• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೊದಲ ಸಚಿವ ಸಂಪುಟದಲ್ಲೇ ದೊಡ್ಡ ಘೋಷಣೆಗಳ ಸುರಿಮಳೆ; ಡಿಕೆಶಿ ಸರ್ಕಾರದ ಹೊಸ ಅಜೆಂಡಾ

ಪ್ರತಿಧ್ವನಿ by ಪ್ರತಿಧ್ವನಿ
June 4, 2026
in Top Story
0
ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿಎಂ ಡಿ ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು, ಜೂನ್ 3: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರ ಮಹತ್ವದ ಜನಪರ ನಿರ್ಧಾರಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ, ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ, ಯುವಕರ ಸಂಘಗಳ ಸ್ಥಾಪನೆ, ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆ ಹಾಗೂ ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ 2 ಸಾವಿರ ಕೋಟಿ ರೂಪಾಯಿ ಅನುದಾನ ಸೇರಿದಂತೆ ಆರು ಪ್ರಮುಖ ತೀರ್ಮಾನಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲೇ ಕೈಗೊಳ್ಳಲಾಗಿದೆ.

ADVERTISEMENT

 

ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಇದು ಯುವ ಯುಗದ ಆರಂಭ. ರಾಜ್ಯದ ಯುವಕರು, ರೈತರು, ಕಾರ್ಮಿಕರು ಹಾಗೂ ಎಲ್ಲಾ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಹೊಸ ಹೆಜ್ಜೆ ಇಡಲಾಗಿದೆ” ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ತೀರ್ಮಾನಿಸಿದೆ. ಇದುವರೆಗೆ ಹೆಣ್ಣುಮಕ್ಕಳಿಗೆ ಮಾತ್ರ ಉಚಿತ ಪ್ರಯಾಣದ ಸೌಲಭ್ಯವಿದ್ದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಬೇಡಿಕೆಯನ್ನು ಪರಿಗಣಿಸಿ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯ ಪಡೆಯಬಹುದಾಗಿದೆ.

56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ

ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವ ಸರ್ಕಾರ, 56 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ಶೀಘ್ರದಲ್ಲೇ ನೇಮಕಾತಿ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ

ಖಾಸಗಿ ಕ್ಷೇತ್ರದಲ್ಲೂ ಉದ್ಯೋಗಾವಕಾಶ ಹೆಚ್ಚಿಸುವ ಉದ್ದೇಶದಿಂದ ಹೊಸ ಉದ್ಯೋಗ ವಿನಿಮಯ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಖಾಸಗಿ ಕಂಪನಿಗಳ ಅಗತ್ಯಕ್ಕೆ ತಕ್ಕಂತೆ ಯುವಕರಿಗೆ ತರಬೇತಿ ನೀಡಿ ಉದ್ಯೋಗ ಕಲ್ಪಿಸುವ ಯೋಜನೆ ರೂಪಿಸಲಾಗುತ್ತಿದೆ. ಇದರಲ್ಲಿ ಕನ್ನಡಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಸಿಎಂ ತಿಳಿಸಿದರು.

ಪಂಚಾಯಿತಿ ಮಟ್ಟದಲ್ಲಿ 10 ಸಾವಿರ ಯುವಕರ ಸಂಘ

ರಾಜ್ಯದ ಪ್ರತಿ ಪಂಚಾಯಿತಿಯಲ್ಲೂ ಯುವಕರ ಸಂಘಗಳನ್ನು ರಚಿಸಲು ಸರ್ಕಾರ ನಿರ್ಧರಿಸಿದೆ. ಒಟ್ಟು 10 ಸಾವಿರ ಸಂಘಗಳನ್ನು ಸ್ಥಾಪಿಸಿ, ಪ್ರತಿ ಸಂಘಕ್ಕೆ 10 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ನಾಯಕತ್ವ ಬೆಳವಣಿಗೆ ಹಾಗೂ ಸಾಮಾಜಿಕ ಸಾಮರಸ್ಯ ಬೆಳೆಸುವ ಉದ್ದೇಶದಿಂದ ಈ ಸಂಘಗಳು ಕಾರ್ಯನಿರ್ವಹಿಸಲಿವೆ.

ಒಸಿ-ಸಿಸಿ ಸಮಸ್ಯೆಗೆ ಪರಿಹಾರ

ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಒಸಿ (Occupancy Certificate) ಮತ್ತು ಸಿಸಿ (Completion Certificate) ಸಮಸ್ಯೆ ನಿವಾರಣೆಗೆ ಸರ್ಕಾರ ವಿಶೇಷ ಕ್ರಮ ಕೈಗೊಂಡಿದೆ. 2500 ಚದರ ಅಡಿವರೆಗಿನ ಮನೆಗಳಿಗೆ ಕೆಲವು ಷರತ್ತುಗಳೊಂದಿಗೆ ಒನ್‌ಟೈಮ್ ಪರಿಹಾರ ಕಲ್ಪಿಸಲು ತೀರ್ಮಾನಿಸಲಾಗಿದೆ.

ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆ

ಬೆಂಗಳೂರು ಮಾತ್ರವಲ್ಲದೆ ರಾಜ್ಯದಾದ್ಯಂತ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತಿಸಲು ಅವಕಾಶ ನೀಡಲಾಗುವುದು. ಇದನ್ನು ಸರ್ಕಾರದ “ಭೂ ಗ್ಯಾರಂಟಿ” ಯೋಜನೆಯ ಭಾಗವೆಂದು ಮುಖ್ಯಮಂತ್ರಿ ವಿವರಿಸಿದರು.

ಬೆಂಗಳೂರಿನ ರಸ್ತೆಗಳಿಗೆ ₹2,000 ಕೋಟಿ

ರಾಜಧಾನಿ ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ 2 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಯೋಜನೆಗಳನ್ನು ಹೊರತುಪಡಿಸಿ, ನಗರದ ಪ್ರಮುಖ ರಸ್ತೆಗಳನ್ನು ಮುಂದಿನ ಮೂರು ರಿಂದ ನಾಲ್ಕು ತಿಂಗಳೊಳಗೆ ಡಾಂಬರೀಕರಣ ಮಾಡಲು ಸರ್ಕಾರ ಗುರಿ ಹೊಂದಿದೆ.

 

ರೈತರ ಸಮಸ್ಯೆಗಳ ಕುರಿತು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು ಎಂದಿರುವ ಮುಖ್ಯಮಂತ್ರಿ, ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ವಲಸೆ ತಡೆಯುವ ನಿಟ್ಟಿನಲ್ಲಿ ಕೃಷಿ, ತೋಟಗಾರಿಕೆ ಮತ್ತು ಹೈನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯಲ್ಲೇ ಘೋಷಿಸಲಾದ ಈ ನಿರ್ಧಾರಗಳು ಡಿಕೆ ಶಿವಕುಮಾರ್ ಸರ್ಕಾರದ ಆಡಳಿತದ ದಿಕ್ಕು ಮತ್ತು ಆದ್ಯತೆಗಳನ್ನು ಸ್ಪಷ್ಟಪಡಿಸಿವೆ.

 

 

 

 

 

 

 

 

 

 

 

 

Tags: 56000 VacanciesB Khata to A KhataBengaluru DevelopmentBengaluru RoadsBreaking NewsCongress GovernmentDK ShivakumarDK Shivakumar GovernmentEmployment ExchangeFree Bus PassGovernment jobsKarnataka cabinetKARNATAKA CMkarnataka newsKarnataka PoliticsLand GuaranteeOC CC IssuePanchayat Youth ClubsStudents Bus PassYouth AssociationsYouth Empowerment
Previous Post

ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿಎಂ ಡಿ ಕೆ ಶಿವಕುಮಾರ್

Next Post

ಸಿಎಂ ಕಚೇರಿಯಲ್ಲಿ ಡಿಕೆಶಿ ಮುದ್ರೆ; ವಿಶ್ವಾಸದ ಅಧಿಕಾರಿಗಳಿಗೆ ಮಹತ್ವದ ಹುದ್ದೆ

Related Posts

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ
Top Story

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ

by ಪ್ರತಿಧ್ವನಿ
June 8, 2026
0

ಇರಾನ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ಅಲ್ಲಿರುವ ಭಾರತೀಯರಿಗೆ ತುರ್ತು ಎಚ್ಚರಿಕೆ ನೀಡಿದೆ. ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ದಾಳಿಗಳ ಪರಿಣಾಮವಾಗಿ...

Read moreDetails
ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

June 8, 2026
ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

June 8, 2026
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

June 8, 2026
ಟಾಕ್ಸಿಕ್‌ ಮೇಕಿಂಗ್‌ ವಿಡಿಯೋ ರಿಲೀಸ್‌‌: ಇದು ನಿರ್ದೇಶಕಿ ಗೀತು ಬರ್ತ್ ಡೇ ಸ್ಪೆಷಲ್

ಟಾಕ್ಸಿಕ್‌ ಮೇಕಿಂಗ್‌ ವಿಡಿಯೋ ರಿಲೀಸ್‌‌: ಇದು ನಿರ್ದೇಶಕಿ ಗೀತು ಬರ್ತ್ ಡೇ ಸ್ಪೆಷಲ್

June 8, 2026
Next Post
ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿಎಂ ಡಿ ಕೆ ಶಿವಕುಮಾರ್

ಸಿಎಂ ಕಚೇರಿಯಲ್ಲಿ ಡಿಕೆಶಿ ಮುದ್ರೆ; ವಿಶ್ವಾಸದ ಅಧಿಕಾರಿಗಳಿಗೆ ಮಹತ್ವದ ಹುದ್ದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada