• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

“REDRUM” ಚಿತ್ರದಿಂದ ಬಂತು ರೊಮ್ಯಾಂಟಿಕ್ ಸಾಂಗ್

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಅಶೋಕ್ ದೇವನಾಂಪ್ರಿಯ, ಮೋಹನ್ ರಾಜ್ ಹಾಗೂ ಹನಿ ಚೌಧರಿ ನಿರ್ಮಾಣದ, ಪ್ರಮೋದ್ ಜೋಯಿಸ್ ನಿರ್ದೇಶನದ ಹಾಗೂ ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿರುವ “REDRUM” ಚಿತ್ರದ “ಅನುಪಮ” ಎಂಬ ರೊಮ್ಯಾಂಟಿಕ್ ಸಾಂಗ್ FMD ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿರ್ದೇಶಕರೆ ಬರೆದಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ದರ್ಶನ್ ನಾರಾಯಣ್ ಹಾಡಿದ್ದಾರೆ. ಹಾಡು‌ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ಇದು ನನ್ನ ನಿರ್ದೇಶನದ ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಪ್ರಮೋದ್ ಜೋಯಿಸ್, ಇದೊಂದು ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಕಥೆ. ಸಿನಿಮಾದೊಳಗೆ ನಡೆಯುವ ಸಿನಿಮಾ ಕಥೆಯೂ ಹೌದು‌.ನಿರ್ದೇಶಕನೊಬ್ಬ ತನ್ನ ಟ್ರೇಲರ್ ಬಿಡುಗಡೆ ಮಾಡಿದಾಗ, ಆ ಟ್ರೇಲರ್ ಬಾರಿ ಸಂಚಲನ ಉಂಟು ಮಾಡುತ್ತದೆ‌.ಆ ಮೂಲಕ ಚಿತ್ರದ ಕಥೆ ಶುರುವಾಗುತ್ತದೆ. ಉತ್ತರ ಭಾರತದಲ್ಲಿ ನಡೆದ ನೈಜಘಟನೆ ಆಧರಿಸಿರುವ ಈ ಚಿತ್ರದ ಅರ್ಧಕ್ಕೂ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರಭಾರತದಲ್ಲೇ ನಡೆದಿದೆ‌. “REDRUM” ಹೆಸರನ್ನು ನೀವು ಕನ್ನಡಿಯಲ್ಲಿ ನೋಡಿದಾಗ “MURDER” ಎಂದು ಆಗುತ್ತದೆ‌.ಕ್ರೈಮ್ ಥ್ರಿಲ್ಲರ್ ಚಿತ್ರಕ್ಕೆ ಇದು ಸೂಕ್ತ ಶೀರ್ಷಿಕೆಯೂ ಆಗಿದೆ.

ಕಾರ್ಯಕಾರಿ ನಿರ್ಮಾಪಕರೂ ಆಗಿರುವ ಅಫ್ಜಲ್, ಮುಂಬೈನ ರಾಜವೀರ್, ಪ್ರಾಚಿ ಶರ್ಮ, ದ್ರಿತೇಶ್, ವಿನಯ್ ಸೂರ್ಯ, ಯತಿರಾಜ್, ಮಧುರ ಮುಂತಾದವರು ತಾರಾಬಳಗದಲ್ಲಿದ್ದಾರೆ. ಎರಡು ಹಾಡುಗಳು ಚಿತ್ರದಲ್ಲಿದ್ದು, ಇಂದು ನಾನೇ ಬರೆದಿರುವ ಮೊದಲ ಹಾಡು ಬಿಡುಗಡೆಯಾಗಿದೆ. ಚೇತನ್ ಕೃಷ್ಣ ಸಂಗೀತ ನೀಡಿರುವ ಈ ಹಾಡನ್ನು ದರ್ಶನ್ ನಾರಾಯಣ್ ಹಾಡಿದ್ದಾರೆ. ಸದ್ಯದಲ್ಲೇ ಚಿತ್ರ ಸೆನ್ಸಾರ್ ಮುಂದೆ ಹಾಜರಾಗಲಿದೆ ಎಂದರು‌.

ನಾನು ಕಾರ್ಯಕಾರಿ ನಿರ್ಮಾಪಕನಾಗಿರುವುದರ ಜೊತೆಗೆ ಈ ಚಿತ್ರದ ಪ್ರಮುಖಪಾತ್ರದಲ್ಲೂ ನಟಿಸಿದ್ದೇನೆ. ಹೈದರಾಬಾದ್ ನ FMD ಮ್ಯೂಸಿಕ್ ನ ಮೂಲಕ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಈ ಚಿತ್ರದ ಸಹ ನಿರ್ಮಾಪಕರೂ ಆಗಿರುವ ರಮೇಶ್ ಭಂಡಾರಿ ಅವರ ಸಾರಥ್ಯದ ಈ ಆಡಿಯೋ ಕಂಪನಿ ನಮ್ಮ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೂ ಅಡಿಯಿಟ್ಟಿದೆ. ನವೆಂಬರ್ ವೇಳಗೆ ಚಿತ್ರ ತೆರೆಗೆ ಬರಲಿದೆ ಎಂದು ನಟ ಹಾಗೂ ಕಾರ್ಯಕಾರಿ ನಿರ್ಮಾಪಕ ಅಫ್ಜಲ್ ತಿಳಿಸಿದರು.

ನಟ ದ್ರಿತೀಶ್ ಹಾಗೂ ನಟಿ ಪ್ರಾಚಿ ಶರ್ಮ ಹಾಡಿನ‌ ಅನುಭವ ಹಂಚಿಕೊಂಡರು. ದರ್ಶನ್ ನಾರಾಯಣ್ ಹಾಡಿನ ಬಗ್ಗೆ ಮಾತನಾಡಿ, ನಾಲ್ಕು ಸಾಲುಗಳನ್ನು ಹಾಡಿದರು. ಸಹ ನಿರ್ಮಾಪಕ ಹಾಗೂ ಮ್ಯೂಸಿಕ್ ಸಂಸ್ಥೆ ಮಾಲೀಕರಾದ ರಮೇಶ್ ಭಂಡಾರಿ, ಶ್ರೀನಿವಾಸ್ ಹಾಗೂ ಛಾಯಾಗ್ರಾಹಕ ಶಂಕು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#film are #film #movie #cinema #movies #photography #filmphotography #actor #art #filmmaking #cinematography #love #films #mm ...
Previous Post

ಬಳ್ಳಾರಿ ಜೈಲಿಗೆ ಧಿಡೀರ್ ಎಂಟ್ರಿ ಕೊಟ್ಟ ಎಸ್‌ಪಿ – ದರ್ಶನ್ ಕೋಣೆಯ ಸುತ್ತಾ ಮುತ್ತ ಪರಿಶೀಲನೆ !

Next Post

ಚನ್ನಪಟ್ಟಣ ಟಿಕೆಟ್ ಟೆನ್ಷನ್ – ರಾತ್ರಿ ಜೋಷಿ ಮನೆಯಲ್ಲಿ ಮೈತ್ರಿ ಮೀಟಿಂಗ್ !

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ಚನ್ನಪಟ್ಟಣ ಟಿಕೆಟ್ ಟೆನ್ಷನ್ – ರಾತ್ರಿ ಜೋಷಿ ಮನೆಯಲ್ಲಿ ಮೈತ್ರಿ ಮೀಟಿಂಗ್ !

ಚನ್ನಪಟ್ಟಣ ಟಿಕೆಟ್ ಟೆನ್ಷನ್ - ರಾತ್ರಿ ಜೋಷಿ ಮನೆಯಲ್ಲಿ ಮೈತ್ರಿ ಮೀಟಿಂಗ್ !

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada