• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

BDA ಮೇಲೆ ACB ದಾಳಿ : ಕೋಟಿ ಕೋಟಿ ಮೌಲ್ಯದ ದಾಖಲಾತಿ ವಶ!

ಕರ್ಣ by ಕರ್ಣ
November 20, 2021
in ಕರ್ನಾಟಕ
0
BDA ಮೇಲೆ ACB ದಾಳಿ : ಕೋಟಿ ಕೋಟಿ ಮೌಲ್ಯದ ದಾಖಲಾತಿ ವಶ!
Share on WhatsAppShare on FacebookShare on Telegram

ಕಳೆದ ಎರಡು ದಿನಗಳಿಂದ ಭ್ರಷ್ಟಾರ ನಿಗ್ರಹ ದಳ (ACB) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದ ಮೇಲೆ ದಾಳಿ ನಡೆಸಿ ಭ್ರಷ್ಟಾಚಾರ ಸಂಬಂಧ ದಾಖಲೆ ಪರಿಶೀಲನೆ ನಡೆಸುತ್ತಿದೆ. ಸುದೀರ್ಘವಾದ ಪರಿಶೀಲನೆ ಬಳಿಕ ACB ಮಾಧ್ಯಮಕ್ಕೆ ಸುದೀರ್ಘವಾದ ವಿವರಣೆ ಪತ್ರವನ್ನು ಬಿಡುಗಡೆ ಮಾಡಿದೆ.

ADVERTISEMENT

BDA ಮೇಲೆ ACB ದಾಳಿ ವೇಳೆ ಏನೆಲ್ಲಾ ವಶಪಡಿಸಿಕೊಳ್ಳಲಾಗಿದೆ.!?

·         ಬಿ.ಡಿ.ಎ ಅರ್ಕಾವತಿ ಬಡಾವಣೆ, ಕೆಂಪೇಗೌಡ ಬಡಾವಣೆ ಹಾಗೂ ವಿಶ್ವೇಶ್ವರಯ್ಯ ಬಡಾವಣೆಗಳಲ್ಲಿ  ಸುಮಾರು ರೂ.75 ಕೋಟಿ ಬೆಲೆ ಬಾಳುವ 6 ನಿವೇಶನಗಳನ್ನು ಸುಳ್ಳು ಮಾಹಿತಿ ನೀಡಿ ಖೊಟ್ಟಿ  ದಾಖಲಾತಿಗಳನ್ನು ಸೃಷ್ಟಿಸಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಶಾಮಿಲಾಗಿ ಬೆಲೆ ಬಾಳುವ  ನಿವೇಶನಗಳನ್ನು ಅನರ್ಹ ವ್ಯಕ್ತಿಯೊಬ್ಬರಿಗೆ ಸಿಗುವಂತೆ ಮಾಡಲಾಗಿರುತ್ತದೆ. ಈ ಬಗ್ಗೆ ಮೂಲ  ದಾಖಲಾತಿಗಳನ್ನು ವಶ ಪಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

·         ಕೆಂಗೇರಿ ಹೋಬಳಿ ಉಳ್ಳಾಲ ಗ್ರಾಮದಲ್ಲಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಖಾಸಗಿ ವ್ಯಕ್ತಿ  ಮತ್ತು ಮದ್ಯವರ್ತಿಗಳೊಂದಿಗೆ ಶಾಮೀಲಾಗಿ ಸದರಿ ವ್ಯಕ್ತಿಯಿಂದ ಯಾವುದೇ ಜಮೀನನ್ನ  ಸ್ವಾದೀನ ಪಡಿಸಿಕೊಳ್ಳದೆ ಇದ್ದರು ಸಹ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಬದಲಿ ನಿವೇಶನವಾಗಿ  1800 ಚ.ಅ ಅಳತೆಯ ಸುಮಾರು ರೂ.1.5 ಕೋಟಿ ಮೌಲ್ಯದ ನಿವೇಶನವನ್ನು ಅಕ್ರಮವಾಗಿ  ಮಂಜೂರು ಮಾಡಿರುತ್ತಾರೆ. ಈ ಬಗ್ಗೆ ಮೂಲ ದಾಖಲಾತಿಗಳನ್ನು ವಶ ಪಡಿಸಿಕೊಂಡು ತನಿಖೆ  ಮುಂದುವರೆಸಲಾಗಿದೆ. 

·         ಕೆಂಗೇರಿ ಸ್ಯಾಟಿಲೈಟ್‌ ಟೌನ್ ಬಳಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಖಾಸಗಿ ವ್ಯಕ್ತಿ ಮತ್ತು  ಮದ್ಯವರ್ತಿಗಳೊಂದಿಗೆ ಶಾಮೀಲಾಗಿ ಖೊಟ್ಟಿ ದಾಖಲಾತಿಗಳನ್ನು ಹಾಜರುಪಡಿಸಿ 1000 ಚ.ಅ  ಅಳತೆಯ ಸುಮಾರು ರೂ.80 ಲಕ್ಷ ಮೌಲ್ಯದ ನಿವೇಶನವನ್ನು ಅಕ್ರಮವಾಗಿ ಮಂಜೂರು  ಮಾಡಿರುತ್ತಾರೆ. ಈ ಬಗ್ಗೆ ಮೂಲ ದಾಖಲಾತಿಗಳನ್ನು ವಶ ಪಡಿಸಿಕೊಂಡು ತನಿಖೆ  ಮುಂದುವರೆಸಲಾಗಿದೆ. 

·         ಬೆಂಗಳೂರು ನಗರ ಚಂದ್ರಲೇಔಟ್ ಪ್ರದೇಶದಲ್ಲಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಖಾಸಗಿ  ವ್ಯಕ್ತಿ ಮತ್ತು ಮದ್ಯವರ್ತಿಗಳೊಂದಿಗೆ ಶಾಮೀಲಾಗಿ ಖೊಟ್ಟಿ ದಾಖಲಾತಿಗಳನ್ನು ಹಾಜರುಪಡಿಸಿ  ರೂ.5 ಕೋಟಿ ಮೌಲ್ಯದ 2400 ಚ.ಅ ನಿವೇಶನವನ್ನು ಅಕ್ರಮವಾಗಿ ಮಂಜೂರು ಮಾಡಿರುತ್ತಾರೆ.  ಈ ಬಗ್ಗೆ ಮೂಲ ದಾಖಲಾತಿಗಳನ್ನು ವಶ ಪಡಿಸಿಕೊಂಡು ತನಿಖೆ  ಮುಂದುವರೆಸಲಾಗಿದೆ. 

·         ನಾಡ ಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೂಲ ನಿವೇಶನ ಫಲಾನುಭವಿಯವರ ಮೂಲ  ದಾಖಲಾತಿಗಳನ್ನು ತಿದ್ದುಪಡಿಗೊಳಿಸಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಖಾಸಗಿ ವ್ಯಕ್ತಿ ಮತ್ತು  ಮದ್ಯವರ್ತಿಗಳೊಂದಿಗೆ ಶಾಮೀಲಾಗಿ ಖೊಟ್ಟಿ ದಾಖಲಾತಿಗಳನ್ನು ಹಾಜರುಪಡಿಸಿ ರೂ.30 ಲಕ್ಷ ಬೆಲೆ ಬಾಳುವ ನಿವೇಶನವನ್ನು ಅಕ್ರಮವಾಗಿ ಅನರ್ಹ ವ್ಯಕ್ತಿಗೆ  ಮಂಜೂರು ಮಾಡಿರುತ್ತಾರೆ. ಬೆಂಗಳೂರು ನಗರ ಚಂದ್ರಲೇಔಟ್ ಪ್ರದೇಶದಲ್ಲಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಖಾಸಗಿ  ವ್ಯಕ್ತಿ ಮತ್ತು ಮದ್ಯವರ್ತಿಗಳೊಂದಿಗೆ ಶಾಮೀಲಾಗಿ ಖೊಟ್ಟಿ ದಾಖಲಾತಿಗಳನ್ನು ಹಾಜರುಪಡಿಸಿ  ರೂ.5 ಕೋಟಿ ಮೌಲ್ಯದ 2400 ಚ.ಅ ನಿವೇಶನವನ್ನು ಅಕ್ರಮವಾಗಿ ಮಂಜೂರು ಮಾಡಿರುತ್ತಾರೆ.  ಈ ಬಗ್ಗೆ ಮೂಲ ದಾಖಲಾತಿಗಳನ್ನು ವಶ ಪಡಿಸಿಕೊಂಡು ತನಿಖೆ  ಮುಂದುವರೆಸಲಾಗಿದೆ. 

·         ಕೆಲವೊಂದು ಪ್ರಕರಣಗಳಲ್ಲಿ ಒಂದೇ ನಿವೇಶನವನ್ನು ಒಂದಕಿಂತ ಹೆಚ್ಚಿನ ವ್ಯಕ್ತಿಗಳಿಗೆ ನೋಂದಣಿ   ಮಾಡಿಕೊಟ್ಟು ಫಲಾನುಭವಿಗಳು ಅನವಶ್ಯಕವಾಗಿ ನ್ಯಾಯಾಲಯದ ಮಟ್ಟಿಲು ಏರುವಂತೆ  ಮಾಡಿರುತ್ತಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕಾಗಿರುತ್ತದೆ. 

·         ಬಿ.ಡಿ.ಎ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಮೂಲ ಫಲಾನುಭವಿಗೆ ಮಂಜೂರಾದ ರೂ.52 ಲಕ್ಷ  ಮೌಲ್ಯದ ನಿವೇಶನವನ್ನು ಅನರ್ಹ ವ್ಯಕ್ತಿಗೆ ನೀಡಲಾಗಿದೆ. ಈ ಬಗ್ಗೆ ಮೂಲ ದಾಖಲಾತಿಗಳನ್ನು  ವಶ ಪಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ. 

·         ಅರ್ಕಾವತಿ ಬಡಾವಣೆಯಲ್ಲಿ ಫಲಾನುಭವಿಯೊಬ್ಬರಿಗೆ ನಿವೇಶನ ಮಂಜೂರಾಗಿದ್ದರು, ಸಹ  ಯಾವುದೇ ಕಾರಣ ಇಲ್ಲದೆ ದುರುದ್ದೇಶದಿಂದ ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನವನ್ನು  ಮಂಜೂರು ಮಾಡಲಾಗಿರುತ್ತದೆ. ಈ ಬಗ್ಗೆ ಮೂಲ ದಾಖಲಾಗಳನ್ನು ವಶ ಪಡಿಸಿಕೊಂಡು ತನಿಖೆ  ಮುಂದುವರೆಸಲಾಗಿದೆ.

·         ಬಿ.ಡಿ.ಎ ಭೂ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ಬೀಮನಕುಪ್ಪೆ ಗ್ರಾಮ, ನಾಡಪ್ರಭು ಕೆಂಪೇಗೌಡ  ಬಡಾವಣೆ ಹಾಗೂ ಡಾ.ಕೆ.ಶಿವರಾಮಕಾರಂತ್ ಬಡಾವಣೆ ಮೊದಲಾದ ಕಡೆಗಳಲ್ಲಿ ಬಿ.ಡಿ.ಎ  ಅಧಿಕಾರಿ ಮತ್ತು ಸಿಬ್ಬಂದಿಗಳು ಮಧ್ಯವರ್ತಿಗಳೊಂದಿಗೆ ಶ್ಯಾಮಿಲಾಗಿ ಹಲವಾರು ಅಕ್ರಮಗಳನ್ನು  ನಡೆಸಿರುವಂತೆ ಮೇಲ್ನೋಟಕ್ಕೆ ಕಂಡು ಬಂದಿದ್ದು ಈ ಬಗ್ಗೆ ದೊಡ್ಡ ಸಂಖ್ಯೆಯಲ್ಲಿ ದಾಖಲಾತಿಗಳನ್ನು  ಮತ್ತು ನೋಂದಣಿ  ವಹಿಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ  ನಡೆಸಲಾಗುವುದು.

·         ಬಿ.ಡಿ.ಎ ಭೂ ಸ್ವಾದೀನಕ್ಕೆ ಸಂಬಂಧಪಟ್ಟಂತೆ ಸರ್ಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು  ಮಾಲಿಕತ್ವ ಹೊಂದಿರುವಂತೆ ಅಕ್ರಮ ದಾಖಲಾತಿಗಳನ್ನು ಸೃಷ್ಟಿಸಿ ಬಿ.ಡಿ.ಎ ಅಧಿಕಾರಿ ಮತ್ತು  ಸಿಬ್ಬಂದಿಗಳು ಖಾಸಗಿ ವ್ಯಕ್ತಿಗಳೊಂದಿಗೆ ಶಾಮೀಲಾಗಿ ಕೊಟ್ಯಂತರ ರೂ ಮೌಲ್ಯದ ಪರಿಹಾರ  ಧನವನ್ನು ಖಾಸಗಿ ವ್ಯಕ್ತಿಗಳಿಗೆ ನೀಡಲಾಗಿದೆ. 

·         ಬಿ.ಡಿ.ಎ ಅಂಜನಾಪುರ ಬಡಾವಣೆಯಲ್ಲಿ ಫಲಾನುಭವಿಯವರಿಗೆ ಸೇರಿದ ನಿವೇಶನ ಒಂದು  ಒತ್ತುವರಿಯಾಗಿದ್ದು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವ ಬದಲಾಗಿ ಸದರಿಯವರಿಗೆ  ಬೇರೆ ಬಡಾವಣೆಯಲ್ಲಿ ನಿವೇಶನವನ್ನು ನೀಡಿ ಸದರಿ ನಿವೇಶನವನ್ನು ಸಹ ಇತರೆ ಮೂರನೇ ವ್ಯಕ್ತಿಗೆ  ಮಂಜೂರು ಮಾಡಿ ಅಕ್ರಮ ಮಾಡಲಾಗಿದೆ. ಈ ಬಗ್ಗೆ ಮೂಲ ದಾಖಲಾತಿಗಳನ್ನು ವಶ  ಪಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

·         ಅರ್ಕಾವತಿ ಬಡಾವಣೆ ಮತ್ತು ಇನ್ನು ಕೆಲವು ಬಡಾವಣೆಗಳಲ್ಲಿ, ಕೆಲವು ಅರ್ಜಿದಾರರು ನಿವೇಶನ  ಮಂಜೂರಾತಿ ಪಡೆದು ನಿಗಧಿತ ಸಮಯದಲ್ಲಿ ಹಣ ಸಂದಾಯ ಮಾಡಿದ್ದರು ಸಹ ಅವರಿಗೆ ಲೀಸ್  ಕಂ ಸೇಲ್ ಡೀಡ್ (LCSD) ಗಳನ್ನು ಮಾಡಿ ನಿಗಧಿತ ಅವಧಿಯೊಳಗೆ ಮನೆಗಳನ್ನು  ಕಟ್ಟಿಕೊಂಡಿದ್ದರು ಸಹ ಸದರಿಯವರಿಗೆ ಅಬ್ಸ್ ಲ್ಯೂಟ್ ಸೇಲ್ ಡೀಡ್ (ASD)ಗಳನ್ನು ಮಾಡಿ ಕೊಡದೆ ದುರುದ್ದೇಶದಿಂದ ಅನಗತ್ಯ ವಿಳಂಬ ನೀತಿಯನ್ನು ಅನುಸರಿಸಿ ತೊಂದರೆ ಕೊಡಲಾಗಿದೆ.  ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. 

·         ಇದೇ ರೀತಿ ನಿಗಧಿತ ಅವಧಿಯೊಳಗೆ ಬಿ.ಡಿ.ಎ ನಿಗಧಿ ಪಡಿಸಿರುವ ಹಣವನ್ನು ಸಂದಾಯ ಮಾಡಿದ  ಅರ್ಜಿದಾರರಿಗೆ ನಿವೇಶನ ಹಂಚಿಕೆ ಪತ್ರ ನೀಡದೆ ಅನವ್ಯಶಕ ವಿಳಂಭ ನೀತಿ ಅನುಸರಿಸಲಾಗಿದ್ದು ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. 

ಈರೀತಿಯಲ್ಲಿ 2 ದಿನಗಳ ಬಿ.ಡಿ.ಎ ಕಛೇರಿಗಳ ದಾಳಿ ಅವಧಿಯಲ್ಲಿ ಹಲವಾರು  ಅಕ್ರಮಗಳು ಕಂಡು ಬಂದಿದ್ದು ಈ ಬಗ್ಗೆ ಅಕ್ರಮವೆಸಗಿರುವ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು  ಮಧ್ಯವರ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಎಸಿಬಿ ತಿಳಿಸಿದೆ. ಇನ್ನು ನಾಳೆ ಭಾನುವಾರವಾಗಿರುವ ಹಿನ್ನೆಲೆ ಸರ್ಕಾರಿ ಕಚೇರಿಗಳೆಲ್ಲಾ ರಜೆ ಇರುವುದರಿಂದಾಗಿ ಸೋಮವಾರ ಈ ಬಗ್ಗೆಯ ವಿಸ್ತ್ರವಾದ ತನಿಖೆಯನ್ನು ಎಸಿಬಿ ಕೈಗೊಳ್ಳಲಿದೆ.

20-11-2020.pdf-FDownload
Tags: ACBBDABJPCovid 19ಬಿಜೆಪಿಭ್ರಷ್ಟಾಚಾರ ನಿಗ್ರಹದಳ
Previous Post

ತಾಲಿಬಾನಿಗೆ ಪ್ರಧಾನಿ ಮೋದಿ ನೀಡಿದ 4 ಸಲಹೆಗಳೇನು? ಯಾಕೆ?

Next Post

ಬಿಜೆಪಿಯ 25 MLC ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಿಂದಿಯಲ್ಲೇ ಎಲ್ಲಾ, ಕನ್ನಡ ಎಲ್ಲೂ ಇಲ್ಲ!

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
Next Post
ಬಿಜೆಪಿಯ 25 MLC ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಿಂದಿಯಲ್ಲೇ ಎಲ್ಲಾ, ಕನ್ನಡ ಎಲ್ಲೂ ಇಲ್ಲ!

ಬಿಜೆಪಿಯ 25 MLC ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಿಂದಿಯಲ್ಲೇ ಎಲ್ಲಾ, ಕನ್ನಡ ಎಲ್ಲೂ ಇಲ್ಲ!

Please login to join discussion

Recent News

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada