• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

BBMP ಮೇಲೆ ACB ‘ಬೃಹತ್’ ದಾಳಿ : 27 ಕಡೆ ಏಕಕಾಲದಲ್ಲಿ ತಲಾಶ್

ಕರ್ಣ by ಕರ್ಣ
February 25, 2022
in ಕರ್ನಾಟಕ
0
BBMP ಮೇಲೆ ACB ‘ಬೃಹತ್’ ದಾಳಿ : 27 ಕಡೆ ಏಕಕಾಲದಲ್ಲಿ ತಲಾಶ್
Share on WhatsAppShare on FacebookShare on Telegram

ಬಿಡಿಎ ಭ್ರಷ್ಟಾಚಾರ ಬಯಲಿಗೆಳೆದ ಮೇಲೆ ಈಗ ಎಸಿಬಿ ದೃಷ್ಟಿ ಬಿಬಿಎಂಪಿ ಮೇಲೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಇಂದು ಸುಮಾರು 200 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಪಾಲಿಕೆಯ 8 ವಲಯಗಳ ಎಲ್ಲಾ ಬಿಬಿಎಂಪಿ ಇಲಾಖೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಅನೇಕ ದಾಖಲೆಗಳನ್ನೂ ವಶಪಡಿಸಿಕೊಂಡಿದೆ.

ADVERTISEMENT

ಸಾರ್ವಜನಿಕರ ದೂರಿನ ಮೇಲೆ ದಾಳಿ ನಡೆಸಿದ ACB

ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಈಗ ಬಿಬಿಎಂಪಿ ಕೋಟೆಗೆ ಲಗ್ಗೆ ಇಟ್ಟಿದ್ದಾರೆ. ಬ್ಯಾಕ್ ಟು ಬ್ಯಾಕ್ ಕಚೇರಿಗೆ ದೂರುಗಳು ಬರುತ್ತಿದ್ದಂತೆ ಎಸಿಬಿ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿಕೊಂಡು ಬಿಬಿಎಂಪಿ ಕೇಂದ್ರ ಕಚೇರಿ ಸೇರಿ ನಗರದ ಹನ್ನೊಂದು ಕಡೆ ಇರೋ 27 ಬಿಬಿಎಂಪಿ ಕಚೇರಿಗಳ ಮೇಲೆ ಬೃಹತ್ ದಾಳಿ ನಡೆಸಿದ್ದಾರೆ. ಮೂವರು ಎಸಿಬಿ ಎಸ್ ಪಿ, ಡಿವೈ ಎಸ್ ಪಿಗಳು, ಇನ್ಸ್ಪೆಕ್ಟರ್ ಗಳು ಸೇರಿದಂತೆ ಸುಮಾರು 200 ಜನ ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತಗಳನ್ನ ಪರಿಶೀಲನೆ ನಡೆಸಿ ಕೆಲ ದಾಖಲೆಗಳನ್ನೂ ವಶಪಡಿಸಿಕೊಂಡಿದ್ದಾರೆ.

200 ಅಧಿಕಾರಿಗಳ ತಂಡದಿಂದ 27 BBMP ಕಚೇರಿಗಳ ಮೇಲೆ ದಾಳಿ

ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳ ಬೃಹತ್ ದಾಳಿ ನಡೆದಿದೆ. ಬರೋಬ್ಬರಿ 200 ಎಸಿಬಿ ಅಧಿಕಾರಿಗಳ ತಂಡ ನಗರದ 27 ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಅಗಮಿಸಿದ 200 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ತಂಡ ತಂಡವಾಗಿ ನಗರದ ಪಾಲಿಕೆಯ ಕೇಂದ್ರ ಕಛೇರಿ ಸೇರಿದಂತೆ ನಗರದ ಹಲವು ಬಿಬಿಎಂಪಿ ಕಛೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದರು. ಕಳೆದ ಹಲವು ತಿಂಗಳುಗಳಿಂದ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ ಹೊರೆಸಿ ಎಸಿಬಿ ಕಚೇರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ. 

ಜೊತೆಗೆ ಸರ್ಕಾರದ ಕಡೆಯಿಂದಲೂ ಬಿಬಿಎಂಪಿ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಕಣ್ಣಿಡಲು ಸೂಚನೆ ಸಿಕ್ಕಿತ್ತು.  ಇತ್ತ ಬೃಹತ್ ದಾಳಿಗೆ ಹಲವು ದಿನಗಳಿಂದಲೂ ತಯಾರಿ ಮಾಡಿಕೊಂಡಿದ್ದ ಎಸಿಬಿ ಬೃಹತ್ ಅಧಿಕಾರಿಗಳು ಜಾಹಿರಾತು, ಟಿಡಿಆರ್, ಕಂದಾಯ, ಆರೋಗ್ಯ,  ರಸ್ತೆ ಮತ್ತು ಮೂಲ ಭೂತಸೌಕರ್ಯ ವಿಭಾಗಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಗ್ಗೆ 11.30 ಸುಮಾರಿಗೆ ದಾಳಿ ಶುರು ಮಾಡಿರುವ ಅಧಿಕಾರಿಗಳು ಸತತವಾಗಿ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಕ್ಸ್, ರಸ್ತೆ ಡಾಂಬರೀಕರಣ, ಮನೆ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಕಳೆದ ಹತ್ತು ವರ್ಷಗಳಿಂದಲೂ ನಡೆದಿರುವ ಕಾಮಗಾರಿಗಳ ಕಡತಗಳನ್ನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದೆ, ಈಗಾಗಲೆ ಸರ್ಕಾರಕ್ಕೆ 40 ಪರ್ಸೆಂಟ್ ಎಂಬ ಅಪಕೀರ್ತಿ ಇದೆ. ಇದನ್ನು‌ಅಳಿಸಿ ನಗರದ ಜನರ ವಿಶ್ವಾಸಗಳಿಸಲು ಶಾಸಕರೇ ಈ ಬಾರಿ ಎಸಿಬಿ ರೈಡ್ ಗೆ ಸಿಎಂ ಬಳಿ ಮನವಿ ಮಾಡಿದ್ದಾರೆ ಎನ್ನುವ ಮಾತೂ ಕೇಳಿ ಬಂದಿದೆ. ಕಳೆದ 10 ವರ್ಷಗಳಿಂದ ಒಂದೆ ಕಡೆ ಗೂಟ ಹೊಡೆದು ಕುಳಿತಿರುವ ಅಧಿಕಾರಿಗಳಿಗೆ ಚಳಿ ಬಿಡಿಸಲು ಈ ರೀತಿ ಪ್ಲಾನ್ ಮಾಡಿದ್ದಾರೆ ಅಂತ ಪಾಲಿಕೆ ಸಿಬ್ಬಂದಿಗಳು ಹೇಳುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದು ಕೊಂಡ ಎಸಿಬಿ ಬೆಳಿಗ್ಗೆ ರೈಡ್ ಮಾಡಿ, ಸಿಕ್ಕಿರುವ ದಾಖಲೆಗಳ ಬಗ್ಗೆ ಬಿಬಿಎಂಪಿ ಸಿಬ್ಬಂದಿಯನ್ನ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಬೃಹತ್ ಕೋಟೆ ಬಿಬಿಎಂಪಿ ಮೇಲಿನ ದಾಳಿ ನಾಳೆ ಕೂಡ ಮುಂದುವರೆಯಲಿದ್ದು ಕೋಟಿ ಕೋಟಿ ಭ್ರಷ್ಟಾಚಾರ ನಡೆದಿರುವ ಸುಳಿವು ಸಿಕ್ಕಿದೆ. ದಾಳಿ, ಪರಿಶೀಲನೆ, ವಿಚಾರಣೆ ನಂತರ ಬಿಬಿಎಂಪಿ ಗೂಡಲ್ಲಿ ಏನೆಲ್ಲಾ ನಡೆದಿದೆ ಅನ್ನೋದರ ಫುಲ್ ಪಿಚ್ಚರ್ ಹೊರ ಬೀಳಲಿದೆ.

25-02-2022-2ndDownload
Tags: 'ಬೃಹತ್' ದಾಳಿACBAnti Corruption BureauBBMPBJPCongress PartyraidRaidsಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

BMTC ಬಸ್ ಗಳ ಅಗ್ನಿ ಆಹುತಿ ಪ್ರಕರಣ | ಬಿಎಂಟಿಸಿ ಕೈ ಸೇರಿದ ಅಗ್ನಿ ಅನಾಹುತದ ತನಿಖಾ ವರದಿ

Next Post

Ek Love Yaa | 7 ವರ್ಷ ಕಷ್ಟ ಪಟ್ಟಿದ್ದೇನೆ : ನಾಯಕ ನಟ ರಾಣಾ

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
Ek Love Yaa | 7 ವರ್ಷ ಕಷ್ಟ ಪಟ್ಟಿದ್ದೇನೆ : ನಾಯಕ ನಟ ರಾಣಾ

Ek Love Yaa | 7 ವರ್ಷ ಕಷ್ಟ ಪಟ್ಟಿದ್ದೇನೆ : ನಾಯಕ ನಟ ರಾಣಾ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada