• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಕೇಸರಿ ರಥ ಚಕ್ರದ ಗಾಳಿ ಬಿಟ್ಟ ಹಾಲಿ ಸಚಿವ..! ಮೊದಲ ದಿನವೇ ಬಿಜೆಪಿ ರಥ ಪಂಕ್ಚರ್​..!

ಕೃಷ್ಣ ಮಣಿ by ಕೃಷ್ಣ ಮಣಿ
March 2, 2023
in ಅಂಕಣ
0
ಕೇಸರಿ ರಥ ಚಕ್ರದ ಗಾಳಿ ಬಿಟ್ಟ ಹಾಲಿ ಸಚಿವ..! ಮೊದಲ ದಿನವೇ ಬಿಜೆಪಿ ರಥ ಪಂಕ್ಚರ್​..!
Share on WhatsAppShare on FacebookShare on Telegram

ಚಾಮರಾಜನಗರ ವಿಜಯ ಸಂಕಲ್ಪ ಯಾತ್ರೆಗೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಚಾಲನೆ ನೀಡಿದ್ದಾರೆ. ಆದರೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಗೈರು ಹಾಜರಿ ಎದ್ದು ಕಾಣಿಸುತ್ತಿತ್ತು. ತನ್ನದೇ ಉಸ್ತುವಾರಿ ಜಿಲ್ಲೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬಂದಿದ್ದರೂ ವಿ ಸೋಮಣ್ಣ ಬರಲಿಲ್ಲ ಅನ್ನೋದು ಕೇಸರಿ ಪಾಳಯದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಬಿಜೆಪಿ ನಾಯಕರ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಮಾಡಿರುವ ವಿ ಸೋಮಣ್ಣ ಮೌನಕ್ಕೆ ಶರಣಾಗಿದ್ದಾರೆ. ವಿಜಯ ಸಂಕಲ್ಪ ರಥ ಯಾತ್ರೆಯಲ್ಲಿ ಕೆ.ಎಸ್​ ಈಶ್ವರಪ್ಪ ನೇತೃತ್ವದ ತಂಡದಲ್ಲಿರುವ ಸಚಿವ ವಿ.ಸೋಮಣ್ಣ ಹನೂರು ಹಾಗು ಕೊಳ್ಳೇಗಾಲ ಸಮಾವೇಶಕ್ಕೂ ಗೈರು ಹಾಜರಾಗಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ವಿ ಸೋಮಣ್ಣ ಬಿಜೆಪಿಯನ್ನು ತೊರೆದು ಕಾಂಗ್ರೆಸ್​ ಕಡೆಗೆ ದಾಪುಗಾಲು ಹಾಕುವುದಕ್ಕೆ ಸಜ್ಜಾಗಿದ್ದಾರೆ ಎನ್ನುವ ಮಾತುಗಳು ಸೋಮಣ್ಣ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ.

ADVERTISEMENT

ಕಾಂಗ್ರೆಸ್​ ಗೆ ಸೇರುವ ಮನಸ್ಸು ಮಾಡಿರೋದು ಯಾಕೆ..?

ಬಿ.ಎಸ್​ ಯಡಿಯೂರಪ್ಪ ಸೇರಿದಂತೆ ಸಚಿವ ವಿ ಸೋಮಣ್ಣ ಲಿಂಗಾಯತ ಸಮುದಾಯದ ನಾಯಕರಾದರೂ ಸೋಮಣ್ಣಗೆ ಬಿಜೆಪಿಯಲ್ಲಿ ಮಾನ್ಯತೆ ಕಡಿಮೆ. ಬಿ.ಎಸ್​ ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ವಿ ಸೋಮಣ್ಣ, ಕಳೆದ ಬಾರಿಯೇ ಹಾಸನದ ಅರಸೀಕೆರೆ ಅಥವಾ ಚಾಮರಾಜನಗರದ ಹನೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಗೋವಿಂದರಾಜನಗರ ಕ್ಷೇತ್ರವನ್ನು ಅಭಿವೃದ್ಧಿ ಮಾಡಿರುವ ಸೋಮಣ್ಣ, ಜನರ ಮನಸ್ಸನ್ನೂ ಗೆದ್ದಿದ್ದಾರೆ. ಹೀಗಾಗಿ ಗೋವಿಂದರಾಜನಗರವನ್ನು ತಮ್ಮ ಪುತ್ರ ಡಾ ಅರುಣ್​ ಸೋಮಣ್ಣಗೆ ಬಿಟ್ಟು ಕೊಡುವ ಬಗ್ಗೆ ಚರ್ಚೆ ನಡೆಸಿದ್ದರು. ಆದರೆ ಬಿ.ಎಸ್​ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರೇ ಅವಕಾಶ ಮಾಡಿಕೊಡಲಿಲ್ಲ. ಆದರೂ ಎಲ್ಲರ ವಿರೋಧ ಕಟ್ಟಿಕೊಂಡರೂ ಸಚಿವ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾದ ಸೋಮಣ್ಣ, ಇದೀಗ ಮಗನ ಭವಿಷ್ಯವನ್ನು ಕಾಂಗ್ರೆಸ್​ನಲ್ಲಿ ಕಟ್ಟಿಕೊಡುವ ಮನಸ್ಸು ಮಾಡಿದ್ದಾರೆ ಎನ್ನಲಾಗ್ತಿದೆ.

ಕಾಂಗ್ರೆಸ್​’ನಿಂದ ಆಫರ್​.. ಬಿಜೆಪಿಯಲ್ಲೇ ಉಳಿಸಿಕೊಳ್ಳೋ ಯತ್ನ..!

ಸೋಮಣ್ಣ ಹಾಗು ಡಾ ಅರುಣ್​ಗೆ ಈಗಾಗಲೇ ಬಿಜೆಪಿಯಲ್ಲಿ ಟಿಕೆಟ್​ ಕೇಳಿದ್ದು, ಬಿಜೆಪಿ ನಾಯಕರು ಒಂದೇ ಮನೆಯ ಇಬ್ಬರಿಗೆ ಟಿಕೆಟ್​ ನೀಡುವುದಿಲ್ಲ ಎನ್ನುವ ಮಾತುಗಳು ಬಂದಿವೆ ಎನ್ನಲಾಗಿದೆ. ಆದರೆ ಕಾಂಗ್ರೆಸ್​ನಲ್ಲಿ ಸೊಮಣ್ಣ ಪಕ್ಷಕ್ಕೆ ಬರುವುದಾದರೆ ಇಬ್ಬರಿಗೂ ಟಿಕೆಟ್​ ನೀಡ್ತೇವೆ. ಗೋವಿಂದರಾಜನಗರ ಹಾಗು ರಾಜಾಜಿನಗರ ಅಥವಾ ಗೋವಿಂದರಾಜನಗರ ಹಾಗು ವಿಜಯನಗರದಿಂದ ಟಿಕೆಟ್​ ಕೊಡ್ತೇವೆ. ಒಂದು ವೇಳೆ  ಎಂ ಕೃಷ್ಣಪ್ಪ ಅಥವಾ ಪ್ರಿಯಾ ಕೃಷ್ಣ ವಿರೋಧ ವ್ಯಕ್ತವಾದರೆ ಒಬ್ಬರನ್ನು ಲೋಕಸಭೆ ಕಳುಹಿಸುವ ಚಿಂತನೆಯೂ  ನಡೆದಿದೆ ಎನ್ನಲಾಗಿದೆ. ಗೋವಿಂದರಾಜನಗರದಿಂದ ಟಿಕೆಟ್​ ಸಾಧ್ಯವಾಗದಿದ್ದರೆ ವಿಧಾನ ಪರಿಷತ್ ಸ್ಥಾನಕ್ಕೆ ಕಳುಹಿಸಲು ವ್ಯವಸ್ಥೆ ಮಾಡ್ತೇವೆ ಎನ್ನುವ ಭರವಸೆಯೂ ಸಿಕ್ಕಿದೆಯಂತೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸೋಮಣ್ಣ ಅವರನ್ನು ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ. ಕಾರ್ಯಕ್ರಮಕ್ಕೆ ಗೈರು ಹಾಜರಾದರೆ ಕೆಟ್ಟ ಸಂದೇಶ ಹೋಗುತ್ತದೆ. ಕಾರ್ಯಕ್ರಮಕ್ಕೆ ಬರುವಂತೆ ಸಿಎಂ ತಿಳಿಸಿದ್ದರು ಎನ್ನಲಾಗಿದ್ದು, ಸೋಮನ್ಣ ಒಲ್ಲದ ಮನಸ್ಸಿನಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಿದ್ಧರಿರಲಿಲ್ಲ ಎನ್ನಲಾಗಿದೆ.

ವಿಜಯೇಂದ್ರ & ಯಡಿಯೂರಪ್ಪ ಯೋಜನೆಗೆ ಸಿಡಿಮಿಡಿ..!

ಸಚಿವ ಸೋಮಣ್ಣ, ಹನೂರು ಹಾಗು ಅರಸೀಕೆರೆಯಲ್ಲಿ ಹೆಚ್ಚಿನ ಲಿಂಗಾಯತ ಸಮುದಾಯದ ಮತದಾರರು ಇರುವ ಕಾರಣಕ್ಕೆ ತಮ್ಮ ಪುತ್ರನನ್ನು ಕಣಕ್ಕೆ ಇಳಿಸುವ ನಿರ್ಧಾರ ಮಾಡಿದ್ದರು. ಆದರೆ ಅರಸೀಕೆರೆ ಕ್ಷೇತ್ರದಲ್ಲಿ ಬಿ.ಎಸ್​ ಯಡಿಯೂರಪ್ಪ ಅವರ ತಂಗಿ ಪುತ್ರ ಸಂತೋಷ್​ ಅಭ್ಯರ್ಥಿ ಆಗಿ ಕಣಕ್ಕಿಳಿಯುವ ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಚಾಮರಾಜನಗರದ ಹನೂರು ಕ್ಷೇತ್ರದಲ್ಲಿ ರಾಮನಗರ ಜಿಲ್ಲೆ ಬಿಜೆಪಿ ನಾಯಕ ರುದ್ರೇಶ್​ ಅವರನ್ನು ಚಾಮರಾಜನಗರದ ಹನೂರು ಕ್ಷೇತ್ರದಲ್ಲಿ ಕಣಕ್ಕಿಳಿಸಲು ಸಿದ್ಧತೆಗಳು ನಡೆದಿವೆ. ಅಂದರೆ ವಿಜಯೇಂದ್ರ ಹಾಗು ಬಿ.ಎಸ್​ ಯಡಿಯೂರಪ್ಪ ಉದ್ದೇಶ ಪೂರ್ವಕವಾಗಿಯೇ ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎನ್ನುವ ಭಾವನೆ ವಿ ಸೋಮಣ್ಣ ಅವರಲ್ಲಿ ಮನೆ ಮಾಡಿದೆ. ಅದೂ ಅಲ್ಲದೆ ಒಂದೇ ಕುಟುಂಬದ ಇಬ್ಬರಿಗೆ ಟಿಕೆಟ್​ ಇಲ್ಲ ಎನ್ನುವ ಸಂದೇಶ ಬಿಜೆಪಿ ಪಾಳಯದಲ್ಲಿ ಬಂದಿದ್ದು, ಈ ಎರಡೂ ಕಾರಣಗಳಿಂದ ಬಿಜೆಪಿಯಿಂದ ದೂರವಾಗಲು ಸೋಮಣ್ಣ ನಿರ್ಧಾರ ಮಾಡಿದ್ದಾರೆ ಎನ್ನುವುದು ಖಚಿತವಾಗಿದೆ. ಆದರೆ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.

Tags: ಬಿಜೆಪಿವಿ. ಸೋಮಣ್ಣವಿಜಯ ಸಂಕಲ್ಪ ಯಾತ್ರೆ
Previous Post

ಬಿಜೆಪಿ ಪಕ್ಷದ ಕಚೇರಿಯಲ್ಲಿಯೇ ಗುಂಡು-ತುಂಡು ಪಾರ್ಟಿ: ಸೋಲಿನ ಹತಾಶೆಯಲ್ಲಿ ಪಕ್ಷದ ಸಿದ್ಧಾಂತವೇ ಮರೆತೋಯ್ತಾ?

Next Post

ತೆಲಂಗಾಣದಲ್ಲಿ ಭೀಕರ ಅಪಘಾತ: ಕರ್ನಾಟಕ ಮೂಲಕ ಮೂವರ ಸಾವು

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
ಜಾತಿ ತಾರತಮ್ಯದ ವಿರುದ್ಧ ಸಮಾನತೆಯ ಹಾದಿ: ರೋಹಿತ್ ವೇಮುಲಾ ಪ್ರಕರಣದಿಂದ UGC ನಿಯಮಗಳವರೆಗೆ…

ಜಾತಿ ತಾರತಮ್ಯದ ವಿರುದ್ಧ ಸಮಾನತೆಯ ಹಾದಿ: ರೋಹಿತ್ ವೇಮುಲಾ ಪ್ರಕರಣದಿಂದ UGC ನಿಯಮಗಳವರೆಗೆ…

February 3, 2026
ಕನ್ಯಾಕುಮಾರಿ- ಕಾಶ್ಮೀರ ರೈತ ಜಾಗೃತಿ ಯಾತ್ರೆ: MSPಗೆ ಸಿಗಲಿರುವುದೇ ಕೇಂದ್ರದ ಅಸ್ತು?

ಕನ್ಯಾಕುಮಾರಿ- ಕಾಶ್ಮೀರ ರೈತ ಜಾಗೃತಿ ಯಾತ್ರೆ: MSPಗೆ ಸಿಗಲಿರುವುದೇ ಕೇಂದ್ರದ ಅಸ್ತು?

February 3, 2026
ಲಿಂಗಾಯತರು ಕೈಗಾರಿಕಾ  ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ

ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ

January 29, 2026
Next Post
ಬೆಳಗಾವಿ | ನಿಪ್ಪಾಣಿಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ತೆಲಂಗಾಣದಲ್ಲಿ ಭೀಕರ ಅಪಘಾತ: ಕರ್ನಾಟಕ ಮೂಲಕ ಮೂವರ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada