• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಧಾನ ಪರಿಷತ್ ಚುನಾವಣೆ: ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್ ರೆಡ್ಡಿಗೆ ಬೆಂಬಲ ಘೋಷಿಸಿದ AAP

Any Mind by Any Mind
December 26, 2023
in ಕರ್ನಾಟಕ
0
ವಿಧಾನ ಪರಿಷತ್ ಚುನಾವಣೆ: ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್ ರೆಡ್ಡಿಗೆ ಬೆಂಬಲ ಘೋಷಿಸಿದ AAP
Share on WhatsAppShare on FacebookShare on Telegram

ADVERTISEMENT

ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಾರಾ ಪ್ರತಾಪ್ ರೆಡ್ಡಿಯವರಿಗೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಘೋಷಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1985ರಲ್ಲಿ ನಾನು ಮತ್ತು ಪ್ರತಾಪ್ ಜನತಾ ಪಾರ್ಟಿಯಲ್ಲಿ ಇದ್ದೆವು. ಇಬ್ಬರು ಬೇರೆ ಬೇರೆ ದಾರಿಯಲ್ಲಿ ನಡೆದರು ಚಿಂತನೆ ಒಂದೇ ಆಗಿದೆ. ಪಾರದರ್ಶಕ ಆಡಳಿತ, ಭ್ರಷ್ಟಾಚಾರ ಮುಕ್ತ ವ್ಯವಸ್ಥೆ, ಶೋಷಿತರ ಧ್ವನಿಯಾಗಬೇಕು, ಒಳ್ಳೇ ಕೆಲಸ ಮಾಡಬೇಕು ಎನ್ನವ ಚಿಂತನೆಯನ್ನು ಪ್ರತಾಪ್ ರೆಡ್ಡಿ ಹೊಂದಿದ್ದಾರೆ ಎಂದರು.

ಪಾರದರ್ಶಕ, ಪ್ರಾಮಾಣಿಕ ವ್ಯಕ್ತಿಗಳಿಗೆ ಬೆಂಬಲ ಕೊಡಲು ನಿರ್ಧರಿಸಿದಾಗ ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ. ಪ್ರತಾಪ್ ರೆಡ್ಡಿ ಹೋರಾಟದ ಹಿನ್ನೆಲೆಯಿಂದ ಬಂದವರು. ನೀರಿಗಾಗಿ, ಮೂಲ ಸೌಕರ್ಯಗಳಿಗಾಗಿ ಹೋರಾಡಿ ಜನರಿಗೆ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಜೊತೆ ಆಮ್ ಆದ್ಮಿ ಪಕ್ಷ ಕೈ ಜೋಡಿಸಲಿದೆ. ಏಳು ಜಿಲ್ಲೆಯ ಜಿಲ್ಲಾಧ್ಯಕ್ಷರಿಗೆ ಬೆಂಬಲ ನೀಡಲು ಮನವಿ ಮಾಡಿದ್ದೇವೆ. ಕೇಂದ್ರದ ನಾಯಕರಿಗೆ ಕೂಡ ವಿಚಾರ ತಿಳಿಸಿದ್ದು, ಅವರು ಬೆಂಬಲ ನೀಡಲು ಒಪ್ಪಿದ್ದಾರೆ ಎಂದು ಹೇಳಿದರು.

ನಗರಸಭೆ, ಪುರಸಭೆ, ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದಾಗಿ ತೆರವಾಗಿರುವ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗಳಲ್ಲಿ ನಾವು ಸ್ಪರ್ಧಿಸಲಿದ್ದೇವೆ. ನಂಜನಗೂಡು ಪುರಸಭೆಯಲ್ಲಿ ಒಂದು ಕ್ಷೇತ್ರಕ್ಕೆ, ಶಿರಾ ನಗರಸಭೆಯಲ್ಲಿ ಒಂದು ಕ್ಷೇತ್ರ, ಮುದ್ದೇಬಿಹಾಳದಲ್ಲಿ ಒಂದು ಕ್ಷೇತ್ರ, ಮಂಗಳೂರಿನಲ್ಲಿ ಒಂದು ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ನಾರಾ ಪ್ರತಾಪ್ ರೆಡ್ಡಿ, ಬೆಂಬಲ ನೀಡಿದ್ದಕ್ಕೆ ಆಮ್ ಆದ್ಮಿ ಪಕ್ಷಕ್ಕೆ ಧನ್ಯವಾದಗಳನ್ನು ತಿಳಿಸಿದರು. ಕಾಂಗ್ರೆಸ್ ಟಿಕೆಟ್ ಕೊಟ್ಟರೂ, ಕೊಡದಿದ್ದರೂ ಚುನಾವಣೆಗೆ ನಿಲ್ಲಲು ನಿರ್ಧರಿಸಲಾಗಿತ್ತು. ಪಕ್ಷೇತರವಾಗಿ ನಿಂತರೂ ಎಲ್ಲಾ ಕಡೆಯಿಂದ ಉತ್ತಮ ಬೆಂಬಲ ಸಿಗುತ್ತಿದೆ ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ : BBMP ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ

Next Post

ಫೆ. 2, 3, 4 ಹಂಪಿ ಉತ್ಸವ : ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಫೆ. 2, 3, 4 ಹಂಪಿ ಉತ್ಸವ : ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್

ಫೆ. 2, 3, 4 ಹಂಪಿ ಉತ್ಸವ : ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada