s Kannada CinemaGirish KasaravalliJayamalakannada cinemaKappannalokeshP SHeshadrisandalwoodSrinivassrujan lokeshSubbayya NaiduSV Rajendra Singh BabuVijayaYogaraj Bhat
Previous Post

ಅಧ್ಯಕ್ಷರೇ ಬರೀ ನಿಮ್ ಮಾರಿ ನೋಡ್ಕೊತಾ ಕೂರ್ಬೇಕಾ..!

Next Post

ಬಿಜೆಪಿ ನಾಯಕರಿಗೆ ಹಿಗ್ಗಾಮುಗ್ಗಾ ಜಾಡಿಸಿದ ಶಾಸಕ ಶಿವಲಿಂಗೇಗೌಡ..!

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಬಿಜೆಪಿ ನಾಯಕರಿಗೆ ಹಿಗ್ಗಾಮುಗ್ಗಾ ಜಾಡಿಸಿದ ಶಾಸಕ ಶಿವಲಿಂಗೇಗೌಡ..!

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada