• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಶಿವಮೊಗ್ಗದಲ್ಲಿ ಹರಿದುಬಂದಿತ್ತು ಜನಸಾಗರ..! ಕಾರಣ ಮೋದಿ ಅಲ್ಲ..

ಕೃಷ್ಣ ಮಣಿ by ಕೃಷ್ಣ ಮಣಿ
February 28, 2023
in ಅಂಕಣ
0
ಶಿವಮೊಗ್ಗದಲ್ಲಿ ಹರಿದುಬಂದಿತ್ತು ಜನಸಾಗರ..! ಕಾರಣ ಮೋದಿ ಅಲ್ಲ..
Share on WhatsAppShare on FacebookShare on Telegram

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ಮಹತ್ವದ ದಿನ ಆಗಿದ್ದರಿಂದ ಸುಮಾರು ಒಂದು ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಲಕ್ಷ ಲಕ್ಷ ಜನರು ಆಗಮಿಸಿದ್ದಾರೆ ಅನ್ನೋ ರೀತಿ ಬಿಜೆಪಿ ನಾಯಕರು ಹುಬ್ಬೇರಿಸಿದ್ದಾರೆ. ಆದರೆ ಲಕ್ಷಾಂತರ ಜನರು ಸೇರಿದ್ದ ಕಾರಣ ಮಾತ್ರ ಬೇರೆ. ಯಾಕೆಂದರೆ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸಿದ ಬಿ. ಎಸ್​ ಯಡಿಯೂರಪ್ಪ ಅವರ ಜನ್ಮದಿನದಂದೇ ಏರ್​ಪೋರ್ಟ್​ ಉದ್ಘಾಟನಾ ಕಾರ್ಯಕ್ರಮವನ್ನು ಭಾರತೀಯ ಜನತಾ ಪಾರ್ಟಿ ಆಯೋಜನೆ ಮಾಡಿತ್ತು.

ADVERTISEMENT

ಬಿಜೆಪಿಗಿಂತಲೂ ಬಿಎಸ್​ ಯಡಿಯೂರಪ್ಪ ಮೇಲೆ ಅಪಾರವಾದ ಗೌರವ ಅಭಿಮಾನ ತೋರಿಸುವ ಶಿವಮೊಗ್ಗದ ಜನರು ಹುಟ್ಟುಹಬ್ಬಕ್ಕೆ ಶುಭ ಕೋರುವ ಉದ್ದೇಶದಿಂದ ಲಕ್ಷ ಲಕ್ಷ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಅಭಿಮಾನ ಮೆರೆದಿದ್ದಾರೆ.

80ನೇ ಹುಟ್ಟುಹಬ್ಬ ಜನರಿಗೆ ವಿಶೇಷ..!

ರೈತ ನಾಯಕ ಅನ್ನೋ ಪಟ್ಟ ಪಡೆದುಕೊಂಡಿರುವ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ, ಹುಟ್ಟು ಹೋರಾಟಗಾರ. ಮಂಡ್ಯ ಜಿಲ್ಲೆ ಕೆ.ಆರ್​ ಪೇಟೆಯ ಬೂಕನ ಕೆರೆಯಲ್ಲಿ ಹುಟ್ಟಿ, ಉದ್ಯೋಗಕ್ಕಾಗಿ ವಲಸೆ ಹೋಗಿದ್ದ ಬೂಕನಕರೆ ಸಿದ್ದಲಿಂಗಪ್ಪ ಯಡಿಯೂರಪ್ಪ, ಕಾಲಕ್ರಮೇಣ ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಜನಸಂಘದ ಬಾವುಟ ಕಟ್ಟುವ ಜನರು ಇಲ್ಲದೆ ಇರುವ ಕಾಲದಿಂದಲೂ ಪಕ್ಷಕ್ಕಾಗಿ ದುಡಿದವರು. ಭಾರತೀಯ ಜನತಾ ಪಾರ್ಟಿ ಕಟ್ಟಿದವರು ಜೊತೆಯಾಗಿ ಬೆಳೆದವರು ಬಿ.ಎಸ್​ ಯಡಿಯೂರಪ್ಪ. ಅವರಿಂದ ಅಧಿಕಾರ ಕಸಿದುಕೊಂಡ ಬಳಿಕ ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇನ್ಮುಂದೆ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು ಘೋಷಣೆಯನ್ನೂ ಮಾಡಿದ್ದಾರೆ. ಅದಸರ ಬೆನ್ನಲ್ಲೇ 80ನೇ ಹುಟ್ಟು ಹಬ್ಬದ ದಿನ ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟನೆ ಆಗುತ್ತಿದೆ. ಈ ಮೂಲಕ ಆದರೂ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಶಿವಮೊಗ್ಗ ಮಾತ್ರವಲ್ಲದೆ ಎಲ್ಲಾ ತಾಲೂಕುಗಳಿಂದಲೂ ಜನರನ್ನು ಕರೆತರಲಾಗಿತ್ತು.

ಶಿವಮೊಗ್ಗ ಅಂದ್ರೆ ಯಡಿಯೂರಪ್ಪ.. ಇಲ್ಲ ಎನ್ನಲಾಗದು..

ಶಿವಮೊಗ್ಗ ಜಿಲ್ಲೆ ಬಿ.ಎಸ್​ ಯಡಿಯೂರಪ್ಪಗೂ ಮೊದಲೇ ಮುಖ್ಯಮಂತ್ರಿ ಪಟ್ಟವನ್ನು ನೋಡಿತ್ತು. ಆದರೆ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸ ಆಗಿರಲಿಲ್ಲ. ಆದರೆ ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿ ಆದಾಗಲೂ ಶಿವಮೊಗ್ಗಕ್ಕೆ ಅಪಾರವಾದ ಅನುದಾನ ನೀಡಿ, ಶಿವಮೊಗ್ಗವನ್ನು ಅಭಿವೃದ್ಧಿಯಲ್ಲಿ ಉತ್ತುಂಗಕ್ಕೆ ಏರಿಸಿದರು. ಯಡಿಯೂರಪ್ಪ ಕಾಲದಲ್ಲಿ ಶಿವಮೊಗ್ಗ ಶರವೇಗದಲ್ಲಿ ಅಭಿವೃದ್ಧಿ ಕಂಡಿತು. ಶಿವಮೊಗ್ಗದ ರಸ್ತೆಗಳಿಂದ ಹಿಡಿದು ಪ್ರತಿಯೊಂದು ಯೋಜನೆಗಳಿಗೂ ಯಡಿಯೂರಪ್ಪ ಕಾಯಕಲ್ಪ ನೀಡಿದರು. ಮಂಡ್ಯದಿಂದ ಶಿವಮೊಗ್ಗಕ್ಕೆ ವಲಸೆ ಹೋಗಿದ್ದ ಯಡಿಯೂರಪ್ಪ ಮಲೆನಾಡಿನ ಮಗನಾಗಿ ಗುರುತಿಸಿಕೊಂಡರು. ಸೈಕಲ್​ ಏರಿ ರಾಜಕೀಯ ಆರಂಭಿಸಿದ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ, ಹೆಮ್ಮರವಾಗಿ ಬೆಳೆದು ನಿಂತರು. ಬಹುತೇಕ ಈ ಕಾರ್ಯಕ್ರಮ ಯಡಿಯೂರಪ್ಪ ಪಾಲಿಗೆ ಕೊನೆಯ ಕಾರ್ಯಕ್ರಮ ಎನ್ನಬಹುದು. ಇನ್ಮುಂದೆ ಪ್ರಚಾರಕ್ಕೆ ಬರಬಹುದು, ಮತಯಾಚನೆ ಮಾಡಬಹುದು. ಆದರೂ ಅದು ಯಡಿಯೂರಪ್ಪ ಅವರ ಕಾರ್ಯಕ್ರಮ ಆಗಲಾರದು. ಇದೇ ಕಾರಣಕ್ಕೆ ಜನರು ಅಂತಿಮ ಅಭಿನಂದನೆ ಸಲ್ಲಿಸುವ ಕೆಲಸ ಮಾಡಿದರು ಎನ್ನಬಹುದು.

Tags: Shivamoggaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯುವುದು ನಿಮ್ಮೆಲ್ಲರ ಗುರಿಯಾಗಿರಲಿ: ಸಿದ್ದರಾಮಯ್ಯ

Next Post

ಮೋದಿಗೆ ಖರ್ಗೆ ಮೇಲೆ ಅಭಿಮಾನವೋ..? ಮಹಿಳೆಯರ ಮೇಲೆ ಕೋಪವೋ..?

Related Posts

Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
0

ಮೋದಿ ಅವರ ವಿಕಸಿತ ಭಾರತ ಸಂಕಲ್ಪ ಸಾಕಾರಕ್ಕೆ ಅವಿರತ ದುಡಿಮೆ; ಪ್ರಧಾನಿಗಳ ದೂರದೃಷ್ಟಿಯಿಂದಲೇ ಎಲ್ಲವೂ ಸಾಧ್ಯ. ₹9,513 ಕೋಟಿ ಮೊತ್ತದ ಇತರೆ ವಿಸ್ತರಣಾ ಯೋಜನೆ ಸೇರಿ ಒಟ್ಟು...

Read moreDetails

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

November 15, 2025
Next Post
ಮೋದಿಗೆ ಖರ್ಗೆ ಮೇಲೆ ಅಭಿಮಾನವೋ..? ಮಹಿಳೆಯರ ಮೇಲೆ ಕೋಪವೋ..?

ಮೋದಿಗೆ ಖರ್ಗೆ ಮೇಲೆ ಅಭಿಮಾನವೋ..? ಮಹಿಳೆಯರ ಮೇಲೆ ಕೋಪವೋ..?

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada