• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Hevy Rain in Bengalore : ಬೆಂಗಳೂರಿನಲ್ಲಿ ಮೊದಲ ಮಳೆಗೆ ಮುಳುಗಿ ಸತ್ತ ಯುವತಿ..! ಸಿಎಂ ಕೆಂಡಾಮಂಡಲ..!

ಪ್ರತಿಧ್ವನಿ by ಪ್ರತಿಧ್ವನಿ
May 21, 2023
in Top Story, ಇತರೆ / Others, ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ
0
Hevy Rain in Bengalore : ಬೆಂಗಳೂರಿನಲ್ಲಿ ಮೊದಲ ಮಳೆಗೆ ಮುಳುಗಿ ಸತ್ತ ಯುವತಿ..! ಸಿಎಂ ಕೆಂಡಾಮಂಡಲ..!
Share on WhatsAppShare on FacebookShare on Telegram

ಬೆಂಗಳೂರಿ ಸುರಿದ ಧಾರಕಾರ ಬೇಸಿಗೆ ಮಳೆಗೆ ಯುವತಿಯೊಬ್ಬರು ಬಲಿಯಾಗಿದ್ದಾರೆ. ಭಾರೀ ಮಳೆಯಿಂದ ಕೆ.ಆರ್ ಸರ್ಕಲ್ ಅಂಡರ್ ಪಾಸ್​ಗೆ ನೀರು ಬಂದಿತ್ತು. ಕ್ರಮೇಣವಾಗಿ ಅಂಡರ್ ಪಾಸ್ ಕೆಳಗೆ ನೀರಿನ ಮಟ್ಟ ಹೆಚ್ಚಾಗಿದೆ. ಈ ವೇಳೆ ನೀರಿನಲ್ಲಿ ಸಿಲುಕಿದ್ದ ಆರಕ್ಕೂ ಹೆಚ್ಚು ಮಂದಿ ನೀರು ಹೆಚ್ಚಾಗುತ್ತಿದ್ದಂತೆ ಜೋರಾಗಿ ಕಿರುಚಾಡೋಕೆ ಶುರು ಮಾಡಿದ್ದಾರೆ. ಈ ವೇಳೆ ಅಂಡರ್ ಪಾಸ್ ಮೇಲಿದ್ದ ಬೇರೆ ವಾಹನ ಸವಾರರು ಕೂಡಲೇ ಸಹಾಯಕ್ಕೆ ಹೋಗಿದ್ದಾರೆ. ಮೊದಲಿಗೆ ಸೀರೆ ಕೊಟ್ಟು ಕೆಳಗಡೆ ಇದ್ದವರನ್ನು ಮೇಲೆತ್ತಲು ಪ್ರಯತ್ನ ಮಾಡಿ ವಿಫಲವಾದ ಬಳಿಕ, ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆ ಬಳಿಕ ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿ ಆಸ್ಪತ್ರೆಗೆ ಕಳಹಿಸಿ ಕೊಟ್ಟಿದ್ದು, ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಮಾಡಿದ ಆರೋಪ ಕೇಳಿ ಬಂದಿದ್ದು 22 ವರ್ಷದ ಇನ್ಫೋಸಿಸ್​ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿದ್ದಾರೆ.

ADVERTISEMENT

ಸಿಎಂ ಆದ ಮರು ದಿನವೇ ದುರಂತ, ಸಿದ್ದರಾಮಯ್ಯ ಗರಂ..
​

ಮಳೆ ಸುರಿದಿದ್ದು ಕೇವಲ ಅರ್ಧ ಗಂಟೆ ಮಾತ್ರ. ಆದರೂ ಅವಾಂತರದ ಸುದ್ದಿ ಟಿವಿಗಳಲ್ಲಿ ಬರುತ್ತಿದ್ದ ಹಾಗೆ ಅಲರ್ಟ್​ ಆದ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಳಿ ವರದಿ ಪಡೆದುಕೊಂಡಿದ್ದಾರೆ. ಮಳೆ ಹಾನಿ ಬಗ್ಗೆ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ಯಾವ್ಯಾವ ಭಾಗದಲ್ಲಿ ಹಾನಿಯಾಗಿದೆ ಎನ್ನುವ ಮಾಹಿತಿ ಕಲೆ ಹಾಕಿದ ಬಳಿಕ ಬಿಬಿಎಂಪಿ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಜನತ ತತ್ತರದ ಬಗ್ಗೆ ಕೇಳಿದ ಸಿಎಂ ಪ್ರಶ್ನೆಗೆ ಸಮರ್ಪಕ‌ ಮಾಹಿತಿ ನೀಡದ ಬಿಬಿಎಂಪಿ ಅಧಿಕಾರಿಗಳು. ಜೂನ್‌ನಲ್ಲಿ ಆರಂಭವಾಗುವ ಮಳೆಗಾಲಕ್ಕೆ ನಿಮ್ಮ ತಯಾರಿ ಏನು..? ಎಂದು ಪ್ರಶ್ನಿಸಿದ ಸಿಎಂ ಸಿದ್ಧರಾಮಯ್ಯ. ಸಿದ್ಧರಾಮಯ್ಯರ ಪ್ರಶ್ನೆಗೆ ಉತ್ತರಿಸಲು ತಡಬಡಾಯಿಸಿದ ಅಧಿಕಾರಿಗಳು. ಅರ್ಧ ಗಂಟೆ ಮಳೆಗೆ ಹೀಗೆ ಆದರೆ, ನೀವು ಬೇಸಿಗೆ ಕಾಲದಲ್ಲಿ ಕುಳಿತು ಮಾಡಿದ್ದೇನು..? ಈಗ ನಾನೇ ಅಲ್ಲಿಗೆ ಬರಬೇಕಾ..? ಎಂದು ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದಾರೆ. ಕೆಲಸ ಮಾಡುವುದಕ್ಕೆ ಆಗುವುದಿಲ್ಲ ಅಂದರೆ ಮನೆಗೆ ಹೋಗಿ ಎಂದಿರುವ ಸಿಎಂ ಸಿದ್ಧರಾಮಯ್ಯ ಮಾತಿಗೆ ಮುಂಗಾರು ಮಳೆ ಆರಂಭಕ್ಕೂ ಮುನ್ನಾ ಬೆಂಗಳೂರಿನಲ್ಲಿ ಇದು ಅಕಾಲಿಕ ಮಳೆ ಎಂದು ಸಮಜಾಯಿಸಿ ನೀಡಲು ಬಿಬಿಎಂಪಿ ಅಧಿಕಾರಿಗೆ ಗದರಿದ ಸಿಎಂ, ಅಕಾಲಿಕ ಮಳೆ ಹೌದು, ಮಳೆ ಹೇಳಿ ಕೇಳಿ ಬರಬೇಕಾ..? ಅದರಲ್ಲೂ ನಿಮ್ಮನ್ನ ಕೇಳಿ ಬರಬೇಕಾ..? ಎಂದು ಅಧಿಕಾರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ಫೋಸಿಸ್​ ಉದ್ಯೋಗಿ,​ ಆಂಧ್ರ ಮೂಲದ ಭಾನುರೇಖಾ ಸಾವು..!

ಕೆ.ಆರ್ ಸರ್ಕಲ್ ಬಳಿಯ ದುರಂತದ ಬಗ್ಗೆ ಟಿವಿಗಳಲ್ಲಿ ಸುದ್ದಿ ಬರುತ್ತಿರುವುದನ್ನು ಗಮನಿಸಿದ ಸಿಎಂ, ಕೂಡಲೇ ಅಧಿಕಾರಿಯನ್ನು ಆಸ್ಪತ್ರೆಗೆ ಕಳುಹಿಸಿ ಎಂದು ಸೂಚನೆ ಕೊಟ್ಟರಲ್ಲದೆ, ತಾನೇ ಎದ್ದು ಆಸ್ಪತ್ರೆಗೆ ಭೇಟಿ ನೀಡಿದರು. ಸಿಎಂ ಸಿದ್ದರಾಮಯ್ಯ ನೀಡಿರುವ ಮಾಹಿತಿಯಂತೆ ಮೃತ ಯುವತಿ ಭಾನುರೇಖಾ, ಆಂಧ್ರ ಪ್ರದೇಶದ ವಿಜಯವಾಡ ಮೂಲದವರು. ಬೆಂಗಳೂರಿನ ಇನ್ಫೋಸಿಸ್​ನಲ್ಲಿ ಉದ್ಯೋಗಿ ಆಗಿದ್ದರು. ಪ್ರಗತಿ ನಗರದಲ್ಲಿ ವಾಸವಾಗಿದ್ದ ಭಾನುರೇಖಾರನ್ನು ನೋಡಲು ಊರಿನಿಂದ ಅಜ್ಜಿ, ತಂಗಿ ಸೇರಿದಂತೆ ಕುಟುಂಬಸ್ಥರು ಬಂದಿದ್ದರು. ಇಂದು ಭಾನುವಾರ ಆಗಿದ್ದರಿಂದ ಕಬ್ಬನ್​ ಪಾರ್ಕ್​ ತೋರಿಸಲು ಕರೆ ತಂದಿದ್ದ ಭಾನುರೇಖಾ, ಬಾಡಿಗೆ ಕಾರು ಮಾಡಿಕೊಂಡು ಸುತ್ತಾಡಿಸುತ್ತಿದ್ದರು. ಕಾರು ಚಾಲಕ ಅಂಡರ್​ಪಾಸ್​ನಲ್ಲಿ ಭರ್ತಿಯಾಗಿದ್ದ ನೀರನ್ನು ನೋಡದೆ ಸಾಗಿದ್ದಾನೆ. ಕಾರಿನೊಳಕ್ಕೆ ನೀರು ತುಂಬಿಕೊಂಡು ಯುವತಿ ನೀರು ಕುಡಿದಿದ್ದಾಳೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಮಾಡಿಲ್ಲ ಎಂದು ಹೇಳಿದ್ದಾರೆ. ಆದರೆ ಪೋಷಕರು ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. ನಿರ್ಲಕ್ಷ್ಯದ ಬಗ್ಗೆ ವಿಚಾರಣೆ ಮಾಡಲು ಅಧಿಕಾರಿಗಳಿಗೆ ಹೇಳಿದ್ದೇನೆ. ಆಸ್ಪತ್ರೆಯವರು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಮಾಡಿದ್ದರೆ ಅಗತ್ಯ ಕ್ರಮ ತೆಗೆದುಕೊಳ್ತೇವೆ ಎಂದಿದ್ದಾರೆ.

5 ಲಕ್ಷ ಪರಿಹಾರ ಘೋಷಣೆ, ಸತ್ತವರಿಗೆಲ್ಲಾ ಹಣ ಬೇಕಿರಲ್ಲ..!

ಮಳೆಯ ನೀರಿನಲ್ಲಿ ಪ್ರಾಣ ಕಳೆದುಕೊಂಡ ಇನ್ಫೋಸಿಸ್​ ಉದ್ಯೋಗಿ ಭಾನುರೇಖಾಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಬಡ ಕುಟುಂಬಗಳ ನೆರವಿಗೆ ಹಣ ಪರಿಹಾರ ಆಗಬಹುದು. ಆದರೆ ಇನ್ಫೋಸಿಸ್​ನಲ್ಲಿ ಕೆಲಸ ಮಾಡುವ ಯುವತಿಗೆ 5 ಲಕ್ಷ ದೊಡ್ಡ ಮೊತ್ತವಲ್ಲ. ಆದರೆ ಬಿಬಿಎಂಪಿ ಜನರ ಪ್ರಾಣದ ಜೊತೆ ಚಲ್ಲಾಟ ಆಡುವುದನ್ನು ಮೊದಲು ನಿಲ್ಲಿಸಬೇಕು. ಬೆಂಗಳೂರಿನ ಬಹುತೇಕ ಎಲ್ಲಾ ಅಂಡರ್​ಪಾಸ್​ಗಳಲ್ಲೂ ಮಳೆ ಬರುತ್ತಿದ್ದ ಹಾಗೆ ನೀರು ತುಂಬಿಕೊಳ್ಳುತ್ತದೆ. ಕೆ. ಆರ್ ಸರ್ಕಲ್ ಮಾತ್ರವಲ್ಲ, ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌‌, ಓಕಳಿಪುರಂ, ಕಂಟೋನ್ಮೆಂಟ್, ಸೆವೆಂತ್​ ಮಿನಿಸ್ಟರ್ ಕ್ವಾರ್ಟಸ್, ಕಾವೇರಿ ಥಿಯೇಟರ್, ಶಿವಾನಂದ ಸರ್ಕಲ್, ಸೇರಿದಂತೆ ಹತ್ತಾರು ಅಂಡರ್​ಪಾಸ್​ನಲ್ಲೂ ಇದೇ ಕಥೆ. ತುಂಬಾ ನೀರು ಸಂಗ್ರಹವಾಗುವ ಅಂಡರ್​ಪಾಸ್​ನಲ್ಲಿ ಮಳೆ ಬೀಳುತ್ತಿದ್ದ ಹಾಗೆ ಅಧಿಕಾರಿಗಳು ಅಲರ್ಟ್​ ಆಗಿ ಸಂಚಾರ ಬದಲಾವಣೆ ಮಾಡಬೇಕು ಅಥವಾ ನೀರನ್ನು ಶೀಘ್ರವಾಗಿ ಹೊರ ಹಾಕುವ ವ್ಯವಸ್ಥೆ ಮಾಡಬೇಕು. 5 ಲಕ್ಷ ಪರಿಹಾರ ಕೊಟ್ಟು ಮತ್ತೊಂದು ಸಾವಿಗೆ ಕಾಯುವುದು ಸಮಂಜಸ ಅಲ್ಲ ಅಲ್ಲವೇ..?

ಕೃಷ್ಣಮಣಿ

Tags: cmsiddaramiahCongress PartyhevyRaininkarnatakaRainsiddaramaiahUkraineConflictಸಿದ್ದರಾಮಯ್ಯ
Previous Post

No Need for zero traffic | ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಜೀರೋ ಟ್ರಾಫಿಕ್ ಬೇಡ ಎಂದ ಸಿಎಂ ಸಿದ್ದು..!

Next Post

Indian Constitution ; ಸಂವಿಧಾನವೇ ಭಾರತೀಯರೆಲ್ಲರ ಧರ್ಮಗ್ರಂಥವಾಗಲಿ..!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
Indian Constitution ; ಸಂವಿಧಾನವೇ ಭಾರತೀಯರೆಲ್ಲರ ಧರ್ಮಗ್ರಂಥವಾಗಲಿ..!

Indian Constitution ; ಸಂವಿಧಾನವೇ ಭಾರತೀಯರೆಲ್ಲರ ಧರ್ಮಗ್ರಂಥವಾಗಲಿ..!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada