
ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ (Shocking News ) ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (UP CM Yogi Adityanath) ಅವರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಅವರ ಆದಿತ್ಯನಾಥ್ ಅವರ ಜನತಾ ದರ್ಬಾರ್ನಿಂದ ಹೊರಬಂದ ಕೂಡಲೇ ಮಹಿಳೆ ಗೌತಮಪಲ್ಲಿ ಪೊಲೀಸ್ ಠಾಣೆ ಪ್ರದೇಶದ ವಿಕ್ರಮಾದಿತ್ಯ ಮಾರ್ಗದ 19 ಬಿಡಿ ಜಂಕ್ಷನ್ ಬಳಿ ಪೆಟ್ರೋಲ್ (Petrol) ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಕಂಬಳಿ ಬಳಸಿ ಬೆಂಕಿ ನಂದಿಸಿದ್ದಾರೆ. ಮಹಿಳೆಯನ್ನು ತ್ವರಿತವಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದದ್ದು,ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಅಂಜಲಿ ಜಾತವ್ ಎಂದು ಹೇಳಲಾಗಿದೆ.
ಕೌಟುಂಬಿಕ ಕಲಹದಿಂದಾಗಿ ಅಂಜಲಿ ಜಾತವ್ ಎಂಬ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಸಮಸ್ಯೆ ಪರಿಹರಿಸಲು ಸಾಧ್ಯವಾಗದಿದ್ದಾಗ, ಅವರು ಮಂಗಳವಾರ ಸಿಎಂ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ಗೆ ತಮ್ಮ ಸಮಸ್ಯೆ ಹೇಳಲು ಬಂದಿದ್ದರು. ಅಲ್ಲಿ ಯಾವುದೇ ಪರಿಹಾರ ಕಂಡುಬಂದಿಲ್ಲ. ಇದರಿಂದ ಮನನೊಂದ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಬಗ್ಗೆ ಸಮಾಜವಾದಿ ಪಕ್ಷ (SP Party) ಯೋಗಿ ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ.ಎಸ್ಪಿ ತನ್ನ ಅಧಿಕೃತ ಎಕ್ಸ್(X Handle) ಹ್ಯಾಂಡಲ್ನಲ್ಲಿ ಘಟನೆಯ ವೀಡಿಯೊವನ್ನು ಹಂಚಿಕೊಂಡಿದೆ ಮತ್ತು ಯೋಗಿ ಸರ್ಕಾರವನ್ನು ಟೀಕಿಸಿದೆ, ‘ಸಂತ್ರಸ್ತೆ ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಅವರ ಜನತಾ ದರ್ಬಾರ್ (Janatha Darbar) ಬಳಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಭ್ರಷ್ಟಾಚಾರ ಮತ್ತು ಅಧಿಕಾರಿಗಳ ನಿರಂಕುಶ ಪ್ರಭುತ್ವದಿಂದ ಮುಳುಗಿರುವ ಈ ಸರ್ಕಾರ ಸಾಮಾನ್ಯ ಜನರಿಗೆ ನ್ಯಾಯ ಒದಗಿಸಲು ವಿಫಲವಾಗಿದೆ.ಮೇಲ್ನೋಟದ ಪ್ರಚಾರದ ಮೇಲೆ ಸರ್ಕಾರ ನಡೆಯಲು ಸಾಧ್ಯವಿಲ್ಲ. ಮಹಿಳೆಗೆ ಪರಿಹಾರ ಮತ್ತು ನ್ಯಾಯ ಸಿಗಬೇಕು ಎಂದು ಬರೆದುಕೊಂಡಿದೆ.





