• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿ.ಸೋಮಣ್ಣಗೆ ಎರಡು ಕಡೆ ಟಿಕೆಟ್… ಬಿಎಸ್​ವೈ ಉತ್ತರಾಧಿಕಾರಿ ರೂಪಿಸಲು ತಂತ್ರ..!

Any Mind by Any Mind
April 14, 2023
in Top Story, ಕರ್ನಾಟಕ
0
ವಿ.ಸೋಮಣ್ಣಗೆ ಎರಡು ಕಡೆ ಟಿಕೆಟ್… ಬಿಎಸ್​ವೈ ಉತ್ತರಾಧಿಕಾರಿ ರೂಪಿಸಲು ತಂತ್ರ..!
Share on WhatsAppShare on FacebookShare on Telegram

ADVERTISEMENT

ಬೆಂಗಳೂರು :ಏ.14: ಬಿಜೆಪಿ ಪಕ್ಷದಲ್ಲಿ ವೀರಶೈವ ಲಿಂಗಾಯಿತ ನಾಯಕತ್ವಕ್ಕಾಗಿ ಆಂತರಿಕವಾಗಿ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಟಿಕೆಟ್​ ಹಂಚಿಕೆ ಸಂದರ್ಭದಲ್ಲಿ ಸ್ಪೋಟಗೊಂಡಿದೆ. ದಶಕಗಳ ಕಾಲ ತನ್ನ ನಾಯಕತ್ವದಲ್ಲಿಯೇ ಪಕ್ಷವನ್ನು ತಳ ಹಂತದಿಂದ ಸಂಟಿಸಿ, ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ತರಲು ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಬಳಿಕ ನಾಯಕತ್ವದ ಪ್ರಶ್ನೆ ಸಹಜವಾಗಿಯೇ ಎದ್ದಿದೆ.

ಯಡಿಯೂರಪ್ಪ ಉತ್ತರಾಧಿಕಾರಿಯಾಗಿ ಸಮಾಜದಲ್ಲಿ ವಿಜಯೇಂದ್ರ ಅವರನ್ನು ಬೆಳೆಸುವ ಪ್ರಯತ್ನ ನಡೆಯಿತು ಆದರೆ ‌ವಯಸ್ಸು ಹಾಗು ಇನ್ನಿತರ ಕಾರಣಗಳಿಂದ ಇನ್ನಹ ಕೆಲ‌ಕಾಲ‌ ಪಕ್ಷ ಸಂಘಟನೆ ಮಾಡಲಿ‌ತದನಂತರ ನಾಯಕತ್ವ‌ ಕೋಡೊಣ ಎನ್ನುವ ಮಾತುಕತೆ ನಡೆದಿದೆ ಆ ಕಾರಣಕ್ಕಾಗಿಯೇ ಚುನಾವಣಾ ರಾಜಕಾರಣ ಮೂಲಕ ಸಚಿವ ವಿ.ಸೋಮಣ್ಣ ಅವರನ್ನು ಸಮುದಾಯದ ನಾಯಕರನ್ನಾಗಿ ರೂಪಿಸುವ ಕೆಲಸವನ್ನು ತೆರೆ ಮರೆಯಲ್ಲಿ ಒಂದು ತಂಡ ವ್ಯವಸ್ಥಿತವಾಗಿಯೇ ಮಾಡುತ್ತಿದೆ ಎನ್ನುವುದು ಯಡಿಯೂರಪ್ಪ ಬಣದಲ್ಲಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಉತ್ತರಾಧಿಕಾರಿಯಾಗಿ ಗುರುತಿಸಿಕೊಳ್ಳಲು ಸಮುದಾಯದ ಕೆಲ ನಾಯಕರುಗಳ ನಡುವೆ ಆಂತರಿಕ ಸಂಘರ್ಷ ನಡೆಯುತ್ತಿದ್ದದ್ದು ಸುಳ್ಳೇನು ಅಲ್ಲ. ವೀರಶೈವ ಲಿಂಗಾಯಿತ ಸಮುದಾಯದ ಮೇಲೆ ತಮ್ಮದೇ ಆದ ಬಿಗಿ ಹಿಡಿತ ಹೊಂದಿರುವ ಯಡಿಯೂರಪ್ಪ ಅವರನ್ನು ಪ್ರತಿ ಚುನಾವಣೆಯಲ್ಲಿ ಈ ಸಮುದಾಯ ದೊಡ್ಡ ಪ್ರಮಾಣದಲ್ಲಿ ಬೆಂಬಲಿಸಿಕೊಂಡು ಬಂದ ಕಾರಣದಿಂದ ರಾಜ್ಯದಲ್ಲಿ ಬಿಜೆಪಿ ಭದ್ರವಾಗಿ ತಳವೂರಲು ಮತ್ತು ತನ್ನ ನೆಲೆ ವಿಸ್ತರಿಸಿಕೊಳ್ಳಲು ಸಾಧ್ಯವಾಗಿದೆ ಎನ್ನುವ ಮಾತನ್ನ ಯಾರೂ ತಳ್ಳಿ ಹಾಕುವುದಿಲ್ಲ.

ಬಿಜೆಪಿ ಪಕ್ಷಕ್ಕೆ ಸಂಘಟನಾ ಚತುರ ವಿ.ಸೋಮಣ್ಣ ಅವರನ್ನು ಕರೆದುಕೊಂಡು ಬಂದಿದ್ದು ಯಡಿಯೂರಪ್ಪ. ಸೋಮಣ್ಣ ಮತ್ತು ಬಿಎಸ್​ವೈ ನಡುವೆ ವಿಷ ಬೀಜ ಬಿತ್ತಿ ಅವರ ಬಾಂಧವ್ಯ ದೂರವಾಗುವಂತೆ ಮಾಡುವಲ್ಲಿ ಹಲವು ಕಾಣದ ಕೈಗಳ ಪಾತ್ರವಿದೆ. ಇದೇ ಸಂದರ್ಭವನ್ನು ಬಳಸಿಕೊಂಡ ಹೈಕಮಾಂಡ್​ ಪ್ರಮುಖರೊಬ್ಬರು, ಸೋಮಣ್ಣ ಅವರಿಗೆ ಹೊಸ ಟಾಸ್ಕ್​ ನೀಡುವ ಮೂಲಕ ಭವಿಷ್ಯದಲ್ಲಿ ವೀರಶೈವ ಲಿಂಗಾಯಿತ ನಾಯಕನಾಗಿ ರೂಪಿಸುವ ಯೋಜನೆ ಹಾಕಿಕೊಂಡಿದೆ. ಯಡಿಯೂರಪ್ಪ ನಂತರದ ಉತ್ತರಾಧಿಕಾರಿ ಸ್ಥಾನ ತುಂಬುವ ಪ್ರಯತ್ನ ನಡೆಯುತ್ತಿದೆ

ನೀವು ಕೇವಲ ಗೋವಿಂದರಾಜ ನಗರದಲ್ಲಿ ಸೀಮಿತವಾದರೆ ಲಿಂಗಾಯತ ನಾಯಕನಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಬೆಂಗಳೂರು ಹೊರತಾದ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಗೆಲ್ಲಬೇಕು. ಹುಲಿಯನ್ನು ಹೊಡೆದು ನಾಯಕನಾಗಬೇಕು ಎನ್ನುವ ಬಿಜೆಪಿ ನಾಯಕರ ಭರವಸೆಯ ಮಾತುಗಳಿಗೆ ಮಣೆ ಹಾಕಿರುವ ವಿ.ಸೋಮಣ್ಣ ಅದರ ಭಾಗವಾಗಿ ಚಾಮರಾಜನಗರ ಮತ್ತು ವರುಣದಲ್ಲಿ ಸ್ಪರ್ಧೆ ಮಾಡುವ ಮೂಲಕ ಅಗ್ನಿ ಪರೀಕ್ಷೆಗೆ ಮುಂದಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ದ ಸ್ಪರ್ಧೆಗೆ ಮುಂದಾಗಿದ್ದ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್​ ನಿರಾಕರಿಸಿದ್ದ ಬಿಜೆಪಿ ಈಗ ಅಲ್ಲಿ ಸೋಮಣ್ಣ ಅವರನ್ನು ಕಣಕ್ಕಿಳಿಸುವ ಮೂಲಕ ಆ ಭಾಗದಲ್ಲಿ ಬಂಪರ್​ ಬೆಳೆಯುವ ಲೆಕ್ಕಾಚಾರದಲ್ಲಿದೆ.

ಚಾಮರಾಜನಗರ ಮತ್ತು ವರುಣದಲ್ಲಿ ಎರಡೂ ಕ್ಷೇತ್ರದಲ್ಲಿ ಗೆದ್ದರೆ ಆ ಮೂಲಕ ಸೋಮಣ್ಣ ಲಿಂಗಾಯಿತ ಸಮುದಾಯದ ವರ್ಚಸ್ಸು ಹೊಂದಿದ ನಾಯಕರಾಗಿ ಹೊರಹೊಮ್ಮುತ್ತಾರೆ. ಒಂದು ವೇಳೆ ಒಂದು ಕ್ಷೇತ್ರ ಸೋತು ಮತ್ತೊಂದರಲ್ಲಿ ಗೆದ್ದರೂ ಅವರ ನಾಯಕತ್ವದ ಕಳೆಗೆ ಮುಸುಕಾಗುವುದಿಲ್ಲ. ಒಂದು ಕಡೆ ಕೈ ಕೊಟ್ಟರೂ ಮತ್ತೊಂದು ಕಡೆಯಲ್ಲಿ ಅವರ ನಾಯಕತ್ವವನ್ನು ಉಳಿಸಿಕೊಳ್ಳುವ ಸೇಫ್ ಗೇಮ್​ ಪ್ಲಾನ್​ ರೂಪಿಸಲಾಗಿದೆ. ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಲಕ್ಷ್ಮಣ ಸವದಿ ಸೇರಿದಂತೆ ಹಲವು ಲಿಂಗಾಯಿತ ನಾಯಕರನ್ನು ಬದಿಗೆ ಸರಿಸಲಾಗಿದೆ. ಈಗ ಉಳಿದಿರುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತ್ರ. ಮುಂದೆ ಅವರನ್ನು ಹೇಗೋ ಸಂಬಾಳಿಸಿಕೊಂಡು, ಸೋಮಣ್ಣ ಅವರನ್ನು ಸಮುದಾಯದ ನಾಯಕನಾಗಿ ರೂಪಿಸಿದರೆ, ಯಡಿಯೂರಪ್ಪ ಬಣ ಮೇಲುಗೈ ಆಗದಂತೆ ಸದಾ ಸವಾರಿ ಮಾಡಬಹುದು ಎನ್ನುವ ಲೆಕ್ಕಾಚಾರ ಪಕ್ಕಾ ಆಗದೆ.

Tags: 2023 election2023 Election Resultassembly electionBJPBJP GovernmentBOMMAIBSYCMCmIbrahimCongress PartyctraviDKShivakumarElectionElection Commissionelection resultHDDHDKJanasankalpa YatreJDSKannadaKarnataka ElectionKarnataka Governmentkarntaka politiciankumaraswamyMysoreNalin Kumar KateelNewsPancharatna YatrePratidhvanisiddaramaiahsomanna vs siddaramaiahState ElectionVarunaVijayasankalpavsomannaನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಒಂದು ವರ್ಷ ಪೂರೈಸಿದ ʻಕೆಜಿಎಫ್‌ 2ʼ.. ಯಶ್‌ ಮುಂದಿನ ಸಿನಿಮಾಗಾಗಿ ಕಾದು ಕುಳಿತ ಫ್ಯಾನ್ಸ್‌..!

Next Post

‘ಬಿಜೆಪಿಯ ಶೇ.90ರಷ್ಟು ಬಂಡಾಯ ನಾಯಕರು ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ’ :ಡಿ.ಕೆ ಶಿವಕುಮಾರ್​

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
‘ಬಿಜೆಪಿಯ ಶೇ.90ರಷ್ಟು ಬಂಡಾಯ ನಾಯಕರು ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ’ :ಡಿ.ಕೆ ಶಿವಕುಮಾರ್​

‘ಬಿಜೆಪಿಯ ಶೇ.90ರಷ್ಟು ಬಂಡಾಯ ನಾಯಕರು ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ’ :ಡಿ.ಕೆ ಶಿವಕುಮಾರ್​

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada