• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

BBMP ಮೇಲೆ ACB ‘ಬೃಹತ್’ ದಾಳಿ : 27 ಕಡೆ ಏಕಕಾಲದಲ್ಲಿ ತಲಾಶ್

ಕರ್ಣ by ಕರ್ಣ
February 25, 2022
in ಕರ್ನಾಟಕ
0
BBMP ಮೇಲೆ ACB ‘ಬೃಹತ್’ ದಾಳಿ : 27 ಕಡೆ ಏಕಕಾಲದಲ್ಲಿ ತಲಾಶ್
Share on WhatsAppShare on FacebookShare on Telegram

ಬಿಡಿಎ ಭ್ರಷ್ಟಾಚಾರ ಬಯಲಿಗೆಳೆದ ಮೇಲೆ ಈಗ ಎಸಿಬಿ ದೃಷ್ಟಿ ಬಿಬಿಎಂಪಿ ಮೇಲೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಇಂದು ಸುಮಾರು 200 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಪಾಲಿಕೆಯ 8 ವಲಯಗಳ ಎಲ್ಲಾ ಬಿಬಿಎಂಪಿ ಇಲಾಖೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಅನೇಕ ದಾಖಲೆಗಳನ್ನೂ ವಶಪಡಿಸಿಕೊಂಡಿದೆ.

ADVERTISEMENT

ಸಾರ್ವಜನಿಕರ ದೂರಿನ ಮೇಲೆ ದಾಳಿ ನಡೆಸಿದ ACB

ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಈಗ ಬಿಬಿಎಂಪಿ ಕೋಟೆಗೆ ಲಗ್ಗೆ ಇಟ್ಟಿದ್ದಾರೆ. ಬ್ಯಾಕ್ ಟು ಬ್ಯಾಕ್ ಕಚೇರಿಗೆ ದೂರುಗಳು ಬರುತ್ತಿದ್ದಂತೆ ಎಸಿಬಿ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿಕೊಂಡು ಬಿಬಿಎಂಪಿ ಕೇಂದ್ರ ಕಚೇರಿ ಸೇರಿ ನಗರದ ಹನ್ನೊಂದು ಕಡೆ ಇರೋ 27 ಬಿಬಿಎಂಪಿ ಕಚೇರಿಗಳ ಮೇಲೆ ಬೃಹತ್ ದಾಳಿ ನಡೆಸಿದ್ದಾರೆ. ಮೂವರು ಎಸಿಬಿ ಎಸ್ ಪಿ, ಡಿವೈ ಎಸ್ ಪಿಗಳು, ಇನ್ಸ್ಪೆಕ್ಟರ್ ಗಳು ಸೇರಿದಂತೆ ಸುಮಾರು 200 ಜನ ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತಗಳನ್ನ ಪರಿಶೀಲನೆ ನಡೆಸಿ ಕೆಲ ದಾಖಲೆಗಳನ್ನೂ ವಶಪಡಿಸಿಕೊಂಡಿದ್ದಾರೆ.

200 ಅಧಿಕಾರಿಗಳ ತಂಡದಿಂದ 27 BBMP ಕಚೇರಿಗಳ ಮೇಲೆ ದಾಳಿ

ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳ ಬೃಹತ್ ದಾಳಿ ನಡೆದಿದೆ. ಬರೋಬ್ಬರಿ 200 ಎಸಿಬಿ ಅಧಿಕಾರಿಗಳ ತಂಡ ನಗರದ 27 ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಅಗಮಿಸಿದ 200 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ತಂಡ ತಂಡವಾಗಿ ನಗರದ ಪಾಲಿಕೆಯ ಕೇಂದ್ರ ಕಛೇರಿ ಸೇರಿದಂತೆ ನಗರದ ಹಲವು ಬಿಬಿಎಂಪಿ ಕಛೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದರು. ಕಳೆದ ಹಲವು ತಿಂಗಳುಗಳಿಂದ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ ಹೊರೆಸಿ ಎಸಿಬಿ ಕಚೇರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ. 

ಜೊತೆಗೆ ಸರ್ಕಾರದ ಕಡೆಯಿಂದಲೂ ಬಿಬಿಎಂಪಿ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಕಣ್ಣಿಡಲು ಸೂಚನೆ ಸಿಕ್ಕಿತ್ತು.  ಇತ್ತ ಬೃಹತ್ ದಾಳಿಗೆ ಹಲವು ದಿನಗಳಿಂದಲೂ ತಯಾರಿ ಮಾಡಿಕೊಂಡಿದ್ದ ಎಸಿಬಿ ಬೃಹತ್ ಅಧಿಕಾರಿಗಳು ಜಾಹಿರಾತು, ಟಿಡಿಆರ್, ಕಂದಾಯ, ಆರೋಗ್ಯ,  ರಸ್ತೆ ಮತ್ತು ಮೂಲ ಭೂತಸೌಕರ್ಯ ವಿಭಾಗಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಗ್ಗೆ 11.30 ಸುಮಾರಿಗೆ ದಾಳಿ ಶುರು ಮಾಡಿರುವ ಅಧಿಕಾರಿಗಳು ಸತತವಾಗಿ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಕ್ಸ್, ರಸ್ತೆ ಡಾಂಬರೀಕರಣ, ಮನೆ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಕಳೆದ ಹತ್ತು ವರ್ಷಗಳಿಂದಲೂ ನಡೆದಿರುವ ಕಾಮಗಾರಿಗಳ ಕಡತಗಳನ್ನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದೆ, ಈಗಾಗಲೆ ಸರ್ಕಾರಕ್ಕೆ 40 ಪರ್ಸೆಂಟ್ ಎಂಬ ಅಪಕೀರ್ತಿ ಇದೆ. ಇದನ್ನು‌ಅಳಿಸಿ ನಗರದ ಜನರ ವಿಶ್ವಾಸಗಳಿಸಲು ಶಾಸಕರೇ ಈ ಬಾರಿ ಎಸಿಬಿ ರೈಡ್ ಗೆ ಸಿಎಂ ಬಳಿ ಮನವಿ ಮಾಡಿದ್ದಾರೆ ಎನ್ನುವ ಮಾತೂ ಕೇಳಿ ಬಂದಿದೆ. ಕಳೆದ 10 ವರ್ಷಗಳಿಂದ ಒಂದೆ ಕಡೆ ಗೂಟ ಹೊಡೆದು ಕುಳಿತಿರುವ ಅಧಿಕಾರಿಗಳಿಗೆ ಚಳಿ ಬಿಡಿಸಲು ಈ ರೀತಿ ಪ್ಲಾನ್ ಮಾಡಿದ್ದಾರೆ ಅಂತ ಪಾಲಿಕೆ ಸಿಬ್ಬಂದಿಗಳು ಹೇಳುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದು ಕೊಂಡ ಎಸಿಬಿ ಬೆಳಿಗ್ಗೆ ರೈಡ್ ಮಾಡಿ, ಸಿಕ್ಕಿರುವ ದಾಖಲೆಗಳ ಬಗ್ಗೆ ಬಿಬಿಎಂಪಿ ಸಿಬ್ಬಂದಿಯನ್ನ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಬೃಹತ್ ಕೋಟೆ ಬಿಬಿಎಂಪಿ ಮೇಲಿನ ದಾಳಿ ನಾಳೆ ಕೂಡ ಮುಂದುವರೆಯಲಿದ್ದು ಕೋಟಿ ಕೋಟಿ ಭ್ರಷ್ಟಾಚಾರ ನಡೆದಿರುವ ಸುಳಿವು ಸಿಕ್ಕಿದೆ. ದಾಳಿ, ಪರಿಶೀಲನೆ, ವಿಚಾರಣೆ ನಂತರ ಬಿಬಿಎಂಪಿ ಗೂಡಲ್ಲಿ ಏನೆಲ್ಲಾ ನಡೆದಿದೆ ಅನ್ನೋದರ ಫುಲ್ ಪಿಚ್ಚರ್ ಹೊರ ಬೀಳಲಿದೆ.

25-02-2022-2ndDownload
Tags: 'ಬೃಹತ್' ದಾಳಿACBAnti Corruption BureauBBMPBJPCongress PartyraidRaidsಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

BMTC ಬಸ್ ಗಳ ಅಗ್ನಿ ಆಹುತಿ ಪ್ರಕರಣ | ಬಿಎಂಟಿಸಿ ಕೈ ಸೇರಿದ ಅಗ್ನಿ ಅನಾಹುತದ ತನಿಖಾ ವರದಿ

Next Post

Ek Love Yaa | 7 ವರ್ಷ ಕಷ್ಟ ಪಟ್ಟಿದ್ದೇನೆ : ನಾಯಕ ನಟ ರಾಣಾ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
Ek Love Yaa | 7 ವರ್ಷ ಕಷ್ಟ ಪಟ್ಟಿದ್ದೇನೆ : ನಾಯಕ ನಟ ರಾಣಾ

Ek Love Yaa | 7 ವರ್ಷ ಕಷ್ಟ ಪಟ್ಟಿದ್ದೇನೆ : ನಾಯಕ ನಟ ರಾಣಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada