• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಅಭಿಷೇಕ್​ -ಅವಿವಾ ಆರತಕ್ಷತೆ ಕಾರ್ಯಕ್ರಮದಲ್ಲಿ ತಾರೆಯರ ದಂಡು

Any Mind by Any Mind
June 8, 2023
in ಸಿನಿಮಾ
0
ಅಭಿಷೇಕ್​ -ಅವಿವಾ ಆರತಕ್ಷತೆ ಕಾರ್ಯಕ್ರಮದಲ್ಲಿ ತಾರೆಯರ ದಂಡು
Share on WhatsAppShare on FacebookShare on Telegram

ಸದ್ಯ ಸ್ಯಾಂಡಲ್​ವುಡ್​ನಲ್ಲಿ ಅಭಿಷೇಕ್​ ಅಂಬರೀಶ್​ ಹಾಗೂ ಅವಿವಾ ಮದುವೆ ವಿಚಾರವೇ ಚಾಲ್ತಿಯಲ್ಲಿದೆ. ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ ನಿನ್ನೆ ಅದ್ಧೂರಿ ಆರತಕ್ಷತೆ ಕಾರ್ಯಕ್ರಮವನ್ನೂ ಮಾಡಿಕೊಂಡಿದೆ. ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆದ ರಿಸೆಪ್ಶನ್​ನಲ್ಲಿ ಚಿತ್ರರಂಗದ ಹಾಗೂ ರಾಜಕೀಯದ ಗಣ್ಯಾತಿಗಣ್ಯರು ಆಗಮಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ.

ADVERTISEMENT


ಬೆಂಗಳೂರಿನ ಮಾಣಿಕ್ಯಚಾಮರ ವಜ್ರದ ಕಲ್ಯಾಣ ಮಂಟಪದಲ್ಲಿ ಅವಿವಾ ಹಾಗೂ ಅಭಿಷೇಕ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ವೇಳೆ ನಟ ಸುದೀಪ್​ , ಯಶ್​ , ರಜನೀಕಾಂತ್​ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದ್ದರು. ನಿನ್ನೆ ನಡೆದ ರಿಸೆಪ್ಶನ್​ ಪ್ರೋಗ್ರಾಂನಲ್ಲಿಯೂ ತಾರೆಯರ ದಂಡೇ ಹರಿದು ಬಂದಿತ್ತು.


ಕ್ರಿಸ್ಟಲ್​ ಶಾಗ್ಲಿಯರ್​ ಡಿಸೈನ್​ನಲ್ಲಿ ಆರತಕ್ಷತೆ ವೇದಿಕೆ ನಿರ್ಮಾಣ ಮಾಡಲಾಗಿತ್ತು. ದೆಹಲಿಯ ಮೊರಿದಾಬಾದ್​ನಿಂದ ಈ ವಿನೂತನ ವಿನ್ಯಾಸದ ಸ್ಟೇಜ್​ ನಿರ್ಮಾಣ ಮಾಡಲಾಗಿತ್ತು. ಈ ಹಿಂದೆ ಯಾವುದೇ ಸೆಲೆಬ್ರಿಟಿಗಳ ಆರತಕ್ಷತೆ ಕಾರ್ಯಕ್ರಮಕ್ಕೂ ಇಷ್ಟೊಂದು ಅದ್ದೂರಿಯಾದ ಸ್ಟೇಜ್​ ತಯಾರಾಗಿರಲಿಲ್ಲ.ಹೀಗಾಗಿ ಅಭಿಷೇಕ್​ ಹಾಗೂ ಅವಿವಾ ಆರತಕ್ಷತೆ ವೇದಿಕೆ ಕೂಡ ಅತ್ಯಂತ ವಿಭಿನ್ನವಾಗಿ ಎಲ್ಲರ ಮನಸೂರೆಗೊಳ್ಳುವಂತಿತ್ತು.


ಮದುವೆಯ ದಿನದಂದು ಸಖತ್​ ಆಗಿ ರೆಡಿಯಾಗಿದ್ದ ಅಭಿಷೇಕ್​ ಹಾಗೂ ಅವಿವಾ ಜೋಡಿ ಆರತಕ್ಷತೆ ಕಾರ್ಯಕ್ರಮದಲ್ಲಿಯೂ ಮಿಂಚಿದ್ರು. ಅವಿವಾ ಬಂಗಾರ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ರೆ ನಟ ಅಭಿಷೇಕ್​ ಮುತ್ತಿನ ಬಣ್ಣದ ಶೆರವಾನಿ ಧರಿಸಿದ್ದರು.


ನಟಿ ಹಾಗೂ ಕಾಂಗ್ರೆಸ್​ ನಾಯಕಿ ರಮ್ಯಾ, ಮೈಸೂರು ಮಹಾರಾಜ ಯದುವೀರ್ ಒಡೆಯರ್​, ನಟಿ ಮೇಘನಾ ರಾಜ್​, ಪ್ರಜ್ವಲ್​ ದೇವರಾಜ್​ ದಂಪತಿ . ನಟಿ ಆಶಿಕಾ ರಂಗನಾಥ್​, ಮೆಗಾಸ್ಟಾರ್ ಚಿರಂಜೀವಿ, ಬಾಲಿವುಡ್​ ಹಿರಿಯ ನಟ ಶತ್ರುಘ್ನ ಸಿನ್ಹಾ ಸೇರಿದಂತೆ ತಾರೆಯರ ದಂಡೇ ಹರಿದು ಬಂದಿತ್ತು. ಇನ್ನು ಅಂಬಿ ಕುಟುಂಬಕ್ಕೆ ರಾಜಕೀಯ ನಂಟು ಇರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಹಿರಿಯ ನಾಯಕ ಎಸ್​ಎಂ ಕೃಷ್ಣ, ಸಂಸದ ಪ್ರತಾಪ್​ ಸಿಂಹ ಸೇರದಂತೆ ಅನೇಕರು ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


ಅಂಬರೀಶ್​ ಕುಟುಂಬದ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಷೇಕ್​ – ಅವಿವಾ ಮದುವೆ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಕಾಟೇರಾ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದ ದರ್ಶನ್​​ ಮದುವೆ ಕಾರ್ಯಕ್ರಮ್ಕೆ ಆಗಮಿಸದೇ ಇದ್ದದ್ದು ಡಿ ಬಾಸ್​ ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. ಆದರೆ ನಿನ್ನೆ ಶೂಟಿಂಗ್​ ನಡುವೆ ಬಿಡುವು ಮಾಡಿಕೊಂಡು ಬಂದ ದರ್ಶನ್​ ನವಜೋಡಿಗೆ ಶುಭ ಹಾರೈಸಿದ್ರು, ಡಿ ಬಾಸ್​ ಎಂಟ್ರಿ ವೇಳೆ ಅಭಿಮಾನಿಗಳು ಡಿ ಬಾಸ್​ ಡಿ ಬಾಸ್​ ಎಂದು ಕೂಗಿದ ದೃಶ್ಯಗಳು ಸಹ ಕಂಡು ಬಂದವು.


ಜೂನ್​ 12ರಂದು ಅಭಿಷೇಕ್​ ಹಾಗೂ ಅವಿವಾ ಆರತಕ್ಷತೆ ಕಾರ್ಯಕ್ರಮ ಮಂಡ್ಯದಲ್ಲಿ ನಡೆಯಲಿದೆ. ಅಂಬಿ ಕುಟುಂಬ ಮಂಡ್ಯ ಜನತೆಗೆ ಹತ್ತಿರವಾಗಿರುವ ಹಿನ್ನೆಲೆಯಲ್ಲಿ ಸಕ್ಕರೆ ನಾಡಲ್ಲಿಯೂ ಆರತಕ್ಷತೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಿದ್ದಾರೆ. ಈ ಆರತಕ್ಷತೆ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಂಬಿ ಕುಟುಂಬದ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.

Tags: ABHISHEK AMBARISHActress RamyaAviva BidapaBangaloreCM SiddaramaiahDarshanPalace GroundReceptionSM KrishnaSUMALATHA AMBARISH
Previous Post

ಕರ್ನಾಟಕದಲ್ಲಿ ಬಜರಂಗಬಲಿ ಸಹಾಯ ಮಾಡಲಿಲ್ಲ, ಮಹಾರಾಷ್ಟ್ರದಲ್ಲಿ ಔರಂಗಜೇಬನ ಬಳಕೆ : ಬಿಜೆಪಿ ವಿರುದ್ಧ ಸಂಜಯ್​ ರಾವತ್​ ಕಿಡಿ

Next Post

ಗೃಹಜ್ಯೋತಿ ಯೋಜನೆ ಅನುಷ್ಠಾನ ಕುರಿತಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

Related Posts

Top Story

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

by ಪ್ರತಿಧ್ವನಿ
October 12, 2025
0

ವಿಜಯ್ ದೇವರಕೊಂಡ ಹೊಸ ಸಿನಿಮಾದ ಮುಹೂರ್ತ ಸಂಭ್ರಮ.. ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ.‌ ಹೈದರಾಬಾದ್ ನಲ್ಲಿ ನಿನ್ನೆ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ...

Read moreDetails
ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

October 10, 2025

Maruta Kannada Cinema: ಸೆನ್ಸಾರ್ ಮೆಚ್ಚಿದ “ಮಾರುತ”.

October 8, 2025

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ “ಎಸ್ ವಿ ಆರ್ 50” ಸಮಾರಂಭ

October 7, 2025
ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

October 7, 2025
Next Post
ಗೃಹಜ್ಯೋತಿ ಯೋಜನೆ ಅನುಷ್ಠಾನ ಕುರಿತಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ಗೃಹಜ್ಯೋತಿ ಯೋಜನೆ ಅನುಷ್ಠಾನ ಕುರಿತಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada