
ಬೆಳಗಾವಿ: ಸಾರಿಗೆ ಬಸ್ ಹಾಗೂ ಸೋಯಾಬೀನ್ ರಾಶಿಯ ಯಂತ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ 6 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಲಪ್ರಭಾ ನದಿ ಸಮೀಪ ಇಂದು ನಡೆದಿದೆ.
ಧಾರವಾಡದಿಂದ ಬೈಲಹೊಂಗಲ ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ ಮಲಪ್ರಭಾ ನದಿ ಪಕ್ಕದಲ್ಲಿದ್ದ ಸೋಯಾಬೀನ್ ರಾಶಿ ಯಂತ್ರಕ್ಕೆ ಡಿಕ್ಕಿ ಹೊಡೆದಿದೆ.
ಬಳಿಕ ದೊಡ್ಡ ಅವಘಡವನ್ನು ತಪ್ಪಿಸಲು ಹೋಗಿ ಚಾಲಕ ಬಸ್ ಅನ್ನು ಪಕ್ಕದಲ್ಲಿದ್ದ ಕಬ್ಬಿನ ಗದ್ದೆಗೆ ನುಗ್ಗಿಸಿದ್ದಾರೆ.ಈ ವೇಳೆ ಬಸ್ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಸಮಾಜ ಸೇವಕ ಮಲ್ಲಿಕಾರ್ಜುನ ಗಣಿಗೇರ ಹಾಗೂ ಜಾಲಿಕೊಪ್ಪ ಗ್ರಾಮಸ್ಥರು ಅಂಬುಲೆನ್ಸ್ ಮೂಲಕ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.