• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳ್ಳಂಬೆಳಿಗ್ಗೆ 15 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ : ಮುಂದುವರಿದ ಪರಿಶೀಲನೆ – ಇಲ್ಲಿದೆ ಸಂಪೂರ್ಣ ವರದಿ

Any Mind by Any Mind
November 24, 2021
in ಕರ್ನಾಟಕ
0
ಬೆಳ್ಳಂಬೆಳಿಗ್ಗೆ 15 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ :  ಮುಂದುವರಿದ ಪರಿಶೀಲನೆ – ಇಲ್ಲಿದೆ ಸಂಪೂರ್ಣ ವರದಿ
Share on WhatsAppShare on FacebookShare on Telegram

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ನಿಕಟವರ್ತಿಗಳ ಮನೆಗಳ ಮೇಲೆ ಬುಧವಾರ ಬೆಳಿಗ್ಗೆಯೇ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶೋಧ ನಡೆಸುತ್ತಿದೆ.

ADVERTISEMENT

ಇಂದು ಕರ್ನಾಟಕ ರಾಜ್ಯದಾದ್ಯಂತ ೬೮ ಸ್ಥಳಗಳಲ್ಲಿ ವಿವಿಧ ಎಸಿಬಿ ತಂಡಗಳಿಂದ ಕಾರ್ಯಾಚರಣೆ
ದಿನಾಂಕ: ೨೪.೧೧.೨೦೨೧ ರಂದು ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳವು ರಾಜ್ಯದ ೧೫ ಸರ್ಕಾರಿ
ನೌಕರರು ತಮ್ಮ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ-ಪಾಸ್ತಿಗಳನ್ನು ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳನ್ನು ದಾಖಲಿಸಿ ಅವರಿಗೆ ಸಂಬಂಧಿಸಿದ ೬೮ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ವಿವರ ಈ ಕೆಳಕಂಡಂತಿರುತ್ತದೆ.

೧. ಭ್ರಷ್ಟಾಚಾರ ನಿಗ್ರಹ ದಳ, ಕಲಬುರಗಿ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ ನೌಕರರಾದ ಶ್ರೀ. ಎಸ್. ಎಂ. ಬಿರಾದರ್, ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ, ಕಲಬುರಗಿ ಜಿಲ್ಲೆ ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ಉತ್ತರ ವಲಯ, ಬೆಳಗಾವಿ ರವರ ನೇತೃತ್ವದಲ್ಲಿ ಒಟ್ಟು ೪೪ ಅಧಿಕಾರಿ ಹಾಗೂ ಸಿಬ್ವಂದಿಗಳ ೩ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ ೩ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.

೨. ಭ್ರಷ್ಟಾಚಾರ ನಿಗ್ರಹ ದಳ, ಶಿವಮೊಗ್ಗ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ ನೌಕರರಾದ
ಶ್ರೀ. ಟಿ. ಎಸ್. ರುದ್ರೇಶಪ್ಪ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಗದಗ ಜಿಲ್ಲೆ ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ಪೂರ್ವ ವಲಯ, ದಾವಣಗೆರೆ ರವರ ನೇತೃತ್ವದಲ್ಲಿ ಒಟ್ಟು ೪೪ ಅಧಿಕಾರಿ ಹಾಗೂ ಸಿಬ್ಬಂದಿಗಳ ೫ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ ೫ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.

೩. ಭ್ರಷ್ಟಾಚಾರ ನಿಗ್ರಹ ದಳ, ಮಂಡ್ಯ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ ನೌಕರರಾದ
ಶ್ರೀ. ಶ್ರೀನಿವಾಸ್ ಕೆ, ಕಾರ್ಯಪಾಲಕ ಅಭಿಯಂತರರು, ಹೆಚ್‌ಎಲ್‌ಬಿಸಿ-೩, ಕೆ.ಆರ್. ಪೇಟೆ ಸಬ್ ಡಿವಿಜನ್, ಮಂಡ್ಯ ಜಿಲ್ಲೆ ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ದಕ್ಷಿಣ ವಲಯ, ಮೈಸೂರು ರವರ ನೇತೃತ್ವದಲ್ಲಿ ಒಟ್ಟು ೩೮ ಅಧಿಕಾರಿ ಹಾಗೂ ಸಿಬ್ಬಂದಿಗಳ ೬ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ ೬ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ
ಕಾರ್ಯ ಮುಂದುವರೆದಿದೆ.

೪. ಭ್ರಷ್ಟಾಚಾರ ನಿಗ್ರಹ ದಳ, ಚಾಮರಾಜನಗರ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ
ನೌಕರರಾದ ಶ್ರೀ. ಕೆ. ಎಸ್. ಲಿಂಗೇಗೌಡ, ಕಾರ್ಯಪಾಲಕ ಅಭಿಯಂತರರು, ಸ್ಮಾರ್ಟ್ ಸಿಟಿ,
ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ದಕ್ಷಿಣ ವಲಯ, ಮೈಸೂರು ರವರ ನೇತೃತ್ವದಲ್ಲಿ ಒಟ್ಟು ೩೬ ಅಧಿಕಾರಿ ಹಾಗೂ ಸಿಬ್ಬಂದಿಗಳ ೪ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ ೪ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.

೫. ಭ್ರಷ್ಟಾಚಾರ ನಿಗ್ರಹ ದಳ, ಬೆಂಗಳೂರು ನಗರ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ
ನೌಕರರಾದ ಎಲ್. ಸಿ. ನಾಗರಾಜ್, ಆಡಳಿತಾದಿಕಾರಿ, ಸಕಾಲ ಮಷೀನ್, ೬ನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು ನಗರ ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ
ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ,
ಬೆಂಗಳೂರು ನಗರ ವಿಭಾಗ, ಬೆಂಗಳೂರು ರವರ ನೇತೃತ್ವದಲ್ಲಿ ಒಟ್ಟು ೪೬ ಅಧಿಕಾರಿ ಹಾಗೂ
ಸಿಬ್ಬಂದಿಗಳ ೮ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ ೮ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ
ನಡೆಸಲಾಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.

೬. ಭ್ರಷ್ಟಾಚಾರ ನಿಗ್ರಹ ದಳ, ಬೆಂಗಳೂರು ನಗರ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ
ನೌಕರರಾದ ಜಿ. ವಿ. ಗಿರಿ, ಗ್ರೂಪ್-ಡಿ ನೌಕರ, ಬಿಬಿಎಂಪಿ ಬಾಲಕ ಮತ್ತು ಬಾಲಕಿಯರ ಹೈಸ್ಕೂಲ್,
ಮಾರಪ್ಪನಪಾಳ್ಯ, ಯಶವಂತಪುರ, ಬೆಂಗಳೂರು ನಗರ ರವರು ತನ್ನ ಬಲ್ಲ ಮೂಲಗಳಿಗಿಂತ
ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್
ಅಧೀಕ್ಷಕರು, ಎಸಿಬಿ, ಬೆಂಗಳೂರು ನಗರ ವಿಭಾಗ, ಬೆಂಗಳೂರು ರವರ ನೇತೃತ್ವದಲ್ಲಿ ಒಟ್ಟು ೨೧
ಅಧಿಕಾರಿ ಹಾಗೂ ಸಿಬ್ಬಂದಿಗಳ ೩ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ ೩ ಸ್ಥಳಗಳಲ್ಲಿ
ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.

೭. ಭ್ರಷ್ಟಾಚಾರ ನಿಗ್ರಹ ದಳ, ಬೆಂಗಳೂರು ನಗರ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ
ನೌಕರರಾದ ಶ್ರೀ. ಎಸ್. ಎಸ್. ರಾಜಶೇಖರ್, ಪಿಸಿಯೋಥೆರಪಿಸ್ಟ್, ಸರ್ಕಾರಿ ಆಸ್ಪತ್ರೆ, ಯಲಹಂಕ,
ಬೆಂಗಳೂರು ನಗರ ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ಬೆಂಗಳೂರು ನಗರ ವಿಭಾಗ,
ಬೆಂಗಳೂರು ರವರ ನೇತೃತ್ವದಲ್ಲಿ ಒಟ್ಟು ೧೪ ಅಧಿಕಾರಿ ಹಾಗೂ ಸಿಬ್ಬಂದಿಗಳ ೨ ತಂಡಗಳೊAದಿಗೆ
ಸರ್ಕಾರಿ ನೌಕರನಿಗೆ ಸೇರಿದ ೨ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ
ಕಾರ್ಯ ಮುಂದುವರೆದಿದೆ.

೮. ಭ್ರಷ್ಟಾಚಾರ ನಿಗ್ರಹ ದಳ, ಬೆಂಗಳೂರು ನಗರ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ
ನೌಕರರಾದ ಶ್ರೀ. ಮಾಯಣ್ಣ, ಪ್ರಥಮ ದರ್ಜೆ ಸಹಾಯಕರು, ಬಿಬಿಎಂಪಿ ಕೇಂದ್ರ ಕಛೇರಿ, ಎನ್. ಆರ್.ವೃತ್ತ, ಬೆಂಗಳೂರು ನಗರ ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ಬೆಂಗಳೂರು ನಗರ ವಿಭಾಗ,
ಬೆಂಗಳೂರು ರವರ ನೇತೃತ್ವದಲ್ಲಿ ಒಟ್ಟು ೪೮ ಅಧಿಕಾರಿ ಹಾಗೂ ಸಿಬ್ಬಂದಿಗಳ ೮ ತಂಡಗಳೊಂದಿಗೆ
ಸರ್ಕಾರಿ ನೌಕರನಿಗೆ ಸೇರಿದ ೮ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ
ಕಾರ್ಯ ಮುಂದುವರೆದಿದೆ.

೯. ಭ್ರಷ್ಟಾಚಾರ ನಿಗ್ರಹ ದಳ, ಬಳ್ಳಾರಿ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ ನೌಕರರಾದ
ಶ್ರೀ. ಕೆ. ಎಸ್. ಶಿವಾನಂದ್, ಸಬ್-ರಿಜಿಸ್ಟರ್ (ನಿವೃತ್ತ), ಬಳ್ಳಾರಿ ಜಿಲ್ಲೆ ತನ್ನ ಬಲ್ಲ ಮೂಲಗಳಿಗಿಂತ
ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್
ಅಧೀಕ್ಷಕರು, ಎಸಿಬಿ, ಬಳ್ಳಾರಿ ವಲಯ, ಬಳ್ಳಾರಿ ರವರ ನೇತೃತ್ವದಲ್ಲಿ ಒಟ್ಟು ೨೬ ಅಧಿಕಾರಿ ಹಾಗೂ
ಸಿಬ್ಬಂದಿಗಳ ೨ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ ೨ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ
ನಡೆಸಲಾಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.

೧೦. ಭ್ರಷ್ಟಾಚಾರ ನಿಗ್ರಹ ದಳ, ಬೆಳಗಾವಿ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ ನೌಕರರಾದ
ಶ್ರೀ. ಸದಾಶಿವ ರಾಯಪ್ಪ ಮರಲಿಂಗಣ್ಣನವರ್, ಹಿರಿಯ ಮೋಟಾರು ನಿರೀಕ್ಷಕ, ಗೋಕಾಕ್, ಬೆಳಗಾವಿ
ಜಿಲ್ಲೆ ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು
ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ಉತ್ತರ ವಲಯ, ಬೆಳಗಾವಿ
ರವರ ನೇತೃತ್ವದಲ್ಲಿ ಒಟ್ಟು ೩೬ ಅಧಿಕಾರಿ ಹಾಗೂ ಸಿಬ್ಬಂದಿಗಳ ೬ ತಂಡಗಳೊಂದಿಗೆ ಸರ್ಕಾರಿ
ನೌಕರನಿಗೆ ಸೇರಿದ ೬ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ ಕಾರ್ಯ
ಮುಂದುವರೆದಿದೆ.

೧೧. ಭ್ರಷ್ಟಾಚಾರ ನಿಗ್ರಹ ದಳ, ಬೆಳಗಾವಿ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ ನೌಕರರಾದ
ಶ್ರೀ. ಅಡವಿ ಸಿದ್ದೇಶ್ವರ ಕಾರೆಪ್ಪ ಮಸ್ತಿ, ಅಭಿವೃದ್ಧಿ ಅಧಿಕಾರಿ, ಸಹಕಾರ ಇಲಾಖೆ, ರಾಯಬಾಗ್ ತಾಲ್ಲೂಕು, ಬೆಳಗಾವಿ ಜಿಲ್ಲೆ ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ಉತ್ತರ ವಲಯ, ಬೆಳಗಾವಿ
ರವರ ನೇತೃತ್ವದಲ್ಲಿ ಒಟ್ಟು ೨೪ ಅಧಿಕಾರಿ ಹಾಗೂ ಸಿಬ್ಬಂದಿಗಳ ೩ ತಂಡಗಳೊಂದಿಗೆ ಸರ್ಕಾರಿ
ನೌಕರನಿಗೆ ಸೇರಿದ ೩ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ ಕಾರ್ಯ
ಮುಂದುವರೆದಿದೆ.

೧೨. ಭ್ರಷ್ಟಾಚಾರ ನಿಗ್ರಹ ದಳ, ಬೆಳಗಾವಿ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ ನೌಕರರಾದ
ಶ್ರೀ. ನಾಥಾಜಿ ಪೀರಾಜಿ ಪಾಟೀಲ, ಲೈನ್ ಮೆಕಾನಿಕ್ ಗ್ರೇಡ್-೨, ಹೆಸ್ಕಾಂ, ಬೆಳಗಾವಿ ಜಿಲ್ಲೆ ರವರು
ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ
ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ಉತ್ತರ ವಲಯ, ಬೆಳಗಾವಿ ರವರ ನೇತೃತ್ವದಲ್ಲಿ ಒಟ್ಟು
೩೦ ಅಧಿಕಾರಿ ಹಾಗೂ ಸಿಬ್ಬಂದಿಗಳ ೩ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ ೩ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.

೧೩. ಭ್ರಷ್ಟಾಚಾರ ನಿಗ್ರಹ ದಳ, ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ ನೌಕರರಾದ ಶ್ರೀ. ಲಕ್ಷ್ಮೀನರಸಿಂಹಯ್ಯ, ರಾಜಸ್ವ ನಿರೀಕ್ಷಕರು, ಕಸಬಾ-೨ ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ಕೇಂದ್ರ ವಲಯ, ಬೆಂಗಳೂರು ರವರ ನೇತೃತ್ವದಲ್ಲಿ ಒಟ್ಟು ೨೯ ಅಧಿಕಾರಿ ಹಾಗೂ ಸಿಬ್ಬಂದಿಗಳ ೪ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ ೪ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.

೧೪. ಭ್ರಷ್ಟಾಚಾರ ನಿಗ್ರಹ ದಳ, ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ ನೌಕರರಾದ ಶ್ರೀ. ವಾಸುದೇವ್. ಆರ್. ಎನ್, ಮಾಜಿ ಪ್ರಾಜೆಕ್ಟ್ ಡೈರೆಕ್ಟರ್ (ಯೋಜನಾ ನಿರ್ದೇಶಕರು), ನಿರ್ಮಿತಿ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ತನ್ನ ಬಲ್ಲ
ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ,
ಪೊಲೀಸ್ ಅಧೀಕ್ಷಕರು, ಎಸಿಬಿ, ಕೇಂದ್ರ ವಲಯ, ಬೆಂಗಳೂರು ರವರ ನೇತೃತ್ವದಲ್ಲಿ ಒಟ್ಟು ೩೦
ಅಧಿಕಾರಿ ಹಾಗೂ ಸಿಬ್ಬಂದಿಗಳ ೬ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ ೬ ಸ್ಥಳಗಳಲ್ಲಿ
ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.

೧೫. ಭ್ರಷ್ಟಾಚಾರ ನಿಗ್ರಹ ದಳ, ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ
ನೌಕರರಾದ. ಬಿ. ಕೃಷ್ಣಾರೆಡ್ಡಿ, ಪ್ರಧಾನ ವ್ಯವಸ್ಥಾಪಕರು, ನಂದಿನಿ ಹಾಲು ಉತ್ಪನ್ನಗಳು, ಬೆಂಗಳೂರು
ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ
ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ಕೇಂದ್ರ ವಲಯ, ಬೆಂಗಳೂರು ರವರ ನೇತೃತ್ವದಲ್ಲಿ ಒಟ್ಟು ೩೭ ಅಧಿಕಾರಿ ಹಾಗೂ ಸಿಬ್ಬಂದಿಗಳ ೫ ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ
ಸೇರಿದ ೫ ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.

ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ವಿವಿಧ ತಂಡಗಳಿಂದ ಮೇಲ್ಕಂಡ
ಆರೋಪಿತ ಸರ್ಕಾರಿ ನೌಕರರ ವಿರುದ್ಧ ದಾಳಿ ಮುಂದುವರೆದಿದ್ದು, ಪ್ರಕರಣಗಳಿಗೆ ಸಂಬಂಧಪಟ್ಟ
ಆರೋಪಿತ ಸರ್ಕಾರಿ ನೌಕರರು ಹೊಂದಿರುವ ಆಸ್ತಿಗಳ ಮೌಲ್ಯ, ಅವರು ಹೊಂದಿರುವ ಚಿನ್ನಾಭರಣಗಳು,
ಇತರೆ ಬ್ಯಾಂಕ್ ಠೇವಣಿಗಳ ಕುರಿತಂತೆ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ಕಾರ್ಯ ಮತ್ತು
ಸಂಬಂಧಪಟ್ಟ ಇನ್ನೂ ಹೆಚ್ಚಿನ ಸ್ಥಳಗಳ ಮಾಹಿತಿ ಸಂಗ್ರಹಣೆ ಮುಂದುವರೆದಿದೆ.

Tags: BJPCongress PartyCovid 19ಅಧಿಮಾರಿಗಳುಎಸಿಬಿದಾಳಿನರೇಂದ್ರ ಮೋದಿಬಿಜೆಪಿ
Previous Post

ಕ್ರಿಪ್ಟೋ ಕರೆನ್ಸಿ’ಗೆ ಲಗಾಮು ಹಾಕಲು ಮುಂದಾದ ಪ್ರಧಾನಿ ಮೋದಿ: ಅನಿಯಂತ್ರಿತ ಕ್ರಿಪ್ಟೋ ಮಾರುಕಟ್ಟೆ ಮೇಲೆ ಕೇಂದ್ರದ ಹದ್ದಿನ ಕಣ್ಣು!

Next Post

ಬೂಸ್ಟರ್ ಲಸಿಕೆಯೇ ಒಂದು ಹಗರಣ – WHO

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಬೂಸ್ಟರ್ ಲಸಿಕೆಯೇ ಒಂದು ಹಗರಣ – WHO

ಬೂಸ್ಟರ್ ಲಸಿಕೆಯೇ ಒಂದು ಹಗರಣ - WHO

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada