ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡು ಕುಟುಂಬ ಸದಸ್ಯರಿಗೆ ಯಾವುದೇ ಸುಳಿವು ನೀಡದೆ ಪೊಲೀಸರು ಚೇತನ್ ಅವರನ್ನು ಮಂಗಳವಾರ ಇಡೀ ದಿನ ವಿಚಾರಣೆ ನಡೆಸಿ ತಡ ರಾತ್ರಿ ಸರಿಸುಮಾರು 12.45ರ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೌದು, ಕಳೆದ ಎರಡು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಅತ್ಯಾಚಾರ ಪ್ರಕರಣ ಮತ್ತು ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿ ಮಾಡಲಾದ ಟ್ವೀಟ್ ಆಧಾರದ ಮೇಲೆ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ಅವರನ್ನು ಸುಮಾರು ಮಧ್ಯಾಹ್ನ 4 ಗಂಟೆಯ ಆಸುಪಾಸಿನಲ್ಲಿ ವಶಪಡಿಸಿಕೊಂಡ ನಂತರ ಸೆಕ್ಷನ್ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್ 504, 505 (2) ಸೂಮೋಟೊ ಕೇಸ್ ದಾಖಲು ಮಾಡಿದ್ದಾರೆ. ಎಷ್ಟು ಸಮಯ ಕಳೆದರು ನಟ ಚೇತನ್ ಮನೆಗೆ ವಾಪಸ್ ಬಾರದ ಕಾರಣ ನಟ ಚೇತನ್ ಪತ್ನಿ ಮೇಘನಾ ನೇರವಾಗಿ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ತೆರಳಿ, ನನ್ನ ಪತಿ ಎಲ್ಲಿ? ಅವರನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದೀರ? Join us on https://teyasilk.com/triple-double-diamond-slot-machine-jackpot-winners-2019/ March 7, particularly on satellite television. ಸುರಕ್ಷಿತವಾಗಿದ್ದಾರೆಯೇ? ಎಂಬ ಹಲವು ಪ್ರಶ್ನೆಗಳನ್ನು ಕೇಳಿದರು. ಇದಕ್ಕೆ ಉತ್ತರಿಸದ ಕಾರಣ ಪೇಸ್ ಬುಕ್ ಲೈವ್ ಬಂದು ಆಗಿರುವ ವಿಷಯವನ್ನು ವ್ಯಕ್ತ ಪಡಿಸಿದ್ದಾರೆ.
ಹೀಗೆ ಪೇಸ್ ಬುಕ್ ಲೈವ್ ಬಂದ ಕೆಲವೇ ಕೆಲವು ನಿಮಿಷಗಳಲ್ಲಿ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಮುಂದೆ ಚೇತನ್ ಅಹಿಂಸಾ ಅವರ ಅನುಯಾಯಿಗಳು, ದಲಿತಪರ ಸಂಘಟನೆಗಳು ಜಮಾಯಿಸಿ ಚೇತನ್ ಪರ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಾರು ಎಷ್ಟೇ ಕೇಳಿದರು ನಟ ಚೇತನ್ ಎಲ್ಲಿದ್ದಾರೆ? ಹೇಗಿದ್ದಾರೆ? ಎಂಬ ಪ್ರಶ್ನೆಗೆ ಉತ್ತರಿಸದ ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿದ ಚೇತನ್ ಪತ್ನಿ ಸೀದಾ ಬೆಂಗಳೂರು ಕಮಿಷನರ್ ಆಫೀಸ್ಗೆ ಹೋಗಿ ನನ್ನ ಪತಿಯನ್ನು ಶೇಷಾದ್ರಿಪುರಂ ಪೊಲೀಸರು ಕರೆದುಕೊಂಡು ಬಂದಿದ್ದು ಎಲ್ಲಿದ್ದಾರೆ ಎಂಬ ಮಾಹಿತಿಯನ್ನು ನೀಡುತಿಲ್ಲ ಆದರೆ ಇದೊಂದು ಅಪಹರಣದಂತೆ ಕಾಣುತ್ತಿದೆ ಸೂಕ್ತ ಕ್ರಮ ಕೈಗೊಂಡು ನನ್ನ ಪತಿ ಚೇತನ್ ಅವರನ್ನು ಹುಡುಕಿಕೊಡಿ ಎಂದು ರಾತ್ರಿ ಸುಮಾರು 8 ಗಂಟೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಬೆಳವಣಿಗೆಯ ನಂತರ, ಶೇಷಾದ್ರಿಪುರಂ ಪೊಲೀಸರು ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ನಲ್ಲಿ ಇರುವ ನ್ಯಾಯಾಧೀಶರ ಮನೆಗೆ ಮಧ್ಯರಾತ್ರಿ 12.45ರ ವೇಳೆಗೆ ಕರೆದುಕೊಂಡು ಬಂದರು. ಹೈಕೋರ್ಟ್ ಹಿರಿಯ ವಕೀಲರಾದ ಎಸ್. The main form of loyalty at Guts Casino comes in the form of tournaments and daily drops, https://starlitenewsng.com/rivers-casino-hr-department-phone-number/ which add a regular dose of excitement to everyday life on the site. ಬಾಲನ್ ಅವರು ವಾದ ಮಂಡಿಸಿದರು. ಆದರೆ ನ್ಯಾಯಾಧೀಶರು ಸಮ್ಮತಿ ಸೂಚಿಸಲಿಲ್ಲ. Simply put, http://vozhispananews.com/beach-at-bavaro-princess-all-suits-resort-spa-and-casino/ Bitcoin is mutually beneficial for both player and casino and Bovada Casino wants to encourage players to use Bitcoin accordingly. ಚೇತನ್ ಅವರನ್ನು ನ್ಯಾಯಾಂಗ ವಿಚಾರಣೆಗೆಂದು 14 ದಿನಗಳ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು ಫೆ.23 ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಆದೇಶವನ್ನು ಫೆ.25ಕ್ಕೆ ಕಾಯ್ದಿರಿಸಿದೆ. The sad truth is: Shady sites try to lure new players in with seemingly https://www.samacharnirdesh.com/?p=playgrand-casino-50-freispiele-ohne-einzahlung-book-of-dead/ amazing offers.
ನ್ಯಾಯಾಧೀಶ ಕೃಷ್ಣ ಎಸ್. We scrutinise every single aspect of any gambling site we find in line with the categories that we have mentioned above; then we gather all the important information that we think, you, our players, will need to know, and release https://parkirpintar.com/tunica-roadhouse-1107-casino-center-dr-robinsonville-ms-38664/ them in a review that is both concise and precise. ದೀಕ್ಷಿತ್ ಅವರು ನೀಡಿದ ಆದೇಶದ ಹಿನ್ನೆಲೆ ಮತ್ತು ನಟ ಚೇತನ್ ಟ್ವೀಟ್!
ಮಹಿಳೆಯೊಬ್ಬರು ಬೆಂಗಳೂರಿನ ಖಾಸಗಿ ಕಂಪನಿಯನ್ನು ನಡೆಸುತಿದ್ದು. ಆ ಕಂಪನಿಯಲ್ಲಿ ರಾಕೇಶ್ ಎಂಬಾತ 2018 ರಿಂದ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. 2020ರ ಮೇ 2 ರಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ತೆರಳಿ ಏ.22ರಂದು ರಾಕೇಶ್ ತನ್ನೊಂದಿಗೆ ಕಾರಿನಲ್ಲಿ ಕಚೇರಿಗೆ ಬಂದು ತನ್ನ ಮೇಲೆ ಅತ್ಯಾಚಾರ ಎಸಗಿದ. ಏ.23ರಂದು ನನ್ನ ನಗ್ನ ಚಿತ್ರಗಳನ್ನು ನನಗೇ ಕಳುಹಿಸಿದ. ಇದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರು ದಾಖಲಿಸಿದ್ದರು.
ದೂರು ಸ್ವೀಕರಿಸಿದ ಪೊಲೀಸರು ರಾಕೇಶ್ ವಿರುದ್ಧ ಐಪಿಸಿ ಸೆಕ್ಷನ್ 376, 420, 506 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(ಬಿ) ಅಡಿ ದೂರು ದಾಖಲಿಸಿದ್ದರು. ನಿರೀಕ್ಷಣಾ ಜಾಮೀನು ಕೋರಿ ರಾಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ನಂತರ ಹೈಕೋರ್ಟ್ ಗೆ ರಾಜಿ ಸಂಧಾನವನ್ನು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ರಾಜಿ ಸಂಧಾನ ಅರ್ಜಿಯನ್ನು ಮತ್ತು ಪ್ರಕರಣವನ್ನು ಆಲಿಸಿದ ಅಂದಿನ ಹೈಕೋರ್ಟ್ ನ್ಯಾಯಾಧೀಶರಾದ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ, ಅತ್ಯಾಚಾರವಾದ ಬಳಿಕ ಸುಸ್ತಾಗಿ ಮಲಗಿದ್ದೆ. ಆದ್ದರಿಂದ, ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಲು ಸಾಧ್ಯವಾಗಲಿಲ್ಲ ಎಂದು ಮಹಿಳೆಯೊಬ್ಬರು ನೀಡಿರುವ ಸಮಜಾಯಿಷಿಯನ್ನು ತಳ್ಳಿ ಹಾಕಿ, ಅರ್ಜಿದಾರರ ವಿರುದ್ಧ ಅತ್ಯಾಚಾರದ ಗಂಭೀರ ಆರೋಪವಿದೆ ಎಂಬ ಒಂದೇ ಕಾರಣಕ್ಕೆ ಅವರ ಸ್ವಾತಂತ್ರ್ಯವನ್ನು ನಿರ್ಬಂಧಿಸಲಾಗದು ಮತ್ತು ಅತ್ಯಾಚಾರದಿಂದ ಸುಸ್ತಾಗಿ ಮಲಗಿಬಿಟ್ಟೆ ಎಂದು ಹೇಳುವುದು ಭಾರತೀಯ ನಾರಿಯ ಲಕ್ಷಣವಲ್ಲ. ನಮ್ಮ ನಾಡಿನ ಮಹಿಳೆಯರು ಅವರ ಮೇಲೆ ಆಕ್ರಮಣವಾದಾಗ ನಡೆದುಕೊಳ್ಳುವ ರೀತಿಯೂ ಇದಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅತ್ಯಾಚಾರ ಪ್ರಕರಣದ ಆರೋಪಿಗೆ ಜೂನ್ 22, 2020ರಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ನ್ಯಾಯಾಧೀಶರ ಈ ಹೇಳಿಕೆಯನ್ನು ದೇಶಾದ್ಯಂತ ವಕೀಲರು, ಸಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರಿಂದ ಟೀಕೆ ವ್ಯಕ್ತವಾಗಿತ್ತು. ತನಿಖೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಾಮೀನು ಆದೇಶದಲ್ಲಿರುವ ಆದೇಶದ ಈ ನಾಲ್ಕು ವಾಕ್ಯಗಳನ್ನು ರದ್ದುಗೊಳಿಸಬೇಕೆಂದು ರಾಜ್ಯ ಸರ್ಕಾರವು ಮನವಿ ಸಲ್ಲಿಸಿತು.
“ಸರ್ಕಾರ ಸಲ್ಲಿಸಿದ್ದ ಅರ್ಜಿಗೆ, 22-06-2020ರ ತೀರ್ಪಿನ ವಿಷಯದ ಪ್ಯಾರಾ ಸಂಖ್ಯೆ. 3 (ಸಿ) ನಲ್ಲಿರುವ ಕೊನೆಯ ನಾಲ್ಕು ಸಾಲುಗಳನ್ನು ತೆಗೆದುಹಾಕುವುದು ಸೂಕ್ತವೆಂದು ನಾನು ಭಾವಿಸುತ್ತೇನೆ., ಉಳಿದವುಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ, ”ಎಂದು ಡೆಕ್ಕನ್ ಹೆರಾಲ್ಡ್ 22-06-2020ರ ಶುಕ್ರವಾರ ಅಂಗೀಕರಿಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಆದೇಶವನ್ನು ಉಲ್ಲೇಖಿಸಿದೆ.
TOI ಪ್ರಕಾರ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಶುಕ್ರವಾರ ಜಾಮೀನು ಆದೇಶದಲ್ಲಿ ಅವರ ಹಿಂದಿನ ಅವಲೋಕನವು ತನಿಖೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಈ ಒಂದು ಆದೇಶವನ್ನು 27-06-2020ರಲ್ಲಿ ಟ್ವೀಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿರುವ ನಟ ಚೇತನ್, ‘ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ – ‘ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಯಿಸುವ ರೀತಿಯಲ್ಲ ಅದು’ ಎಂಬ ಹೇಳಿಕೆಯನ್ನು ನೀಡಿದ್ದರು. 21ನೆಯ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್ ಅವರ ಈ ಸ್ತ್ರೀ ದ್ವೇಷ, ಇದರಲ್ಲಿ ನಾಚಿಕೆಗೇಡಿನ ಸಂಗತಿ’ ಎಂದು ಬರೆದುಕೊಂಡಿದ್ದರು.
ಈ ಹಳೆಯ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿದ್ದು, ಈ ಟ್ವೀಟನ್ನು ನಾನು ಎರಡು ವರ್ಷಗಳ ಹಿಂದೆ ಕರ್ನಾಟಕ ಹೈ ಕೋರ್ಟ್ನ ತೀರ್ಪಿನ ಬಗ್ಗೆ ಬರೆದಿದ್ದೆ. ಜಸ್ಟೀಸ್ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದ ಕುರಿತು ಈ ತರಹದ ಅಸಹ್ಯಕರ ಹೇಳಿಕೆಯನ್ನು ನೀಡಿದ್ದರು. ಈಗ ಅದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಗೆ ಈ ಕುರಿತು ಬೇಕಾದ ಸ್ಪಷ್ಟತೆಯಿದೆಯೇ? ಎಂದು ಪ್ರಶ್ನಿಸಿದ್ದರು.
ಅತ್ಯಾಚಾರ ಸಂಬಂಧ ಮೇಲಿನ ಉಲ್ಲೇಖಿಸಿರುವ ಆದೇಶ ನೀಡಿದ ಕೃಷ್ಣ ಎಸ್ ದೀಕ್ಷಿತ್ ಅವರೇ ಈಗಿನ ಹಿಜಾಬ್ ಪ್ರಕರಣಕ್ಕೆ ನ್ಯಾಯಾಧೀಶರರಾಗಿದ್ದು, ಅವರ ಹಳೆ ಆದೇಶವನ್ನು ಮತ್ತೆ ರೀಟ್ವೀಟ್ ಮಾಡಿ ಒಂದು ಸಮುದಾಯವನ್ನು ಮತ್ತೊಂದು ಸಮುದಾಯಕ್ಕೆ ಎತ್ತಿ ಕಟ್ಟುವ ಕೆಸಲ ಮಾಡುತ್ತಿದ್ದಾರೆ ಎಂಬ ಆರೋಪದಡಿ ಶೇಷಾದ್ರಿಪುರಂ ಪೊಲೀಸರು ಸ್ವಯಂ ಪ್ರೇರಿತ (ಸೂಮೋಟೊ) ಪ್ರಕರಣ ದಾಖಲು ಮಾಡಿಕೊಂಡಿದೆ.
FIRನಲ್ಲಿ ಏನಿದೆ?
ಪೊಲೀಸ್ ಇನ್ಸ್ಪೆಕ್ಟರ್ ಎಂ.ಎಸ್.ರವಿ ಅವರ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್ಕುಮಾರ್ ಅಹಿಂಸಾ ರವರು ಮಾಡಿರುವ ಟ್ವೀಟ್ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್ಐಆರ್ನಲ್ಲಿ ಆರೋಪಿಸಲಾಗಿದೆ.
“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್ ಅವರು ಈ ರೀತಿಯ ಟ್ವೀಟ್ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.
“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇಂದು ಫೆ.23 ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಆದೇಶವನ್ನು ಫೆ.25ಕ್ಕೆ ಕಾಯ್ದಿರಿಸಿದೆ.
ನಟ ಚೇತನ್ ಪತ್ನಿ ಮೇಘನಾ ಅವರ ಪ್ರತಿಕ್ರಿಯೆ :
ನಟ ಹಾಗು ಸಾಮಾಜಿಕ ಕಾರ್ಯಕರ್ತರಾದ ಚೇತನ್ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತಾಡಿದ ಚೇತನ್ ಅವರ ಪತ್ನಿ ಮೇಘನಾ, ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಚೇತನ್ ಎಲ್ಲಿದ್ದಾರೆಂದು ಯಾರಿಗೂ ಗೊತ್ತಾಗಲಿಲ್ಲ. ಕರ್ನಾಟಕ ಸೆಕ್ಯೂಲರ್ ನೆಲ. ಆದರೆ ಇಲ್ಲಿಯೇ ಈ ಥರ ಆಗುತ್ತಿರುವುದನ್ನು ನೋಡಿದರೆ ನಿಜಕ್ಕೂ ನನಗೆ ಭಯವಾಗುತ್ತಿದೆ.
ಕ್ಷುಲ್ಲಕ ಕಾರಣಕ್ಕೆ ಚೇತನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸುಳ್ಳು ಆರೋಪ ಮಾಡಲಾಗುತ್ತಿದೆ. ಚೇತನ್ ಅಷ್ಟೇ ಅಲ್ಲ. ಅನೇಕ ಸಾಮಾಜಿಕ ಹೋರಾಟಗಾರರಿಗೆ ಈ ರೀತಿ ತೊಂದರೆ ನೀಡಲಾಗಿದೆ. ಒಬ್ಬ ಸೆಲೆಬ್ರಿಟಿಗೆ ಇಷ್ಟು ತೊಂದರೆಯಾದರೆ. ಸಾಮಾನ್ಯ ಜನರ ಸ್ಥಿತಿ ನೆನೆದು ನಿಜಕ್ಕೂ ನನಗೆ ಆತಂಕವಾಗುತ್ತಿದೆ. ಇದಕ್ಕೆ ಇರುವ ಒಂದೇ ಒಂದು ಪರಿಹಾರ ಅದುವೇ ಹೋರಾಟ ಎಂದು ಹೇಳಿದ್ದಾರೆ.