• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

“ಅಮ್ಮನ ನೆನಪುಗಳಿರುವ ಮೊಬೈಲ್ ಹಿಂದಿರುಗಿಸಿ” ಕರೋನಾದಿಂದ ತಾಯಿಯನ್ನು ಕಳೆದುಕೊಂಡ ಮಗಳ ಭಾವನಾತ್ಮಕ ಪತ್ರ ವೈರಲ್

Any Mind by Any Mind
May 23, 2021
in ಕರ್ನಾಟಕ
0
“ಅಮ್ಮನ ನೆನಪುಗಳಿರುವ ಮೊಬೈಲ್ ಹಿಂದಿರುಗಿಸಿ” ಕರೋನಾದಿಂದ ತಾಯಿಯನ್ನು ಕಳೆದುಕೊಂಡ ಮಗಳ ಭಾವನಾತ್ಮಕ ಪತ್ರ ವೈರಲ್
Share on WhatsAppShare on FacebookShare on Telegram

ಗುಡ್ಡಗಾಡು ಜಿಲ್ಲೆ ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆಯ ಸ್ಥಾಪನೆಗಾಗಿ ಹಲವು ವರ್ಷಗಳಿಂದಲೇ ಒತ್ತಾಯ ಇದೆಯಾದರೂ ರಾಜ್ಯ ಸರ್ಕಾರ ಮಾತ್ರ ಇತ್ತ ಗಮನ ಹರಿಸಿಲ್ಲ. ಈ ಜಿಲ್ಲೆಯಲ್ಲಿ ಏನಾದರೂ ತುರ್ತು ವೈದ್ಯಕೀಯ ಅವಶ್ಯಕತೆಗೆ ಮೈಸೂರು ಅಥವಾ ಮಂಗಳೂರಿಗೇ ತೆರಳಬೇಕಿದೆ. ಕಳೆದ 5 ವರ್ಷಗಳ ಹಿಂದೆ ರಾಜ್ಯ ಸರ್ಕಾರ ಮಡಿಕೇರಿಗೆ ವೈದ್ಯಕೀಯ ಕಾಲೇಜನ್ನೂ ಮಂಜೂರು ಮಾಡಿದ್ದು ಅದು ಸಿಬ್ಬಂದಿಗಳ ಕೊರತೆಯಿಂದಲೇ ಈಗಲೂ ನಡೆಯುತ್ತಿದೆ. ಇಡೀ ಕೊಡಗು ಜಿಲ್ಲೆಗೆ ಇರುವ ಏಕೈಕ ಉನ್ನತ ಆಸ್ಪತ್ರೆ ಎಂದರೆ ಮಡಿಕೇರಿಯ ಜಿಲ್ಲಾಸ್ಪತ್ರೆ ಮಾತ್ರ. ಇದೀಗ ಮಹಾಮಾರಿ ಕೋವಿಡ್ ನಿಂದ ಜನರು ರಕ್ಷಿಸಿಕೊಳ್ಳಲೂ ಇದೇ ಆಸ್ಪತ್ರೆಗೆ ತೆರಳಬೇಕಾಗಿದೆ. ಸರ್ಕಾರ ಈ ಆಸ್ಪತ್ರೆಗೆ ಅನೇಕ ಸೌಲಭ್ಯಗಳನ್ನೂ ಕಲ್ಪಿಸಿಕೊಟ್ಟಿದೆ. ಆದರೆ  ಸಿಬ್ಬಂದಿಗಳೇ ಭ್ರಷ್ಟರಾಗಿದ್ದರೆ ಜನರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ.

ADVERTISEMENT
ಕರೋನದಿಂದ ಮೃತಪಟ್ಟ ತಾಯಿಯ ಮೊಬೈಲ್ ಹುಡುಕಾಟದಲ್ಲಿ ಬಾಲಕಿ: ಅಮ್ಮನ ಅಮೂಲ್ಯ ನೆನಪುಗಳು ಆ ಮೊಬೈಲ್ನಲ್ಲಿ

ಕಳೆದ ವಾರ ಇಲ್ಲಿನ ಕೋವಿಡ್ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯ ವೈದ್ಯ ಡಾ ಏ ಸಿ ಶಿವಕುಮಾರ್ ರೋಗಿಗಳ ಸಂಬಂಧಿಕರಿಂದ ಒತ್ತಾಯ ಹಾಕಿಯೇ ಲಂಚ ಪಡೆಯುತಿದ್ದ ವಿಷಯ ವೈರಲ್ ಆಗುತ್ತಿದ್ದಂತೆಯೇ ಜಿಲ್ಲಾಡಳಿತ ಕೂಡಲೇ ಆತನ್ನು ಅಮಾನತು ಪಡಿಸಿದೆ. ಆದರೆ ಇಲ್ಲಿ ಮೊದಲಿನಿಂದಲೂ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಮತ್ತು ಅವರ ಮೊಬೈಲ್ ಮತ್ತಿತರ ವಸ್ತುಗಳು ಕಳುವಾಗುತ್ತಿವೆ ಎಂಬ ಆರೋಪ ಕೇಳಿ ಬಂದಿತ್ತು. ಅದರೆ ಜಿಲ್ಲಾಡಳಿತ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ರೋಗಿಗಳ ಸಾವು ಪ್ರಕರಣವು ಹೆಚ್ಚಾಗಿತ್ತು 10 ದಿನಗಳ ಹಿಂದೆ ಈ ಆಸ್ಪತ್ರೆಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ವಿ  ಸೋಮಣ್ಣ ಅವರು ಹೆಚ್ಚಿನ ರೋಗಿಗಳ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳ ವಿರುದ್ದ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದರು. ಇದಾದ ಬಳಿಕವೇ ಭ್ರಷ್ಟ ವೈದ್ಯ ಡಾ ಶಿವಕುಮಾರ್ ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕು ಬಿದ್ದಿದ್ದು ಎಂದರೆ ಇವರು ಎಷ್ಟರ ಮಟ್ಟಿಗೆ ಸರ್ಕಾರದ ನಿರ್ದೇಶನಗಳನ್ನು ಪಾಲಿಸುತ್ತಾರೆ ಎಂಬುದು ಅರಿವಾಗುತ್ತದೆ.

Hrithiksha, daughter of a daily wage worker in Kushalnagar, lost her mother to Covid-19 on May 16. She is requesting people who might have taken her mother’s mobile at Covid hospital in Madikeri to give it back. She says that mobile has a lot of memories of her mother. pic.twitter.com/5N5aLLjJgt

— Kodagu Connect (@KodaguConnect) May 23, 2021

  ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರ ಮೊಬೈಲ್ ಕಳವು ಪ್ರಕರಣಗಳು ವರದಿಯಾಗುತ್ತಲೇ ಇದ್ದು, ಇದೀಗ ಕರೋನಾ ಸೋಂಕಿಗೆ ಬಲಿಯಾದ ಮಾತೆಯೊಬ್ಬರ ಮೊಬೈಲನ್ನು ಮರಳಿಸುವಂತೆ ಭಾನುವಾರ ಆಕೆಯ ಪುತ್ರಿ ಮನವಿ ಮಾಡಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕುಶಾಲನಗರದ ಹಾರಂಗಿ ರಸ್ತೆಯ ಕುಟುಂಬವೊಂದರ ಮೂರು ಮಂದಿ ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಈ ಪೈಕಿ ತಾಯಿ 15 ದಿನಗಳ ಹಿಂದೆ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರೆ, ತಂದೆ ಮತ್ತು ಮಗಳು ಹೋಂ ಕ್ವಾರಂಟೈನ್ ನಲ್ಲಿದ್ದರು. ದುರಾದೃಷ್ಟವಶಾತ್ ಮೇ 16ರಂದು ತಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಂದೆ ಮತ್ತು ಮಗಳು ಮನೆಯಿಂದ ಹೊರಬರಲಾಗದೆ ನೆರೆಹೊರೆಯವರ ಸಹಾಯದಿಂದ ದಿನ ಕಳೆದಿದ್ದಾರೆ.

ಕೋವಿಡ್‌ ನಿಯಂತ್ರಣ ಸಾದ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೊರಡಿ ಎಂದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಆದರೆ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ತಾಯಿಯ ಮೊಬೈಲ್ ಕಾಣೆಯಾಗಿದ್ದು,ಇದುವರೆಗೂ ಅದು ಪತ್ತೆಯಾಗಿಲ್ಲ. ತಾಯಿಯನ್ನು ಕಳೆದುಕೊಂಡಿರುವ ಮಗಳಿಗೆ ಅಮ್ಮನ ನೆನಪುಗಳಿಗೆ ಇದ್ದ ಆಸ್ತಿಯೆಂದರೆ ಆ ಮೊಬೈಲ್ ಮಾತ್ರವಾಗಿದ್ದು, ಇದೀಗ ತಾಯಿಯನ್ನು ಕಳೆದುಕೊಂಡಿರುವ ಆ ಕಂದಮ್ಮ ಅಮ್ಮನ ಮೊಬೈಲ್ ನ್ನು ಯಾರಾದರೂ ತೆಗೆದುಕೊಂಡಿದ್ದರೆ ಅದನ್ನು ಮರಳಿಸುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದಾಳೆ. ಅಲ್ಲದೆ ಈ ಸಂಬಂಧ ಜಿಲ್ಲಾಧಿಕಾರಿಗಳು, ಶಾಸಕರುಗಳು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆಯ ಸಿಬ್ಬಂದಿಗಳಲ್ಲೂ ಮನವಿ ಮಾಡಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿಗೆ ಬಲಿಯಾದವರ ಮೊಬೈಲ್ ಕಳವಾಗಿರುವ ಹಲವು ಪ್ರಕರಣಗಳು ಈಗಾಗಲೇ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗವಾಗಿದ್ದು, ಆದರೆ ಯಾರೊಬ್ಬರೂ ದೂರು ನೀಡಿಲ್ಲ ಎಂದು ಮಡಿಕೇರಿ ನಗರ ವೃತ್ತದ ಪೊಲೀಸ್ ನಿರೀಕ್ಷಕ ಅನೂಪ್ ಮಾದಪ್ಪ ಅವರು ತಿಳಿಸಿದ್ದಾರೆ. ಒಟ್ಟಿನಲ್ಲಿ ಕರೋನಾ ಮಹಾಮಾರಿಗೆ ಇಡೀ ವಿಶ್ವವೇ ತಲ್ಲಣಗೊಂಡಿರುವ ಈ ಸಂದರ್ಭದಲ್ಲಿ, ಸೋಂಕಿತರ ಸಾವಿನಲ್ಲೂ ಹಣವನ್ನೇ ಎದುರು ನೋಡುತ್ತಿರುವ ಮೊಬೈಲ್ ಕಳ್ಳರ ಪತ್ತೆಗೆ ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗುವುದರೊಂದಿಗೆ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಬೇಕಾಗಿದೆ.

 ಇಂದು ಗುಮ್ಮನಕೊಲ್ಲಿ ಗ್ರಾಮದ ಹೃತಿಕ್ಷ ಅವರ ತಾಯಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಕಳೆದಿರುವ ಮೊಬೈಲ್ ನಲ್ಲಿ ತನ್ನ ತಾಯಿಯ ನೆನಪು ಇದ್ದು, ಅದನ್ನು ಹುಡುಕಿಕೊಡುವಂತೆ ಮಾಡಿರುವ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದೆ. ಇದೀಗ ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಮೊಬೈಲ್ ಹುಡುಕಲು ಪ್ರಯತ್ನಿಸುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಸ್ಪತ್ರೆಯ ವೈದ್ಯ ಡಾ ಕುಶ್ವಂತ್ ಕೋಳಿ ಬೈಲು ಅವರು ಆಸ್ಪತ್ರೆಯಲ್ಲಿ ಮೃತರಾಗುವವರ ವಸ್ತುಗಳನ್ನುಪ್ಯಾಕ್ ಮಾಡಿ ಸಂಬಂಧಿಕರಿಗೆ ನೀಡಲಾಗುತ್ತದೆ. ಬಹಳಷ್ಟು ಮಂದಿ ಇನ್ನು ತಮ್ಮ ಸಂಬಂಧಿಕರ ಮೊಬೈಲ್ ಪಡೆದುಕೊಂಡಿಲ್ಲ. ಆಸ್ಪತ್ರೆಯಲ್ಲಿ ಇನ್ನೂ ಸುಮಾರು 10 ಮೊಬೈಲ್ ಗಳಿವೆ.ಈ ಮೊಬೈಲ್ ಗಳಲ್ಲಿ ಬಾಲಕಿಯ ತಾಯಿಯ ಮೊಬೈಲ್ ಇರಬಹುದು. ಒಂದು ವೇಳೆ ಅವರ ಮೊಬೈಲ್ ಇದ್ದರೆ ಅದನ್ನ ಹಿಂದಿರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸಾಮಾಜಿಕ ತಾಣದಲ್ಲಿ ಬಾಲಕಿಯ ವಿಡಿಯೋವನ್ನು ಗಮನಿಸಿದ ರಾಷ್ಟ್ರೀಯ  ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮೂಲಕ  ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ನಿಕಟ ಪೂರ್ವ ಅಧ್ಯಕ್ಷ ಹನೀಫ್ ಎಸ್ ಪಿ ಸಂಪರ್ಕದಿಂದ ಹೃತಿಕ್ಷ ಗೆ ನೂತನ ಮೊಬೈಲ್ ನೀಡಿದ್ದಾರೆ. ಆದರೆ ಬಾಲಕಿಯ ತಾಯಿಯ ಮೊಬೈಲ್ ಬೆಲೆ ಕಟ್ಟಲು ಸಾಧ್ಯವಿಲ್ಲ ಏಕೆಂದರೆ ಬಾಲಕಿಯು ಆ ಮೊಬೈಲ್ ನೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದು ಅಮೂಲ್ಯ ಫೋಟೋಗಳಿವೆ. ಜಿಲ್ಲಾಡಳಿತ ಬಾಲಕಿಯ ಮೊಬೈಲ್ ಹುಡುಕಿಸಿ ಕೊಡಲಿ ಇನ್ನು ಮುಂದಾದರೂ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲಿ ಎಂಬುದೇ ಜನರ ಒತ್ತಾಯ.

Previous Post

ಲಾಕ್‌ಡೌನ್‌ ಉಲ್ಲಂಘಣೆ ಆರೋಪ: ಯುವಕನಿಗೆ ಹಲ್ಲೆ ಮಾಡಿದ ಜಿಲ್ಲಾಧಿಕಾರಿ ವಿರುದ್ಧ ಛತ್ತೀಸ್‌ಗಢ ಸರ್ಕಾರ ಕ್ರಮ

Next Post

ಚಾಮರಾಜನಗರ ಆಕ್ಸಿಜನ್‌ ದುರಂತ: ಸಂತ್ರಸ್ಥರಿಗೆ ತಲಾ ಎರಡು ಲಕ್ಷ ಪರಿಹಾರ -ಆದರೆ ತಪ್ಪಿತಸ್ಥರ ವಿರುದ್ದ ಇನ್ನೂ ಕ್ರಮಕ್ಕೆ ಮುಂದಾಗದ ರಾಜ್ಯ ಸರ್ಕಾರ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಚಾಮರಾಜನಗರ ಆಕ್ಸಿಜನ್‌ ದುರಂತ: ಸಂತ್ರಸ್ಥರಿಗೆ  ತಲಾ ಎರಡು ಲಕ್ಷ  ಪರಿಹಾರ  -ಆದರೆ ತಪ್ಪಿತಸ್ಥರ ವಿರುದ್ದ ಇನ್ನೂ ಕ್ರಮಕ್ಕೆ ಮುಂದಾಗದ ರಾಜ್ಯ ಸರ್ಕಾರ

ಚಾಮರಾಜನಗರ ಆಕ್ಸಿಜನ್‌ ದುರಂತ: ಸಂತ್ರಸ್ಥರಿಗೆ ತಲಾ ಎರಡು ಲಕ್ಷ ಪರಿಹಾರ -ಆದರೆ ತಪ್ಪಿತಸ್ಥರ ವಿರುದ್ದ ಇನ್ನೂ ಕ್ರಮಕ್ಕೆ ಮುಂದಾಗದ ರಾಜ್ಯ ಸರ್ಕಾರ

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada