• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Achievement is possible only with hard work : ಸಾಧನೆ ಅನ್ನೋದು ಕಠಿಣ ಪರಿಶ್ರಮದಿಂದ ಮಾತ್ರ ಸಾಧ್ಯ..!

Any Mind by Any Mind
May 24, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Achievement is possible only with hard work : ಸಾಧನೆ ಅನ್ನೋದು ಕಠಿಣ ಪರಿಶ್ರಮದಿಂದ ಮಾತ್ರ ಸಾಧ್ಯ..!
Share on WhatsAppShare on FacebookShare on Telegram

ಸಾಧನೆ ಅನ್ನೋದು ಕಠಿಣ ಪರಿಶ್ರಮದಿಂದ ಮಾತ್ರ ಸಾಧ್ಯ. ಬದುಕಲ್ಲಿ ಏನನ್ನಾದರೂ ಗಳಿಸಬೇಕು ಅಂದ್ರೆ ಶ್ರದ್ಧೆ ಹಾಗೂ ಶ್ರಮ ಅತ್ಯಗತ್ಯ. ಇದೇ ದಿಕ್ಕಿನಲ್ಲಿ ಮೈಸೂರು ಜಿಲ್ಲೆಯ ಮೂವರು ಭಾರತೀಯ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಜಿಲ್ಲೆಗೆ ಇನ್ನಷ್ಟು ಕೀರ್ತಿ ತಂದಿದ್ದಾರೆ .

ADVERTISEMENT

ಮೈಸೂರಿನ ಪೂಜಾ ಎಂಬುವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 390ನೇ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.ಭಾರತ ಲೋಕಸೇವಾ ಆಯೋಗವು ನಡೆಸಿದ 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಮೈಸೂರಿನ ಕುವೆಂಪುನಗರದ ಪೂಜಾ ಅವರು 390ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ಇದಲ್ಲದೇ , ವಿಜಯನಗರದ ನಿವಾಸಿ ಕೆ.ಸೌರಭ್ಗೆ 260ನೇ ಸ್ಥಾನ, ಕೆ.ಆರ್.ನಗರದ ಡಾ.ಕೆ.ಭಾನುಪ್ರಕಾಶ್ಗೆ 448ನೇ ಸ್ಥಾನ ದೊರೆತಿದೆ. ಸತತ ಪ್ರಯತ್ನದಲ್ಲಿ ಯಶಸ್ವಿಯಾಗಿರುವ ಅಭ್ಯರ್ಥಿಗಳು ರಿಸಲ್ಟ್ ನೋಡಿ ಖುಷ್ ಆಗಿದ್ದಾರೆ.

ಪೂಜಾ ಪರಿಶ್ರಮ..
ಇನ್ನು, ಪೂಜಾ ಕುವೆಂಪುನಗರದ ಕಾವೇರಿ ಶಾಲೆಯಲ್ಲಿ 1ರಿಂದ 10ನೇ ತರಗತಿ, ಮರಿಮಲ್ಲಪ್ಪ ಪಿಯು ಕಾಲೇಜಿನಲ್ಲಿ ಪಿಯು ಹಾಗೂ ಗೋಕುಲಂನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದಿರುವ ಪೂಜಾ ಮುಕುಂದ ಹಾಗೂ ಪದ್ಮಾವತಿ ದಂಪತಿಯ ಪುತ್ರಿ. ಪೂಜಾ ಯಾವುದೇ ಕೋಚಿಂಗ್ ಕೇಂದ್ರಗಳಲ್ಲಿ ತರಬೇತಿ ಪಡೆಯದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ವಿಶೇಷವಾಗಿದೆ ಕಳೆದ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಂದರ್ಶನ ಹಂತದವರೆಗೂ ಹೋಗಿದ್ದರು. ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿರಲಿಲ್ಲ. ಆದರೆ ಎರಡನೇ ಬಾರಿ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿದ್ದಾರೆ.2019ರಲ್ಲಿ ಪದವಿ ಮುಗಿಸಿದ್ದ ಇವರು 2020 ಡಿಸೆಂಬರ್‌ನಿಂದ ತಯಾರಿ ಆರಂಭಿಸಿ ಅಣಕು ಪರೀಕ್ಷೆಗಳನ್ನು ತೆಗೆದುಕೊಂಡಿದ್ದರು. .

ಐಎಎಸ್ ಅಥವಾ ಐಪಿಎಸ್ ಹುದ್ದೆ ಸಿಗುವ ನಿರೀಕ್ಷೆ ಇದೆ ಎಂದು ಪೂಜಾ ಹೇಳಿಕೊಂಡಿದ್ದಾರೆ. ʻಶಿಸ್ತು ಹಾಗೂ ಶ್ರಮವನ್ನು ಪರೀಕ್ಷೆ ಬೇಡುತ್ತದೆ. ಉತ್ತಮವಾಗಿ ತಯಾರಿ ನಡೆಸಿದ್ದರೆ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಬಾರದು. ಧೈರ್ಯದಿಂದ ಮುನ್ನುಗ್ಗಬೇಕುʼ ಎಂದು ಪೂಜಾ ತಮ್ಮ ತಯಾರಿ ಬಗ್ಗೆ ಇತರರಿಗೆ ಟಿಪ್ಸ್ ನೀಡಿದ್ದಾರೆ.

ಸೌರಭ್ ಸ್ಫೂರ್ತಿ.
ಇನ್ನು ಜಿಲ್ಲೆಯ ಮತ್ತೊಬ್ಬ ವಿದ್ಯಾರ್ಥಿ ಸೌರಭ್ ಸಾಕಷ್ಟು ಕಠಿಣ ಶ್ರಮ ವಹಿಸಿ 260ನೇ ರ್ಯಾಂಕ್ ಪಡೆದಿದ್ದಾರೆ. ಯಾರೇ ಭಾರತೀಯ ಲೋಕಸೇವಾ ಆಯೋಗದ ಪರೀಕ್ಷೆ ತೆಗೆದುಕೊಂಡರೂ ಛಲದಿಂದ ಪರೀಕ್ಷೆ ಎದುರಿಸುವಂತೆ ಯುವ ಉತ್ಸಾಹಿಗಳಿಗೆ ಸಲಹೆ ಕೊಟ್ಟಿದ್ದಾರೆ.

ಭಾನುಪ್ರಕಾಶ್ ಮನದಾಳ..
ಮತ್ತೊಂದೆಡೆ ಭಾನುಪ್ರಕಾಶ್ ವೃತ್ತಿಯಲ್ಲಿ ವೈದ್ಯರಾಗಿದ್ದು , ಈ ಬಾರಿ 448 ನೇ ರ್ಯಾಂಕ್ ಗಳಿಸಿದ್ದಾರೆ. ಬಾಲ್ಯದಿಂದಲೂ ಐಎಎಸ್ ಅಧಿಕಾರಿ ಆಗಬೇಕೆಂಬ ಕನಸು ಕಂಡಿರಲಿಲ್ಲ. ಅಮ್ಮ ಅಂಗನವಾಡಿ ಶಿಕ್ಷಕಿ. ಕೋವಿಡ್ ವೇಳೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವಾಗ ನಾಗರಿಕ ಸೇವಾ ಅಧಿಕಾರಿ ಆಗಬೇಕೆಂಬ ಕನಸು ಮೂಡಿತು ಎಂದು ಹೇಳಿಕೊಂಡಿದ್ದಾರೆ.

Tags: AchievementBJPcivil service examinationCongress Partyhard workK. Bhanuprakash got 448th positionPooja from MysorePublic Service Commission of IndiaSaurabh got 260th positionUPSCUPSC Examupsc Rank
Previous Post

ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ

Next Post

ಮಾಜಿ ಸಚಿವ ಡಾ. ಸಿ.ಎನ್​ ಅಶ್ವತ್ಥ ನಾರಾಯಣ ವಿರುದ್ಧ ಎಫ್​ಐಆರ್​ ದಾಖಲು

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಮಾಜಿ ಸಚಿವ ಡಾ. ಸಿ.ಎನ್​ ಅಶ್ವತ್ಥ ನಾರಾಯಣ ವಿರುದ್ಧ ಎಫ್​ಐಆರ್​ ದಾಖಲು

ಮಾಜಿ ಸಚಿವ ಡಾ. ಸಿ.ಎನ್​ ಅಶ್ವತ್ಥ ನಾರಾಯಣ ವಿರುದ್ಧ ಎಫ್​ಐಆರ್​ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada