ಖಾಸಗಿ ಶಾಲೆ(School) ಬಸ್(Bus) ಹಾಗೂ ಟ್ಯಾಂಕರ್(Tanker) ನಡುವೆ ಡಿಕ್ಕಿ(Accident) ಸಂಭವಿಸಿದ ಪರಿಣಾಮ ಶಾಲಾ ಮಕ್ಕಳು(School Childrens) ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸಾಲಿಗ್ರಾಮ- ಭೇರ್ಯ ಹೆದ್ದಾರಿಯಲ್ಲಿ ಬರುವ ಕುರುಬಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು, ಘಟನೆಯಲ್ಲಿ ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ಗ್ರಾಮದ ಸಿಇಟಿ(CET) ಖಾಸಗಿ ಶಾಲೆಗೆ ಸೇರಿ ಮಿನಿ ಬಸ್(Minibus) ಅಪಘಾತಕ್ಕೀಡಾಗಿದೆ.
![](https://pratidhvani.com/wp-content/uploads/2024/02/WhatsApp-Image-2024-02-10-at-10.22.31-1-1024x768.webp)
ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿದ್ದ ಟ್ಯಾಂಕರ್ ಕುರುಬಹಳ್ಳಿ(Kurubahalli) ಗ್ರಾಮದಿಂದ ಇದೇ ಮಾರ್ಗವಾಗಿ ಶಾಲಾ ಮಕ್ಕಳನ್ನುಕರೆದುಕೊಂಡು ಮಿರ್ಲೆ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ, ಕುರುಬಹಳ್ಳಿ ಗೇಟ್ ಬಳಿ ಏಕಾಏಕಿ ಶಾಲಾ ಮಕ್ಕಳಿರುವ ಮಿನಿ ಬಸ್ಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶಾಲಾ ಬಸ್ ರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಬಸ್ಸ್ ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಇವರುಗಳನ್ನು ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗಾಯಗೊಂಡ ಮಕ್ಕಳ ರವಾನಿಸಲಾಗಿದ್ದು, ಸಾಲಿಗ್ರಾಮ(Saligrama) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#SchoolBus #Accident #Mysore #KRnagar #Saligrama