ಸರಕಾರ ಪತನಕ್ಕೆ ಬಿಜೆಪಿ ಪ್ರಯತ್ನಗಳ ಆರೋಪ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ದಿಢೀರನೆ ವಿಶೇಷ ಅಧಿವೇಶನ ಕರೆದಿದ್ದಾರೆ.
ಆಮ್ ಆದ್ಮಿ ಪಕ್ಷದ ಐವರು ಮುಖಂಡರು ಬುಧವಾರ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಪಕ್ಷ ಸೇರಲು ತಮಗೆ 20 ಕೋಟಿ ಹಾಗೂ ಬೇರೆ ಶಾಸಕರನ್ನು ಪಕ್ಷಕ್ಕೆ ಸೇರಿಸಿದರೆ 25 ಕೋಟಿ ರೂ. ನೀಡುವ ಆಮೀಷ ನೀಡಲಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದರು.
ಆಮ್ ಆದ್ಮಿ ಪಕ್ಷದ ಮುಖ್ಯಸ್ಥರಾಗಿರುವ ಅರವಿಂದ್ ಕೇಜ್ರಿವಾಲ್ ಪಕ್ಷದ ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಪ್ 70 ಸ್ಥಾನಗಳ ಪೈಕಿ 62ರಲ್ಲಿ ಜಯಭೇರಿ ಬಾರಿಸಿ ಎರಡನೇ ಬಾರಿ ಅಧಿಕಾರ ಹಿಡಿದಿತ್ತು.
ಇತ್ತೀಚೆಗೆ ಮದ್ಯಪಾನ ನಿಯಮದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಡಿಸಿಎಂ ಮನೀಶ್ ಸಿಸೊಡಿಯಾ ಮೇಲೆ ಸಿಬಿಐ ದಾಳಿ ಮಾಡಿದ್ದು, ಕೆಲವೇ ದಿನಗಳಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಸ್ವತಃ ಕೇಜ್ರಿವಾಲ್ ಹೇಳಿಕೆ ನೀಡಿದ್ದರು.