ಒಡಿಶಾದ (Odissa) ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ರನ್ನು (Bhatruhari mahatab) ಹಂಗಾಮಿ ಸ್ಪೀಕರ್ (Speaker) ಆಗಿ ರಾಷ್ಟ್ರಪತಿ ಬ್ರೌಪದಿ ಮುರ್ಮು (Drowpadi murmu) ನೇಮಕ ಮಾಡಿದ್ದಾರೆ. ಅಲ್ಲದೇ ಹಂಗಾಮಿ ಸ್ಪೀಕರ್ ಸಹಾಯಕ್ಕೆ ಸುರೇಶ್ ಕೋಡಿಕುನ್ನಿಲ್, ತಾಳಿಕೋಟೆ ರಾಜುತೇವರ್ ಬಾಲು, ರಾಧಾ ಮೋಹನ್ ಸಿಂಗ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಸುದೀಪ್ ಬಂದೋಪಾಧ್ಯಾಯರನ್ನು ನೇಮಕ ಮಾಡಲಾಗಿದೆ.
![](https://pratidhvani.com/wp-content/uploads/2024/06/IMG_8322.jpeg)
ಭರ್ತೃಹರಿ ಹೊಸ ಸ್ಪೀಕರ್ ಆಯ್ಕೆವರೆಗೂ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiran rijlju) ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ. ಸಂವಿಧಾನದ ಪರಿಚ್ಛೇದ 95(1)ರ ಅಡಿಯಲ್ಲಿ ಲೋಕಸಭಾ ಸದಸ್ಯರಾದ ಭರ್ತೃಹರಿ ಮಹತಾಬ್ರನ್ನು ಸ್ಪೀಕರ್ ಆಗಿ ನೇಮಿಸಿದ್ದಾರೆ ಎಂದು ತಿಳಿಸಿದ್ದಾರೆ.